Homeಮುಖಪುಟಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ಬದಲಾವಣೆಯನ್ನು ತರುವುದೇ ನಮ್ಮ ಸಂಕಲ್ಪ. ಜೆಡಿಯು-ಬಿಜೆಪಿ ಸೇರಿಕೊಂಡು ಬಿಹಾರದ ಬೆನ್ನಿಗೆ ಚೂರಿ ಹಾಕಿವೆ. ಪ್ರಧಾನಿ ನರೇಂದ್ರ ಮೋದಿ 2015ರಲ್ಲಿ ನೀಡಿದ ಭರವಸೆಗಳು ಹುಸಿಯಾಗಿವೆ. ಬದಲಿಗೆ ಅಪರಾಧ, ನಿರುದ್ಯೋಗ ದರ ಹೆಚ್ಚಾಗಿವೆ.

- Advertisement -
- Advertisement -

ಬಿಹಾರ ಚುನಾವಣೆಯ ಭಾಗವಾಗಿ ಮಹಾಘಟಬಂಧನ್ ಪಕ್ಷಗಳಾದ ಕಾಂಗ್ರೆಸ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ವಿರೋಧ ಪಕ್ಷಗಳ ಒಕ್ಕೂಟವು ಇಂದು ತಮ್ಮ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರಾಜ್ಯಕ್ಕೆ ವಿಶೇಷ ವರ್ಗದ ಸ್ಥಾನಮಾನವನ್ನು ನೀಡುವುದಕ್ಕೆ ಟ್ರಂಪ್ ಬರುತ್ತಾರೆಯೇ ಎಂದು ತೇಜಸ್ವಿ ಯಾದವ್ ಬಿಜೆಪಿಯ ಕಾಲೆಳೆದಿದ್ದಾರೆ.

ಈ ಪ್ರಾಣಾಳಿಕೆಯಲ್ಲಿ, ತಾವು ಅಧಿಕಾರಕ್ಕೆ ಬಂದರೆ, 10 ಲಕ್ಷ ಉದ್ಯೋಗಳನ್ನು ಸೃಷ್ಟಿ ಮಾಡಿ, ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುತ್ತೇವೆ ಎಂದು ಆಶ್ವಾಸನೆ ನೀಡಲಾಗಿದೆ.

ಫೆಬ್ರವರಿಯಲ್ಲಿ ಅಮೆರಿಕಾ ಅಧ್ಯಕ್ಷರ ಅದ್ಧೂರಿ ಭೇಟಿಯನ್ನು ಉಲ್ಲೇಖಿಸಿ ಮಾತನಾಡಿದ ಮೈತ್ರಿಕೂಟದ ಅಭ್ಯರ್ಥಿ ಮತ್ತು ಆರ್‌ಜೆಡಿ ನಾಯಕರಾದ ತೇಜಸ್ವಿ ಯಾದವ್, “ಮುಖ್ಯಮಂತ್ರಿ ನಿತೀಶ್ ಕುಮಾರ್ ಕಳೆದ 15 ವರ್ಷಗಳಿಂದ ರಾಜ್ಯವನ್ನು ಆಳುತ್ತಿದ್ದಾರೆ. ಆದರೆ ರಾಜ್ಯಕ್ಕೆ ಇನ್ನೂ ವಿಶೇಷ ವರ್ಗದ ಸ್ಥಾನಮಾನ ನೀಡಿಲ್ಲ. ಇದನ್ನು ಅಮೇರಿಕಾ ಅಧ್ಯಕ್ಷ ಟ್ರಂಪ್ ಬಂದು ಅದನ್ನು ಕೊಡುವುದಿಲ್ಲ” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಯುಪಿ ಉಪಚುನಾವಣೆ: ಹೆಚ್ಚುತ್ತಿರುವ ಅಪರಾಧಗಳ ನೆರಳಲ್ಲಿ ಮತದಾರರು ಯಾರ ಕೈಹಿಡಿಯಲಿದ್ದಾರೆ?

