Homeಮುಖಪುಟತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ತನಿಷ್ಕ್ ಜಾಹೀರಾತಿಗೆ ಟ್ವಿಟ್ಟರ್‌ನಲ್ಲಿ ಭಾರಿ ಬೆಂಬಲ: ಅಂತರ್‌ಧರ್ಮೀಯ ವಿವಾಹಿತರ ಮನದಾಳದ ಮಾತು

ಅಂತರ್-ಧರ್ಮೀಯ ಕುಟುಂಬಗಳಲ್ಲಿ ಮದುವೆಯಾದ ಕಲಾವಿದರು, ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಖಾತೆಗಳಲ್ಲಿ ಫೋಟೋಗಳನ್ನು ಶೇರ್ ಮಾಡಿ ತನಿಷ್ಕ್ ಜಾಹೀರಾತನ್ನು ಬೆಂಬಲಿಸುತ್ತಿದ್ದಾರೆ.

- Advertisement -
- Advertisement -

ಕೆಟ್ಟ ಟ್ರೋಲಿಂಗ್ ನಂತರ ಹಿಂದೂ-ಮುಸ್ಲಿಂ ದಂಪತಿಗಳು ಮತ್ತು ಅವರ ಕುಟುಂಬಗಳನ್ನು ಒಳಗೊಂಡ ಜಾಹೀರಾತನ್ನು ಹಿಂತೆಗೆದುಕೊಂಡಿರುವ ಟೈಟಾನ್‌ ಆಭರಣ ಬ್ರಾಂಡ್ ತನಿಷ್ಕ್‌ನ ಏಕತ್ವಂ ಜಾಹೀರಾತಿಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.

ಅಂತರ್-ಧರ್ಮೀಯ ಕುಟುಂಬಗಳಲ್ಲಿ ಮದುವೆಯಾದ ಕಲಾವಿದರು, ಸಾಮಾಜಿಕ ಮಾಧ್ಯಮ ಬಳಕೆದಾರರು ತಮ್ಮ ಖಾತೆಗಳಲ್ಲಿ ಫೋಟೋಗಳನ್ನು ಶೇರ್ ಮಾಡಿ ತಮ್ಮ ಅನುಭವಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಮೂಲಕ ತನಿಷ್ಕ್ ಏಕತ್ವಂ ಜಾಹೀರಾತನ್ನು ಬೆಂಬಲಿಸುತ್ತಿದ್ದಾರೆ.

ನಟ ಮೊಹಮ್ಮದ್ ಜೀಶನ್ ಅಯೂಬ್ ಅವರನ್ನು ಮದುವೆಯಾದ ನಟಿ, ನಿರ್ದೇಶಕಿ ರಸಿಕಾ ಅಗಾಶೆ ತಮ್ಮ 6 ವರ್ಷಗಳ ಹಿಂದಿನ ಬೇಬಿ ಶವರ್(ಸೀಮಂತ) ಚಿತ್ರವನ್ನು ಹಂಚಿಕೊಂಡಿದ್ದಾರೆ.

“ಲವ್ ಜಿಹಾದ್ ಎಂದು ಕೂಗುವ ಮೊದಲು, ವಿಶೇಷ ಮದುವೆ ಕಾಯ್ದೆಯ ಬಗ್ಗೆ ತಿಳಿದುಕೊಳ್ಳೋಣ” ಎಂದು ರಸಿಕಾ ಅಗಾಶೆ ಹೇಳಿದ್ದಾರೆ. ಫೋಟೋದಲ್ಲಿ ಜೀಶನ್ ಅಯ್ಯೂಬ್ ಕೂಡ ಅವರ ಪಕ್ಕದಲ್ಲಿ ಕುಳಿತಿರುವುದನ್ನು ನೋಡಬಹುದು.

ಇದನ್ನೂ ಓದಿ: ಸೌಹಾರ್ದತೆ ಸಾರುವ ’ಏಕತ್ವಂ’ ಜಾಹೀರಾತು ನಿಲ್ಲಿಸಿದ ತನಿಷ್ಕ್ ಆಭರಣ ಕಂಪನಿ: ಅಂತದ್ದೇನಿದೆ ಅದರಲ್ಲಿ?

ಗ್ರಿಹಾ ಅತುಲ್, “ತನೀಶ್ಕ್ ಜಾಹೀರಾತು ಅವಳಂತಹ ಅನೇಕರ ನೈಜತೆಗಳನ್ನು ಆಧರಿಸಿದೆ. ನಾನು ಮುಸ್ಲಿಂ ಮನೆಯೊಂದರಲ್ಲಿ ಮದುವೆಯಾಗಿದ್ದೇನೆ. ಅದು ನನ್ನ ಧಾರ್ಮಿಕ ಗುರುತನ್ನು ಗೌರವಿಸುತ್ತದೆ ಮತ್ತು ಸ್ವೀಕರಿಸುತ್ತದೆ. ಆದ್ದರಿಂದ ತನೀಷ್ಕ್ ಜಾಹೀರಾತು ಕಲ್ಪನೆಯಲ್ಲ. ಇದು ಫ್ಯಾಸಿಸ್ಟ್ ಶಕ್ತಿಗಳಿಂದ ಉದ್ದೇಶಪೂರ್ವಕವಾಗಿ ನಿರಾಕರಿಸಲ್ಪಟ್ಟ ನಮ್ಮ ಕಾಲದ ವಾಸ್ತವವಾಗಿದೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

 

ಇದನ್ನೂ ಓದಿ: ತನಿಷ್ಕ್ ಜಾಹೀರಾತು: ಗುಜರಾತ್‌ನ ಅಂಗಡಿ ಮಳಿಗೆಗಳಿಗೆ ಬೆದರಿಕೆ!

