Homeಕರ್ನಾಟಕCAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ಕರ್ನಾಟಕದ 1 ಮತ್ತು 3ನೇ ರ್ಯಾಂಕ್ ಮತ್ತು ಅಖಿಲ ಭಾರತ ಮಟ್ಟದಲ್ಲಿ 9 ಮತ್ತು 85 ರ್ಯಾಂಕ್ ನಮ್ಮ ಸಂಸ್ಥೆಗೆ ಲಭಿಸಿದೆ. ನಮ್ಮದು ಕೇವಲ ಮುಸ್ಲಿಂ ವಿದ್ಯಾರ್ಥಿಗಳಿರುವ ಸಂಸ್ಥೆಯಲ್ಲ. ಬದಲಿಗೆ ಶೇ.50ರಷ್ಟು ಇತರ ಸಮುದಾಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ ಎನ್ನುತ್ತಾರೆ ಸಂಸ್ಥೆಯ ಸಿಇಓ ತೌಸೀಫ್ ಮಡಿಕೇರಿ.

- Advertisement -
- Advertisement -

ನಿನ್ನೆ NEET ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕದ ಬೀದರ್‌ನ ಕಾರ್ತಿಕ್ ರೆಡ್ಡಿ 720 ಅಂಕಗಳಿಗೆ 710 ಅಂಕ ಗಳಿಸಿ ಕರ್ನಾಟಕದ ನಂಬರ್ ಒನ್ ಟಾಪರ್‌ ಆಗಿದ್ದಲ್ಲದೇ ಅಖಿಲ ಭಾರತ ಮಟ್ಟದಲ್ಲಿ 9ನೇ ರ್ಯಾಂಕ್ ಪಡೆದು ಮಿಂಚಿದ್ದಾರೆ. ಅಲ್ಲದೇ ಅರ್ಬಜ್ ಅಹ್ಮದ್ ಎಂಬ ಲಾರಿ ಚಾಲಕನ ಮಗ 700 ಅಂಕಗಳೊಂದಿಗೆ ಕರ್ನಾಟಕದ 3ನೇ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಇದರಲ್ಲಿ ವಿಶೇಷ ಅಂಶವೆಂದರೆ ಇವರಿಬ್ಬರೂ ಕಲಿತಿದ್ದು ಬೀದರ್‌ ಶಾಹೀನ್ ಸಂಸ್ಥೆಯಲ್ಲಿ. ಈ ಸಂಸ್ಥೆ ವರ್ಷದ ಆರಂಭದಲ್ಲಿ ಭಾರೀ ಸುದ್ದಿ ಮಾಡಿದ್ದು ನಿಮಗೆ ನೆನಪಿರಬೇಕು. ಈ ಸಂಸ್ಥೆಯ ಮಕ್ಕಳು ಸಿಎಎ ವಿರೋಧಿ ನಾಟಕ ಮಾಡಿದರೆಂಬ ಕ್ಲುಲ್ಲಕ ಕಾರಣಕ್ಕಾಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ನಾಟಕದಲ್ಲಿ ಭಾಗವಹಿಸಿದ್ದ ಮಗುವಿನ ತಾಯಿಯನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಹಲವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪೊಲೀಸರು ಶಾಲೆಗೆ ನುಗ್ಗಿ ಚಿಕ್ಕಮಕ್ಕಳನ್ನು ವಿಚಾರಣೆಗೊಳಪಡಿಸಲಾಗಿತ್ತು. ತದನಂತರ ಹಲವರು ಇಡೀ ಸಂಸ್ಥೆ ವಿರುದ್ಧ ಅಪಪ್ರಚಾರ ಮಾಡಿದ್ದರು. ಹಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಬಿಡಿಸಿ ಬೇರೆಡೆಗೆ ವರ್ಗಾಹಿಸುವಂತೆ ಮಾಡಲಾಗಿತ್ತು.

ಅಂತ ಬೀದರ್‌ನ ಶಾಹೀನ್ ಶಾಲೆಯಲ್ಲಿ ಇಂದು 340ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ಉಚಿತ ವೈದ್ಯಕೀಯ ಶಿಕ್ಷಣ ಪಡೆಯಲು ಹೊರಟಿದ್ದಾರೆ. ಈ ವರ್ಷ ಮಾತ್ರವಲ್ಲದೇ ಕಳೆದ ವರ್ಷ ಸಹ ಇದೇ ಸಂಸ್ಥೆಯ 307 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉಚಿತ ವೈದ್ಯಕೀಯ ಸೀಟು ಪಡೆದಿದ್ದರು. ಕಳೆದ 5 ವರ್ಷಗಳಲ್ಲಿ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ಕಲಿತು ಉಚಿತ ವೈದ್ಯಕೀಯ ಸೀಟು ಪಡೆದಿದ್ದಾರೆ!

