Homeಮುಖಪುಟಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ಪ್ರತಿ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂ ಇರುವ ಏಕೈಕ ರಾಜ್ಯ ಕೇರಳ!

ಕಳೆದ 5 ವರ್ಷಗಳಲ್ಲಿ 5 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಸೇರಿದ್ದಾರೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಬಗ್ಗೆ ಜನರ ಧೋರಣೆ ಬದಲಾಗಿದೆ ಎಂದು ಸಿಎಂ ಪಿಣರಾಯಿ ಹೇಳಿದ್ದಾರೆ.

- Advertisement -
- Advertisement -

ಕೇರಳ ತನ್ನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಹೈಟೆಕ್ ಕ್ಲಾಸ್‌ರೂಂಗಳನ್ನು ಹೊಂದಿರುವ ದೇಶದ ಮೊದಲ ರಾಜ್ಯ ಎಂದಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ರಾಜ್ಯದ ಸಾರ್ವಜನಿಕ ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣವಾಗಿ ಡಿಜಿಟಲ್ ಎಂದು ಘೋಷಿಸಿದ್ದಾರೆ.

“ಇದು ನಮ್ಮ ರಾಜ್ಯದ ಸಾಧನೆಯಾಗಿದ್ದು ಅದು ಮುಂದಿನ ಪೀಳಿಗೆಗೆ ಪ್ರಯೋಜನವನ್ನು ನೀಡುತ್ತದೆ. ಎಲ್‌ಡಿಎಫ್(ಕಮ್ಯುನಿಷ್ಟ್ ಮಿತ್ರ ಕೂಟ) ಸರ್ಕಾರ ಈ ಯೋಜನೆಯನ್ನು ಮುನ್ನಡೆಸಿದೆ” ಎಂದು ಮುಖ್ಯಮಂತ್ರಿ ಕೇರಳವನ್ನು ಸಾರ್ವಜನಿಕ ಶಿಕ್ಷಣ ಕ್ಷೇತ್ರದಲ್ಲಿ ಸಂಪೂರ್ಣವಾಗಿ ಡಿಜಿಟಲ್ ಆಗಿ ಮಾರ್ಪಡಿಸಿದ ಮೊದಲ ರಾಜ್ಯವೆಂದು ಘೋಷಿಸಿದರು.

ಇದನ್ನೂ ಓದಿ: ಆರೋಗ್ಯ ಕ್ಷೇತ್ರದಲ್ಲಿ ಕೇರಳದ ದಣಿವರಿಯದ ಸೇವೆಗೆ ವಿಶ್ವಸಂಸ್ಥೆಯ ಪ್ರಶಸ್ತಿ

“ಕಳೆದ 5 ವರ್ಷಗಳಲ್ಲಿ 5 ಲಕ್ಷ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ಸೇರಿದ್ದಾರೆ. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಬಗ್ಗೆ ಜನರ ಧೋರಣೆ ಬದಲಾಗಿದೆ. ಶೈಕ್ಷಣಿಕ ಮತ್ತು ಇತರ ಕ್ಷೇತ್ರಗಳಲ್ಲಿ ನಮ್ಮ ಶಾಲೆಗಳನ್ನು ಅಂತರರಾಷ್ಟ್ರೀಯ ಮಾನದಂಡಗಳಂತೆ ಅಭಿವೃದ್ಧಿಪಡಿಸುವುದು ನಮ್ಮ ಉದ್ದೇಶವಾಗಿತ್ತು. ನಮ್ಮ ಹಳ್ಳಿಯ ಶಾಲೆಯು ವಿಶ್ವದ ಯಾವುದೇ ಭಾಗದ ಅತ್ಯುತ್ತಮ ಶಾಲೆಯಂತೆಯೇ ಇರಬೇಕು” ಎಂದು ಅವರು ಹೇಳಿದ್ದಾರೆ.

