Homeಕರ್ನಾಟಕಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಮರ್ಯಾದಾಹೀನ ಹತ್ಯೆ: ಸಿನಿಮಾ ಶೈಲಿಯಲ್ಲಿ ಕಥೆ ಕಟ್ಟಿದ ಯುವತಿಯ ಕುಟುಂಬ!

ಯುವತಿಯನ್ನು ಕುಟುಂಬಸ್ಥರೇ ಕೊಂದು, ಕಾಣೆಯಾಗಿದ್ದಾಳೆ ಎಂದು ರಾಮನಗರದ ಕುದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು!

- Advertisement -
- Advertisement -

ದಲಿತ ಹುಡುಗನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ಯುವತಿಯೊಬ್ಬಳನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಹತ್ಯೆ ಮಾಡಿರುವ ಹೀನ ಘಟನೆ ರಾಮನಗರದ ಕುದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತನಿಖೆಯ ನಂತರ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಳಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ, ಅದನ್ನು ಸಹಿಸಿಕೊಳ್ಳದ ಕುಟುಂಬದವರು ಮಾಡಿರುವ ಈ ದುಷ್ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ.

ಈ ಕುರಿತು ನಾನುಗೌರಿ.ಕಾಂಗೆ ವಿಶ್ವಾಸಾರ್ಹ ಮೂಲಗಳಿಂದ ದೊರಕಿದ ಮಾಹಿತಿಯ ಪ್ರಕಾರ, “ಹೇಮಲತ ಎನ್ನುವ 21 ವರ್ಷದ ಯುವತಿಯನ್ನು ಆಕೆಯ ತಂದೆ ಮತ್ತು ತಮ್ಮ ಸೇರಿ ಕೊಲೆ ಮಾಡಿದ ನಂತರ ಇದನ್ನು ಸಿನಿಮಾ ಶೈಲಿಯಲ್ಲಿ ಮುಚ್ಚಿಹಾಕಲು ಅಥವಾ ಪ್ರಕರಣದ ದಿಕ್ಕುತಪ್ಪಿಸಲು ಪ್ರಯತ್ನಿಸಿದ್ದಾರೆ” ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಯುವತಿ ಅನುಮಾನಾಸ್ಪದ ಸಾವು!: ಮರ್ಯಾದಾಹೀನ ಹತ್ಯೆಯೋ-ನಿರ್ಲಕ್ಷ್ಯತೆಯಿಂದಾದ ಹತ್ಯೆಯೋ?

ಅಕ್ಟೋಬರ್ 8, ಗುರುವಾರದಂದು ತಮ್ಮ ಮಗಳು ಕಾಣೆಯಾಗಿದ್ದಾಳೆ ಎಂದು ಎಲ್ಲಾ ಕಡೆ ಹುಡುಕಾಡಿದ ನಂತರ, ಯುವತಿಯ ತಂದೆ ಕೃಷ್ಣಪ್ಪ ಎಂಬುವವರು, ಪೊಲೀಸ್ ಠಾಣೆಗೆ ಅಕ್ಟೋಬರ್ 9 ರಂದು ದೂರು ನೀಡಿದ್ದರು. ಅದರಲ್ಲಿ, ಪುನಿತ್ ಎಂಬ ಹುಡುಗನನ್ನು ನಮ್ಮ ಮಗಳು ಪ್ರೀತಿಸುತ್ತಿದ್ದಳು ಎಂದು ಹೇಳಿದ್ದಾರೆ. ಆ ದಿನ ನಮ್ಮ ಊರಿನಲ್ಲಿ ಒಂದು ಸಾವಾಗಿತ್ತು, ಮನೆಯವರೆಲ್ಲಾ ಅಲ್ಲಿಗೆ ಹೋಗಿದ್ದೆವು. ಈ ಸಮಯದಲ್ಲಿ ಆತನೆ ನಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದಾನೆ ಎಂದೂ ದೂರು ನೀಡಿರುತ್ತಾರೆ.

