Homeಮುಖಪುಟರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ...

ರೈಲ್ವೇ ಖಾಸಗೀಕರಣದ ವಿರುದ್ಧ ಆನ್‌ಲೈನ್ ಸಹಿ ಸಂಗ್ರಹ: ನೀವೂ ಭಾಗವಹಿಸಲು ಇಲ್ಲಿದೆ ವಿವರ…

ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

- Advertisement -
- Advertisement -

ಭಾರತೀಯ ರೈಲ್ವೇ ಕ್ಷೇತ್ರವನ್ನು ಖಾಸಗೀಕರಣಗೊಳಿಸುತ್ತಿರುವ ಕೇಂದ್ರ ಸರ್ಕಾರದ ಈ ಪ್ರಕ್ರಿಯೆಯ ವಿರುದ್ಧ ಸಹಿ ಸಂಗ್ರಹ ಅಭಿಯಾನವನ್ನು ನಡೆಸಲಾಗುತ್ತಿದ್ದು, ಇದಕ್ಕೆ ಸಮ್ಮತಿಯಿರುವವರು ತಮ್ಮ ಹೆಸರು ಮತ್ತು ಸಂಪರ್ಕ ಸಂಖ್ಯೆಯನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಈ ದೇಶದ ಪ್ರಮುಖ ಸಾರ್ವಜನಿಕ ಸಾರಿಗೆ ಒಡೆತನವಾದ ಭಾರತೀಯ ರೈಲ್ವೆಯಲ್ಲಿ ಖಾಸಗಿ ಹೂಡಿಕೆಗೆ ಕೇಂದ್ರ ಸರ್ಕಾರ ಅವಕಾಶ ನೀಡಿರುವ ನಿರ್ಧಾರವು ಅತ್ಯಂತ ಜನ ವಿರೋಧಿ ಮತ್ತು ಕಾರ್ಮಿಕ ವಿರೋಧಿಯಾದದ್ದು. ಜನಸಾಮಾನ್ಯರ ತೆರಿಗೆ ಮೊತ್ತ ಹಾಗೂ ರೈಲ್ವೆ ಕಾರ್ಮಿಕರು ಸುರಿಸಿದ ರಕ್ತ ಮತ್ತು ಬೆವರಿನ ಶ್ರಮದಿಂದ ಸ್ಥಾಪಿತವಾದ ಮತ್ತು ಅಭಿವೃದ್ಧಿಗೊಂಡ ಭಾರತಿಯ ರೈಲ್ವೆಗೆ ಸೇರಿದ ರೈಲ್ವೆ ಮಾರ್ಗಗಳನ್ನು, ನಿಲ್ದಾಣಗಳನ್ನು, ರೈಲ್ವೆ ಕೈಗಾರಿಕೆಗಳು ಹಾಗೂ ಇತರ ಮೂಲಸೌಕರ್ಯಗಳನ್ನು ಕಾರ್ಪೋರೇಟ್ ಕಂಪೆನಿಗಳಿಗೆ ಬರೀ ಪುಡಿಗಾಸಿಗೆ ನೀಡಲಾಗುತ್ತಿದ್ದು, ಆ ಮೂಲಕ ಸಾಮಾನ್ಯ ಜನರನ್ನು ಲೂಟಿ ಮಾಡಲು ಖಾಸಗೀಯವರಿಗೆ ಅವಕಾಶ ನೀಡುವುದು ಇದರ ಉದ್ದೇಶವಾಗಿದೆ.

