Homeಮುಖಪುಟತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ಅಂತರ್-ಧರ್ಮೀಯ ಕುಟುಂಬಗಳಲ್ಲಿ ಮದುವೆಯಾದ ಕಲಾವಿದರು, ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಖಾತೆಗಳಲ್ಲಿ ಫೋಟೋಗಳನ್ನು ಶೇರ್ ಮಾಡಿ ತನಿಷ್ಕ್ ಜಾಹೀರಾತನ್ನು ಬೆಂಬಲಿಸುತ್ತಿದ್ದಾರೆ.

- Advertisement -
- Advertisement -

ಕೆಟ್ಟ ಟ್ರೋಲಿಂಗ್ ನಂತರ ಹಿಂದೂ-ಮುಸ್ಲಿಂ ದಂಪತಿಗಳು ಮತ್ತು ಅವರ ಕುಟುಂಬಗಳನ್ನು ಒಳಗೊಂಡ ಜಾಹೀರಾತನ್ನು ಹಿಂತೆಗೆದುಕೊಂಡಿರುವ ಟೈಟಾನ್‌ ಆಭರಣ ಬ್ರಾಂಡ್ ತನಿಷ್ಕ್‌ನ ಏಕತ್ವಂ ಜಾಹೀರಾತಿಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.

ಅಂತರ್-ಧರ್ಮೀಯ ಕುಟುಂಬಗಳಲ್ಲಿ ಮದುವೆಯಾದ ಕಲಾವಿದರು, ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಖಾತೆಗಳಲ್ಲಿ ಫೋಟೋಗಳನ್ನು ಶೇರ್ ಮಾಡಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ತನಿಷ್ಕ್ ಏಕತ್ವಂ ಜಾಹೀರಾತನ್ನು ಬೆಂಬಲಿಸುತ್ತಿದ್ದಾರೆ.

ನಟ ಮೊಹಮ್ಮದ್ ಜೀಶನ್ ಅಯೂಬ್ ಅವರನ್ನು ಮದುವೆಯಾದ ನಟಿ, ನಿರ್ದೇಶಕಿ ರಸಿಕಾ ಅಗಾಶೆ ತಮ್ಮ 6 ವರ್ಷಗಳ ಹಿಂದಿನ ಬೇಬಿ ಶವರ್(ಸೀಮಂತ) ಚಿತ್ರವನ್ನು ಹಂಚಿಕೊಂಡಿದ್ದಾರೆ.

“ಲವ್ ಜಿಹಾದ್ ಎಂದು ಕೂಗುವ ಮೊದಲು, ವಿಶೇಷ ಮದುವೆ ಕಾಯ್ದೆಯ ಬಗ್ಗೆ ತಿಳಿದುಕೊಳ್ಳೋಣ” ಎಂದು ರಸಿಕಾ ಅಗಾಶೆ ಹೇಳಿದ್ದಾರೆ. ಫೋಟೋದಲ್ಲಿ ಜೀಶನ್ ಅಯ್ಯೂಬ್ ಕೂಡ ಅವರ ಪಕ್ಕದಲ್ಲಿ ಕುಳಿತಿರುವುದನ್ನು ನೋಡಬಹುದು.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಗ್ರಿಹಾ ಅತುಲ್, “ತನೀಶ್ಕ್ ಜಾಹೀರಾತು ಅವಳಂತಹ ಅನೇಕರ ನೈಜತೆಗಳನ್ನು ಆಧರಿಸಿದೆ. ನಾನು ಮುಸ್ಲಿಂ ಮನೆಯೊಂದರಲ್ಲಿ ಮದುವೆಯಾಗಿದ್ದೇನೆ. ಅದು ನನ್ನ ಧಾರ್ಮಿಕ ಗುರುತನ್ನು ಗೌರವಿಸುತ್ತದೆ ಮತ್ತು ಸ್ವೀಕರಿಸುತ್ತದೆ. ಆದ್ದರಿಂದ ತನೀಷ್ಕ್ ಜಾಹೀರಾತು ಕಲ್ಪನೆಯಲ್ಲ. ಇದು ಫ್ಯಾಸಿಸ್ಟ್ ಶಕ್ತಿಗಳಿಂದ ಉದ್ದೇಶಪೂರ್ವಕವಾಗಿ ನಿರಾಕರಿಸಲ್ಪಟ್ಟ ನಮ್ಮ ಕಾಲದ ವಾಸ್ತವವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ಮದುವೆಯಾಗಿ 44 ವರ್ಷಗಳಾದ ಇನ್ನೊಂದು ದಂಪತಿ ತಮ್ಮ ಕಥೆಯನ್ನೂ ಹಂಚಿಕೊಂಡಿದ್ದಾರೆ. ಹಲವು ವರ್ಷಗಳ ಹೋರಾಟದ ನಂತರ ಈ ದಂಪತಿ ಈಗ ಶಾಂತಿಯನ್ನು ಕಂಡುಕೊಂಡಿದ್ದಾರೆ. ಗೋವಾದಲ್ಲಿ ತಮ್ಮ ಮನೆಗೆ ಹಿಂದಿಯಲ್ಲಿ “ಹಮ್” ಎಂದು ಹೆಸರಿಸಿದ್ದಾರೆ. ಅಲ್ಲಿ “ಎಚ್” ಎಂದರೆ ಹಿಂದೂ ಮತ್ತು”ಎಂ” ಮುಸ್ಲಿಂ.

