Homeಕರ್ನಾಟಕCAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ಕರ್ನಾಟಕದ 1 ಮತ್ತು 3ನೇ ರ್ಯಾಂಕ್ ಮತ್ತು ಅಖಿಲ ಭಾರತ ಮಟ್ಟದಲ್ಲಿ 9 ಮತ್ತು 85 ರ್ಯಾಂಕ್ ನಮ್ಮ ಸಂಸ್ಥೆಗೆ ಲಭಿಸಿದೆ. ನಮ್ಮದು ಕೇವಲ ಮುಸ್ಲಿಂ ವಿದ್ಯಾರ್ಥಿಗಳಿರುವ ಸಂಸ್ಥೆಯಲ್ಲ. ಬದಲಿಗೆ ಶೇ.50ರಷ್ಟು ಇತರ ಸಮುದಾಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ ಎನ್ನುತ್ತಾರೆ ಸಂಸ್ಥೆಯ ಸಿಇಓ ತೌಸೀಫ್ ಮಡಿಕೇರಿ.

- Advertisement -
- Advertisement -

ನಿನ್ನೆ NEET ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕದ ಬೀದರ್‌ನ ಕಾರ್ತಿಕ್ ರೆಡ್ಡಿ 720 ಅಂಕಗಳಿಗೆ 710 ಅಂಕ ಗಳಿಸಿ ಕರ್ನಾಟಕದ ನಂಬರ್ ಒನ್ ಟಾಪರ್‌ ಆಗಿದ್ದಲ್ಲದೇ ಅಖಿಲ ಭಾರತ ಮಟ್ಟದಲ್ಲಿ 9ನೇ ರ್ಯಾಂಕ್ ಪಡೆದು ಮಿಂಚಿದ್ದಾರೆ. ಅಲ್ಲದೇ ಅರ್ಬಜ್ ಅಹ್ಮದ್ ಎಂಬ ಲಾರಿ ಚಾಲಕನ ಮಗ 700 ಅಂಕಗಳೊಂದಿಗೆ ಕರ್ನಾಟಕದ 3ನೇ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಇದರಲ್ಲಿ ವಿಶೇಷ ಅಂಶವೆಂದರೆ ಇವರಿಬ್ಬರೂ ಕಲಿತಿದ್ದು ಬೀದರ್‌ ಶಾಹೀನ್ ಸಂಸ್ಥೆಯಲ್ಲಿ. ಈ ಸಂಸ್ಥೆ ವರ್ಷದ ಆರಂಭದಲ್ಲಿ ಭಾರೀ ಸುದ್ದಿ ಮಾಡಿದ್ದು ನಿಮಗೆ ನೆನಪಿರಬೇಕು. ಈ ಸಂಸ್ಥೆಯ ಮಕ್ಕಳು ಸಿಎಎ ವಿರೋಧಿ ನಾಟಕ ಮಾಡಿದರೆಂಬ ಕ್ಲುಲ್ಲಕ ಕಾರಣಕ್ಕಾಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ನಾಟಕದಲ್ಲಿ ಭಾಗವಹಿಸಿದ್ದ ಮಗುವಿನ ತಾಯಿಯನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಹಲವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪೊಲೀಸರು ಶಾಲೆಗೆ ನುಗ್ಗಿ ಚಿಕ್ಕಮಕ್ಕಳನ್ನು ವಿಚಾರಣೆಗೊಳಪಡಿಸಲಾಗಿತ್ತು. ತದನಂತರ ಹಲವರು ಇಡೀ ಸಂಸ್ಥೆ ವಿರುದ್ಧ ಅಪಪ್ರಚಾರ ಮಾಡಿದ್ದರು. ಹಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಬಿಡಿಸಿ ಬೇರೆಡೆಗೆ ವರ್ಗಾಹಿಸುವಂತೆ ಮಾಡಲಾಗಿತ್ತು.

ಅಂತ ಬೀದರ್‌ನ ಶಾಹೀನ್ ಶಾಲೆಯಲ್ಲಿ ಇಂದು 340ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ಉಚಿತ ವೈದ್ಯಕೀಯ ಶಿಕ್ಷಣ ಪಡೆಯಲು ಹೊರಟಿದ್ದಾರೆ. ಈ ವರ್ಷ ಮಾತ್ರವಲ್ಲದೇ ಕಳೆದ ವರ್ಷ ಸಹ ಇದೇ ಸಂಸ್ಥೆಯ 307 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉಚಿತ ವೈದ್ಯಕೀಯ ಸೀಟು ಪಡೆದಿದ್ದರು. ಕಳೆದ 5 ವರ್ಷಗಳಲ್ಲಿ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ಕಲಿತು ಉಚಿತ ವೈದ್ಯಕೀಯ ಸೀಟು ಪಡೆದಿದ್ದಾರೆ!

