Homeಕರ್ನಾಟಕCAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ಕರ್ನಾಟಕದ 1 ಮತ್ತು 3ನೇ ರ್ಯಾಂಕ್ ಮತ್ತು ಅಖಿಲ ಭಾರತ ಮಟ್ಟದಲ್ಲಿ 9 ಮತ್ತು 85 ರ್ಯಾಂಕ್ ನಮ್ಮ ಸಂಸ್ಥೆಗೆ ಲಭಿಸಿದೆ. ನಮ್ಮದು ಕೇವಲ ಮುಸ್ಲಿಂ ವಿದ್ಯಾರ್ಥಿಗಳಿರುವ ಸಂಸ್ಥೆಯಲ್ಲ. ಬದಲಿಗೆ ಶೇ.50ರಷ್ಟು ಇತರ ಸಮುದಾಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ ಎನ್ನುತ್ತಾರೆ ಸಂಸ್ಥೆಯ ಸಿಇಓ ತೌಸೀಫ್ ಮಡಿಕೇರಿ.

- Advertisement -
- Advertisement -

ನಿನ್ನೆ NEET ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕದ ಬೀದರ್‌ನ ಕಾರ್ತಿಕ್ ರೆಡ್ಡಿ 720 ಅಂಕಗಳಿಗೆ 710 ಅಂಕ ಗಳಿಸಿ ಕರ್ನಾಟಕದ ನಂಬರ್ ಒನ್ ಟಾಪರ್‌ ಆಗಿದ್ದಲ್ಲದೇ ಅಖಿಲ ಭಾರತ ಮಟ್ಟದಲ್ಲಿ 9ನೇ ರ್ಯಾಂಕ್ ಪಡೆದು ಮಿಂಚಿದ್ದಾರೆ. ಅಲ್ಲದೇ ಅರ್ಬಜ್ ಅಹ್ಮದ್ ಎಂಬ ಲಾರಿ ಚಾಲಕನ ಮಗ 700 ಅಂಕಗಳೊಂದಿಗೆ ಕರ್ನಾಟಕದ 3ನೇ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಇದರಲ್ಲಿ ವಿಶೇಷ ಅಂಶವೆಂದರೆ ಇವರಿಬ್ಬರೂ ಕಲಿತಿದ್ದು ಬೀದರ್‌ ಶಾಹೀನ್ ಸಂಸ್ಥೆಯಲ್ಲಿ. ಈ ಸಂಸ್ಥೆ ವರ್ಷದ ಆರಂಭದಲ್ಲಿ ಭಾರೀ ಸುದ್ದಿ ಮಾಡಿದ್ದು ನಿಮಗೆ ನೆನಪಿರಬೇಕು. ಈ ಸಂಸ್ಥೆಯ ಮಕ್ಕಳು ಸಿಎಎ ವಿರೋಧಿ ನಾಟಕ ಮಾಡಿದರೆಂಬ ಕ್ಲುಲ್ಲಕ ಕಾರಣಕ್ಕಾಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ನಾಟಕದಲ್ಲಿ ಭಾಗವಹಿಸಿದ್ದ ಮಗುವಿನ ತಾಯಿಯನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಹಲವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪೊಲೀಸರು ಶಾಲೆಗೆ ನುಗ್ಗಿ ಚಿಕ್ಕಮಕ್ಕಳನ್ನು ವಿಚಾರಣೆಗೊಳಪಡಿಸಲಾಗಿತ್ತು. ತದನಂತರ ಹಲವರು ಇಡೀ ಸಂಸ್ಥೆ ವಿರುದ್ಧ ಅಪಪ್ರಚಾರ ಮಾಡಿದ್ದರು. ಹಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಬಿಡಿಸಿ ಬೇರೆಡೆಗೆ ವರ್ಗಾಹಿಸುವಂತೆ ಮಾಡಲಾಗಿತ್ತು.

ಅಂತ ಬೀದರ್‌ನ ಶಾಹೀನ್ ಶಾಲೆಯಲ್ಲಿ ಇಂದು 340ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ಉಚಿತ ವೈದ್ಯಕೀಯ ಶಿಕ್ಷಣ ಪಡೆಯಲು ಹೊರಟಿದ್ದಾರೆ. ಈ ವರ್ಷ ಮಾತ್ರವಲ್ಲದೇ ಕಳೆದ ವರ್ಷ ಸಹ ಇದೇ ಸಂಸ್ಥೆಯ 307 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉಚಿತ ವೈದ್ಯಕೀಯ ಸೀಟು ಪಡೆದಿದ್ದರು. ಕಳೆದ 5 ವರ್ಷಗಳಲ್ಲಿ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ಕಲಿತು ಉಚಿತ ವೈದ್ಯಕೀಯ ಸೀಟು ಪಡೆದಿದ್ದಾರೆ!

