Homeಮುಖಪುಟಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಔಷಧಿ, ಪುಸ್ತಕ, ಪತ್ರಗಳ ನಿರಾಕರಣೆ: ಜೈಲಿನಲ್ಲಿ ಉಪವಾಸ ಆರಂಭಿಸಲಿರುವ ಪ್ರೊ.ಜಿ.ಎನ್ ಸಾಯಿಬಾಬಾ

ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.

- Advertisement -
- Advertisement -

ದೆಹಲಿ ವಿಶ್ವವಿದ್ಯಾಲಯದ ಪ್ರೊ.ಜಿ.ಎನ್ ಸಾಯಿಬಾಬಾ ಯುಎಪಿಎಯಂತಹ ಕರಾಳ ಕಾಯ್ದೆಗಳಡಿ ಜೈಲಿನಲ್ಲಿದ್ದಾರೆ. ಆದರೆ ಸಮರ್ಪಕ ಔಷಧಿ, ಪುಸ್ತಕ ಮತ್ತು ಪತ್ರಗಳನ್ನು ನೀಡುವ ಅವರ ಹಕ್ಕುಗಳಿಗೆ ನಿರ್ಬಂಧ ಹೇರಲಾಗಿದೆ. ಇದನ್ನು ಖಂಡಿಸಿ ಅವರು ನಾಗ್ಪುರ ಸೆಂಟ್ರಲ್ ಜೈಲಿನಲ್ಲಿ ಅಕ್ಟೋಬರ್ 21 ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದಾರೆ ಎಂದು ಅವರ ಪತ್ನಿ ವಸಂತ ಕುಮಾರಿ ತಿಳಿಸಿದ್ದಾರೆ.

ಶೇ.90 ರಷ್ಟು ದೈಹಿಕ ನ್ಯೂನತೆ ಹೊಂದಿರುವ ಮತ್ತು ಹಲವು ರೋಗಗಳಿಗೆ ತುತ್ತಾಗಿರುವ 47 ವರ್ಷ ಪ್ರಾಯದ ಡಾ. ಜಿ.ಎನ್. ಸಾಯಿಬಾಬಾ ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿದ ಅಪರಾಧಕ್ಕಾಗಿ 2017ರಲ್ಲಿ ಗಡ್‌ಚಿರೋಲಿ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೊಳಗಾಗಿದ್ದಾರೆ. ಅವರಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ಕಾಲದಲ್ಲಿಯೂ ಸಹ ಮೆಡಿಕಲ್ ಪೆರೋಲ್ ಸಿಕ್ಕಿಲ್ಲ.

ಈ ಕುರಿತು ಅವರ ಪತ್ನಿ ವಸಂತ ಕುಮಾರಿಯವರು ಪುಣೆಯ ಎಡಿಜಿಯವರಿಗೆ ಪತ್ರ ಬರೆದಿದ್ದು, ಜೈಲಿನಲ್ಲಿ ಅವರ ಹಕ್ಕುಗಳನ್ನು ದಮನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಅವರ ಪ್ರಕಾರ

