Homeಕರ್ನಾಟಕಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಯುವತಿಯನ್ನು ಕುಟುಂಬಸ್ಥರೇ ಕೊಂದು, ಕಾಣೆಯಾಗಿದ್ದಾಳೆ ಎಂದು ರಾಮನಗರದ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು!

- Advertisement -
- Advertisement -

ದಲಿತ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ಯುವತಿಯೊಬ್ಬಳನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಹತ್ಯೆ ಮಾಡಿರುವ ಹೀನ ಘಟನೆ ರಾಮನಗರದ ಕುದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತನಿಖೆಯ ನಂತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಳಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ, ಅದನ್ನು ಸಹಿಸಿಕೊಳ್ಳದ ಕುಟುಂಬದವರು ಮಾಡಿರುವ ಈ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ನಾನುಗೌರಿ.ಕಾಂಗೆ ವಿಶ್ವಾಸಾರ್ಹ ಮೂಲಗಳಿಂದ ದೊರಕಿದ ಮಾಹಿತಿಯ ಪ್ರಕಾರ, “ಹೇಮಲತ ಎನ್ನುವ 21 ವರ್ಷದ ಯುವತಿಯನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಕೊಲೆ ಮಾಡಿದ ನಂತರ ಇದನ್ನು ಸಿನಿಮಾ ಶೈಲಿಯಲ್ಲಿ ಮುಚ್ಚಿಹಾಕಲು ಅಥವಾ ಪ್ರಕರಣದ ದಿಕ್ಕುತಪ್ಪಿಸಲು ಪ್ರಯತ್ನಿಸಿದ್ದಾರೆ” ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಯುವತಿ ಅನುಮಾನಾಸ್ಪದ ಸಾವು!: ಮರ್ಯಾದಾಹೀನ ಹತ್ಯೆಯೋ-ನಿರ್ಲಕ್ಷ್ಯತೆಯಿಂದಾದ ಹತ್ಯೆಯೋ?

ಅಕ್ಟೋಬರ್ 8, ಗುರುವಾರದಂದು ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ಎಲ್ಲಾ ಕಡೆ ಹುಡುಕಾಡಿದ ನಂತರ, ಯುವತಿಯ ತಂದೆ ಕೃಷ್ಣಪ್ಪ ಎಂಬುವವರು, ಪೊಲೀಸ್ ಠಾಣೆಗೆ ಅಕ್ಟೋಬರ್ 9 ರಂದು ದೂರು ನೀಡಿದ್ದರು. ಅದರಲ್ಲಿ, ಪುನಿತ್ ಎಂಬ ಹುಡುಗನನ್ನು ನಮ್ಮ ಮಗಳು ಪ್ರೀತಿಸುತ್ತಿದ್ದಳು ಎಂದು ಹೇಳಿದ್ದಾರೆ. ಆ ದಿನ ನಮ್ಮ ಊರಿನಲ್ಲಿ ಒಂದು ಸಾವಾಗಿತ್ತು, ಮನೆಯವರೆಲ್ಲಾ ಅಲ್ಲಿಗೆ ಹೋಗಿದ್ದೆವು. ಈ ಸಮಯದಲ್ಲಿ ಆತನೆ ನಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದಾನೆ ಎಂದೂ ದೂರು ನೀಡಿರುತ್ತಾರೆ.

ನಂತರ ಮಾರನೆಯ ದಿನ (ಅಕ್ಟೋಬರ್ 10), ಕುಟುಂಬದವರೇ ಪೊಲೀಸ್‌ಗೆ ಕರೆ ಮಾಡಿ, ನಮ್ಮ ಹೊಲದಲ್ಲಿ, ಯಾರನ್ನೋ ಎಳೆದಾಡಿರುವ ಗುರುತು ಇದೆ. ಅದನ್ನು ಹಿಂಬಾಲಿಸಿದಾಗ ನಮ್ಮ ಮಗಳ ಒಂದು ಚಪ್ಪಲಿ ಸಿಕ್ಕಿದ್ದು, ಇನ್ನೂ ಮುಂದೆ ಹೋದಾಗ ಆಕೆಯ ಒಳ ಉಡುಪು ಸಿಕ್ಕಿದೆ. ಪಕ್ಕದಲ್ಲಿಯೇ ಹೂತಿರುವ ಶವದ ಬೆರಳು ಮಾತ್ರ ಕಾಣಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಶವವನ್ನು ಹೊರತೆಗೆದಿದ್ದಾರೆ. ನಂತರ “ನಮ್ಮ ಮಗಳನ್ನು ಅತ್ಯಾಚಾರ ಮಾಡಿ ಕೊಲ್ಲಲಾಗಿದೆ” ಎಂದು ಕುಟುಂಬದವರೇ ಆರೋಪಿಸಿದ್ದರು. ಇದಕ್ಕೆ ಪೂರಕವೆಂಬಂತೆ ತಮ್ಮ ಮಗಳದ್ದೇ ಒಳ ಉಡುಪನ್ನು ಸಾಕ್ಷಿಯಾಗಿ ತೋರಿಸಿದ್ದಾರೆ. ಆದರೆ ಶವ ಹೊರತೆಗೆದಾಗ ಅಲ್ಲಿಯೂ ಅದೇ ಬ್ರಾಂಡ್‌ನ ಒಳಉಡುಪನ್ನು ಯುವತಿ ಧರಿಸಿದ್ದಳು!? ಹೀಗಿರುವಾಗ ಹೊರಗಡೆ ಮತ್ತೊಂದು ಒಳ ಉಡುಪು ಸಿಗಲು ಹೇಗೆ ಸಾಧ್ಯ ಎಂದು ಪೊಲೀಸರು ಅನುಮಾನಕ್ಕೆ ಒಳಗಾಗಿದ್ದಾರೆ. ಮೇಲು ನೋಟಕ್ಕೆ ಅತ್ಯಾಚಾರದ ಯಾವುದೇ ಗುರುತುಗಳು ಕಂಡುಬಂದಿಲ್ಲವಾದ್ದರಿಂದ, ಪೊಲೀಸರು ಈ ಪ್ರಕರಣವನ್ನು ಗೌಪ್ಯವಾಗಿ ತನಿಖೆ ಮಾಡಲು ಪ್ರಾರಂಭಿಸಿದ್ದಾರೆ.

ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ವಿಚಾರಿಸಿದಾಗ, ತಾವು 3 ವರ್ಷಗಳಿಂದ ಪ್ರೀತಿಸುತ್ತಿದ್ದೆವೆಂದು ಒಪ್ಪಿಕೊಂಡಿದ್ದಾನೆ. ಆದರೆ ಈ ಘಟನೆಯ ಬಗ್ಗೆ ನನಗೆ ಗೊತ್ತಿಲ್ಲ. ಇದಕ್ಕೂ ನನಗೂ ಸಂಬಂಧವಿಲ್ಲ. ತಾನು ಮೈಸೂರಿನಲ್ಲಿ ಕೆಲಸ ಮಾಡುತ್ತಿರುವುದಾಗಿಯೂ, ಈ ವಿಷಯ ತಿಳಿದು ಆಘಾತಗೊಂಡು ತಾನೂ ಕೂಡಾ ಎಲ್ಲಾ ಕಡೆ ಹುಡುಕುತ್ತಿರುವುದಾಗಿಯೂ ಪೊಲೀಸರಿಗೆ ತಿಳಿಸಿದ್ದಾನೆ.

ಇದಾದ ನಂತರ ಕುಟುಂಬದವರನ್ನು ತೀವ್ರವಾಗಿ ವಿಚಾರಿಸಿದಾಗ ನಿಜ ಬಾಯಿ ಬಿಟ್ಟಿದ್ದಾರೆ ಎಂದು ಪೊಲಿಸರು ತಿಳಿಸಿದರು.

“ಈ ಹಿಂದೆಯೇ ಎರಡು-ಮೂರು ಬಾರಿ ಇವರ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದಂತೆ ಪೋಷಕರು ಬೆದರಿಕೆ ಹಾಕಿದ್ದರೂ ಯುವತಿ ಅದನ್ನು ಕಡೆಗಣಿಸಿದ್ದಳು. ಅ. 8 ರ ಹಿಂದಿನ ರಾತ್ರಿ ಬೆಳಿಗ್ಗೆ 4 ಗಂಟೆಯ ತನಕ ಹೇಮಲತ ಆನ್‌ಲೈನ್‌ನಲ್ಲಿ ಆ ಹುಡುಗನೊಂದಿಗೆ ಚಾಟ್ ಮಾಡುತ್ತಿದ್ದಳು. ಇದನ್ನು ಸಹಿಸದ ಯುವತಿಯ ತಂದೆ ಮತ್ತು ಆಕೆಯ ದೊಡ್ಡಪ್ಪನ ಮಗ ಚೇತನ್, ಮಾರನೆಯ ದಿನ (ಅ. 8) ಆಕೆಯನ್ನು ತಮ್ಮ ಜಮೀನಿನ ಬಳಿ ಕರೆಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ, ಚೇತನ್ ದೊಣ್ಣೆಯಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಯುವತಿ ಸ್ಥಳದಲ್ಲೇ ಮತಪಟ್ಟಿದ್ದಾಳೆ. ಇದರಿಂದ ಭಯಭಿತರಾದ ಆರೋಪಿಗಳು, ಶವವನ್ನು ಅಲ್ಲಿಯೇ ಬಿಟ್ಟುಹೋಗಿದ್ದಾರೆ. ಈ ವಿಷಯವನ್ನು ತಮ್ಮ ಮತ್ತೊಬ್ಬ ಸಂಬಂಧಿಗೆ ತಿಳಿಸಿದಾಗ, ಈ ಮೊದಲೇ ಹೇಳಿರುವ ಕಟ್ಟುಕಥೆಯನ್ನು ಆಧರಿಸಿ, ಶವವನ್ನು ಇವರೇ ಹೂತುಹಾಕಿ, ನಂತರ ಮಾರನೆದಿನ (ಅ.9) ದೂರು ನೀಡಿ, ಒಂದು ದಿನ ಕಳೆದ ನಂತರ (ಅ.10) ಇವರೇ ಪೊಲೀಸರಿಗೆ ಕರೆ ಮಾಡಿ, ಪೂರ್ವಯೋಜಿತ ಕಥೆಯನ್ನು ಹೇಳಿದ್ದಾರೆ” ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: ತನ್ನ ಜಾತಿಯವರನ್ನು ರಕ್ಷಿಸಲು ಆದಿತ್ಯನಾಥ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಚಂದ್ರಶೇಖರ್ ಆಜಾದ್