ನಂತರ ಮಾರನೆಯ ದಿನ (ಅಕ್ಟೋಬರ್ 10), ಕುಟುಂಬದವರೇ ಪೊಲೀಸ್‌ಗೆ ಕರೆ ಮಾಡಿ, ನಮ್ಮ ಹೊಲದಲ್ಲಿ, ಯಾರನ್ನೋ ಎಳೆದಾಡಿರುವ ಗುರುತು ಇದೆ. ಅದನ್ನು ಹಿಂಬಾಲಿಸಿದಾಗ ನಮ್ಮ ಮಗಳ ಒಂದು ಚಪ್ಪಲಿ ಸಿಕ್ಕಿದ್ದು, ಇನ್ನೂ ಮುಂದೆ ಹೋದಾಗ ಆಕೆಯ ಒಳ ಉಡುಪು ಸಿಕ್ಕಿದೆ. ಪಕ್ಕದಲ್ಲಿಯೇ ಹೂತಿರುವ ಶವದ ಬೆರಳು ಮಾತ್ರ ಕಾಣಿಸುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಜಾತಿಕಾರಣ: ಗ್ರಾಮಪಂಚಾಯಿತಿ ಅಧ್ಯಕ್ಷೆಯನ್ನು ನೆಲದ ಮೇಲೆ ಕೂರಿಸಿದ ಸದಸ್ಯರು!

ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಶವವನ್ನು ಹೊರತೆಗೆದಿದ್ದಾರೆ. ನಂತರ “ನಮ್ಮ ಮಗಳನ್ನು ಅತ್ಯಾಚಾರ ಮಾಡಿ ಕೊಲ್ಲಲಾಗಿದೆ” ಎಂದು ಕುಟುಂಬದವರೇ ಆರೋಪಿಸಿದ್ದರು. ಇದಕ್ಕೆ ಪೂರಕವೆಂಬಂತೆ ತಮ್ಮ ಮಗಳದ್ದೇ ಒಳ ಉಡುಪನ್ನು ಸಾಕ್ಷಿಯಾಗಿ ತೋರಿಸಿದ್ದಾರೆ. ಆದರೆ ಶವ ಹೊರತೆಗೆದಾಗ ಅಲ್ಲಿಯೂ ಅದೇ ಬ್ರಾಂಡ್‌ನ ಒಳಉಡುಪನ್ನು ಯುವತಿ ಧರಿಸಿದ್ದಳು!? ಹೀಗಿರುವಾಗ ಹೊರಗಡೆ ಮತ್ತೊಂದು ಒಳ ಉಡುಪು ಸಿಗಲು ಹೇಗೆ ಸಾಧ್ಯ ಎಂದು ಪೊಲೀಸರು ಅನುಮಾನಕ್ಕೆ ಒಳಗಾಗಿದ್ದಾರೆ. ಮೇಲು ನೋಟಕ್ಕೆ ಅತ್ಯಾಚಾರದ ಯಾವುದೇ ಗುರುತುಗಳು ಕಂಡುಬಂದಿಲ್ಲವಾದ್ದರಿಂದ, ಪೊಲೀಸರು ಈ ಪ್ರಕರಣವನ್ನು ಗೌಪ್ಯವಾಗಿ ತನಿಖೆ ಮಾಡಲು ಪ್ರಾರಂಭಿಸಿದ್ದಾರೆ.

ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ವಿಚಾರಿಸಿದಾಗ, ತಾವು 3 ವರ್ಷಗಳಿಂದ ಪ್ರೀತಿಸುತ್ತಿದ್ದೆವೆಂದು ಒಪ್ಪಿಕೊಂಡಿದ್ದಾನೆ. ಆದರೆ ಈ ಘಟನೆಯ ಬಗ್ಗೆ ನನಗೆ ಗೊತ್ತಿಲ್ಲ. ಇದಕ್ಕೂ ನನಗೂ ಸಂಬಂಧವಿಲ್ಲ. ತಾನು ಮೈಸೂರಿನಲ್ಲಿ ಕೆಲಸ ಮಾಡುತ್ತಿರುವುದಾಗಿಯೂ, ಈ ವಿಷಯ ತಿಳಿದು ಆಘಾತಗೊಂಡು ತಾನೂ ಕೂಡಾ ಎಲ್ಲಾ ಕಡೆ ಹುಡುಕುತ್ತಿರುವುದಾಗಿಯೂ ಪೊಲೀಸರಿಗೆ ತಿಳಿಸಿದ್ದಾನೆ.

