Homeಮುಖಪುಟಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ಕಳೆದ 5 ವರ್ಷಗಳಲ್ಲಿ 5 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಸೇರಿದ್ದಾರೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಬಗ್ಗೆ ಜನರ ಧೋರಣೆ ಬದಲಾಗಿದೆ ಎಂದು ಸಿಎಂ ಪಿಣರಾಯಿ ಹೇಳಿದ್ದಾರೆ.

- Advertisement -
- Advertisement -

ಕೇರಳ ತನ್ನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂಗಳನ್ನು ಹೊಂದಿರುವ ದೇಶದ ಮೊದಲ ರಾಜ್ಯ ಎಂದಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯದ ಸಾರ್ವಜನಿಕ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಡಿಜಿಟಲ್ ಎಂದು ಘೋಷಿಸಿದ್ದಾರೆ.

“ಇದು ನಮ್ಮ ರಾಜ್ಯದ ಸಾಧನೆಯಾಗಿದ್ದು ಅದು ಮುಂದಿನ ಪೀಳಿಗೆಗೆ ಪ್ರಯೋಜನವನ್ನು ನೀಡುತ್ತದೆ. ಎಲ್‌ಡಿಎಫ್(ಕಮ್ಯುನಿಷ್ಟ್ ಮಿತ್ರ ಕೂಟ) ಸರ್ಕಾರ ಈ ಯೋಜನೆಯನ್ನು ಮುನ್ನಡೆಸಿದೆ” ಎಂದು ಮುಖ್ಯಮಂತ್ರಿ ಕೇರಳವನ್ನು ಸಾರ್ವಜನಿಕ ಶಿಕ್ಷಣ ಕ್ಷೇತ್ರದಲ್ಲಿ ಸಂಪೂರ್ಣವಾಗಿ ಡಿಜಿಟಲ್ ಆಗಿ ಮಾರ್ಪಡಿಸಿದ ಮೊದಲ ರಾಜ್ಯವೆಂದು ಘೋಷಿಸಿದರು.

ಇದನ್ನೂ ಓದಿ: ಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

“ಕಳೆದ 5 ವರ್ಷಗಳಲ್ಲಿ 5 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಸೇರಿದ್ದಾರೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಬಗ್ಗೆ ಜನರ ಧೋರಣೆ ಬದಲಾಗಿದೆ. ಶೈಕ್ಷಣಿಕ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮ ಶಾಲೆಗಳನ್ನು ಅಂತರರಾಷ್ಟ್ರೀಯ ಮಾನದಂಡಗಳಂತೆ ಅಭಿವೃದ್ಧಿಪಡಿಸುವುದು ನಮ್ಮ ಉದ್ದೇಶವಾಗಿತ್ತು. ನಮ್ಮ ಹಳ್ಳಿಯ ಶಾಲೆಯು ವಿಶ್ವದ ಯಾವುದೇ ಭಾಗದ ಅತ್ಯುತ್ತಮ ಶಾಲೆಯಂತೆಯೇ ಇರಬೇಕು” ಎಂದು ಅವರು ಹೇಳಿದ್ದಾರೆ.

A classroom at the government lower primary school in Ernakulam. | TA Ameerudheen

ಇದರೊಂದಿಗೆ ರಾಜ್ಯದ ಎಲ್ಲ ಮಕ್ಕಳು ಹೊಸ ತಂತ್ರಜ್ಞಾನಗಳ ಮೂಲಕ ಶಿಕ್ಷಣವನ್ನು ಪಡೆಯಬಹುದು ಎಂದು ಮುಖ್ಯಮಂತ್ರಿ ಪಿಣರಾಯಿ ಹೇಳಿದ್ದಾರೆ. “ಇದು ಹೆಮ್ಮೆಯ ಸಾಧನೆಯಾಗಿದ್ದು, ಪ್ರತಿ ಮಗುವಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಸರ್ಕಾರ ದೃಡ ನಿರ್ಧಾರವಾಗಿತ್ತು. ಪ್ರವಾಹಗಳು ಮತ್ತು ಭೀಕರ ಸಾಂಕ್ರಾಮಿಕ ರೋಗಗಳ ಹೊರತಾಗಿಯೂ, ನಾವು ಆ ಗುರಿಯನ್ನು ಮುಟ್ಟಿದ್ದೇವೆ. ಮುಂದಿನ ದಿನಗಳಲ್ಲಿ, ನಾವು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಉನ್ನತ ಎತ್ತರಕ್ಕೆ ಏರಬಹುದು” ಎಂದು ಅವರು ಹೇಳಿದ್ದಾರೆ.

ಕೇರಳ ಮೂಲಸೌಕರ್ಯ ಹೂಡಿಕೆ ನಿಧಿ ಮಂಡಳಿ(KIIFB) ಒದಗಿಸಿದ ಹಣವನ್ನು ಬಳಸಿಕೊಂಡು ಸ್ಮಾರ್ಟ್ ಕ್ಲಾಸ್‌ರೂಮ್ ಯೋಜನೆಯನ್ನು ರೂಪಿಸಲಾಗಿದೆ. ಯೋಜನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಕೈಟ್ ಸಂಸ್ಥೆ ಜಾರಿಗೆ ತಂದಿದೆ.

ಯೋಜನೆಯಲ್ಲಿ 16,027 ಶಾಲೆಗಳಲ್ಲಿ 3,74,274 ಡಿಜಿಟಲ್ ಉಪಕರಣಗಳನ್ನು ವಿತರಿಸಲಾಗಿದ್ದು, ಮೊದಲ ಹಂತದಲ್ಲಿ 4752 ಪ್ರೌಡ ಶಾಲೆಗಳು ಮತ್ತು ಹೈಯರ್ ಸೆಕೆಂಡರಿ ಶಾಲೆಗಳಲ್ಲಿ 45,000 ಹೈಟೆಕ್ ತರಗತಿ ಕೊಠಡಿಗಳು ಅಸ್ತಿತ್ವಕ್ಕೆ ಬಂದವು. KIIFB ನೆರವಿನ ಹೊರತಾಗಿ, ಶಾಸಕರಿಗಾಗಿ ಮೀಸಲಿಟ್ಟ ಅನುದಾನಗಳನ್ನು ಬಳಸಿ 11,275 ಪ್ರಾಥಮಿಕ ಮತ್ತು ಉನ್ನತ ಪ್ರಾಥಮಿಕ ಶಾಲೆಗಳಲ್ಲಿ 45,000 ಹೈಟೆಕ್ ತರಗತಿ ಕೊಠಡಿಗಳು ಮತ್ತು ಲ್ಯಾಬ್‌ಗಳಿಗೆ ಸಿದ್ಧಪಡಿಸಲಾಗಿದೆ.


ಇದನ್ನೂ ಓದಿ: ಆರೋಗ್ಯ ಇಲಾಖೆಯನ್ನು ಕೇರಳ ಮಾದರಿಯಲ್ಲಿ ರೂಪಿಸಲಾಗುವುದು: ಆರೋಗ್ಯ ಸಚಿವ ಸುಧಾಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...