Homeಮುಖಪುಟಉತ್ತರಪ್ರದೇಶ: 16 ವರ್ಷದ ದಲಿತ ಯುವತಿಯ ಮೇಲೆ ಅಪ್ರಾಪ್ತ ಸೇರಿ ಇಬ್ಬರಿಂದ ಅತ್ಯಾಚಾರ!

ಉತ್ತರಪ್ರದೇಶ: 16 ವರ್ಷದ ದಲಿತ ಯುವತಿಯ ಮೇಲೆ ಅಪ್ರಾಪ್ತ ಸೇರಿ ಇಬ್ಬರಿಂದ ಅತ್ಯಾಚಾರ!

ತನ್ನ ತಾಯಿಯನ್ನು ನೋಡಿಕೊಳ್ಳಲು ಹೋಗಿದ್ದ ತಂದೆ ಮನೆಗೆ ಬರಲು ತಡವಾಗಿದ್ದರಿಂದ, ಸ್ವತಃ ತಾನೇ ರಾತ್ರಿಯಲ್ಲಿ ತನ್ನ ಮನೆಯಿಂದ ಸುಮಾರು ಒಂದು ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ಹೊರಟಿದ್ದಳು. ಆಗ ನೀಚ ಈ ಘಟನೆ ಸಂಭವಿಸಿದೆ.

- Advertisement -
- Advertisement -

ಗುರುವಾರ ಬೆಳಿಗ್ಗೆ, 16 ವರ್ಷದ ದಲಿತ ಯುವತಿಯೊಬ್ಬಳನ್ನು ಒಬ್ಬ ಅಪ್ರಾಪ್ತ ವಯಸ್ಕ ಸೇರಿದಂತೆ ಇಬ್ಬರು ಅತ್ಯಾಚಾರ ಮಾಡಿದ್ದಾರೆ. ಆರೋಪಿಗಳು ಇಬ್ಬರೂ ಸಿಕ್ಕಿಬಿದ್ದಿದ್ದಾರೆ.

ಹುಡುಗಿಯ ಕುಟುಂಬದ ಪ್ರಕಾರ, “ಆಕೆಯ ತಂದೆ ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ತಾಯಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು. ಅವರು ತಮ್ಮ ಮೂವರು ಮಕ್ಕಳಿಗೆ ಮನೆಯಲ್ಲಿಯೇ ಇರಬೇಕೆಂದು ಹೇಳಿದ್ದರು. ಒಂದೂವರೆ ಗಂಟೆ ನಂತರ, ಅವರು ಹಿಂತಿರುಗದಿದ್ದಾಗ, ಹುಡುಗಿ ತನ್ನ ಮನೆಯಿಂದ ಸುಮಾರು ಒಂದು ಕಿ.ಮೀ ದೂರದಲ್ಲಿರುವ ಆಸ್ಪತ್ರೆಗೆ ಹೋಗಲು ನಿರ್ಧರಿಸಿದಳು. ಬಾಲಕಿ ಆಸ್ಪತ್ರೆಗೆ ಹೋಗುತ್ತಿದ್ದವಳು ಕತ್ತಲೆಗೆ ಹೆದರಿ ಮನೆಗೆ ಮರಳಲು ಪ್ರಾರಂಭಿಸಿದಳು. ಹಿಂದಿರುಗುವಾಗ, ಅರಣ್ಯ ಇಲಾಖೆಯ ಅತಿಥಿಗೃಹವಿದ್ದು, ಅಲ್ಲಿ ಇಬ್ಬರು ಆರೋಪಿಗಳು ನಿರ್ಜನ ರಸ್ತೆಯಲ್ಲಿ ಓಡಾಡುತ್ತಿದ್ದರು. ಅವರು ಬಾಲಕಿಯನ್ನು ಬಲವಂತಪಡಿಸಿದರು. ಆಕೆ ಅದನ್ನು ವಿರೋಧಿಸಿದಾಗ ಇಟ್ಟಿಗೆಯಿಂದ ಹೊಡೆಯಲು ಪ್ರಯತ್ನಿಸಿದರು. ಆದಾಗ್ಯೂ, ಅವರು ಅವಳನ್ನು ತಮ್ಮ ಬೆಲ್ಟ್‌ಗಳಿಂದ ಹೊಡೆದರು. ಅವರು ಅವಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಮುಂಜಾನೆ 3 ರ ಸುಮಾರಿಗೆ ಅವರು ಅವಳನ್ನು ಬಿಡುತ್ತಾರೆ. ಮರುದಿನ, ಯುವತಿ ಈ ಘಟನೆಯನ್ನು ತನ್ನ ತಾಯಿಗೆ ವಿವರಿಸಿದ ನಂತರ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ” ಎಂದು ಜಲಾನ್ ಎಸ್‌ಪಿ ಯಶ್ ವೀರ್ ಸಿಂಗ್ ದಿ ಇಂಡಿಯನ್ ಎಕ್ಸ್ ಪ್ರೆಸ್‌ಗೆ ತಿಳಿಸಿದರು.