ಈ ಕುರಿತು ನಾನುಗೌರಿ.ಕಾಂ ಶಾಹೀನ್ ಸಂಸ್ಥೆಯ ಸಿಇಓ ತೌಸೀಫ್ ಮಡಿಕೇರಿಯವರನ್ನು ಮಾತನಾಡಿಸಿತು. ಅವರು “ಕರ್ನಾಟಕದ 1 ಮತ್ತು 3ನೇ ರ್ಯಾಂಕ್ ಮತ್ತು ಅಖಿಲ ಭಾರತ ಮಟ್ಟದಲ್ಲಿ 9 ಮತ್ತು 85 ರ್ಯಾಂಕ್ ನಮ್ಮ ಸಂಸ್ಥೆಗೆ ಲಭಿಸಿದೆ. ನಮ್ಮದು ಕೇವಲ ಮುಸ್ಲಿಂ ವಿದ್ಯಾರ್ಥಿಗಳಿರುವ ಸಂಸ್ಥೆಯಲ್ಲ. ಬದಲಿಗೆ ಶೇ.50ರಷ್ಟು ಇತರ ಸಮುದಾಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ನಾವು ಉಚಿತ ಶಿಕ್ಷಣ ನೀಡುತ್ತಿದ್ದೇವೆ” ಎನ್ನುತ್ತಾರೆ.

ಬೀದರ್ ಹೈದರಾಬಾದ್ ಕರ್ನಾಟಕದ ವ್ಯಾಪ್ತಿಗೆ ಬರುವ ಹಿಂದುಳಿದ ಜಿಲ್ಲೆ. ಇಲ್ಲಿ ನಾವು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದ್ದೇವೆ. ಕೆಜಿಯಿಂದ ಪ್ರಾರಂಭವಾಗಿ ಪದವಿವರೆಗೂ ಶಿಕ್ಷಣ ನೀಡುತ್ತಿದ್ದೇವೆ. 7 ದೇಶಗಳ ಮತ್ತು ಭಾರತದ 25 ರಾಜ್ಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಬೀದರ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶಾಹೀನ್ ಸಂಸ್ಥೆಯು ದೇಶದ 12 ರಾಜ್ಯಗಳಲ್ಲಿ 44 ಕೇಂದ್ರಗಳನ್ನು ತೆರೆದು ಕಾರ್ಯನಿರ್ವಹಿಸುತ್ತಿದೆ. ಇಂತಹ ಗುಣಮಟ್ಟದ ಸಂಸ್ಥೆಯ ಮೇಲೆ ವೃತ್ತಿಮತ್ಸರದ ಕಾರಣಕ್ಕಾಗಿ ಅಪಪ್ರಚಾರ ಮಾಡಲಾಗಿತ್ತು. ಕೋಮುವಾದಿ ಹುನ್ನಾರ ನಡೆಸಲಾಯಿತು. ಆದರೆ ನಾವು ಭಾರತದ ಸಂವಿಧಾನ ಮತ್ತು ನ್ಯಾಯಾಲಯದ ಮೇಲೆ ನಂಬಿಕೆಯಿಟ್ಟಿದ್ದೇವೆ. ಶ್ರದ್ಧೆಯಿಂದ ಶಿಕ್ಷಣ ನೀಡುವ ಕೆಲಸ ಮುಂದುವರೆಸುತ್ತೇವೆ ಎಂದು ತೌಸೀಫ್ ಹೇಳಿದ್ದಾರೆ.

ಶಾಹೀನ್ ಶಾಲೆಯು ಇಂದು ಮತ್ತೆ NEET ಫಲಿತಾಂಶ ಕಾರಣಕ್ಕಾಗಿ ಚರ್ಚೆಗೆ ಬಂದಿದೆ. ಹಲವು ಬಡ ವಿದ್ಯಾರ್ಥಿಗಳು ಇಲ್ಲಿ ಉಚಿತ ಶಿಕ್ಷಣ ಪಡದು ತಮ್ಮ ಶೈಕ್ಷಣಿಕ ಕನಸುಗಳನ್ನು ನನಸು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ‌ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣದ ಜಾಮೀನು ವಿಚಾರಣೆ ಸಂದರ್ಭದಲ್ಲಿ ಬೀದರ್‌ನ ಸೆಷನ್ಸ್ ನ್ಯಾಯಾಲಯ ಮೇಲ್ನೋಟಕ್ಕೆ ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದು ಅಭಿಪ್ರಾಯಪಟ್ಟು ಎಲ್ಲಾ ಆರೋಪಿಗಳಿಗೂ ಜಾಮೀನು ನೀಡಿತ್ತು. ಕರ್ನಾಟಕದ ಖ್ಯಾತ ವಕೀಲರಾದ ಬಿಟಿ ವೆಂಕಟೇಶ್ ಶಾಲೆಯ ಪರ ವಾದಿಸಿದ್ದರು.


ಇದನ್ನೂ ಓದಿ: ಬೀದರ್ ಮಕ್ಕಳ ನಾಟಕ ಪ್ರಕರಣ: ಜನರೆದುರು ಮತ್ತಷ್ಟು ಬೆತ್ತಲಾದ ಸರ್ಕಾರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...