Homeಮುಖಪುಟಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

ಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

- Advertisement -
- Advertisement -

ಅತ್ಯಾಚಾರ ಮತ್ತು ದೌರ್ಜನ್ಯಗಳನ್ನು ತಪ್ಪಿಸಲು ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ ನೀಡಲು ಗುಜರಾತ್‌‌ನ ಮೆಹ್ಸಾನಾದ ಸ್ವಯಂಸೇವಕ ಗುಂಪು ನಿರ್ಧರಿಸಿದ್ದು, ಅಕ್ಟೋಬರ್ 20 ರಂದು ಮೆಹ್ಸಾನಾ ಪಟ್ಟಣದಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಲು ನಿರ್ಧರಿಸಲಾಗಿದೆ.

ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ನೇತೃತ್ವದ ಸಂಘಟನೆಯಾದ ರಾಷ್ಟ್ರೀಯ ದಲಿತ ಅಧಿಕಾರ್‌ ಮಂಚ್ (RDAM) ನ ಮೆಹ್ಸಾನಾ ಘಟಕದಿಂದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇದನ್ನೂ ಓದಿ: ’ಓ ಭರತವರ್ಷದ ನಾಯಕರೆ, ಅವಮಾನದಲ್ಲೇ ಮುಳುಗಿ ಸಾಯಿರಿ’; ಜಿಗ್ನೇಶ್ ಮೇವಾನಿ ಆಕ್ರೋಶ

“ದೇಶದ ವಿವಿಧ ಭಾಗಗಳಲ್ಲಿ ಹುಡುಗಿಯರ ಮೇಲೆ, ವಿಶೇಷವಾಗಿ ದಲಿತರ ಮೇಲೆ ಹಲ್ಲೆ ಪ್ರಕರಣಗಳು ಸಾಕಷ್ಟು ನಡೆದಿವೆ. ಆದ್ದರಿಂದ, ಇಂತಹ ಘಟನೆಗಳನ್ನು ತಪ್ಪಿಸಲು ಹುಡುಗಿಯರಿಗೆ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ತರಬೇತಿ ನೀಡಲಾಗುತ್ತದೆ ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ, ಮೆಹ್ಸಾನಾದಲ್ಲಿ ಬಾಲಕಿಯರಿಗೆ ಸ್ವರಕ್ಷಣೆ ತರಬೇತಿ ನೀಡಲು ಪ್ರಾಯೋಗಿಕ ಆಧಾರದ ಮೇಲೆ ನಾವು ಇದನ್ನು ಪ್ರಾರಂಭಿಸುತ್ತಿದ್ದೇವೆ. ದಲಿತ ಹುಡುಗಿಯರು ನಮ್ಮ ಆದ್ಯತೆ. ಆದಾಗ್ಯೂ, ತರಬೇತಿಯು ಎಲ್ಲಾ ಧರ್ಮ ಮತ್ತು ಜಾತಿಯ ಹುಡುಗಿಯರಿಗೆ ಮುಕ್ತವಾಗಿದೆ” ಎಂದು RDAM ಮೆಹ್ಸಾನಾದ ಪದಾಧಿಕಾರಿ ಕೌಶಿಕ್ ಪರ್ಮಾರ್ ಹೇಳಿದ್ದಾರೆ.

“ಇದು 15 ದಿನಗಳ ತರಬೇತಿಯಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಂದ 100 ರೂ.ಗಳ ಟೋಕನ್ ಶುಲ್ಕ ವಿಧಿಸಲು ನಾವು ಯೋಜಿಸುತ್ತಿದ್ದೇವೆ. 15 ದಿನಗಳ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಈ ಶುಲ್ಕವನ್ನು ಹುಡುಗಿಯರಿಗೆ ಹಿಂದಿರುಗಿಸಲಾಗುತ್ತದೆ” ಎಂದು ಪರ್ಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಚಂದ್ರಯಾನ ಇರಲಿ; ಒಳಚರಂಡಿ ಸ್ವಚ್ಛಗೊಳಿಸುವ ತಂತ್ರಜ್ಞಾನ ಎಲ್ಲಿದೆ? ಗುಜರಾತ್ ಸರಕಾರಕ್ಕೆ ಜಿಗ್ನೇಶ್ ಮೇವಾನಿ ಪ್ರಶ್ನೆ

ತರಬೇತಿ ನೀಡಲು ವೃತ್ತಿಪರ ಟೇಕ್ವಾಂಡೋ ಸಮರ ಕಲಾ ಬೋಧಕರಾದ ಮೆಹ್ಸಾನಾದ ದೀಪಕ್ ಚಾವ್ಡಾ ಒಪ್ಪಿಕೊಂಡಿದ್ದಾರೆ ಎಂದು ಪರ್ಮಾರ್‌ ಹೇಳಿದ್ದಾರೆ. ದೀಪಕ್ ಚಾವ್ಡಾ ಈಗಾಗಲೇ ಮೆಹ್ಸಾನಾದ ವಿವಿಧ ಕಡೆ ಸಮರ ಕಲಾ ತರಬೇತಿಯನ್ನು ನೀಡುತ್ತಿದ್ದು, ವರ್ಷಗಳಿಂದ ಬಾಲಕಿಯರಿಗೆ ಆತ್ಮರಕ್ಷಣೆಗಾಗಿ ತರಬೇತಿ ನೀಡುತ್ತಿದ್ದಾರೆ.

“ಪ್ರತಿಯೊಬ್ಬ ಹುಡುಗಿಯೂ ತನ್ನನ್ನು ತಾನು ರಕ್ಷಿಸಿಕೊಳ್ಳಲು ಮೂಲಭೂತ ಕೌಶಲ್ಯಗಳನ್ನು ಹೊಂದಿರಬೇಕೆಂದು ನಾನು ನಂಬುತ್ತೇನೆ. ಹಾಗಾಗಿ, ನಾನು ಬಹಳ ಹಿಂದಿನಿಂದಲೂ ಹುಡುಗಿಯರಿಗೆ ಸ್ವರಕ್ಷಣೆಗಾಗಿ ಉಚಿತ ತರಬೇತಿಯನ್ನು ನೀಡುತ್ತಿದ್ದೇನೆ. ನಾನು ಟೇಕ್ವಾಂಡೋದಲ್ಲಿ ಪರಿಣಿತನಾಗಿದ್ದು, ಹುಡುಗಿಯರಿಗೆ ಮೂಲಭೂತ ಸ್ವರಕ್ಷಣೆ ತಂತ್ರಗಳಲ್ಲಿ ತರಬೇತಿ ನೀಡಲಾಗುವುದು. ಈ ಪ್ರಯೋಗವು ಯಶಸ್ವಿಯಾದರೆ, ನಾವು ಅದನ್ನು ಗುಜರಾತ್‌ನ ಇತರ ಭಾಗಗಳಿಗೂ ವಿಸ್ತರಿಸಬಹುದು” ಎಂದು ಚಾವ್ಡಾ ಹೇಳಿದ್ದಾರೆ.

ಇದನ್ನೂ ಓದಿ: ಗುಜರಾತ್‌ ಮಾಡೆಲ್ ಧ್ವಂಸ ಮಾಡಬೇಕೆಂದು ಜಿಗ್ನೇಶ್‌ ಮೇವಾನಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...