ತಮ್ಮ ಒಕ್ಕೂಟದ ಪ್ರಣಾಳಿಕೆಯನ್ನು ಉಲ್ಲೇಖಿಸುತ್ತಾ, “ಬದಲಾವಣೆಯನ್ನು ತರುವುದೇ ನಮ್ಮ ಸಂಕಲ್ಪ. ಜೆಡಿಯು-ಬಿಜೆಪಿ ಸೇರಿಕೊಂಡು ಬಿಹಾರದ ಬೆನ್ನಿಗೆ ಚೂರಿ ಹಾಕಿವೆ. ಪ್ರಧಾನಿ ನರೇಂದ್ರ ಮೋದಿ 2015ರಲ್ಲಿ ನೀಡಿದ ಭರವಸೆಗಳು ಹುಸಿಯಾಗಿದ್ದು, ಇನ್ನೂ ಮುಚ್ಚಿಯೇ ಇರುವ ಮೋತಿಹಾರಿ ಮಿಲ್‌ನ ಸಕ್ಕರೆಯಿಂದ ಟೀ ಕುಡಿಯಲಿಲ್ಲ, ಅಪರಾಧ ಮತ್ತು ನಿರುದ್ಯೋಗ ದರ ಹೆಚ್ಚಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಬಿಹಾರ ಸಕ್ಕರೆ ಕಾರ್ಖಾನೆಗಳು, ಸೆಣಬಿನ ಗಿರಣಿಗಳು, ಪೇಪರ್ ಗಿರಣಿಗಳು ಮುಚ್ಚಲ್ಪಟ್ಟಿರುವುದನ್ನು ಇಂದಿಗೂ ನೀವು ನೋಡಬಹುದು. ಇದುವರೆಗೂ ಯಾವುದೇ ಆಹಾರ ಸಂಸ್ಕರಣಾ ಘಟಕಗಳು ಸ್ಥಾಪನೆಯಾಗಿಲ್ಲ” ಎಂದು ಹೇಳುತ್ತಾ, ಭಾರತವು ಪ್ರಧಾನಿ ಮೋದಿ ಅವರೊಂದಿಗೆ ಇರುವಂತೆ ರಾಜ್ಯವು ನಿತೀಶ್ ಕುಮಾರ್ ಅವರೊಂದಿಗೆ ಸುರಕ್ಷಿತವಾಗಿದೆ ಎನ್ನುವ ಬಿಜೆಪಿ ಮುಖ್ಯಸ್ಥ ಜೆ.ಪಿ.ನಡ್ಡಾ ಅವರ ಹೇಳಿಕೆಯ ಉಲ್ಲೇಖದ ‘ಡಬಲ್ ಎಂಜಿನ್ ಸರ್ಕಾರ’ವನ್ನು ತರಾಟೆಗೆ ತೆಗೆದುಕೊಂಡರು.

ಇಂದು ನಡೆದ ಪ್ರಣಾಳಿಕೆ ಬಿಡುಗಡೆಯಲ್ಲಿ, ಅಭಿವೃದ್ಧಿಯ ಕೊರತೆಯಿಂದಾಗಿ ಬಿಹಾರದ ಜನರು ಕೋಪಗೊಂಡಿದ್ದಾರೆ. ಅವರು ನಮ್ಮನ್ನು ಅಧಿಕಾರಕ್ಕೆ ತಂದರೆ, ಮೊದಲ ಕ್ಯಾಬಿನೆಟ್ ಸಭೆಯಲ್ಲಿ 10 ಲಕ್ಷ ಸರ್ಕಾರಿ ಉದ್ಯೋಗಗಳನ್ನು ನೀಡುವುದಾಗಿ ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದರು. ಮುಂದುವರಿದು, ಪ್ರವಾಹದಿಂದ ಎಷ್ಟು ಜನರು ಹಾನಿಗೊಳಗಾಗಿದ್ದಾರೆಂದು ನೋಡಲು ಕೇಂದ್ರ ತಂಡವು ಇಲ್ಲಿಯವರೆಗೆ ರಾಜ್ಯಕ್ಕೆ ಭೇಟಿ ನೀಡಿಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ’ಯುಪಿ, ಬಿಹಾರದಂತೆ ಪ.ಬಂಗಾಳವೂ ಮಾಫಿಯಾ ರಾಜ್ಯವಾಗುತ್ತಿದೆ’- ಬಿಜೆಪಿ ನಾಯಕ

ಮೈತ್ರಿಕೂಟವು ಚುನಾವಣೆಯಲ್ಲಿ ಗೆದ್ದರೆ, ಆರ್‌ಜೆಡಿಯ ತೇಜಸ್ವಿ ಯಾದವ್ ಅವರ ನೇತೃತ್ವದಲ್ಲಿ ಕಳೆದ ತಿಂಗಳು ಕೇಂದ್ರ ಸರ್ಕಾರ ಜಾರಿಗೆ ತಂದ ಮೂರು ಕೃಷಿ ವಿರೋಧಿ ಕಾನೂನುಗಳನ್ನು ಮೊದಲ ವಿಧಾನಸಭಾ ಅಧಿವೇಶನದಲ್ಲಿಯೇ ರದ್ದುಗೊಳಿಸುವ ಮಸೂದೆಯನ್ನು ಅಂಗೀಕರಿಸಲಿದೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

ಈ ವಾರದ ಆರಂಭದಲ್ಲಿ, “ಮಹಾಘಟಬಂಧನ್” ಮೈತ್ರಿಕೂಟದ ಪಕ್ಷಗಳು ಬಿಹಾರ ವಿಧಾನಸಭೆಯ 243 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿರುವ ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದವು. ಬಿಹಾರದಲ್ಲಿ ಅಕ್ಟೋಬರ್ 28 ರಿಂದ ಮೂರು ಹಂತಗಳಲ್ಲಿ ನಡೆಯಲಿದ್ದು, ಫಲಿತಾಂಶಗಳನ್ನು ನವೆಂಬರ್ 10 ರಂದು ಘೋಷಿಸಲಾಗುತ್ತದೆ.


ಇದನ್ನೂ ಓದಿ: ಬಿಹಾರ ಚುನಾವಣೆ: ಎನ್‌ಡಿಎ ಮೈತ್ರಿ ತೊರೆದ ಚಿರಾಗ್ ಪಾಸ್ವಾನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...