Homeಮುಖಪುಟಕಳೆದ 5 ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯಗಳಲ್ಲಿ 19% ಹೆಚ್ಚಳ!

ಕಳೆದ 5 ವರ್ಷಗಳಲ್ಲಿ ಪರಿಶಿಷ್ಟ ಜಾತಿಗಳ ಮೇಲಿನ ದೌರ್ಜನ್ಯಗಳಲ್ಲಿ 19% ಹೆಚ್ಚಳ!

2.14 ಕೋಟಿ ಎಸ್ಸಿಗಳನ್ನು ಹೊಂದಿರುವ, ಭಾರತದಲ್ಲೇ ಎರಡನೇ ಅತಿ ಹೆಚ್ಚು ಎಸ್‌ಸಿ ಜನಸಂಖ್ಯೆಯನ್ನು ಹೊಂದಿರುವ ಪಶ್ಚಿಮ ಬಂಗಾಳವು 2018 ರಲ್ಲಿ ಎಸ್‌ಸಿಗಳ ವಿರುದ್ಧ ಕೇವಲ 119 ಅಪರಾಧಗಳನ್ನು ದಾಖಲಿಸಿದೆ.

- Advertisement -
- Advertisement -

ಹತ್ರಾಸ್‌ನಲ್ಲಿ ಇತ್ತೀಚೆಗೆ ನಡೆದ ಅತ್ಯಾಚಾರ ಘಟನೆಯು ತಳಸಮುದಾಯಗಳ ಮೇಲೆ, ಅದರಲ್ಲೂ ವಿಶೇಷವಾಗಿ ಪರಿಶಿಷ್ಟ ಜಾತಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಎತ್ತಿ ತೋರಿಸಿದೆ. 2015 ಮತ್ತು 2019 ರ ನಡುವೆ ಪರಿಶಿಷ್ಟ ಜಾತಿಗಳ ಮೇಲೆ ನಡೆಯುವ ದೌರ್ಜನ್ಯಗಳು ಸುಮಾರು 19% ಹೆಚ್ಚಾಗಿದೆ ಎಂಬ ಮಾಹಿತಿಯನ್ನು ಎನ್‌ಸಿಆರ್‌ಬಿ ಸೂಚಿಸುತ್ತದೆ. ಭಾರತದಲ್ಲೇ ಅತೀ ಹೆಚ್ಚು ಪರಿಶಿಷ್ಟರ ಮೇಲಿನ ದೌರ್ಜನ್ಯಗಳು ರಾಜಸ್ಥಾನದಲ್ಲಿ ನಡೆಯುತ್ತವೆ ಎಂದು ಈ ವರದಿ ಹೇಳುತ್ತದೆ.

ಹತ್ರಾಸ್‌ನಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮಹಿಳೆಯರ ಸುರಕ್ಷತೆಯ ಬಗೆಗಿನ ಚರ್ಚೆಯನ್ನು ಮುನ್ನಲೆಗೆ ತಂದಿರುವುದು ಮಾತ್ರವಲ್ಲದೆ ಜಾತಿ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರದ ಬಗೆಗಿನ ಚರ್ಚೆಯನ್ನು ಕೂಡಾ ಮುನ್ನಲೆಗೆ ತಂದಿದೆ. ಪೊಲೀಸರು ಮತ್ತು ಸಾರ್ವಜನಿಕ ಅಧಿಕಾರಿಗಳ ನಡೆಗಳು ಸಂತ್ರಸ್ತರ ಜಾತಿ ಆಧಾರದಲ್ಲಿ ನಡೆಯುತ್ತದೆ ಎಂಬ ಆರೋಪಗಳಿವೆ. ಹತ್ರಾಸ್ ಘಟನೆಯನ್ನೆ ನೋಡಬಹುದಾದರೆ ಸಂತ್ರಸ್ತೆ ಪರಿಶಿಷ್ಟ ಜಾತಿಗೆ ಸೇರಿದವರಾಗಿದ್ದರೆ, ಆಪಾದಿತ ದುಷ್ಕರ್ಮಿಗಳು ಪ್ರಭಾವಿ ಜಾತಿಗೆ ಸೇರಿದವರು. ಇದೇ ರೀತಿಯ ಇತರ ಘಟನೆಗಳು ಉತ್ತರ ಪ್ರದೇಶ ಮತ್ತು ರಾಜಸ್ಥಾನದಂತಹ ಇತರ ರಾಜ್ಯಗಳಿಂದ ವರದಿಯಾಗಿವೆ.