ಮದುವೆಯಾಗಿ 44 ವರ್ಷಗಳಾದ ಇನ್ನೊಂದು ದಂಪತಿ ತಮ್ಮ ಕಥೆಯನ್ನೂ ಹಂಚಿಕೊಂಡಿದ್ದಾರೆ. ಹಲವು ವರ್ಷಗಳ ಹೋರಾಟದ ನಂತರ ಈ ದಂಪತಿ ಈಗ ಶಾಂತಿಯನ್ನು ಕಂಡುಕೊಂಡಿದ್ದಾರೆ. ಗೋವಾದಲ್ಲಿ ತಮ್ಮ ಮನೆಗೆ ಹಿಂದಿಯಲ್ಲಿ “ಹಮ್” ಎಂದು ಹೆಸರಿಸಿದ್ದಾರೆ. ಅಲ್ಲಿ “ಎಚ್” ಎಂದರೆ ಹಿಂದೂ ಮತ್ತು”ಎಂ” ಮುಸ್ಲಿಂ.

“I saw her for the first time before Dussehra– we were neighbours and family friends. But because I was away at boarding…

Posted by Humans of Bombay on Wednesday, October 14, 2020

 

ತನಿಷ್ಕ್ ಜಾಹೀರಾತು ಲವ್ ಜಿಹಾದ್ ಎಂಬ ಕಾಮೆಂಟುಗಳಳ ಹಿನ್ನೆಲೆ ಈ ಸುಂದರ ಕಥೆಯನ್ನು ಅಕ್ಟೋಬರ್ 14, 2020 ರಂದು ಹ್ಯೂಮನ್ಸ್ ಆಫ್ ಬಾಂಬೆ ಪೋಸ್ಟ್ ಮಾಡಿದೆ.

ಇವುಗಳ ಜೊತೆಗೆ ಅನೇಕ ಮಂದಿ ತನಿಷ್ಕ್‌ನಲ್ಲಿ ಆಭರಣಗಳನ್ನು ಕೊಳ್ಳುವ ಮೂಲಕ, ಅಲ್ಲೇ ಆಭರಣ ಕೊಳ್ಳುವ ಯೋಜನೆಗಳ ಮೂಲಕ ತನಿಷ್ಕ್‌ಗೆ ಬೆಂಬಲ ಸೂಚಿಸುತ್ತಿದ್ದಾರೆ.

ಇನ್ನು ಕೆಲವರು ತಾವು ತನಿಷ್ಕ್‌ನಲ್ಲಿ ಆಭರಣ ಕೊಂಡುಕೊಂಡಿರುವುದಕ್ಕೆ ಹೆಮ್ಮೆಯಿದೆ ಎಂದು ಪೋಸ್ಟ್ ಮಾಡಿದ್ದಾರೆ.

ಏಕತ್ವಂ ಅಭಿಯಾನದ ಜಾಹೀರಾತಿನ ಮೂಲಕ ತನಿಷ್ಕ್ ‘ಲವ್ ಜಿಹಾದ್’ ಹಾಗೂ ‘ನಕಲಿ ಜಾತ್ಯತೀತತೆ’ಯನ್ನು ಪ್ರೋತ್ಸಾಹಿಸುತ್ತಿದೆ ಎಂದು ಹಲವು ಟ್ವಿಟ್ಟಿರಿಗರು ಆರೋಪಿಸಿದ್ದರು. ಇದನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್, ಲೇಖಕ ಚೇತನ್ ಭಗತ್, ಖ್ಯಾತ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಸೇರಿದಂತೆ ಹಲವು ಮಂದಿ ಖಂಡಿಸಿದ್ದಾರೆ.

’ತನಿಷ್ಕ್ ತಮ್ಮ ಉದ್ಯೋಗಿಗಳು ಮತ್ತು ಮಳಿಗೆಗಳ ಸುರಕ್ಷತೆಗಾಗಿ ಜಾಹೀರಾತನ್ನು ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡರು. ನಾವು ಆರ್ಥಿಕ ಬಿಕ್ಕಟ್ಟಿನಲ್ಲಿದ್ದೇವೆ ಮತ್ತು ತನಿಷ್ಕ್ ಹಲವು ಆಭರಣ ಮಳಿಗೆಗಳನ್ನು ಹೊಂದಿದೆ. ಇವುಗಳ ಸುರಕ್ಷತೆ ಮುಖ್ಯ ಹಾಗಾಗಿ ಜಾಹೀರಾತು ವಾಪಸ್ ಪಡೆದಿದ್ದಾರೆ’ ಎಂದು ಜಾಹೀರಾತು ನಿರ್ದೇಶಕಿ ಜೊಯೀತಾ ಹೇಳಿದ್ದಾರೆ.


ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...