ಈ ಕುರಿತು ನಾನುಗೌರಿ.ಕಾಂ ಶಾಹೀನ್ ಸಂಸ್ಥೆಯ ಸಿಇಓ ತೌಸೀಫ್ ಮಡಿಕೇರಿಯವರನ್ನು ಮಾತನಾಡಿಸಿತು. ಅವರು “ಕರ್ನಾಟಕದ 1 ಮತ್ತು 3ನೇ ರ್ಯಾಂಕ್ ಮತ್ತು ಅಖಿಲ ಭಾರತ ಮಟ್ಟದಲ್ಲಿ 9 ಮತ್ತು 85 ರ್ಯಾಂಕ್ ನಮ್ಮ ಸಂಸ್ಥೆಗೆ ಲಭಿಸಿದೆ. ನಮ್ಮದು ಕೇವಲ ಮುಸ್ಲಿಂ ವಿದ್ಯಾರ್ಥಿಗಳಿರುವ ಸಂಸ್ಥೆಯಲ್ಲ. ಬದಲಿಗೆ ಶೇ.50ರಷ್ಟು ಇತರ ಸಮುದಾಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ನಾವು ಉಚಿತ ಶಿಕ್ಷಣ ನೀಡುತ್ತಿದ್ದೇವೆ” ಎನ್ನುತ್ತಾರೆ.

ಬೀದರ್ ಹೈದರಾಬಾದ್ ಕರ್ನಾಟಕದ ವ್ಯಾಪ್ತಿಗೆ ಬರುವ ಹಿಂದುಳಿದ ಜಿಲ್ಲೆ. ಇಲ್ಲಿ ನಾವು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದ್ದೇವೆ. ಕೆಜಿಯಿಂದ ಪ್ರಾರಂಭವಾಗಿ ಪದವಿವರೆಗೂ ಶಿಕ್ಷಣ ನೀಡುತ್ತಿದ್ದೇವೆ. 7 ದೇಶಗಳ ಮತ್ತು ಭಾರತದ 25 ರಾಜ್ಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಬೀದರ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶಾಹೀನ್ ಸಂಸ್ಥೆಯು ದೇಶದ 12 ರಾಜ್ಯಗಳಲ್ಲಿ 44 ಕೇಂದ್ರಗಳನ್ನು ತೆರೆದು ಕಾರ್ಯನಿರ್ವಹಿಸುತ್ತಿದೆ. ಇಂತಹ ಗುಣಮಟ್ಟದ ಸಂಸ್ಥೆಯ ಮೇಲೆ ವೃತ್ತಿಮತ್ಸರದ ಕಾರಣಕ್ಕಾಗಿ ಅಪಪ್ರಚಾರ ಮಾಡಲಾಗಿತ್ತು. ಕೋಮುವಾದಿ ಹುನ್ನಾರ ನಡೆಸಲಾಯಿತು. ಆದರೆ ನಾವು ಭಾರತದ ಸಂವಿಧಾನ ಮತ್ತು ನ್ಯಾಯಾಲಯದ ಮೇಲೆ ನಂಬಿಕೆಯಿಟ್ಟಿದ್ದೇವೆ. ಶ್ರದ್ಧೆಯಿಂದ ಶಿಕ್ಷಣ ನೀಡುವ ಕೆಲಸ ಮುಂದುವರೆಸುತ್ತೇವೆ ಎಂದು ತೌಸೀಫ್ ಹೇಳಿದ್ದಾರೆ.

ಶಾಹೀನ್ ಶಾಲೆಯು ಇಂದು ಮತ್ತೆ NEET ಫಲಿತಾಂಶ ಕಾರಣಕ್ಕಾಗಿ ಚರ್ಚೆಗೆ ಬಂದಿದೆ. ಹಲವು ಬಡ ವಿದ್ಯಾರ್ಥಿಗಳು ಇಲ್ಲಿ ಉಚಿತ ಶಿಕ್ಷಣ ಪಡದು ತಮ್ಮ ಶೈಕ್ಷಣಿಕ ಕನಸುಗಳನ್ನು ನನಸು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ‌ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣದ ಜಾಮೀನು ವಿಚಾರಣೆ ಸಂದರ್ಭದಲ್ಲಿ ಬೀದರ್‌ನ ಸೆಷನ್ಸ್ ನ್ಯಾಯಾಲಯ ಮೇಲ್ನೋಟಕ್ಕೆ ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದು ಅಭಿಪ್ರಾಯಪಟ್ಟು ಎಲ್ಲಾ ಆರೋಪಿಗಳಿಗೂ ಜಾಮೀನು ನೀಡಿತ್ತು. ಕರ್ನಾಟಕದ ಖ್ಯಾತ ವಕೀಲರಾದ ಬಿಟಿ ವೆಂಕಟೇಶ್ ಶಾಲೆಯ ಪರ ವಾದಿಸಿದ್ದರು.


ಇದನ್ನೂ ಓದಿ: ಬೀದರ್ ಮಕ್ಕಳ ನಾಟಕ ಪ್ರಕರಣ: ಜನರೆದುರು ಮತ್ತಷ್ಟು ಬೆತ್ತಲಾದ ಸರ್ಕಾರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...