ಇದನ್ನೂ ಓದಿ: ರೈಲ್ವೇ ಖಾಸಗೀಕರಣಕ್ಕೆ ಚಾಲನೆ: ಮುಂದಿನ ಕರಾಳ ದಿನಗಳಿಗೆ ಹಸಿರು ನಿಶಾನೆ

ಜುಲೈ 1 ರಂದು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕೇಂದ್ರ ಸರ್ಕಾರ 109 ಕ್ಕೂ ಹೆಚ್ಚು ಪ್ರಯಾಣಿಕರ ರೈಲು ಸೇವೆಗಳ ಮಾರ್ಗಗಳಲ್ಲಿ ಸರ್ಕಾರದ ಜೊತೆಗೆ ಭಾಗವಹಿಸಲು ಇಚ್ಚಿಸುವ ಅರ್ಹ ಖಾಸಗಿ ಕಂಪೆನಿಗಳಿಗೆ ರೈಲ್ವೆ ಇಲಾಖೆಯಲ್ಲಿ ಹೂಡಿಕೆ ಮಾಡಲು ಮುಕ್ತ ಆಹ್ವಾನ ನೀಡಿದೆ. ಅಲ್ಲದೆ, 30,000 ಕೋಟಿ ರೂ. ವರೆಗೆ ಖಾಸಗಿ ಹೂಡಿಕೆಗೆ ಅವಕಾಶ ಕಲ್ಪಿಸಿದೆ. ಈ ಮೂಲಕ ಐತಿಹಾಸಿಕ ಭಾರತೀಯ ರೈಲ್ವೆಯನ್ನೂ ಖಾಸಗೀಕರಣ ಮಾಡಲು ಹೊರಟಿದೆ.

ಇದನ್ನೂ ಓದಿ: ಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ಬೆಂಕಿಯಿಂದ ಬಾಣಲೆಗೆ;

ಈಗಾಗಲೇ ಖಾಸಗೀ ಶಾಲೆಗಳು, ಖಾಸಗೀ ಆಸ್ಪತ್ರೆಗಳು, ಖಾಸಗೀ ವಿಮಾನಗಳು ಹೀಗೆ ಖಾಸಗಿಕರಣದಿಂದ ಬಳಲಿಹೋಗಿರುವ ಜನಕ್ಕೆ ಸರ್ಕಾರ ಮತ್ತೊಂದು ಹೊಡೆತ ನೀಡಿದೆ.

ಭಾರತೀಯ ರೈಲ್ವೆಯಿಂದ ಸುಮಾರು 12 ಲಕ್ಷ ರೈಲ್ವೆ ಸಿಬ್ಬಂದಿ ಜೀವನ ರೂಪಿಸಿಕೊಂಡಿದ್ದಾರೆ. ಇದೀಗ ಖಾಸಗಿ ರೈಲುಗಳ ಸಂಚಾರದಿಂದ ಮುಂದಿನ ವರ್ಷಗಳಲ್ಲಿ ಈ 12 ಲಕ್ಷ ನೌಕರರ ಜೀವನೋಪಾಯದ ಪ್ರಶ್ನೆ ಎದುರಾಗುತ್ತದೆ. ಹಲವು ವಲಯಗಳಲ್ಲಿ ಖಾಸಗೀಕರಣದಿಂದ ಸಾವಿರಾರು ಸರ್ಕಾರಿ ಉದ್ಯೋಗ ನಷ್ಟ ಆದ ಉದಾಹರಣೆಗಳು ನಮ್ಮ ಕಣ್ಣಮುಂದೆಯೇ ಇವೆ. ಇನ್ನು ಖಾಸಗಿ ಪ್ಯಾಸೆಂಜರ್ ರೈಲು ಓಡುವುದರಿಂದ ಮಾಸಿಕ ಪಾಸ್ ಸೇರಿದಂತೆ ಸರ್ಕಾರ ನೀಡುತ್ತಿದ್ದ ರಿಯಾಯ್ತಿ ಟಿಕೆಟ್‍ಗಳಿಗೆ ಕೂಡ ಕುತ್ತು ಬೀಳಲಿದೆ.

