Homeಮುಖಪುಟಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

ಮುತ್ತಯ್ಯ ಮರುಳೀಧರನ್ ಬಯೋಪಿಕ್: ತನ್ನ ವಿವಾದಾತ್ಮಕ ಹೇಳಿಕೆಗೆ ಸ್ಪಷ್ಟನೆ ನೀಡಿದ ಮಾಜಿ ಕ್ರಿಕೆಟಿಗ

ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ- ಭಾರತಿರಾಜಾ

- Advertisement -
- Advertisement -

ಮುತ್ತಯ್ಯ ಮುರುಳೀಧರನ್ ಬಯೋಪಿಕ್ “800” ತಮಿಳಿನಲ್ಲಿ ಸಿದ್ಧವಾಗುತ್ತಿದ್ದು, ಶ್ರೀಲಂಕಾದಲ್ಲಿನ ಮುಗ್ಧ ತಮಿಳರ ಸಾವನ್ನು ಮುತ್ತಯ್ಯ ಸಮರ್ಥಿಸಿಕೊಂಡಿದ್ದಾರೆ ಎಂಬ ಕಾರಣಕ್ಕೆ ತಮಿಳುನಾಡಿನಲ್ಲಿ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಮುತ್ತಯ್ಯ, “ಮುಗ್ಧರ ಹತ್ಯೆಯನ್ನು ಎಂದಿಗೂ ಸಮರ್ಥಿಸುವುದಿಲ್ಲ” ಎಂದಿದ್ದಾರೆ.

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರುಳೀಧರನ್ ಜೀವನ ಚರಿತ್ರೆ ಆಧಾರಿತ ಚಲನಚಿತ್ರದ ಫಸ್ಟ್‌ಲುಕ್ ಈ ವಾರ ಬಿಡುಗಡೆಯಾಗಿದ್ದು, ಪ್ರಮುಖ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸುತ್ತಿದ್ದಾರೆ. ಮುತ್ತಯ್ಯ ಮುರುಳೀಧರನ್ ಈ ಹಿಂದೆ ವಿವಾದಾತ್ಮಕ ರಾಜಕೀಯ ಪ್ರೇರಿತ ಹೇಳಿಕೆ ನೀಡಿದ್ದರಿಂದ ತಮಿಳುನಾಡಿನಲ್ಲಿ ಇವರ ಚಿತ್ರಕ್ಕೆ ವಿರೋಧ ವ್ಯಕ್ತವಾಗಿತ್ತು.

ಇದಕ್ಕೆ ಸ್ಪಷ್ಟನೆ ನೀಡಿದ ಮುತ್ತಯ್ಯ, “ಇದುವರೆಗೂ ಯುದ್ಧದಲ್ಲಿ ಎರಡೂ ಕಡೆ ಸಂಭವಿಸಿದ್ದ ಪ್ರಾಣಹಾನಿಗಳು 2009 ರಲ್ಲಿ ಯುದ್ಧ ಕೊನೆಗೊಳ್ಳುವುದರ ಮೂಲಕ ನಿಂತಿದ್ದರಿಂದ ಈ ದಿನವನ್ನು ನನ್ನ ಜೀವನದಲ್ಲಿ ಅತ್ಯಂತ ಸಂತೋಷದಾಯಕ ದಿನ ಎಂದು ಹೇಳಿದ್ದೆ. ಆದರೆ ಈಗ ಈ ಹೇಳಿಕೆಯನ್ನು ತಿರುಚಿ, ತಮಿಳರನ್ನು ಕೊಂದ ದಿನ ನನ್ನ ಜೀವನದಲ್ಲಿ ಸಂತೋಷದಾಯಕ ದಿನ ಎಂದು ಬಿಂಬಿಸಲಾಗುತ್ತಿದೆ. ಮುಗ್ಧರನ್ನು ಕೊಲ್ಲುವುದನ್ನು ನಾನು ಎಂದಿಗೂ ಬೆಂಬಲಿಸುವುದಿಲ್ಲ” ಎಂದು ಹೇಳಿದರು.

ಇದನ್ನೂ ಓದಿ: ಮುತ್ತಯ್ಯ ಮುರುಳೀಧರನ್ ಪಾತ್ರದಲ್ಲಿ ವಿಜಯ್ ಸೇತುಪತಿ: ‘800’ ಚಿತ್ರ ಬಾಯ್ಕಾಟ್ ಎಂದ ತಮಿಳಿಗರು!

“ಯುದ್ಧದ ನೋವು ನನಗೆ ತಿಳಿದಿದೆ. ನಾನು 30 ವರ್ಷಗಳಿಗೂ ಹೆಚ್ಚು ಕಾಲ ಯುದ್ಧದ ನಡುವೆಯೇ ಶ್ರೀಲಂಕಾದಲ್ಲಿ ಬೆಳೆದಿದ್ದೇನೆ. ನಾನು ಏಳು ವರ್ಷದವನಿದ್ದಾಗ ನನ್ನ ತಂದೆಯನ್ನು ಹತ್ಯೆ ಮಾಡಲಾಯಿತು. ಅನೇಕ ಬಾರಿ ನಾವು ಬೀದಿಯಲ್ಲಿರಬೇಕಾಯಿತು” ಎಂದು ಅವರು ಹೇಳಿದರು.