ಇದಾದ ನಂತರ ಕುಟುಂಬದವರನ್ನು ತೀವ್ರವಾಗಿ ವಿಚಾರಿಸಿದಾಗ ನಿಜ ಬಾಯಿ ಬಿಟ್ಟಿದ್ದಾರೆ ಎಂದು ಪೊಲಿಸರು ತಿಳಿಸಿದರು.

“ಈ ಹಿಂದೆಯೇ ಎರಡು-ಮೂರು ಬಾರಿ ಇವರ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದಂತೆ ಪೋಷಕರು ಬೆದರಿಕೆ ಹಾಕಿದ್ದರೂ ಯುವತಿ ಅದನ್ನು ಕಡೆಗಣಿಸಿದ್ದಳು. ಅ. 8 ರ ಹಿಂದಿನ ರಾತ್ರಿ ಬೆಳಿಗ್ಗೆ 4 ಗಂಟೆಯ ತನಕ ಹೇಮಲತ ಆನ್‌ಲೈನ್‌ನಲ್ಲಿ ಆ ಹುಡುಗನೊಂದಿಗೆ ಚಾಟ್ ಮಾಡುತ್ತಿದ್ದಳು. ಇದನ್ನು ಸಹಿಸದ ಯುವತಿಯ ತಂದೆ ಮತ್ತು ಆಕೆಯ ದೊಡ್ಡಪ್ಪನ ಮಗ ಚೇತನ್, ಮಾರನೆಯ ದಿನ (ಅ. 8) ಆಕೆಯನ್ನು ತಮ್ಮ ಜಮೀನಿನ ಬಳಿ ಕರೆಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ, ಚೇತನ್ ದೊಣ್ಣೆಯಿಂದ ಆಕೆಯ ಮೇಲೆ ಹಲ್ಲೆ ಮಾಡಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಯುವತಿ ಸ್ಥಳದಲ್ಲೇ ಮತಪಟ್ಟಿದ್ದಾಳೆ. ಇದರಿಂದ ಭಯಭಿತರಾದ ಆರೋಪಿಗಳು, ಶವವನ್ನು ಅಲ್ಲಿಯೇ ಬಿಟ್ಟುಹೋಗಿದ್ದಾರೆ. ಈ ವಿಷಯವನ್ನು ತಮ್ಮ ಮತ್ತೊಬ್ಬ ಸಂಬಂಧಿಗೆ ತಿಳಿಸಿದಾಗ, ಈ ಮೊದಲೇ ಹೇಳಿರುವ ಕಟ್ಟುಕಥೆಯನ್ನು ಆಧರಿಸಿ, ಶವವನ್ನು ಇವರೇ ಹೂತುಹಾಕಿ, ನಂತರ ಮಾರನೆದಿನ (ಅ.9) ದೂರು ನೀಡಿ, ಒಂದು ದಿನ ಕಳೆದ ನಂತರ (ಅ.10) ಇವರೇ ಪೊಲೀಸರಿಗೆ ಕರೆ ಮಾಡಿ, ಪೂರ್ವಯೋಜಿತ ಕಥೆಯನ್ನು ಹೇಳಿದ್ದಾರೆ” ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.

ಇದನ್ನೂ ಓದಿ: ತನ್ನ ಜಾತಿಯವರನ್ನು ರಕ್ಷಿಸಲು ಆದಿತ್ಯನಾಥ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ: ಚಂದ್ರಶೇಖರ್ ಆಜಾದ್

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಸಂತ್ರಸ್ತೆಯ ತಂದೆ ಕಷ್ಣಪ್ಪ ಮತ್ತು ಆತನ ಸೋದರನ ಮಗ ಚೇತನ್‌ ಹಾಗೂ ಅವನ ಅಪ್ರಾಪ್ತ ಸ್ನೇಹಿತನನ್ನು ಬಂಧಿಸಲಾಗಿದ್ದು, ಎಫ್ಐಆರ್ ದಾಖಲಾಗಿದೆ. ಹಾಗಾಗಿ ನಿರ್ದಿಷ್ಟವಾಗಿ ಇದು ಮರ್ಯಾದಾಹೀನ ಹತ್ಯೆ ಎಂದು ತಿಳಿದುಬಂದಿದೆ.