ಈ ಕುರಿತು ನಾನುಗೌರಿ.ಕಾಂ ಶಾಹೀನ್ ಸಂಸ್ಥೆಯ ಸಿಇಓ ತೌಸೀಫ್ ಮಡಿಕೇರಿಯವರನ್ನು ಮಾತನಾಡಿಸಿತು. ಅವರು “ಕರ್ನಾಟಕದ 1 ಮತ್ತು 3ನೇ ರ್ಯಾಂಕ್ ಮತ್ತು ಅಖಿಲ ಭಾರತ ಮಟ್ಟದಲ್ಲಿ 9 ಮತ್ತು 85 ರ್ಯಾಂಕ್ ನಮ್ಮ ಸಂಸ್ಥೆಗೆ ಲಭಿಸಿದೆ. ನಮ್ಮದು ಕೇವಲ ಮುಸ್ಲಿಂ ವಿದ್ಯಾರ್ಥಿಗಳಿರುವ ಸಂಸ್ಥೆಯಲ್ಲ. ಬದಲಿಗೆ ಶೇ.50ರಷ್ಟು ಇತರ ಸಮುದಾಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ನಾವು ಉಚಿತ ಶಿಕ್ಷಣ ನೀಡುತ್ತಿದ್ದೇವೆ” ಎನ್ನುತ್ತಾರೆ.

ಬೀದರ್ ಹೈದರಾಬಾದ್ ಕರ್ನಾಟಕದ ವ್ಯಾಪ್ತಿಗೆ ಬರುವ ಹಿಂದುಳಿದ ಜಿಲ್ಲೆ. ಇಲ್ಲಿ ನಾವು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದ್ದೇವೆ. ಕೆಜಿಯಿಂದ ಪ್ರಾರಂಭವಾಗಿ ಪದವಿವರೆಗೂ ಶಿಕ್ಷಣ ನೀಡುತ್ತಿದ್ದೇವೆ. 7 ದೇಶಗಳ ಮತ್ತು ಭಾರತದ 25 ರಾಜ್ಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಬೀದರ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶಾಹೀನ್ ಸಂಸ್ಥೆಯು ದೇಶದ 12 ರಾಜ್ಯಗಳಲ್ಲಿ 44 ಕೇಂದ್ರಗಳನ್ನು ತೆರೆದು ಕಾರ್ಯನಿರ್ವಹಿಸುತ್ತಿದೆ. ಇಂತಹ ಗುಣಮಟ್ಟದ ಸಂಸ್ಥೆಯ ಮೇಲೆ ವೃತ್ತಿಮತ್ಸರದ ಕಾರಣಕ್ಕಾಗಿ ಅಪಪ್ರಚಾರ ಮಾಡಲಾಗಿತ್ತು. ಕೋಮುವಾದಿ ಹುನ್ನಾರ ನಡೆಸಲಾಯಿತು. ಆದರೆ ನಾವು ಭಾರತದ ಸಂವಿಧಾನ ಮತ್ತು ನ್ಯಾಯಾಲಯದ ಮೇಲೆ ನಂಬಿಕೆಯಿಟ್ಟಿದ್ದೇವೆ. ಶ್ರದ್ಧೆಯಿಂದ ಶಿಕ್ಷಣ ನೀಡುವ ಕೆಲಸ ಮುಂದುವರೆಸುತ್ತೇವೆ ಎಂದು ತೌಸೀಫ್ ಹೇಳಿದ್ದಾರೆ.

ಶಾಹೀನ್ ಶಾಲೆಯು ಇಂದು ಮತ್ತೆ NEET ಫಲಿತಾಂಶ ಕಾರಣಕ್ಕಾಗಿ ಚರ್ಚೆಗೆ ಬಂದಿದೆ. ಹಲವು ಬಡ ವಿದ್ಯಾರ್ಥಿಗಳು ಇಲ್ಲಿ ಉಚಿತ ಶಿಕ್ಷಣ ಪಡದು ತಮ್ಮ ಶೈಕ್ಷಣಿಕ ಕನಸುಗಳನ್ನು ನನಸು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ‌ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣದ ಜಾಮೀನು ವಿಚಾರಣೆ ಸಂದರ್ಭದಲ್ಲಿ ಬೀದರ್‌ನ ಸೆಷನ್ಸ್ ನ್ಯಾಯಾಲಯ ಮೇಲ್ನೋಟಕ್ಕೆ ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದು ಅಭಿಪ್ರಾಯಪಟ್ಟು ಎಲ್ಲಾ ಆರೋಪಿಗಳಿಗೂ ಜಾಮೀನು ನೀಡಿತ್ತು. ಕರ್ನಾಟಕದ ಖ್ಯಾತ ವಕೀಲರಾದ ಬಿಟಿ ವೆಂಕಟೇಶ್ ಶಾಲೆಯ ಪರ ವಾದಿಸಿದ್ದರು.


ಇದನ್ನೂ ಓದಿ: ಬೀದರ್ ಮಕ್ಕಳ ನಾಟಕ ಪ್ರಕರಣ: ಜನರೆದುರು ಮತ್ತಷ್ಟು ಬೆತ್ತಲಾದ ಸರ್ಕಾರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...