Homeಮುಖಪುಟಕಳೆದ 5 ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯಗಳಲ್ಲಿ 19% ಹೆಚ್ಚಳ!

ಕಳೆದ 5 ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯಗಳಲ್ಲಿ 19% ಹೆಚ್ಚಳ!

2.14 ಕೋಟಿ ಎಸ್ಸಿಗಳನ್ನು ಹೊಂದಿರುವ, ಭಾರತದಲ್ಲೇ ಎರಡನೇ ಅತಿ ಹೆಚ್ಚು ಎಸ್‌ಸಿ ಜನಸಂಖ್ಯೆಯನ್ನು ಹೊಂದಿರುವ ಪಶ್ಚಿಮ ಬಂಗಾಳವು 2018 ರಲ್ಲಿ ಎಸ್‌ಸಿಗಳ ವಿರುದ್ಧ ಕೇವಲ 119 ಅಪರಾಧಗಳನ್ನು ದಾಖಲಿಸಿದೆ.

- Advertisement -
- Advertisement -

ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಘಟನೆಯು ತಳಸಮುದಾಯಗಳ ಮೇಲೆ, ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಎತ್ತಿ ತೋರಿಸಿದೆ. 2015 ಮತ್ತು 2019 ರ ನಡುವೆ ಪರಿಶಿಷ್ಟ ಜಾತಿಗಳ ಮೇಲೆ ನಡೆಯುವ ದೌರ್ಜನ್ಯಗಳು ಸುಮಾರು 19% ಹೆಚ್ಚಾಗಿದೆ ಎಂಬ ಮಾಹಿತಿಯನ್ನು ಎನ್‌ಸಿಆರ್‌ಬಿ ಸೂಚಿಸುತ್ತದೆ. ಭಾರತದಲ್ಲೇ ಅತೀ ಹೆಚ್ಚು ಪರಿಶಿಷ್ಟರ ಮೇಲಿನ ದೌರ್ಜನ್ಯಗಳು ರಾಜಸ್ಥಾನದಲ್ಲಿ ನಡೆಯುತ್ತವೆ ಎಂದು ಈ ವರದಿ ಹೇಳುತ್ತದೆ.

ಹತ್ರಾಸ್‌ನಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮಹಿಳೆಯರ ಸುರಕ್ಷತೆಯ ಬಗೆಗಿನ ಚರ್ಚೆಯನ್ನು ಮುನ್ನಲೆಗೆ ತಂದಿರುವುದು ಮಾತ್ರವಲ್ಲದೆ ಜಾತಿ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರದ ಬಗೆಗಿನ ಚರ್ಚೆಯನ್ನು ಕೂಡಾ ಮುನ್ನಲೆಗೆ ತಂದಿದೆ. ಪೊಲೀಸರು ಮತ್ತು ಸಾರ್ವಜನಿಕ ಅಧಿಕಾರಿಗಳ ನಡೆಗಳು ಸಂತ್ರಸ್ತರ ಜಾತಿ ಆಧಾರದಲ್ಲಿ ನಡೆಯುತ್ತದೆ ಎಂಬ ಆರೋಪಗಳಿವೆ. ಹತ್ರಾಸ್ ಘಟನೆಯನ್ನೆ ನೋಡಬಹುದಾದರೆ ಸಂತ್ರಸ್ತೆ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದರೆ, ಆಪಾದಿತ ದುಷ್ಕರ್ಮಿಗಳು ಪ್ರಭಾವಿ ಜಾತಿಗೆ ಸೇರಿದವರು. ಇದೇ ರೀತಿಯ ಇತರ ಘಟನೆಗಳು ಉತ್ತರ ಪ್ರದೇಶ ಮತ್ತು ರಾಜಸ್ಥಾನದಂತಹ ಇತರ ರಾಜ್ಯಗಳಿಂದ ವರದಿಯಾಗಿವೆ.

ಇದನ್ನೂ ಓದಿ: ಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಪ್ರಸ್ತುತ ಉತ್ತರ ಪ್ರದೇಶದಲ್ಲಿ ಮಹಿಳೆಯರ ವಿರುದ್ಧ ಮತ್ತು ತಳಸಮುದಾಯಗಳಿಗೆ ಸೇರಿದ ವ್ಯಕ್ತಿಗಳ ವಿರುದ್ಧ ಅಪರಾಧಗಳು ಹೆಚ್ಚುತ್ತಿದೆ ಎಂದು ವಿರೋಧ ಪಕ್ಷಗಳು ಧ್ವನಿ ಎತ್ತಿದ್ದರೆ, ಪ್ರತಿಪಕ್ಷಗಳು ಅಧಿಕಾರದಲ್ಲಿರುವ ಇತರ ಕೆಲವು ರಾಜ್ಯಗಳಲ್ಲಿ ಕೂಡಾ ಇದೇ ರೀತಿಯ ಆರೋಪಗಳು ಮತ್ತು ಘಟನೆಗಳು ನಡೆಯುತ್ತಿವೆ.