ಮೊದಲಿಗೆ ಸಣ್ಣ ಪ್ರಮಾಣದಲ್ಲಿ ಆರಂಭವಾಗಲಿರುವ ಖಾಸಗಿ ರೈಲು ಸಂಚಾರ, ತದನಂತರ ರೈಲ್ವೆ ಇಲಾಖೆಯ ರೈಲುಗಳು ಸರಿಯಾದ ಸಮಯಕ್ಕೆ ದೊರಕದಿರುವುದು ಸೇರಿದಂತೆ ಸಾಕಷ್ಟು ಸಮಸ್ಯೆಗಳು ಉದ್ಭವಿಸಲಿದ್ದು (ಈಗ ಇರುವ ಸಣ್ಣ ಸಮಸ್ಯೆಗಳನ್ನು ಮಾಧ್ಯಮಗಳ ಮೂಲಕ ಬೃಹತ್ತಾಗಿ ಬಿಂಬಿಸಿ) ಪ್ರಯಾಣಿಕರು ಖಾಸಗಿ ರೈಲುಗಳಲ್ಲಿ ಸಂಚಾರ ಮಾಡಬೇಕಾದ ಅನಿವಾರ್ಯತೆಯನ್ನು ಸೃಷ್ಟಿಮಾಡಲಾಗುತ್ತದೆ. ಬಹುತೇಕ ಮಾರ್ಗಗಳಿಗೆ ಕೇವಲ ಖಾಸಗಿ ರೈಲುಗಳನ್ನು ಬಿಡುವ ಮೂಲಕ, ಪ್ರಯಾಣಿಕರಿಗೆ ಹೊರೆಯಾದರೂ ಖಾಸಗಿ ಬಂಡವಾಳದಾರರಿಗೆ ಅನುಕೂಲ ಮಾಡಿಕೊಡುವ ಸಂದರ್ಭ ಬರಬಹುದು. ಟಿಕೆಟ್ ದರ ನಿಗದಿ ಮಾಡಲು ಸರ್ವಸ್ವತಂತ್ರರು ಎಂದು ಈಗಾಗಲೇ ತಿಳಿಸಲಾಗಿದೆ. ಅಂದರೆ ಪೆಟ್ರೋಲ್, ಡೀಸೆಲ್ ದರ ಏರಿಕೆಯನ್ನು ಒಮ್ಮೆ ಜ್ಞಾಪಕ ಮಾಡಿಕೊಂಡರೆ ಮುಂದಿನ ದಿನಗಳ ಪರಿಸ್ಥಿತಿ ಹೇಗಿರಲಿದೆ ಎನ್ನುವ ಲೆಕ್ಕಾಚಾರ ಕಣ್ಣ ಮುಂದೆ ಹಾದು ಹೋಗುತ್ತದೆ.

ಇದನ್ನೂ ಓದಿ: 40 ಐಟಿಐಗಳ ಖಾಸಗೀಕರಣಕ್ಕೆ ಮುಂದಾದ ಯೋಗಿ ಸರ್ಕಾರ: ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆ

ರೈಲು, ಬಡವರ ಸಂಚಾರಕ್ಕೆ ಹೇಳಿ ಮಾಡಿಸಿದ್ದ ಸಂಚಾರ ವ್ಯವಸ್ಥೆ. ಆದರೆ ಮುಂದಿನ ದಿನಗಳಲ್ಲಿ ಮಾಸಿಕ ಪಾಸ್ ಅಷ್ಟೇ ಅಲ್ಲ, ಬೇರೆ ಎಲ್ಲಾ ಸೌಲಭ್ಯಗಳಿಗೂ ಕತ್ತರಿ ಬೀಳಲಿದೆ. ಜೊತೆಗ ಖಾಸಗಿ ಬಸ್ ಲಾಬಿ ನಡೆಯುವ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಖಾಸಗಿ ರೈಲು ಕಂಪನಿಗಳ ಲಾಬಿ ನಡೆಯಲಿದೆ. 30 ವರ್ಷದ ತನಕ ಹೆದ್ದಾರಿಯನ್ನು ನಿರ್ವಹಣೆ ಮಾಡಬೇಕು ಎಂದು ಒಪ್ಪಂದ ಮಾಡಿಕೊಂಡು ಜೀವನ ಪರ್ಯಂತ ಟೋಲ್ ಸಂಗ್ರಹಿಸುವ ಖಾಸಗಿ ಕಂಪನಿಗಳಂತೆಯೇ ಸುಲಿಗೆ ಮಾಡುವುದು ಶತಸಿದ್ಧ ಎನ್ನಬಹುದು.

