Homeಮುಖಪುಟಉತ್ತರ ಪ್ರದೇಶ: ಅಧಿಕಾರಿಗಳ ಎದುರೇ ಗುಂಡು ಹಾರಿಸಿ ಹತ್ಯೆಗೈದ ಬಿಜೆಪಿ ಶಾಸಕನ ಆಪ್ತ!

ಉತ್ತರ ಪ್ರದೇಶ: ಅಧಿಕಾರಿಗಳ ಎದುರೇ ಗುಂಡು ಹಾರಿಸಿ ಹತ್ಯೆಗೈದ ಬಿಜೆಪಿ ಶಾಸಕನ ಆಪ್ತ!

ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಆರೋಪಿಯನ್ನು ಬಿಜೆಪಿಯ ಮಾಜಿ ಸೈನಿಕರ ಘಟಕದ ಮುಖ್ಯಸ್ಥರು ಎಂದು ದೃಢಪಡಿಸಿದ್ದು, ಈ ಘಟನೆ ಎಲ್ಲಿಬೇಕಾದರೂ ಸಂಭವಿಸಬಹುದಾದ ಆಕಸ್ಮಿಕ ಘಟನೆ ಎಂದಿದ್ದಾರೆ.

- Advertisement -
- Advertisement -

ವಿವಾದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಬಲ್ಲಿಯಾದಲ್ಲಿ ಗುರುವಾರ ಸ್ಥಳೀಯ ಅಧಿಕಾರಿಗಳ ಎದುರು ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದಾದ ನಂತರ ಘಟನಾ ಸ್ಥಳದಲ್ಲಿ ಹಾಜರಿದ್ದ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮುಖ್ಯಮಂತ್ರಿ ಆದಿತ್ಯನಾಥ್ ಆದೇಶಿಸಿದ್ದಾರೆ.

46 ವರ್ಷದ ಜೈಪ್ರಕಾಶ್ ಎಂಬುವವರನ್ನು ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಅವರ ಆಪ್ತ ಧೀರೇಂದ್ರ ಸಿಂಗ್, ಅಧಿಕಾರಿಗಳ ಎದುರೇ ಗುಂಡಿಕ್ಕಿ ಕೊಂದಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಎಎನ್‌ಐ ವೀಡಿಯೋವೊಂದನ್ನು ಟ್ವೀಟ್ ಮಾಡಿದ್ದು, “ಬಲ್ಲಿಯಾದಲ್ಲಿ ಸರ್ಕಾರಿ ಕೋಟಾದಡಿಯಲ್ಲಿ ಅಂಗಡಿಗಳನ್ನು ಮಂಜೂರು ಮಾಡಲು ಕರೆದಿದ್ದ ಸಭೆಯಲ್ಲಿ ಗುಂಡು ಹಾರಿಸಿದ್ದರಿಂದ ಒಬ್ಬರು ಮೃತಪಟ್ಟಿದ್ದಾರೆ. ಬಲ್ಲಿಯಾದ ಎಸ್‌ಪಿ ದೇವೇಂದ್ರನಾಥ್ ಪ್ರಕಾರ, ಸಭೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿದ ನಂತರ ಈ ಘಟನೆ ನಡೆದಿದೆ. ತನಿಖೆ ನಡೆಯುತ್ತಿದೆ ಎಂದಿದ್ದಾರೆ” ಎಂದು ಹೇಳಿದೆ.

ಇದನ್ನೂ ಓದಿ: ಯುಪಿ: ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಅಪ್ರಾಪ್ತೆ ಅಸಹಜ ಸಾವು!

ಇದನ್ನೂ ಓದಿ: ದೇಶಾದ್ಯಂತ ನಡೆಯುವ ದಲಿತರ ಮೇಲಿನ ಹಲ್ಲೆಗಳಲ್ಲಿ ಶೇ.25 ಯುಪಿಯೊಂದರಲ್ಲಿ ವರದಿಯಾಗುತ್ತವೆ!

ಪಡಿತರ ಅಂಗಡಿಗಳ ಹಂಚಿಕೆ ಕುರಿತ ಸಭೆಯನ್ನು ಅಧಿಕಾರಿಯೊಬ್ಬರು ರದ್ದುಪಡಿಸಿದ ನಂತರ, ಅಲ್ಲಿ ಸೇರಿದ್ದ ಸದಸ್ಯರ ನಡುವಿನ ವಿವಾದದಿಂದಾಗಿ ದುರ್ಜನ್‌ಪುರ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಗುಂಡು ಹಾರಿಸಲಾಗಿದೆ ಎಂದು ಎಸ್‌ಪಿ ದೇವೇಂದ್ರ ನಾಥ್ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಸಭೆ ಟೆಂಟ್‌ನಲ್ಲಿ ನಡೆಯಿತು, ಅಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜಮಾಯಿಸಿದರು. ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳೂ ಅಲ್ಲಿದ್ದರು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ಬಿಜೆಪಿ ಶಾಸಕ ಸುರೇಂದ್ರ ಸಿಂಗ್, ಆರೋಪಿಯನ್ನು ಬಿಜೆಪಿಯ ಮಾಜಿ ಸೈನಿಕರ ಘಟಕದ ಮುಖ್ಯಸ್ಥರು ಎಂದು ದೃಢಪಡಿಸಿದ್ದು, “ಈ ಘಟನೆ ಎಲ್ಲಿಬೇಕಾದರೂ ಸಂಭವಿಸಬಹುದಾದ ಆಕಸ್ಮಿಕ ಘಟನೆ. ಇಲ್ಲಿ ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿತ್ತು. ಈ ವಿಷಯದಲ್ಲಿ ಕಾನೂನು ತನ್ನ ಕೆಲಸವನ್ನು ನಿರ್ವಹಿಸಲಿದೆ” ಎಂದು ಹೇಳಿದರು.

ಇದನ್ನೂ ಓದಿ: ’ಯುಪಿ, ಬಿಹಾರದಂತೆ ಪ.ಬಂಗಾಳವೂ ಮಾಫಿಯಾ ರಾಜ್ಯವಾಗುತ್ತಿದೆ’- ಬಿಜೆಪಿ ನಾಯಕ

ಸಂತ್ರಸ್ತನ ಸಹೋದರ ನೀಡಿದ ದೂರಿನ ಮೇರೆಗೆ 15-20 ಜನರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ. ಇನ್ನೂ ಯಾರನ್ನೂ ಬಂಧಿಸಿಲ್ಲ.

ಘಟನೆಯನ್ನು ಗಂಭೀರವಾಗಿ ಗಮನಿಸಿದ ಮುಖ್ಯಮಂತ್ರಿ ಆದಿತ್ಯನಾಥ್, ಸ್ಥಳದಲ್ಲಿದ್ದ ಎಸ್‌ಡಿಎಂ, ಸಿಒ ಮತ್ತು ಪೊಲೀಸ್ ಸಿಬ್ಬಂದಿಯನ್ನು ತಕ್ಷಣವೇ ಅಮಾನತುಗೊಳಿಸಬೇಕು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ನಿರ್ದೇಶಿಸಿದ್ದಾರೆ ಎಂದು ಗೃಹ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡಲು ಗ್ರಾಮದಲ್ಲಿ ಗಣನೀಯ ಪ್ರಮಾಣದ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಇದನ್ನೂ ಓದಿ: ಹತ್ರಾಸ್: ಶವ ಸುಟ್ಟಿದ್ದನ್ನು ಸುಪ್ರೀಂ‌ನಲ್ಲಿ ಸಮರ್ಥಿಸಿಕೊಂಡ ಯುಪಿ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...