PC: PTI

ಈ ಲೇಖನದ ಮಾಹಿತಿಯೂ ಎನ್‌ಸಿಆರ್‌ಬಿಯ (ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ) ವಾರ್ಷಿಕ ಕ್ರೈಮ್ ಇನ್ ಇಂಡಿಯಾ (ಸಿಐಐ) ವರದಿಗಳಿಂದ ಸಂಗ್ರಹಿಸಲಾಗಿದೆ.

ಪರಿಶಿಷ್ಟ ಜಾತಿಗಳ ಮೇಲೆ ನಡೆಯುತ್ತಿರುವ ಅಪರಾಧಗಳು 2015 ರಿಂದ 19% ಹೆಚ್ಚಾಗಿದೆ

ಎನ್‌ಸಿಆರ್‌ಬಿ ಮಾಹಿತಿಯ ಪ್ರಕಾರ, 2019 ರಲ್ಲಿ ಪರಿಶಿಷ್ಟ ಜಾತಿಗಳ ಮೇಲೆ ದೌರ್ಜನ್ಯ ನಡೆದಿದೆ ಎಂದು ಒಟ್ಟು 45,935 ಪ್ರಕರಣಗಳು ದಾಖಲಾಗಿದೆ. ಈ ಪ್ರಕರಣಗಳಲ್ಲಿ ಎಸ್‌ಸಿ / ಎಸ್‌ಟಿ (ದೌರ್ಜನ್ಯ ತಡೆ ಕಾಯ್ದೆ) ಯ ಅಡಿಯಲ್ಲಿ ಬರುವ ಎಲ್ಲಾ ಐಪಿಸಿ ಅಪರಾಧಗಳು ಕೂಡಾ ಸೇರಿವೆ. ಇದನ್ನು ಸಾಮಾನ್ಯವಾಗಿ ಎಸ್‌ಸಿ / ಎಸ್‌ಟಿ ಪಿಒಎ ಎಂದು ಕರೆಯಲಾಗುತ್ತದೆ ಅಂದರೆ ಎಸ್‌ಸಿಗಳಲ್ಲದವರಿಂದ ಎಸ್‌ಸಿಗಳ ವಿರುದ್ಧ ನಡೆಯುವ ಅಪರಾಧಗಳು. ಐಪಿಸಿ ಅಡಿಯಲ್ಲಿ ಬರುವ ಎಸ್‌ಸಿಗಳ ವಿರುದ್ಧದ ಯಾವುದೇ ಅಪರಾಧಗಳನ್ನು ಎನ್‌ಸಿಆರ್‌ಬಿ ಈ ವಿಭಾಗದಲ್ಲಿ ದಾಖಲಿಸುವುದಿಲ್ಲ ಯಾಕೆಂದರೆ ಈ ಮಾದರಿಯ ಪ್ರಕರಣಗಳಲ್ಲಿ ಎಸ್‌ಸಿಗಳ ವಿರುದ್ಧ ಎಸ್‌ಸಿಗಳೇ ಈ ಅಪರಾಧಗಳನ್ನು ಮಾಡುತ್ತಾರೆ.

2015 ರಲ್ಲಿ, ಈ ನಿಬಂಧನೆಗಳ ಅಡಿಯಲ್ಲಿ ಒಟ್ಟು 38.6 ಸಾವಿರ ಅಪರಾಧಗಳು ದಾಖಲಾಗಿದ್ದು, ಇದು 2019 ರಲ್ಲಿ 45.9 ಸಾವಿರಕ್ಕೆ ಏರಿದೆ, ಇದು ಹಿಂದಿನ ದರಕ್ಕಿಂತ 19% ಹೆಚ್ಚಾಗಿದೆ.