“I saw her for the first time before Dussehra– we were neighbours and family friends. But because I was away at boarding…

Posted by Humans of Bombay on Wednesday, October 14, 2020

 

ತನಿಷ್ಕ್ ಜಾಹೀರಾತು ಲವ್ ಜಿಹಾದ್ ಎಂಬ ಕಾಮೆಂಟುಗಳಳ ಹಿನ್ನೆಲೆ ಈ ಸುಂದರ ಕಥೆಯನ್ನು ಅಕ್ಟೋಬರ್ 14, 2020 ರಂದು ಹ್ಯೂಮನ್ಸ್ ಆಫ್ ಬಾಂಬೆ ಪೋಸ್ಟ್ ಮಾಡಿದೆ.

ಇವುಗಳ ಜೊತೆಗೆ ಅನೇಕ ಮಂದಿ ತನಿಷ್ಕ್‌ನಲ್ಲಿ ಆಭರಣಗಳನ್ನು ಕೊಳ್ಳುವ ಮೂಲಕ, ಅಲ್ಲೇ ಆಭರಣ ಕೊಳ್ಳುವ ಯೋಜನೆಗಳ ಮೂಲಕ ತನಿಷ್ಕ್‌ಗೆ ಬೆಂಬಲ ಸೂಚಿಸುತ್ತಿದ್ದಾರೆ.

ಇನ್ನು ಕೆಲವರು ತಾವು ತನಿಷ್ಕ್‌ನಲ್ಲಿ ಆಭರಣ ಕೊಂಡುಕೊಂಡಿರುವುದಕ್ಕೆ ಹೆಮ್ಮೆಯಿದೆ ಎಂದು ಪೋಸ್ಟ್ ಮಾಡಿದ್ದಾರೆ.

ಏಕತ್ವಂ ಅಭಿಯಾನದ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು. ಇದನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್, ಲೇಖಕ ಚೇತನ್ ಭಗತ್, ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸೇರಿದಂತೆ ಹಲವು ಮಂದಿ ಖಂಡಿಸಿದ್ದಾರೆ.

’ತನಿಷ್ಕ್ ತಮ್ಮ ಉದ್ಯೋಗಿಗಳು ಮತ್ತು ಮಳಿಗೆಗಳ ಸುರಕ್ಷತೆಗಾಗಿ ಜಾಹೀರಾತನ್ನು ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡರು. ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ ಮತ್ತು ತನಿಷ್ಕ್ ಹಲವು ಆಭರಣ ಮಳಿಗೆಗಳನ್ನು ಹೊಂದಿದೆ. ಇವುಗಳ ಸುರಕ್ಷತೆ ಮುಖ್ಯ ಹಾಗಾಗಿ ಜಾಹೀರಾತು ವಾಪಸ್ ಪಡೆದಿದ್ದಾರೆ’ ಎಂದು ಜಾಹೀರಾತು ನಿರ್ದೇಶಕಿ ಜೊಯೀತಾ ಹೇಳಿದ್ದಾರೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...