  • ಹಲವು ಗಂಭೀರ ರೋಗಗಳಿಗೆ ತುತ್ತಾಗಿರುವ ಸಾಯಿಬಾಬಾ ದಿನನಿತ್ಯ ಔಷಧಿ ಸೇವಿಸಬೇಕಾಗಿದೆ. ಅವುಗಳನ್ನು ವಕೀಲರು ಜೈಲಿನ ಅಧಿಕಾರಿಗಳಿಗೆ ನೀಡಿದ್ದರೂ ಸಹ ಅವುಗಳನ್ನು ಸಾಯಿಬಾಬಾ ಅವರಿಗೆ ನೀಡುತ್ತಿಲ್ಲ.
  • ಸಾಯಿಬಾಬರವರಿಗೆ ಕುಟುಂಬ ಸದಸ್ಯರು ಬರೆಯುವ ಪತ್ರಗಳನ್ನು ಜೈಲಿನ ಅಧಿಕಾರಿಗಳು ಕೊಡುತ್ತಿಲ್ಲ. ಅವರಿಗೆ ಪತ್ರಿಕೆಗಳನ್ನು ಸಹ ಒದಗಿಸುತ್ತಿಲ್ಲ.
  • ಜೈಲಿನ ಅಧಿಕಾರಿಗಳು ತಿಂಗಳಿಗೆ ಕೇವಲ ಒಂದೆರೆಡು ಫೋನ್ ಕಾಲ್‌ಗಳಿಗೆ ಮಾತ್ರ ಅವಕಾಶ ಕೊಡುತ್ತಿದ್ದಾರೆ. ಕೊರಾನಾ ಸಾಂಕ್ರಾಮಿಕ ಕಾಲದಲ್ಲಿ ಭೇಟಿಗೆ ಅವಕಾಶವಿಲ್ಲದಿರುವಾಗ, ವಕೀಲರು ಮತ್ತು ಕುಟುಂಬ ಸದಸ್ಯರಿಗೆ ಫೋನ್‌ ನಲ್ಲಿ ಮಾತನಾಡಲು ಸಹ ಅವಕಾಶ ನೀಡುತ್ತಿಲ್ಲ.
  • ಬ್ಯಾನ್ ಆಗದ, ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುವ ಪುಸ್ತಕಗಳನ್ನು ಕಳಿಸಿದರೂ ಸಹ ಜೈಲಿನ ಅಧಿಕಾರಿಗಳು ಅದನ್ನು ಸಾಯಿಬಾಬಾರವರಿಗೆ ಕೊಡುತ್ತಿಲ್ಲ. ಇದು ಜೈಲಿನ ನಿಯಮಗಳ ಉಲ್ಲಂಘನೆಯಾಗಿದೆ.

ಈ ಕಿರುಕುಳ ಮತ್ತು ಸಂಕಷ್ಟಗಳ ಹಿನ್ನೆಲೆಯಲ್ಲಿ ನಾಗ್ಪುರ ಜೈಲು ಅಧಿಕಾರಗಳ ‘ಅಮಾನವೀಯ ನಡವಳಿಕೆ ಮತ್ತು ಅನ್ಯಾಯದ ನಿರ್ಬಂಧಗಳನ್ನು’ ಖಂಡಿಸಿ ಪ್ರೊ.ಸಾಯಿಬಾಬಾ ಅನಿರ್ಧಿಷ್ಠಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧಿಸಿದ್ದಾರೆ ಎಂದು ಅವರ ಪತ್ನಿ ತಿಳಿಸಿದ್ದಾರೆ.

ಕಮಿಟಿ ಫಾರ್ ಡಿಫೆಂಡ್ ಅಂಡ್ ರಿಲೀಸ್ ಜಿ. ಎನ್. ಸಾಯಿಬಾಬಾ ಸಹ ನಾಗ್ಪುರ ಎಡಿಜಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಸಾಯಿಬಾಬಾರವರ ಹಕ್ಕುಗಳನ್ನು ರಕ್ಷಿಸುವಂತೆ ಒತ್ತಾಯಿಸಿದೆ. “ಅವರಿಗೆ ಮೂಲಭೂತ ಅವಶ್ಯಕತೆಗಳನ್ನು ಒದಗಿಸುತ್ತಿಲ್ಲ. ಕೋವಿಡ್‌ -19ರ ಸಮಯದಲ್ಲಿಯೂ ಸಹ ಇಕ್ಕಾಟಾದ ಜೈಲುಗಳಲ್ಲಿ ಅವರನ್ನು ಕೂಡಿಹಾಕಿರುವುದು ಅವರ ಜೀವಕ್ಕೆ ಅಪಾಯಕಾರಿ” ಎಂದು ಪತ್ರದಲ್ಲಿ ಉಲ್ಲೇಖಿಲಾಗಿದೆ.


ಇದನ್ನೂ ಓದಿ: ಕ್ರಾಂತಿಕಾರಿ ರಾಜಕೀಯವನ್ನು ಜೀವನದ ಭಾಗವಾಗಿಸಿಕೊಂಡ ಡಾ.ಜಿ.ಎನ್. ಸಾಯಿಬಾಬಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...