ಈ ಅಪರಾಧಗಳಲ್ಲಿ ಯುಪಿ ಅತಿ ಹೆಚ್ಚು ವರದಿ ಮಾಡಿದ್ದರೂ, ಅಪರಾಧ ಪ್ರಮಾಣ ರಾಜಸ್ಥಾನದಲ್ಲಿ ಅತಿ ಹೆಚ್ಚು

2011 ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿ(ಎಸ್‌ಸಿ)ಗೆ ಸೇರಿದ ಸುಮಾರು 20 ಕೋಟಿ ಜನರಿದ್ದಾರೆ. 2019 ರಲ್ಲಿ ಪರಿಶಿಷ್ಟ ಜಾತಿಗಳ ವಿರುದ್ಧ ಒಟ್ಟು 11.8 ಸಾವಿರ ಅಪರಾಧಗಳು ಉತ್ತರಪ್ರದೇಶದಲ್ಲಿ ದಾಖಲಾಗಿದ್ದು, ಇದು ದೇಶದ ಎಸ್‌ಸಿಗಳ ವಿರುದ್ಧದ ಒಟ್ಟು ಅಪರಾಧಗಳ ಕಾಲು ಭಾಗಕ್ಕಿಂತಲೂ ಹೆಚ್ಚಾಗಿದೆ. ಹಿಂದಿನ ವರ್ಷಗಳಲ್ಲಿಯೂ ಸಹ, ಯುಪಿಯಿಂದ ವರದಿಯಾದ ಇಂತಹ ಪ್ರಕರಣಗಳ ಸಂಖ್ಯೆ ದೇಶದಲ್ಲಿಯೇ ಅತಿ ಹೆಚ್ಚು. ಇತ್ತೀಚಿನ ಹತ್ರಾಸ್ ಘಟನೆಯ ಹಿನ್ನಲೆಯಲ್ಲಿ ಈ ಅಂಕಿಅಂಶವನ್ನು ವ್ಯಾಪಕವಾಗಿ ವರದಿ ಮಾಡಲಾಗುತ್ತಿದೆ.

ಆದಾಗ್ಯೂ, ಉತ್ತರ ಪ್ರದೇಶವು ದೇಶದಲ್ಲಿ ಅತಿ ಹೆಚ್ಚು ಎಸ್‌ಸಿ ಜನಸಂಖ್ಯೆಯನ್ನು ಹೊಂದಿದೆ ಎಂಬುದನ್ನು ಗಮನಿಸಬೇಕು. 2011 ರ ಜನಗಣತಿಯ ಪ್ರಕಾರ ಯುಪಿಯಲ್ಲಿ ಒಟ್ಟು ಎಸ್‌ಸಿ ಜನಸಂಖ್ಯೆ 4.13 ಕೋಟಿ, ಅಂದರೆ ದೇಶದ ಒಟ್ಟು ಎಸ್‌ಸಿ ಜನಸಂಖ್ಯೆಯ 20%. ಎಸ್‌ಸಿ ಜನಸಂಖ್ಯೆಗೆ ಸಂಬಂಧಿಸಿದಂತೆ ವರದಿಯಾದ ಅಪರಾಧಗಳ ಸಂಖ್ಯೆಗೆ ಸಂಬಂಧಿಸಿದಂತೆ, ಯುಪಿ 2019 ರಲ್ಲಿ ಎಸ್‌ಸಿ ಜನಸಂಖ್ಯೆಯ ಪ್ರತಿ ಲಕ್ಷಕ್ಕೆ 28.6 ಅಪರಾಧಗಳನ್ನು ವರದಿ ಮಾಡಿದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಈ ವಿಭಾಗದಲ್ಲಿ ಅಪರಾಧ ಪ್ರಮಾಣಕ್ಕೆ ಸಂಬಂಧಿಸಿದಂತೆ ಇದು ಆರನೇ ಸ್ಥಾನದಲ್ಲಿದೆ. ಒಂದು ಲಕ್ಷ ಎಸ್‌ಸಿ ಜನಸಂಖ್ಯೆಗೆ 55.6 ಅಪರಾಧಗಳೊಂದಿಗೆ ರಾಜಸ್ಥಾನವು ಎಸ್‌ಸಿಗಳ ವಿರುದ್ಧದ ಅತಿ ಹೆಚ್ಚು ದೌರ್ಜನ್ಯ ಪ್ರಮಾಣವನ್ನು ಹೊಂದಿದೆ. 2019 ರಲ್ಲಿ, ಎಸ್‌ಸಿಗಳ ವಿರುದ್ಧ ಸುಮಾರು 6.7 ಸಾವಿರ ಅಪರಾಧಗಳು ರಾಜಸ್ಥಾನದಿಂದ ವರದಿಯಾಗಿವೆ, ಇದು ದೇಶದಲ್ಲೇ ಎರಡನೇ ಅತಿ ಹೆಚ್ಚು ಪ್ರಕರಣ ದಾಖಲಾದ ರಾಜ್ಯವಾಗಿದೆ. ರಾಜಸ್ಥಾನದಲ್ಲಿ 1.22 ಕೋಟಿ ಎಸ್‌ಸಿಗಳಿದ್ದಾರೆ, ಅಂದರೆ ದೇಶದಲ್ಲಿ 5 ನೇ ಅತಿ ಹೆಚ್ಚು ಎಸ್ಸಿಗಳಿರುವ ರಾಜ್ಯವಾಗಿದೆ.

