Homeಮುಖಪುಟ’ನಮಗೆ ರಕ್ಷಣೆ ಬೇಕು, ದೆಹಲಿಗೆ ಸ್ಥಳಾಂತರಿಸಿ’: ಹತ್ರಾಸ್ ಸಂತ್ರಸ್ತ ಕುಟುಂಬ

’ನಮಗೆ ರಕ್ಷಣೆ ಬೇಕು, ದೆಹಲಿಗೆ ಸ್ಥಳಾಂತರಿಸಿ’: ಹತ್ರಾಸ್ ಸಂತ್ರಸ್ತ ಕುಟುಂಬ

ಸಂತ್ರಸ್ತ ಕುಟುಂಬವು ಪ್ರಕರಣವನ್ನು ಉತ್ತರ ಪ್ರದೇಶದಿಂದ ದೆಹಲಿ ಅಥವಾ ಮುಂಬೈಗೆ ವರ್ಗಾಯಿಸಲು ಅಲಹಾಬಾದ್ ಹೈಕೋರ್ಟ್‌ನಲ್ಲಿ ಒತ್ತಾಯಿಸಿತ್ತು.

- Advertisement -
- Advertisement -

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ 19 ವರ್ಷದ ದಲಿತ ಯುವತಿಯ ಕುಟುಂಬಸ್ಥರು ತಮಗೆ ರಕ್ಷಣೆ ಬೇಕು ಎಂದಿದ್ದು, ತಮ್ಮನ್ನು ಹತ್ರಾಸ್‌ನಿಂದ ದೆಹಲಿಗೆ ಸ್ಥಳಾಂತರಿಸಿ ಎಂದು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

ಮೃತ ಸಂತ್ರಸ್ತ ಯುವತಿಯ ಸಹೋದರ ಎಎನ್‌ಐ ಜೊತೆಗೆ ಮಾತನಾಡಿ, ನಾವು ಸುರಕ್ಷಿತವಾಗಿರಲು ಬಯಸುತ್ತೇವೆ. ಹಾಗಾಗಿ ನಮ್ಮನ್ನು ಹಳ್ಳಿಯಿಂದ ಸ್ಥಳಾಂತರಗೊಳ್ಳಲು ಸಹಾಯ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದಿದ್ದಾರೆ.

ಹತ್ರಾಸ್‌ನಲ್ಲಿ ಕೆಲವೇ ದಲಿತ ಕುಟುಂಬಗಳಿದ್ದು, ಪ್ರಕರಣ ನಡೆದಾಗಿನಿಂದ ಮೇಲ್ಜಾತಿ ಠಾಕೂರರಿಂದ ಬೆದರಿಕೆಗಳು ಬರುತ್ತಿರುವುದರಿಂದ ಅವರ ಸುರಕ್ಷತೆ ಮುಖ್ಯವಾಗಿದ್ದು, ಇನ್ನು ಹೆಚ್ಚಿನ ರಕ್ಷಣೆ ನೀಡಬೇಕೆಂದು ಅಲಹಾಬಾದ್ ನ್ಯಾಯಾಲಯ ಸರ್ಕಾರಕ್ಕೆ ಆದೇಶಿಸಿತ್ತು.

ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ದೆಹಲಿಯಲ್ಲಿಯೇ ತನಿಖೆ ನಿರ್ವಹಿಸಬೇಕೆಂದು ಅವರು ಬಯಸುತ್ತಾರೆ. ಕುಟುಂಬವು ಪ್ರಕರಣವನ್ನು ದೆಹಲಿಗೆ ವರ್ಗಾಯಿಸಬೇಕೆಂದು ಮನವಿ ಮಾಡಿದೆ. ಜೊತೆಗೆ “ನಾವು ದೆಹಲಿಗೆ ಸ್ಥಳಾಂತರಗೊಳ್ಳಲು ಬಯಸುತ್ತೇವೆ. ಎಲ್ಲೇ ಇದ್ದರೂ ಸುರಕ್ಷಿತವಾಗಿರಲು ನಾವು ಆಶಿಸುತ್ತೇವೆ” ಎಂದಿದ್ದಾರೆ ಎಂದು ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತೆ ಮನೆ ಸುತ್ತ 8 ಸಿಸಿಟಿವಿ ಅಳವಡಿಕೆ, 60 ಪೊಲೀಸರ ನಿಯೋಜನೆ

ಹತ್ರಾಸ್ ಯುವತಿಯ ಕುಟುಂಬವು ಪ್ರಕರಣವನ್ನು ಉತ್ತರ ಪ್ರದೇಶದಿಂದ ಬೇರೆಡೆಗೆ ವರ್ಗಾಯಿಸಲು ಒತ್ತಾಯಿಸಿತ್ತು. ಪ್ರಕರಣವನ್ನು ದೆಹಲಿ ಅಥವಾ ಮುಂಬೈಗೆ ವರ್ಗಾಯಿಸಲು ಹತ್ರಾಸ್ ಸಂತ್ರಸ್ತ ಕುಟುಂಬ ಅಲಹಾಬಾದ್ ಹೈಕೋರ್ಟ್‌ನಲ್ಲಿ ಒತ್ತಾಯಿಸಿದೆ ಎಂದು ಸಂತ್ರಸ್ತ ಕುಟುಂಬದ ಪರ ವಕೀಲೆ ಸೀಮಾ ಕುಶ್ವಾಹ ತಿಳಿಸಿದ್ದರು.

ಇನ್ನೂ ಸಂತ್ರಸ್ತೆ ಮನೆಯ ಸುತ್ತ 60 ಮಂದಿ ಭದ್ರತಾ ಸಿಬ್ಬಂದಿ,  ಜೊತೆಗೆ 8 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ,ಸಂತ್ರಸ್ತ ಕುಟುಂಬ ಸದಸ್ಯರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದರು.

ಅಗತ್ಯವಿದ್ದರೆ ಸಂತ್ರಸ್ತೆ ಮನೆಯ ಸುತ್ತ ಕಂಟ್ರೋಲ್ ರೂಮ್ ಕೂಡ ಸ್ಥಾಪಿಸಲಾಗುವುದು, ಸಂತ್ರಸ್ತ ಕುಟುಂಬದ ಪ್ರತಿ ಸದಸ್ಯರಿಗೆ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಒದಗಿಸಲಾಗಿದೆ ಎಂದು ನೋಡಲ್ ಅಧಿಕಾರಿಯಾಗಿ ಲಖನೌದಿಂದ ಹತ್ರಾಸ್‌ಗೆ ಬಂದಿರುವ ಡಿಐಜಿ ಶಲಾಭ್ ಮಾಥೂರ್ ತಿಳಿಸಿದ್ದರು.


ಇದನ್ನೂ ಓದಿ: ನಿಮ್ಮ ಸ್ವಂತ ಮಗಳ ಅಂತ್ಯಕ್ರಿಯೆ ಹೀಗೆ ಮಾಡುತ್ತೀರಾ..? ಹತ್ರಾಸ್‌ ಡಿಸಿಗೆ ಲಕ್ನೋ ಪೀಠ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...