ಇದನ್ನೂ ಓದಿ: ಉತ್ತರ ಪ್ರದೇಶ: ಅಧಿಕಾರಿಗಳ ಎದುರೇ ಗುಂಡು ಹಾರಿಸಿ ಹತ್ಯೆಗೈದ ಬಿಜೆಪಿ ಶಾಸಕನ ಆಪ್ತ!

ಪೊಲೀಸರ ಪ್ರಕಾರ, ಆರೋಪಿಗಳಲ್ಲಿ ಒಬ್ಬ ಇನ್ನೊಬ್ಬನ ಹೆಸರನ್ನು ಕರೆದಿದ್ದರಿಂದ ಅವರು ಪ್ರಕರಣವನ್ನು ಭೇದಿಸಲು ಸಾಧ್ಯವಾಯಿತು. ಅದು ಯುವತಿಗೆ ನೆನಪಿದೆ. “ನಾವು ಶೀಘ್ರದಲ್ಲೇ ಫೇಸ್‌ಬುಕ್‌ನಲ್ಲಿ ಆ ಹೆಸರಿನ ಎಲ್ಲರನ್ನೂ ಹುಡುಕಿದೆವು. ಆಗ ಯುವತಿ ತನ್ನ ಫೇಸ್‌ಬುಕ್ ಪ್ರೊಫೈಲ್‌ನಿಂದ ಆರೋಪಿಗಳಲ್ಲಿ ಒಬ್ಬನನ್ನು ಗುರುತಿಸಿದ್ದಾಳೆ. ನಾವು ಒಬ್ಬ ಅಪ್ರಾಪ್ತ ಆರೋಪಿಯನ್ನು ರೈಲ್ವೆ ನಿಲ್ದಾಣದಿಂದ ಬಂಧಿಸಿದ್ದೇವೆ. ಇತರ ಆರೋಪಿಯನ್ನು ಕೂಡ ಶೀಘ್ರದಲ್ಲೇ ಬಂಧಿಸಲಾಗಿದೆ” ಎಂದು ಎಸ್‌ಪಿ ಹೇಳಿದರು.

ಇದನ್ನೂ ಓದಿ: ಹತ್ರಾಸ್ ಗ್ಯಾಂಗ್ ರೇಪ್: ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ವಕೀಲರ ಒತ್ತಾಯ

ಸ್ಥಳೀಯ ಸ್ಟೇಷನ್ ಹೌಸ್ ಆಫೀಸರ್ ಪ್ರಕಾರ, ಆರೋಪಿಗಳಲ್ಲಿ ಒಬ್ಬ ಇ-ರಿಕ್ಷಾ ಚಾಲಕ ಆಗಾಗ್ಗೆ ಯುವತಿಯನ್ನು ಕರೆದೊಯ್ಯುತ್ತಿದ್ದನು ಎಂದು ಹೇಳಿದ್ದಾರೆ.

ಯುವತಿಯ ವೈದ್ಯಕೀಯ ವರದಿಯ ಪ್ರಕಾರ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ನಡೆದಿರುವುದು ಖಚಿತವಾಗಿದೆ ಎಂದು ಎಸ್‌ಪಿ ಹೇಳಿದರು.

ಐಪಿಸಿ ಸೆಕ್ಷನ್ 376 ಡಿ (ಸಾಮೂಹಿಕ ಅತ್ಯಾಚಾರ), ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಇಬ್ಬರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.


ಇದನ್ನೂ ಓದಿ: ಯುಪಿ ಉಪಚುನಾವಣೆ: ಹೆಚ್ಚುತ್ತಿರುವ ಅಪರಾಧಗಳ ನೆರಳಲ್ಲಿ ಮತದಾರರು ಯಾರ ಕೈಹಿಡಿಯಲಿದ್ದಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...