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಸಂತ್ರಸ್ತೆಯ ತಂದೆ ಕಷ್ಣಪ್ಪ ಮತ್ತು ಆತನ ಸೋದರನ ಮಗ ಚೇತನ್‌ ಹಾಗೂ ಅವನ ಅಪ್ರಾಪ್ತ ಸ್ನೇಹಿತನನ್ನು ಬಂಧಿಸಲಾಗಿದ್ದು, ಎಫ್ಐಆರ್ ದಾಖಲಾಗಿದೆ. ಹಾಗಾಗಿ ನಿರ್ದಿಷ್ಟವಾಗಿ ಇದು ಮರ್ಯಾದಾಹೀನ ಹತ್ಯೆ ಎಂದು ತಿಳಿದುಬಂದಿದೆ.

ಇಂತಹ ಯಾವುದೋ ಒಂದೋ ಎರಡೋ ಮರ್ಯಾದಾಹೀನ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತವೆ. ಆದರೆ ಸಾವಿರಾರು ಪ್ರಕರಣಗಳು ಈ ಯುವತಿಯ ಶವದಂತೆಯೇ ಮಣ್ಣಿನಲ್ಲಿ ಮುಚ್ಚಿಹೋಗುತ್ತವೆ. ಇವುಗಳನ್ನೂ ಸಮರ್ಥಿಸಿಕೊಳ್ಳುವ ಕೊಳಕು ಮನಸ್ಥಿತಿಗಳು ನಮ್ಮ ನಡುವೆಯೇ ಇವೆ. ಇಂತಹವುಗಳನ್ನು ನೋಡಿದರೆ ನಮ್ಮ ಸಮಾಜ ತನ್ನ ಆಂತರ್ಯದಲ್ಲಿ ಇನ್ನೂ ಎಂತಹ ಕ್ರೂರತೆಯನ್ನು ಉಳಿಸಿಕೊಂಡಿದೆ ಎಂಬುದು ತಿಳಿಯುತ್ತದೆ.

ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿದ್ದ ತನಿಷ್ಕ್ ಜಾಹೀರಾತಿನಲ್ಲಿ ಹಿಂದೂ ಯುವತಿ ಮುಸ್ಲಿಂ ಕುಟುಂಬಕ್ಕೆ ವಿವಾಹವಾಗಿದ್ದಾಳೆ ಎಂಬುದನ್ನೇ ಅರಗಿಸಿಕೊಳ್ಳದ ನೀಚ ಮನಸ್ಥತಿಗಳೇ ಇಂತಹ ಹೀನ ಕೃತ್ಯಗಳಿಗೆ ಕಾರಣವಾಗುತ್ತವೆ. ಮೀಸೆ ಬಿಟ್ಟಿದ್ದಕ್ಕೆ, ಕುದುರೆ ಏರಿದ್ದಕ್ಕೆ, ನೀರು ಮುಟ್ಟಿದ್ದಕ್ಕೆ ಕೊಲ್ಲುವ ಮನಸ್ಥಿತಿಗಳು ನಮ್ಮ ನಡುವೆ ಕೊರೊನಾ ವೈರಸ್‌ಗಿಂತಲೂ ಅಪಾಯಕಾರಿಯಾಗಿ ಬೆಳೆಯುತ್ತಿವೆ.

ಇಷ್ಟಿದ್ದರೂ ನಮ್ಮ ಸಮಾಜದಲ್ಲಿ ಜಾತಿ ಪದ್ದತಿಯೇ ಇಲ್ಲ ಎಂದೂ, ಜಾತ್ಯಾತೀತತೆಯ ಬಗ್ಗೆ ಮಾತನಾಡುವವರೆಲ್ಲಾ ‘ಸೂಡೋ ಸೆಕ್ಯಲರಿಸ್ಟ್’ ಎಂಬ ಅಪಮಾನಕ್ಕೆ ಗುರಿಯಾಗುತ್ತಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು ದಿನನಿತ್ಯ ದಾಖಲಾಗುತ್ತಿದ್ದರೂ, ಸರ್ಕಾರವಾಗಲೀ ನಾಗರೀಕರಾಗಲೀ ಇವುಗಳ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ.


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...