ಶ್ರೀಲಂಕನ್ ತಮಿಳರಿಗೆ ಅಲ್ಲಿ ತಾರತಮ್ಯವಿದೆ ಎಂದು ದಶಕಗಳಿಂದ ಆರೋಪಗಳಿವೆ. ಹಲವಾರು ವರ್ಷಗಳಿಂದ ಸಶಸ್ತ್ರ ಹೋರಾಟ ನಡೆಸಿದ ಸಶಸ್ತ್ರ ಲಂಕಾ ತಮಿಳು ಗುಂಪಾದ ಎಲ್‌ಟಿಟಿಇಯನ್ನು 2009 ರಲ್ಲಿ ಲಂಕಾ ಪಡೆಗಳು ಹತ್ತಿಕ್ಕಿದವು. ಯುದ್ಧ ಮುಗಿದಾಗ, ಬೃಹತ್ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಬಾಂಬ್ ಸ್ಫೋಟಗಳಲ್ಲಿ ಲಕ್ಷಕ್ಕೂ ಹೆಚ್ಚು ತಮಿಳು ನಾಗರಿಕರ ಸಾವುಗಳು ವರದಿಯಾಗಿದ್ದವು.

ಇದನ್ನೂ ಓದಿ: ನಾನು ಸರ್ವಾಧಿಕಾರಿಯಾಗಲು ಇಚ್ಚಿಸುತ್ತೇನೆ: ವಿಜಯ್ ದೇವರಕೊಂಡ ವಿವಾದಾತ್ಮಕ ಹೇಳಿಕೆ

“ಲಂಕಾ ತಮಿಳರು ಸಾಯುತ್ತಿರುವಾಗ ಮುತ್ತಯ್ಯ ಪಿಟೀಲು ನುಡಿಸುತ್ತಿದ್ದರು. ತಮ್ಮ ಜನರು ಸಾಯುವಾಗ ನಗುತ್ತಿರುವ ಅವರು ಕ್ರೀಡಾಪಟುವಾಗಿ ಸಾಧಿಸಿದರೆ ಏನು ಪ್ರಯೋಜನ? ಮುತ್ತಯ್ಯ ನಮ್ಮ ನಂಬಿಕೆಗೆ ದ್ರೋಹ ಬಗೆದಿದ್ದಾರೆ” ಎಂದು ಹಿರಿಯ ನಿರ್ದೇಶಕ ಭಾರತಿರಾಜ ಹೇಳಿದ್ದಾರೆ.

ಇದೇ ರೀತಿಯ ಅಭಿಪ್ರಾಯ ವ್ಯಕ್ತಪಡಿಸಿದ ಪಿಎಂಕೆ ಮುಖ್ಯಸ್ಥ ಡಾ.ಪಿ.ರಾಮದಾಸ್, “ವಿಜಯ್ ಸೇತುಪತಿ ಈ ಚಿತ್ರವನ್ನು ತಿರಸ್ಕರಿಸಿದರೆ, ಅವರು ತಮಿಳರ ಹೆಮ್ಮೆಯ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ; ಬದಲಿಗೆ ಅವರು ಅದನ್ನು ಮಾಡಿದರೆ, ನಮ್ಮ ವಿರೋಧವನ್ನು ಧಿಕ್ಕರಿಸಿದರೆ, ದ್ರೋಹಿಗಳ ಇತಿಹಾಸದಲ್ಲಿ ಸ್ಥಾನ ಪಡೆಯುತ್ತಾರೆ” ಎಂದು ಹೇಳಿದ್ದಾರೆ.

ಚಿತ್ರದ ನಿರ್ಮಾಪಕರಾದ ದಾರ್ ಮೋಷನ್ ಪಿಕ್ಚರ್ಸ್, “ಈ ಚಿತ್ರವು ಕೇವಲ ಕ್ರೀಡಾಪಟುವಿನ ಜೀವನಚರಿತ್ರೆಯಾಗಿದ್ದು, ಇದು ಶ್ರೀಲಂಕಾದಲ್ಲಿ ತಮಿಳರ ಹೋರಾಟಕ್ಕೆ ಹಿನ್ನಡೆಯಾಗಿಸುವ ಯಾವುದೇ ದೃಶ್ಯಗಳನ್ನು ಪ್ರದರ್ಶಿಸುವುದಿಲ್ಲ” ಎಂದು ಹೇಳಿದೆ.


ಇದನ್ನೂ ಓದಿ: ಎಡಿಟ್‌ ಆದ ವಿಡಿಯೋ ಟ್ವೀಟ್‌ ಮಾಡಿ ತೊಂದರೆಗೆ ಸಿಕ್ಕಿಕೊಂಡ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...