Homeಮುಖಪುಟನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

"ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ"

- Advertisement -
- Advertisement -

ಅಂತರ್ ಧರ್ಮೀಯ ಕುಟುಂಬದ ಸೀಮಂತ ಕಾರ್ಯಕ್ರಮದ ಬಗ್ಗೆ ಜಾಹೀರಾತು ಮಾಡಿದ್ದ ತನಿಷ್ಕ್ ಆಭರಣ ಕಂಪನಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳ ಬೆನ್ನಲ್ಲೇ ಕಂಪನಿ ಜಾಹೀರಾತನ್ನು ನಿಲ್ಲಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕ ಮಂದಿ ತನಿಷ್ಕ್ನ ಈ ನಿರ್ಧಾರಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ತನಿಷ್ಕ್ ಜಾಹೀರಾತು ವಿವಾದದ ಬಗ್ಗೆ ಮೊದಲ ಬಾರಿಗೆ ಜಾಹೀರಾತು ನಿರ್ದೇಶಕಿ ಜೊಯೀತಾ ಪಟ್ಪಟಿಯಾ ಪ್ರತಿಕ್ರಿಯೆ ನೀಡಿದ್ದಾರೆ. ’ಸಾಮಾಜಿಕ ಮಾಧ್ಯಮಗಳಲ್ಲಿ ಬಹಳಷ್ಟು ಭಯಾನಕ ಸಂಗತಿಗಳು ನನ್ನ ದಾರಿಯಲ್ಲಿ ಬರುತ್ತಿವೆ. ಆದರೆ ಅವುಗಳನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲು ನಾನು ಬಯಸುವುದಿಲ್ಲ ಎಂದಿದ್ದಾರೆ.

ಏಷ್ಯಾ ಮತ್ತು ಯುಕೆಗಳಲ್ಲಿ ಜಾಹೀರಾತುಗಳು, ಮ್ಯೂಸಿಕ್ ವಿಡಿಯೋಗಳನ್ನು ನಿರ್ಮಿಸಿ ಪ್ರಶಸ್ತಿ ಪಡೆದಿರುವ ಈಕೆ, ’ ಈ ಅಭಿಯಾನಕ್ಕೆ ಬರುತ್ತಿರುವ ಪ್ರೀತಿ, ಸುಂದರವಾದ ಕಲಾಕೃತಿಗಳು ಮತ್ತು ಸುಂದರ ಟಿಪ್ಪಣಿಗಳನ್ನು ಹಂಚಿಕೊಳ್ಳುವುದು ಉತ್ತಮ ಎಂದು ಭಾವಿಸುತ್ತೇನೆ’ ಎಂದಿದ್ದಾರೆ.

ತನಿಷ್ಕ್ ಅವರ ‘ಏಕತ್ವಂ’ ಅಭಿಯಾನದ ಚಿತ್ರಕಥೆಯು ಏಕತೆಯ ಪರಿಕಲ್ಪನೆಯಾಗಿದೆ ಮತ್ತು ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಜೊಯೀತಾ ಹೇಳುತ್ತಾರೆ. “ಈ ಅಭಿಯಾನವು ಏಕತೆ ಮತ್ತು ಏಕತೆಯ ಕಲ್ಪನೆಯಿಂದ ಬಂದಿದೆ ಮತ್ತು ಅದಕ್ಕಾಗಿಯೇ ಇದನ್ನು‘ ಏಕತ್ವಂ ’ಎಂದು ಕರೆಯಲಾಗಿದೆ ಎಂದರು.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಈ ಅಭಿಯಾನ ನಾಲ್ಕು ಚಿತ್ರಗಳ ಅಭಿಯಾನವಾಗಿತ್ತು. ಇವುಗಳ ಸ್ಕ್ರಿಪ್ಟ್‌ಗಳು ಅದ್ಭುತವಾಗಿದ್ದವು. ನಮಗೆ ಅದರಲ್ಲಿ ಯಾವುದೇ ವಿವಾದಾಸ್ಪದ ಅಂಶ ಕಾಣಿಸಲಿಲ್ಲ. ನಮ್ಮ ಧಾರಾವಾಹಿಗಳು ಕೆಲವು ಬಾರಿ ಅತ್ತೆ ಮತ್ತು ಸೊಸೆಯನ್ನು ನಕಾರಾತ್ಮಕ ಅಂಶದಲ್ಲಿ ತೋರಿಸುತ್ತವೆ. ಆದರೆ ಈ ಸ್ಕ್ರಿಪ್ಟ್ ಓದಿದಾಗ ನನಗೆ ಒಂದೇ ಭಾರಿಗೆ ಇಷ್ಟವಾಗಿತ್ತು. ಇಬ್ಬರು ಮಹಿಳೆಯರ ಕಥೆ ಇದು. ಇಬ್ಬರ ನಡುವಿನ ಪ್ರೀತಿಯ ಬಗ್ಗೆ, ಮಹಿಳೆಯ ಅತ್ತೆ ಮತ್ತು ಅತ್ತೆ ಕುಟುಂಬದ ಪ್ರೀತಿಯ ಕಥೆಯಾಗಿತ್ತು ಎನ್ನುತ್ತಾರೆ.

