Homeಕರ್ನಾಟಕCAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

CAA ವಿರೋಧಿ ನಾಟಕಕ್ಕೆ ದೇಶದ್ರೋಹದ ಪ್ರಕರಣ ಎದುರಿಸಿದ್ದ ಶಾಹೀನ್ ಸಂಸ್ಥೆ ವಿದ್ಯಾರ್ಥಿ ಕರ್ನಾಟಕ NEET ಟಾಪರ್!

ಕರ್ನಾಟಕದ 1 ಮತ್ತು 3ನೇ ರ್ಯಾಂಕ್ ಮತ್ತು ಅಖಿಲ ಭಾರತ ಮಟ್ಟದಲ್ಲಿ 9 ಮತ್ತು 85 ರ್ಯಾಂಕ್ ನಮ್ಮ ಸಂಸ್ಥೆಗೆ ಲಭಿಸಿದೆ. ನಮ್ಮದು ಕೇವಲ ಮುಸ್ಲಿಂ ವಿದ್ಯಾರ್ಥಿಗಳಿರುವ ಸಂಸ್ಥೆಯಲ್ಲ. ಬದಲಿಗೆ ಶೇ.50ರಷ್ಟು ಇತರ ಸಮುದಾಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ ಎನ್ನುತ್ತಾರೆ ಸಂಸ್ಥೆಯ ಸಿಇಓ ತೌಸೀಫ್ ಮಡಿಕೇರಿ.

- Advertisement -
- Advertisement -

ನಿನ್ನೆ NEET ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕದ ಬೀದರ್‌ನ ಕಾರ್ತಿಕ್ ರೆಡ್ಡಿ 720 ಅಂಕಗಳಿಗೆ 710 ಅಂಕ ಗಳಿಸಿ ಕರ್ನಾಟಕದ ನಂಬರ್ ಒನ್ ಟಾಪರ್‌ ಆಗಿದ್ದಲ್ಲದೇ ಅಖಿಲ ಭಾರತ ಮಟ್ಟದಲ್ಲಿ 9ನೇ ರ್ಯಾಂಕ್ ಪಡೆದು ಮಿಂಚಿದ್ದಾರೆ. ಅಲ್ಲದೇ ಅರ್ಬಜ್ ಅಹ್ಮದ್ ಎಂಬ ಲಾರಿ ಚಾಲಕನ ಮಗ 700 ಅಂಕಗಳೊಂದಿಗೆ ಕರ್ನಾಟಕದ 3ನೇ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಇದರಲ್ಲಿ ವಿಶೇಷ ಅಂಶವೆಂದರೆ ಇವರಿಬ್ಬರೂ ಕಲಿತಿದ್ದು ಬೀದರ್‌ ಶಾಹೀನ್ ಸಂಸ್ಥೆಯಲ್ಲಿ. ಈ ಸಂಸ್ಥೆ ವರ್ಷದ ಆರಂಭದಲ್ಲಿ ಭಾರೀ ಸುದ್ದಿ ಮಾಡಿದ್ದು ನಿಮಗೆ ನೆನಪಿರಬೇಕು. ಈ ಸಂಸ್ಥೆಯ ಮಕ್ಕಳು ಸಿಎಎ ವಿರೋಧಿ ನಾಟಕ ಮಾಡಿದರೆಂಬ ಕ್ಲುಲ್ಲಕ ಕಾರಣಕ್ಕಾಗಿ ಶಾಲೆಯ ಮುಖ್ಯೋಪಾಧ್ಯಾಯಿನಿ ಮತ್ತು ನಾಟಕದಲ್ಲಿ ಭಾಗವಹಿಸಿದ್ದ ಮಗುವಿನ ತಾಯಿಯನ್ನು ಬಂಧಿಸಿ ಜೈಲಿನಲ್ಲಿಡಲಾಗಿತ್ತು. ಹಲವರ ಮೇಲೆ ಎಫ್‌ಐಆರ್‌ ದಾಖಲಾಗಿತ್ತು. ಪೊಲೀಸರು ಶಾಲೆಗೆ ನುಗ್ಗಿ ಚಿಕ್ಕಮಕ್ಕಳನ್ನು ವಿಚಾರಣೆಗೊಳಪಡಿಸಲಾಗಿತ್ತು. ತದನಂತರ ಹಲವರು ಇಡೀ ಸಂಸ್ಥೆ ವಿರುದ್ಧ ಅಪಪ್ರಚಾರ ಮಾಡಿದ್ದರು. ಹಲವು ಪೋಷಕರು ತಮ್ಮ ಮಕ್ಕಳನ್ನು ಶಾಲೆಬಿಡಿಸಿ ಬೇರೆಡೆಗೆ ವರ್ಗಾಹಿಸುವಂತೆ ಮಾಡಲಾಗಿತ್ತು.