ಇದನ್ನೂ ಓದಿ: ಜಾತಿ ದೌರ್ಜನ್ಯ: ವೈದ್ಯಕೀಯ ವಿದ್ಯಾರ್ಥಿ ಅಸಹಜ ಸಾವು!

ಪ್ರಸ್ತುತ ಉತ್ತರ ಪ್ರದೇಶದಲ್ಲಿ ಮಹಿಳೆಯರ ವಿರುದ್ಧ ಮತ್ತು ತಳಸಮುದಾಯಗಳಿಗೆ ಸೇರಿದ ವ್ಯಕ್ತಿಗಳ ವಿರುದ್ಧ ಅಪರಾಧಗಳು ಹೆಚ್ಚುತ್ತಿದೆ ಎಂದು ವಿರೋಧ ಪಕ್ಷಗಳು ಧ್ವನಿ ಎತ್ತಿದ್ದರೆ, ಪ್ರತಿಪಕ್ಷಗಳು ಅಧಿಕಾರದಲ್ಲಿರುವ ಇತರ ಕೆಲವು ರಾಜ್ಯಗಳಲ್ಲಿ ಕೂಡಾ ಇದೇ ರೀತಿಯ ಆರೋಪಗಳು ಮತ್ತು ಘಟನೆಗಳು ನಡೆಯುತ್ತಿವೆ.

PC: PTI

ಈ ಲೇಖನದ ಮಾಹಿತಿಯೂ ಎನ್‌ಸಿಆರ್‌ಬಿಯ (ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ) ವಾರ್ಷಿಕ ಕ್ರೈಮ್ ಇನ್ ಇಂಡಿಯಾ (ಸಿಐಐ) ವರದಿಗಳಿಂದ ಸಂಗ್ರಹಿಸಲಾಗಿದೆ.

ಪರಿಶಿಷ್ಟ ಜಾತಿಗಳ ಮೇಲೆ ನಡೆಯುತ್ತಿರುವ ಅಪರಾಧಗಳು 2015 ರಿಂದ 19% ಹೆಚ್ಚಾಗಿದೆ

ಎನ್‌ಸಿಆರ್‌ಬಿ ಮಾಹಿತಿಯ ಪ್ರಕಾರ, 2019 ರಲ್ಲಿ ಪರಿಶಿಷ್ಟ ಜಾತಿಗಳ ಮೇಲೆ ದೌರ್ಜನ್ಯ ನಡೆದಿದೆ ಎಂದು ಒಟ್ಟು 45,935 ಪ್ರಕರಣಗಳು ದಾಖಲಾಗಿದೆ. ಈ ಪ್ರಕರಣಗಳಲ್ಲಿ ಎಸ್‌ಸಿ / ಎಸ್‌ಟಿ (ದೌರ್ಜನ್ಯ ತಡೆ ಕಾಯ್ದೆ) ಯ ಅಡಿಯಲ್ಲಿ ಬರುವ ಎಲ್ಲಾ ಐಪಿಸಿ ಅಪರಾಧಗಳು ಕೂಡಾ ಸೇರಿವೆ. ಇದನ್ನು ಸಾಮಾನ್ಯವಾಗಿ ಎಸ್‌ಸಿ / ಎಸ್‌ಟಿ ಪಿಒಎ ಎಂದು ಕರೆಯಲಾಗುತ್ತದೆ ಅಂದರೆ ಎಸ್‌ಸಿಗಳಲ್ಲದವರಿಂದ ಎಸ್‌ಸಿಗಳ ವಿರುದ್ಧ ನಡೆಯುವ ಅಪರಾಧಗಳು. ಐಪಿಸಿ ಅಡಿಯಲ್ಲಿ ಬರುವ ಎಸ್‌ಸಿಗಳ ವಿರುದ್ಧದ ಯಾವುದೇ ಅಪರಾಧಗಳನ್ನು ಎನ್‌ಸಿಆರ್‌ಬಿ ಈ ವಿಭಾಗದಲ್ಲಿ ದಾಖಲಿಸುವುದಿಲ್ಲ ಯಾಕೆಂದರೆ ಈ ಮಾದರಿಯ ಪ್ರಕರಣಗಳಲ್ಲಿ ಎಸ್‌ಸಿಗಳ ವಿರುದ್ಧ ಎಸ್‌ಸಿಗಳೇ ಈ ಅಪರಾಧಗಳನ್ನು ಮಾಡುತ್ತಾರೆ.