ಎಸ್‌ಸಿಗಳ ವಿರುದ್ಧ ಹೆಚ್ಚಿನ ಅಪರಾಧ ಪ್ರಮಾಣ ಹೊಂದಿರುವ ರಾಜ್ಯಗಳಲ್ಲಿ ಮಧ್ಯಪ್ರದೇಶ, ಬಿಹಾರ, ಗುಜರಾತ್ ಮತ್ತು ತೆಲಂಗಾಣ ಸೇರಿವೆ. ಈ ನಡುವೆ 2.14 ಕೋಟಿ ಎಸ್ಸಿಗಳನ್ನು ಹೊಂದಿರುವ, ಭಾರತದಲ್ಲೇ ಎರಡನೇ ಅತಿ ಹೆಚ್ಚು ಎಸ್‌ಸಿ ಜನಸಂಖ್ಯೆಯನ್ನು ಹೊಂದಿರುವ ಪಶ್ಚಿಮ ಬಂಗಾಳವು 2018 ರಲ್ಲಿ ಎಸ್‌ಸಿಗಳ ವಿರುದ್ಧ ಕೇವಲ 119 ಅಪರಾಧಗಳನ್ನು ದಾಖಲಿಸಿದೆ.

ವರದಿಯಾದ 30% ಪ್ರಕರಣಗಳಲ್ಲಿ ನಿರ್ದಿಷ್ಟವಾದ ಅಪರಾಧವು ಅಸ್ಪಷ್ಟವಾಗಿದೆ

ಎಸ್‌ಸಿಗಳ ವಿರುದ್ಧ ನಡೆಯುವ ಅಪರಾಧಗಳ ಬಹುಪಾಲು ಭಾಗವು ‘ಸಿಂಪಲ್ ಹರ್ಟ್ (ಚಿಕ್ಕ ಗಾಯ)’ ಹೆಸರಿನ ವಿಭಾಗಗಳ ಅಡಿಯಲ್ಲಿ ವರದಿಯಾಗಿದೆ. 2019 ರಲ್ಲಿ ಈ ವರ್ಗದಲ್ಲಿ 13.2 ಸಾವಿರ ಪ್ರಕರಣಗಳು ವರದಿಯಾಗಿವೆ, ಇದು 2017 ಮತ್ತು 2018 ರಲ್ಲೂ ಒಂದೆ ರೀತಿಯಲ್ಲಿದೆ. ಬಿಹಾರವು ಈ ವರ್ಗದ ಅಡಿಯಲ್ಲಿ ಅತೀ ಹೆಚ್ಚಿನ ಪ್ರಕರಣಗಳನ್ನು ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಮೇಲಿನ ಅಪರಾಧಗಳನ್ನು ವರದಿ ಮಾಡುವ ವ್ಯಾಪ್ತಿ

ನ್ಯಾಷನಲ್ ಕ್ಯಾಂಪೇನ್ ಫಾರ್ ದಲಿತ್‌ ಹ್ಯೂಮನ್ (ಎನ್‌ಸಿಡಿಎಚ್‌ಆರ್) ಪ್ರಕಟಿಸಿರುವ ‘Access to Justice for Dalits in India’ ಎಂಬ ಶೀರ್ಷಿಕೆಯ ವರದಿಯಲ್ಲಿರುವಂತೆ, ತಳಸಮುದಾಯಗಳ ಸಂತ್ರಸ್ತರು ತಮ್ಮ ವಿರುದ್ಧ ನಡೆಯುವ ದೌರ್ಜನ್ಯಗಳ ದೂರುಗಳು ಪೊಲೀಸರವರೆಗೂ ಬರುವುದಿಲ್ಲ ಎಂದು ಸೂಚಿಸುತ್ತದೆ. ದೂರು ಕೊಡದಂತೆ ಬೆದರಿಕೆ ಹಾಕುವುದು, ರಾಜಿ ಮಾಡುವುದು ಸೇರಿದಂತೆ ಹಲವಾರು ಕಾರಣಗಳಿವೆ ಎಂದು ವರದಿ ಹೇಳುತ್ತದೆ.

ಕೃಪೆ: ಫ್ಯಾಕ್ಟ್‌‌ಲಿ


ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...