ಅಂತ ಬೀದರ್‌ನ ಶಾಹೀನ್ ಶಾಲೆಯಲ್ಲಿ ಇಂದು 340ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದು ಉಚಿತ ವೈದ್ಯಕೀಯ ಶಿಕ್ಷಣ ಪಡೆಯಲು ಹೊರಟಿದ್ದಾರೆ. ಈ ವರ್ಷ ಮಾತ್ರವಲ್ಲದೇ ಕಳೆದ ವರ್ಷ ಸಹ ಇದೇ ಸಂಸ್ಥೆಯ 307 ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಉಚಿತ ವೈದ್ಯಕೀಯ ಸೀಟು ಪಡೆದಿದ್ದರು. ಕಳೆದ 5 ವರ್ಷಗಳಲ್ಲಿ 1200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಸಂಸ್ಥೆಯಲ್ಲಿ ಕಲಿತು ಉಚಿತ ವೈದ್ಯಕೀಯ ಸೀಟು ಪಡೆದಿದ್ದಾರೆ!

ಈ ಕುರಿತು ನಾನುಗೌರಿ.ಕಾಂ ಶಾಹೀನ್ ಸಂಸ್ಥೆಯ ಸಿಇಓ ತೌಸೀಫ್ ಮಡಿಕೇರಿಯವರನ್ನು ಮಾತನಾಡಿಸಿತು. ಅವರು “ಕರ್ನಾಟಕದ 1 ಮತ್ತು 3ನೇ ರ್ಯಾಂಕ್ ಮತ್ತು ಅಖಿಲ ಭಾರತ ಮಟ್ಟದಲ್ಲಿ 9 ಮತ್ತು 85 ರ್ಯಾಂಕ್ ನಮ್ಮ ಸಂಸ್ಥೆಗೆ ಲಭಿಸಿದೆ. ನಮ್ಮದು ಕೇವಲ ಮುಸ್ಲಿಂ ವಿದ್ಯಾರ್ಥಿಗಳಿರುವ ಸಂಸ್ಥೆಯಲ್ಲ. ಬದಲಿಗೆ ಶೇ.50ರಷ್ಟು ಇತರ ಸಮುದಾಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯ ಸಾವಿರಾರು ವಿದ್ಯಾರ್ಥಿಗಳಿಗೆ ನಾವು ಉಚಿತ ಶಿಕ್ಷಣ ನೀಡುತ್ತಿದ್ದೇವೆ” ಎನ್ನುತ್ತಾರೆ.