ಜಾಹೀರಾತು ತಯಾರಿಕೆ ಬಗ್ಗೆ ಮಾತನಾಡಿದ ಜೊಯೀತಾ, ’ಏಕತ್ವಂ ಕಲ್ಪನೆಯು ಜಾತ್ಯಾತೀತ ಭಾರತವನ್ನು ಆಧರಿಸಿದೆ. ನೀವು ಈ ಜಾಹೀರಾತಿನಲ್ಲಿ ನೋಡಿದರೆ, ಅವರು ’ಪುಲಿ ಕುಡಿ’ ತಯಾರಿಸುತ್ತಿದ್ದಾರೆ, ಇದು ಸೀಮಂತ ಸಮಾರಂಭದಲ್ಲಿ ಮಲಯಾಳಿಗಳು ತಯಾರಿಸುವ ನಿರ್ದಿಷ್ಟ ದ್ರವ. ನಾವು ಸಂಶೋಧನೆ ಮಾಡಿ ಈ ವಿಚಾರಗಳನ್ನು ತಿಳಿದುಕೊಂಡು ಸಣ್ಣ ಸಣ್ಣ ವಿವರಗಳನ್ನು ಜಾಹೀರಾತಿನಲ್ಲಿ ಇರಿಸಿದ್ದೇವೆ’ ಎಂದಿದ್ದಾರೆ.

’ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳ ನಂತರ ನಾವು ಮುಂದೆ ಸಾಗಿದ್ದೇವೆ ಎಂದು ಭಾವಿಸಿದ್ದೇನೆ. ಹಿಂದೆ ಹೋಗುತ್ತಿದ್ದೇವೆ ಎಂದು ಹೇಳುತ್ತಿಲ್ಲ. ಆದರೆ ಕೊಂಚ ಮಟ್ಟದ ಚರ್ಚೆ, ಮಾತುಕತೆಯಾಗಬಹುದು ಎಂದು ಭಾವಿಸಿದ್ದೆವು ಆದರೆ ಈ ಮಟ್ಟದ ದ್ವೇಷ, ವಿಷವನ್ನು ಹೊರಹಾಕಲಾಗಿದೆ. ನಿಜವಾಗಿಯೂ ಇದು ಆಘಾತಕಾರಿಯಾದದ್ದು. ಇದೊಂದು ಟ್ರೋಲ್ ಸೈನ್ಯ’ ಎಂದಿದ್ದಾರೆ.

ಇದನ್ನೂ ಓದಿ: ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ಜಾಹೀರಾತಿನ ಬಗ್ಗೆ ಕೆಲವು ಆನ್‌ಲೈನ್ ಚರ್ಚೆಗಳಲ್ಲಿ, ಜಾಹೀರಾತಿನಲ್ಲಿ ಹಿಂದೂ ಅಳಿಯನೊಂದಿಗೆ ಮುಸ್ಲಿಂ ವಧುವನ್ನು ತೋರಿಸಿದ್ದರೆ ವಿವಾದವು ನಡೆಯುತ್ತಿರಲಿಲ್ಲ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೊಯೀತಾ ಧರ್ಮಗಳನ್ನು ಅದಲು-ಬದಲು ಮಾಡಿದ್ದರೂ ಈ ಪ್ರತಿಕ್ರಿಯೆಗಳು ಭಿನ್ನವಾಗಿರುತ್ತಿರಲಿಲ್ಲ ಎನ್ನುತ್ತಾರೆ.