2015 ರಲ್ಲಿ, ಈ ನಿಬಂಧನೆಗಳ ಅಡಿಯಲ್ಲಿ ಒಟ್ಟು 38.6 ಸಾವಿರ ಅಪರಾಧಗಳು ದಾಖಲಾಗಿದ್ದು, ಇದು 2019 ರಲ್ಲಿ 45.9 ಸಾವಿರಕ್ಕೆ ಏರಿದೆ, ಇದು ಹಿಂದಿನ ದರಕ್ಕಿಂತ 19% ಹೆಚ್ಚಾಗಿದೆ.

ಈ ಅಪರಾಧಗಳಲ್ಲಿ ಯುಪಿ ಅತಿ ಹೆಚ್ಚು ವರದಿ ಮಾಡಿದ್ದರೂ, ಅಪರಾಧ ಪ್ರಮಾಣ ರಾಜಸ್ಥಾನದಲ್ಲಿ ಅತಿ ಹೆಚ್ಚು

2011 ರ ಜನಗಣತಿಯ ಪ್ರಕಾರ ಪರಿಶಿಷ್ಟ ಜಾತಿ(ಎಸ್‌ಸಿ)ಗೆ ಸೇರಿದ ಸುಮಾರು 20 ಕೋಟಿ ಜನರಿದ್ದಾರೆ. 2019 ರಲ್ಲಿ ಪರಿಶಿಷ್ಟ ಜಾತಿಗಳ ವಿರುದ್ಧ ಒಟ್ಟು 11.8 ಸಾವಿರ ಅಪರಾಧಗಳು ಉತ್ತರಪ್ರದೇಶದಲ್ಲಿ ದಾಖಲಾಗಿದ್ದು, ಇದು ದೇಶದ ಎಸ್‌ಸಿಗಳ ವಿರುದ್ಧದ ಒಟ್ಟು ಅಪರಾಧಗಳ ಕಾಲು ಭಾಗಕ್ಕಿಂತಲೂ ಹೆಚ್ಚಾಗಿದೆ. ಹಿಂದಿನ ವರ್ಷಗಳಲ್ಲಿಯೂ ಸಹ, ಯುಪಿಯಿಂದ ವರದಿಯಾದ ಇಂತಹ ಪ್ರಕರಣಗಳ ಸಂಖ್ಯೆ ದೇಶದಲ್ಲಿಯೇ ಅತಿ ಹೆಚ್ಚು. ಇತ್ತೀಚಿನ ಹತ್ರಾಸ್ ಘಟನೆಯ ಹಿನ್ನಲೆಯಲ್ಲಿ ಈ ಅಂಕಿಅಂಶವನ್ನು ವ್ಯಾಪಕವಾಗಿ ವರದಿ ಮಾಡಲಾಗುತ್ತಿದೆ.