A classroom at the government lower primary school in Ernakulam. | TA Ameerudheen

ಇದರೊಂದಿಗೆ ರಾಜ್ಯದ ಎಲ್ಲ ಮಕ್ಕಳು ಹೊಸ ತಂತ್ರಜ್ಞಾನಗಳ ಮೂಲಕ ಶಿಕ್ಷಣವನ್ನು ಪಡೆಯಬಹುದು ಎಂದು ಮುಖ್ಯಮಂತ್ರಿ ಪಿಣರಾಯಿ ಹೇಳಿದ್ದಾರೆ. “ಇದು ಹೆಮ್ಮೆಯ ಸಾಧನೆಯಾಗಿದ್ದು, ಪ್ರತಿ ಮಗುವಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಸರ್ಕಾರ ದೃಡ ನಿರ್ಧಾರವಾಗಿತ್ತು. ಪ್ರವಾಹಗಳು ಮತ್ತು ಭೀಕರ ಸಾಂಕ್ರಾಮಿಕ ರೋಗಗಳ ಹೊರತಾಗಿಯೂ, ನಾವು ಆ ಗುರಿಯನ್ನು ಮುಟ್ಟಿದ್ದೇವೆ. ಮುಂದಿನ ದಿನಗಳಲ್ಲಿ, ನಾವು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಇನ್ನಷ್ಟು ಉನ್ನತ ಎತ್ತರಕ್ಕೆ ಏರಬಹುದು” ಎಂದು ಅವರು ಹೇಳಿದ್ದಾರೆ.

ಕೇರಳ ಮೂಲಸೌಕರ್ಯ ಹೂಡಿಕೆ ನಿಧಿ ಮಂಡಳಿ(KIIFB) ಒದಗಿಸಿದ ಹಣವನ್ನು ಬಳಸಿಕೊಂಡು ಸ್ಮಾರ್ಟ್ ಕ್ಲಾಸ್‌ರೂಮ್ ಯೋಜನೆಯನ್ನು ರೂಪಿಸಲಾಗಿದೆ. ಯೋಜನೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಕೈಟ್ ಸಂಸ್ಥೆ ಜಾರಿಗೆ ತಂದಿದೆ.

ಯೋಜನೆಯಲ್ಲಿ 16,027 ಶಾಲೆಗಳಲ್ಲಿ 3,74,274 ಡಿಜಿಟಲ್ ಉಪಕರಣಗಳನ್ನು ವಿತರಿಸಲಾಗಿದ್ದು, ಮೊದಲ ಹಂತದಲ್ಲಿ 4752 ಪ್ರೌಡ ಶಾಲೆಗಳು ಮತ್ತು ಹೈಯರ್ ಸೆಕೆಂಡರಿ ಶಾಲೆಗಳಲ್ಲಿ 45,000 ಹೈಟೆಕ್ ತರಗತಿ ಕೊಠಡಿಗಳು ಅಸ್ತಿತ್ವಕ್ಕೆ ಬಂದವು. KIIFB ನೆರವಿನ ಹೊರತಾಗಿ, ಶಾಸಕರಿಗಾಗಿ ಮೀಸಲಿಟ್ಟ ಅನುದಾನಗಳನ್ನು ಬಳಸಿ 11,275 ಪ್ರಾಥಮಿಕ ಮತ್ತು ಉನ್ನತ ಪ್ರಾಥಮಿಕ ಶಾಲೆಗಳಲ್ಲಿ 45,000 ಹೈಟೆಕ್ ತರಗತಿ ಕೊಠಡಿಗಳು ಮತ್ತು ಲ್ಯಾಬ್‌ಗಳಿಗೆ ಸಿದ್ಧಪಡಿಸಲಾಗಿದೆ.


ಇದನ್ನೂ ಓದಿ: ಆರೋಗ್ಯ ಇಲಾಖೆಯನ್ನು ಕೇರಳ ಮಾದರಿಯಲ್ಲಿ ರೂಪಿಸಲಾಗುವುದು: ಆರೋಗ್ಯ ಸಚಿವ ಸುಧಾಕರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...