ಇನ್ನು, ಕಡಿಮೆ ನಿರ್ವಹಣೆ, ಕಡಿಮೆ ಸಾಗಣೆ ಸಮಯ, ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸುವುದು, ಸುರಕ್ಷತೆ ಹಾಗೂ ಪ್ರಯಾಣಿಕರಿಗೆ ವಿಶ್ವ ದರ್ಜೆಯ ಪ್ರಯಾಣದ ಅನುಭವವನ್ನು ಒದಗಿಸುವ ಸಲುವಾಗಿ ಖಾಸಗಿ ಹೂಡಿಕೆದಾರರಿಗೆ ಅವಕಾಶ ನೀಡಲಾಗುತ್ತದೆ ಎಂದು ಹೇಳಿಕೊಂಡು ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತ ಬಳಗದ ಉದ್ಯಮಿಗಳೇ ಸರ್ಕಾರ ಘೋಷಿಸಿರುವ ಈ ಬಿಡ್ಡಿಂಗ್ ಪಡೆಯುವ ಎಲ್ಲಾ ಸಾಧ್ಯತೆಗಳಿವೆ ಅಥವಾ ಆ ಬಿಡ್ಡಿಂಗ್‍ನಲ್ಲಿ ಬಿಜೆಪಿಗೆ ಆಪ್ತರಾಗಿರುವ ಉದ್ಯಮಿಗಳು ಷೇರು ಪಡೆಯುವ ಸಾಧ್ಯತೆಯೂ ಇದೆ. ಖಾಸಗೀಕರಣ ಎಂದರೆ ಅಲ್ಲಿ ಲಾಭವಿಲ್ಲದೇ ಯಾವ ಉದ್ಯಮಿಯೂ ಏನೂ ಮಾಡಲಾರ. ಹಾಗಾಗಿ “ರೈಲ್ವೇ ಸರ್ವೀಸಿನಿಂದ ರೈಲ್ವೇ ಬಿಜಿನೆಸ್” ಆಗುವುದರಲ್ಲಿ ಅನುಮಾನವಿಲ್ಲ.

ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ವಿಶ್ವದರ್ಜೆ ರೈಲಿನಲ್ಲಿ ಸಂಚಾರ ಮಾಡಬಹುದು ಎಂದು ಬೀಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ಸಾಮಾನ್ಯ ಜನರ ಬದುಕು ಈಗಾಗಲೇ ಇರುವ ಸಮಸ್ಯೆಗಳೊಟ್ಟಿಗೆ ಇದೂ ಸೇರಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗುತ್ತದೆ. ಬದುಕು ದುಬಾರಿಯಾಗುತ್ತದೆ.