ಇಂತಹ ಯಾವುದೋ ಒಂದೋ ಎರಡೋ ಮರ್ಯಾದಾಹೀನ ಹತ್ಯೆ ಪ್ರಕರಣಗಳು ಬೆಳಕಿಗೆ ಬರುತ್ತವೆ. ಆದರೆ ಸಾವಿರಾರು ಪ್ರಕರಣಗಳು ಈ ಯುವತಿಯ ಶವದಂತೆಯೇ ಮಣ್ಣಿನಲ್ಲಿ ಮುಚ್ಚಿಹೋಗುತ್ತವೆ. ಇವುಗಳನ್ನೂ ಸಮರ್ಥಿಸಿಕೊಳ್ಳುವ ಕೊಳಕು ಮನಸ್ಥಿತಿಗಳು ನಮ್ಮ ನಡುವೆಯೇ ಇವೆ. ಇಂತಹವುಗಳನ್ನು ನೋಡಿದರೆ ನಮ್ಮ ಸಮಾಜ ತನ್ನ ಆಂತರ್ಯದಲ್ಲಿ ಇನ್ನೂ ಎಂತಹ ಕ್ರೂರತೆಯನ್ನು ಉಳಿಸಿಕೊಂಡಿದೆ ಎಂಬುದು ತಿಳಿಯುತ್ತದೆ.

ಇತ್ತೀಚೆಗೆ ವಿವಾದಕ್ಕೆ ಕಾರಣವಾಗಿದ್ದ ತನಿಷ್ಕ್ ಜಾಹೀರಾತಿನಲ್ಲಿ ಹಿಂದೂ ಯುವತಿ ಮುಸ್ಲಿಂ ಕುಟುಂಬಕ್ಕೆ ವಿವಾಹವಾಗಿದ್ದಾಳೆ ಎಂಬುದನ್ನೇ ಅರಗಿಸಿಕೊಳ್ಳದ ನೀಚ ಮನಸ್ಥತಿಗಳೇ ಇಂತಹ ಹೀನ ಕೃತ್ಯಗಳಿಗೆ ಕಾರಣವಾಗುತ್ತವೆ. ಮೀಸೆ ಬಿಟ್ಟಿದ್ದಕ್ಕೆ, ಕುದುರೆ ಏರಿದ್ದಕ್ಕೆ, ನೀರು ಮುಟ್ಟಿದ್ದಕ್ಕೆ ಕೊಲ್ಲುವ ಮನಸ್ಥಿತಿಗಳು ನಮ್ಮ ನಡುವೆ ಕೊರೊನಾ ವೈರಸ್‌ಗಿಂತಲೂ ಅಪಾಯಕಾರಿಯಾಗಿ ಬೆಳೆಯುತ್ತಿವೆ.

ಇಷ್ಟಿದ್ದರೂ ನಮ್ಮ ಸಮಾಜದಲ್ಲಿ ಜಾತಿ ಪದ್ದತಿಯೇ ಇಲ್ಲ ಎಂದೂ, ಜಾತ್ಯಾತೀತತೆಯ ಬಗ್ಗೆ ಮಾತನಾಡುವವರೆಲ್ಲಾ ‘ಸೂಡೋ ಸೆಕ್ಯಲರಿಸ್ಟ್’ ಎಂಬ ಅಪಮಾನಕ್ಕೆ ಗುರಿಯಾಗುತ್ತಿದ್ದಾರೆ. ಇಂತಹ ಸಾವಿರಾರು ಪ್ರಕರಣಗಳು ದಿನನಿತ್ಯ ದಾಖಲಾಗುತ್ತಿದ್ದರೂ, ಸರ್ಕಾರವಾಗಲೀ ನಾಗರೀಕರಾಗಲೀ ಇವುಗಳ ಬಗ್ಗೆ ಎಚ್ಚೆತ್ತುಕೊಳ್ಳುತ್ತಿಲ್ಲ.


ಇದನ್ನೂ ಓದಿ: ತಮಿಳುನಾಡು ಶಾಸಕನ ಅಂತರ್ಜಾತಿ ವಿವಾಹದ ವಿಡಿಯೋ ವೈರಲ್: ಯುವತಿಯ ತಂದೆ ಆತ್ಮಹತ್ಯೆಗೆ ಯತ್ನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...