ಬೀದರ್ ಹೈದರಾಬಾದ್ ಕರ್ನಾಟಕದ ವ್ಯಾಪ್ತಿಗೆ ಬರುವ ಹಿಂದುಳಿದ ಜಿಲ್ಲೆ. ಇಲ್ಲಿ ನಾವು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದ್ದೇವೆ. ಕೆಜಿಯಿಂದ ಪ್ರಾರಂಭವಾಗಿ ಪದವಿವರೆಗೂ ಶಿಕ್ಷಣ ನೀಡುತ್ತಿದ್ದೇವೆ. 7 ದೇಶಗಳ ಮತ್ತು ಭಾರತದ 25 ರಾಜ್ಯಗಳ ವಿದ್ಯಾರ್ಥಿಗಳು ಇಲ್ಲಿ ಕಲಿಯುತ್ತಿದ್ದಾರೆ. ಬೀದರ್‌ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಶಾಹೀನ್ ಸಂಸ್ಥೆಯು ದೇಶದ 12 ರಾಜ್ಯಗಳಲ್ಲಿ 44 ಕೇಂದ್ರಗಳನ್ನು ತೆರೆದು ಕಾರ್ಯನಿರ್ವಹಿಸುತ್ತಿದೆ. ಇಂತಹ ಗುಣಮಟ್ಟದ ಸಂಸ್ಥೆಯ ಮೇಲೆ ವೃತ್ತಿಮತ್ಸರದ ಕಾರಣಕ್ಕಾಗಿ ಅಪಪ್ರಚಾರ ಮಾಡಲಾಗಿತ್ತು. ಕೋಮುವಾದಿ ಹುನ್ನಾರ ನಡೆಸಲಾಯಿತು. ಆದರೆ ನಾವು ಭಾರತದ ಸಂವಿಧಾನ ಮತ್ತು ನ್ಯಾಯಾಲಯದ ಮೇಲೆ ನಂಬಿಕೆಯಿಟ್ಟಿದ್ದೇವೆ. ಶ್ರದ್ಧೆಯಿಂದ ಶಿಕ್ಷಣ ನೀಡುವ ಕೆಲಸ ಮುಂದುವರೆಸುತ್ತೇವೆ ಎಂದು ತೌಸೀಫ್ ಹೇಳಿದ್ದಾರೆ.

ಶಾಹೀನ್ ಶಾಲೆಯು ಇಂದು ಮತ್ತೆ NEET ಫಲಿತಾಂಶ ಕಾರಣಕ್ಕಾಗಿ ಚರ್ಚೆಗೆ ಬಂದಿದೆ. ಹಲವು ಬಡ ವಿದ್ಯಾರ್ಥಿಗಳು ಇಲ್ಲಿ ಉಚಿತ ಶಿಕ್ಷಣ ಪಡದು ತಮ್ಮ ಶೈಕ್ಷಣಿಕ ಕನಸುಗಳನ್ನು ನನಸು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೇ‌ ಶಾಲೆಯ ವಿರುದ್ಧದ ದೇಶದ್ರೋಹ ಪ್ರಕರಣದ ಜಾಮೀನು ವಿಚಾರಣೆ ಸಂದರ್ಭದಲ್ಲಿ ಬೀದರ್‌ನ ಸೆಷನ್ಸ್ ನ್ಯಾಯಾಲಯ ಮೇಲ್ನೋಟಕ್ಕೆ ಇದು ದೇಶದ್ರೋಹದ ಪ್ರಕರಣ ಅಲ್ಲ ಎಂದು ಅಭಿಪ್ರಾಯಪಟ್ಟು ಎಲ್ಲಾ ಆರೋಪಿಗಳಿಗೂ ಜಾಮೀನು ನೀಡಿತ್ತು. ಕರ್ನಾಟಕದ ಖ್ಯಾತ ವಕೀಲರಾದ ಬಿಟಿ ವೆಂಕಟೇಶ್ ಶಾಲೆಯ ಪರ ವಾದಿಸಿದ್ದರು.


ಇದನ್ನೂ ಓದಿ: ಬೀದರ್ ಮಕ್ಕಳ ನಾಟಕ ಪ್ರಕರಣ: ಜನರೆದುರು ಮತ್ತಷ್ಟು ಬೆತ್ತಲಾದ ಸರ್ಕಾರ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...