ಇದನ್ನೂ ಓದಿ:ಖಾಸಗೀಕರಣದ ವಿರುದ್ಧ ಬಿಪಿಸಿಎಲ್ ನೌಕರರಿಂದ 48 ಗಂಟೆಗಳ ಮುಷ್ಕರ

ಯಾವ ಕಾಲದಲ್ಲೂ ಪ್ರಭುತ್ವಗಳಿಗೆ ಜನಸಾಮಾನ್ಯರ ಚಿಂತೆ ಇದ್ದಂತಿಲ್ಲ. ಹಾಗಾಗಿಯೇ ತಾವು ವಿರೋಧ ಪಕ್ಷದಲ್ಲಿದ್ದಾಗ ಆಡಳಿತ ಪಕ್ಷ ಜಾರಿಗೆ ತರುವ ಕಾನೂನು-ಕಾಯ್ದೆಗಳ ಬಗ್ಗೆ ಅಸಹಕಾರ ತೋರಿ, ಪ್ರತಿಭಟಿಸುತ್ತಿದ್ದವರು, ತಾವು ಅಧಿಕಾರಕ್ಕೆ ಬಂದ ನಂತರ ಅದೇ ಕೆಲಸವನ್ನ ಇನ್ನೂ ಅಚ್ಚುಕಟ್ಟಾಗಿ ಮಾಡುತ್ತಾರೆ. 15 ವರ್ಷಗಳ ಹಿಂದೆಯೇ ರೈಲ್ವೇ ಖಾಸಗೀಕರಣದ ಕೆಲಸ ನಡೆದಾಗ ಇದೇ ಬಿಜೆಪಿ ಪಕ್ಷ ವಿರೋಧಿಸಿತ್ತು. ಆದರೆ ಈಗ ಬಿಜೆಪಿ ಅಧಿಕಾರದ ಗದ್ದುಗೆ ಏರಿದ್ದು ಗಾಯದ ಮೇಲೆ ಬರೆ ಎಳೆಯುತ್ತಿದೆ. ಅದರಲ್ಲೂ 2014 ರಿಂದ ಈಚೆಗೆ ಸರ್ಕಾರಿ ಒಡೆತನದ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದು ಹೆಚ್ಚಾಗುತ್ತಲೇ ಇದೆ. ಇನ್ನೂ ಕಳವಳಕಾರಿಯಾದ ವಿಷಯವೆಂದರೆ ರೈಲ್ವೇ ಇಲಾಖೆಯಲ್ಲಿ ಈಗಾಗಲೇ ದುಡಿಯುತ್ತಿರುವವರಿಗೆ ಇದರ ಪರಿವೆಯೇ ಇಲ್ಲದಿರುವುದು. ಇಷ್ಟು ದೊಡ್ಡ ಮತ್ತು ಲಾಭದಾಯಕ ರೈಲ್ವೇ ಸೇವೆಯನ್ನು ಖಾಸಗೀಕರಣಗೊಳಿಸುವ ಉದ್ದೇಶವಾದರೂ ಏನು? ಇದರ ವಿರುದ್ಧ ಸಾಕಷ್ಟು ಹೋರಾಟಗಳೂ ನಡೆದಿವೆಯಾದರೂ ಅವು ದೇಶದಾದ್ಯಂತ ಸಂಘಟಿತವಾಗಿ ಆಗಿಲ್ಲ. ಎಲ್ಲಿಯವರೆಗೆ ದೇಶದ ಮತ್ತು ಸಾಮಾನ್ಯ ಜನರ ಸಮಸ್ಯೆ ನಮ್ಮದಲ್ಲ ಎಂದು ಈ ನಾಗರಿಕ ಸಮಾಜ ಸುಮ್ಮನಿರುತ್ತದೆಯೋ ಅಲ್ಲಿಯವರೆಗೂ ಇಂತಹ ದಬ್ಬಾಳಿಕೆಗಳಿಗೆ ಕೊನೆಯಿಲ್ಲ.

ಹಾಗಾಗಿ, ರೈಲ್ವೇ ಖಾಸಗೀಕರಣದ ವಿರುದ್ಧದ ಅಭಿಯಾನ ಸಮಿತಿಯೊಂದು ರಚನೆಯಾಗಿದ್ದು, ಆನ್‌ಲೈನ್‌ನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಇದಕ್ಕೆ ನಿಮ್ಮ ಸಮ್ಮತಿಯಿದ್ದರೆ, ನೀವೂ ಈ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಬಹುದು.

ಇದರಲ್ಲಿ ಭಾಗವಹಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...