ಆದಾಗ್ಯೂ, ಉತ್ತರ ಪ್ರದೇಶವು ದೇಶದಲ್ಲಿ ಅತಿ ಹೆಚ್ಚು ಎಸ್‌ಸಿ ಜನಸಂಖ್ಯೆಯನ್ನು ಹೊಂದಿದೆ ಎಂಬುದನ್ನು ಗಮನಿಸಬೇಕು. 2011 ರ ಜನಗಣತಿಯ ಪ್ರಕಾರ ಯುಪಿಯಲ್ಲಿ ಒಟ್ಟು ಎಸ್‌ಸಿ ಜನಸಂಖ್ಯೆ 4.13 ಕೋಟಿ, ಅಂದರೆ ದೇಶದ ಒಟ್ಟು ಎಸ್‌ಸಿ ಜನಸಂಖ್ಯೆಯ 20%. ಎಸ್‌ಸಿ ಜನಸಂಖ್ಯೆಗೆ ಸಂಬಂಧಿಸಿದಂತೆ ವರದಿಯಾದ ಅಪರಾಧಗಳ ಸಂಖ್ಯೆಗೆ ಸಂಬಂಧಿಸಿದಂತೆ, ಯುಪಿ 2019 ರಲ್ಲಿ ಎಸ್‌ಸಿ ಜನಸಂಖ್ಯೆಯ ಪ್ರತಿ ಲಕ್ಷಕ್ಕೆ 28.6 ಅಪರಾಧಗಳನ್ನು ವರದಿ ಮಾಡಿದೆ.

ಇದನ್ನೂ ಓದಿ: ಕೇರಳದ ಹಿಂದೂ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ? ಇಲ್ಲಿದೆ ಫ್ಯಾಕ್ಟ್‌ಚೆಕ್‌ ವಿವರ

ಈ ವಿಭಾಗದಲ್ಲಿ ಅಪರಾಧ ಪ್ರಮಾಣಕ್ಕೆ ಸಂಬಂಧಿಸಿದಂತೆ ಇದು ಆರನೇ ಸ್ಥಾನದಲ್ಲಿದೆ. ಒಂದು ಲಕ್ಷ ಎಸ್‌ಸಿ ಜನಸಂಖ್ಯೆಗೆ 55.6 ಅಪರಾಧಗಳೊಂದಿಗೆ ರಾಜಸ್ಥಾನವು ಎಸ್‌ಸಿಗಳ ವಿರುದ್ಧದ ಅತಿ ಹೆಚ್ಚು ದೌರ್ಜನ್ಯ ಪ್ರಮಾಣವನ್ನು ಹೊಂದಿದೆ. 2019 ರಲ್ಲಿ, ಎಸ್‌ಸಿಗಳ ವಿರುದ್ಧ ಸುಮಾರು 6.7 ಸಾವಿರ ಅಪರಾಧಗಳು ರಾಜಸ್ಥಾನದಿಂದ ವರದಿಯಾಗಿವೆ, ಇದು ದೇಶದಲ್ಲೇ ಎರಡನೇ ಅತಿ ಹೆಚ್ಚು ಪ್ರಕರಣ ದಾಖಲಾದ ರಾಜ್ಯವಾಗಿದೆ. ರಾಜಸ್ಥಾನದಲ್ಲಿ 1.22 ಕೋಟಿ ಎಸ್‌ಸಿಗಳಿದ್ದಾರೆ, ಅಂದರೆ ದೇಶದಲ್ಲಿ 5 ನೇ ಅತಿ ಹೆಚ್ಚು ಎಸ್ಸಿಗಳಿರುವ ರಾಜ್ಯವಾಗಿದೆ.

ಎಸ್‌ಸಿಗಳ ವಿರುದ್ಧ ಹೆಚ್ಚಿನ ಅಪರಾಧ ಪ್ರಮಾಣ ಹೊಂದಿರುವ ರಾಜ್ಯಗಳಲ್ಲಿ ಮಧ್ಯಪ್ರದೇಶ, ಬಿಹಾರ, ಗುಜರಾತ್ ಮತ್ತು ತೆಲಂಗಾಣ ಸೇರಿವೆ. ಈ ನಡುವೆ 2.14 ಕೋಟಿ ಎಸ್ಸಿಗಳನ್ನು ಹೊಂದಿರುವ, ಭಾರತದಲ್ಲೇ ಎರಡನೇ ಅತಿ ಹೆಚ್ಚು ಎಸ್‌ಸಿ ಜನಸಂಖ್ಯೆಯನ್ನು ಹೊಂದಿರುವ ಪಶ್ಚಿಮ ಬಂಗಾಳವು 2018 ರಲ್ಲಿ ಎಸ್‌ಸಿಗಳ ವಿರುದ್ಧ ಕೇವಲ 119 ಅಪರಾಧಗಳನ್ನು ದಾಖಲಿಸಿದೆ.