’ತನಿಷ್ಕ್ ತಮ್ಮ ಉದ್ಯೋಗಿಗಳು ಮತ್ತು ಮಳಿಗೆಗಳ ಸುರಕ್ಷತೆಗಾಗಿ ಈ ನಿರ್ಧಾರ ತೆಗೆದುಕೊಂಡರು. ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ ಮತ್ತು ತನಿಷ್ಕ್ ಹಲವು ಆಭರಣ ಮಳಿಗೆಗಳನ್ನು ಹೊಂದಿದೆ. ಇವುಗಳ ಸುರಕ್ಷತೆ ಮುಖ್ಯ ಹಾಗಾಗಿ ಜಾಹೀರಾತು ವಾಪಸ್ ಪಡೆದಿದ್ದಾರೆ’ ಎಂದರು.

ಜೊಯೀತಾ ಈ ವಿವಾದದ ನಂತರ ತಾನು ಪಡೆಯುತ್ತಿರುವ ಪ್ರೀತಿ ಮತ್ತು ಬೆಂಬಲದ ಕಡೆ ತನ್ನ ಗಮನ ಕೇಂದ್ರಿಕರಿಸಲು ಬಯಸುತ್ತಾರೆ. ಜೊತೆಗೆ ಹೇಳುತ್ತಾರೆ, ಭಾರತದಲ್ಲಿ ಮಾತ್ರವಲ್ಲ, ಪಂಚದಾದ್ಯಂತ ಯಾವಾಗಲೂ ಕೆಟ್ಟ ಸಂಗತಿಗಳು ನಡೆಯುತ್ತಿವೆ. ಪಂಚದಾದ್ಯಂತ ವರ್ಣಭೇದ ನೀತಿ ಇದೆ. ಭಾರತದಲ್ಲಿ ಹಲವಾರು ಸಮುದಾಯಗಳಿವೆ. ಇಲ್ಲಿ ಈಗ ಇದು ಚರ್ಚೆಯ ವಿಷಯವಾಗಿದೆ, ಆದರೆ ಒಂದು ದೇಶವಾಗಿ, ನಾವು ಜಗತ್ತಿಗೆ ದೇಶದ ಒಳ್ಳೆಯ ಭಾಗವನ್ನು ತೋರಿಸಲು ಬಯಸುವುದಿಲ್ಲವೇ..? ಎಂದು ಪ್ರಶ್ನಿಸುತ್ತಾರೆ.

ಜೊತೆಗೆ ನಾವು ಯಾವಾಗಲೂ ಜಾತ್ಯತೀತ ದೇಶದವರಾಗಿದ್ದೇವೆ ಮತ್ತು ನಾವು ಯಾವಾಗಲೂ ಹಾಗೇ ಇರುತ್ತೇವೆ. ಮುಂದಿನ ಪೀಳಿಗೆ ನಾವು ಮಾತನಾಡುತ್ತಿರುವ ವಿಷಯಗಳ ಬಗ್ಗೆ ಬದಲಾವಣೆ ತರುತ್ತದೆ. ಏಕೆಂದರೆ ಯುವ ಪೀಳಿಗೆಯಿಂದ ನನಗೆ ದೊರೆತ ಅದ್ಭುತ ಪ್ರೀತಿ ಮತ್ತು ಬೆಂಬಲ ಅಗಾಧವಾಗಿದೆ” ಎಂದು ಹೇಳುತ್ತಾರೆ ನಿರ್ದೇಶಕಿ.

ತನಿಷ್ಕ್ ಜಾಹೀರಾತಿಗೆ ಅನೇಕ ಜಾಹೀರಾತು ಕಂಪನಿಗಳು ಬೆಂಬಲ ಸೂಚಿಸಿವೆ. ಸಾಮಾಜಿಕ ಮಾಧ್ಯಮಗಳಲ್ಲಿ ಅನೇಕರು ಏಕತ್ವಂ ಬೆಂಬಲಿಸಿ ಪೋಸ್ಟ್ ಮಾಡಿದ್ದಾರೆ.


ಇದನ್ನೂ ಓದಿ:  ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...