ವರದಿಯಾದ 30% ಪ್ರಕರಣಗಳಲ್ಲಿ ನಿರ್ದಿಷ್ಟವಾದ ಅಪರಾಧವು ಅಸ್ಪಷ್ಟವಾಗಿದೆ

ಎಸ್‌ಸಿಗಳ ವಿರುದ್ಧ ನಡೆಯುವ ಅಪರಾಧಗಳ ಬಹುಪಾಲು ಭಾಗವು ‘ಸಿಂಪಲ್ ಹರ್ಟ್ (ಚಿಕ್ಕ ಗಾಯ)’ ಹೆಸರಿನ ವಿಭಾಗಗಳ ಅಡಿಯಲ್ಲಿ ವರದಿಯಾಗಿದೆ. 2019 ರಲ್ಲಿ ಈ ವರ್ಗದಲ್ಲಿ 13.2 ಸಾವಿರ ಪ್ರಕರಣಗಳು ವರದಿಯಾಗಿವೆ, ಇದು 2017 ಮತ್ತು 2018 ರಲ್ಲೂ ಒಂದೆ ರೀತಿಯಲ್ಲಿದೆ. ಬಿಹಾರವು ಈ ವರ್ಗದ ಅಡಿಯಲ್ಲಿ ಅತೀ ಹೆಚ್ಚಿನ ಪ್ರಕರಣಗಳನ್ನು ವರದಿ ಮಾಡಿದೆ.

ಪರಿಶಿಷ್ಟ ಜಾತಿಗಳ ಮೇಲಿನ ಅಪರಾಧಗಳನ್ನು ವರದಿ ಮಾಡುವ ವ್ಯಾಪ್ತಿ

ನ್ಯಾಷನಲ್ ಕ್ಯಾಂಪೇನ್ ಫಾರ್ ದಲಿತ್‌ ಹ್ಯೂಮನ್ (ಎನ್‌ಸಿಡಿಎಚ್‌ಆರ್) ಪ್ರಕಟಿಸಿರುವ ‘Access to Justice for Dalits in India’ ಎಂಬ ಶೀರ್ಷಿಕೆಯ ವರದಿಯಲ್ಲಿರುವಂತೆ, ತಳಸಮುದಾಯಗಳ ಸಂತ್ರಸ್ತರು ತಮ್ಮ ವಿರುದ್ಧ ನಡೆಯುವ ದೌರ್ಜನ್ಯಗಳ ದೂರುಗಳು ಪೊಲೀಸರವರೆಗೂ ಬರುವುದಿಲ್ಲ ಎಂದು ಸೂಚಿಸುತ್ತದೆ. ದೂರು ಕೊಡದಂತೆ ಬೆದರಿಕೆ ಹಾಕುವುದು, ರಾಜಿ ಮಾಡುವುದು ಸೇರಿದಂತೆ ಹಲವಾರು ಕಾರಣಗಳಿವೆ ಎಂದು ವರದಿ ಹೇಳುತ್ತದೆ.

ಕೃಪೆ: ಫ್ಯಾಕ್ಟ್‌‌ಲಿ


ಇದನ್ನೂ ಓದಿ: 16 ನಿಮಿಷಕ್ಕೊಮ್ಮೆ ದಲಿತರ ವಿರುದ್ಧ ದೌರ್ಜನ್ಯ, ಪ್ರತಿನಿತ್ಯ 6 ದಲಿತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...