Homeಮುಖಪುಟವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಬಂಗಾಳದ ದುರ್ಗಾ ಪ್ರತಿಮೆಗಳು/ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಈ ಪ್ರತಿಮೆಗಳನ್ನು, ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳನ್ನೂ ಧ್ವನಿಸುವಂತೆ ನಿರ್ಮಿಸುತ್ತಾರೆ.

- Advertisement -
- Advertisement -

ಕಲೆಯೆನ್ನುವುದು ಆಯಾ ಸಮಾಜದ ತಳವರ್ಗದ ಸಮಸ್ಯೆಗಳನ್ನ ಪ್ರತಿನಿಧಿಸದಿದ್ದರೆ, ಖಂಡಿತವಾಗಿಯೂ ಅದು ವ್ಯರ್ಥ ಎಂದು ಖ್ಯಾತ ವಿಮರ್ಶಕ, ಚಿಂತಕ ಮತ್ತು ಕಲಾವಿದ ಸ್ತಾನಿಸ್ಲಾವ್‌ಸ್ಕಿ ಹೇಳಿದ್ದಾರೆ. ಇದಕ್ಕೆ ನುರಾರು ಉದಾಹರಣೆಗಳು (ಸಂಗೀತ, ನಾಟಕ, ಸಾಹಿತ್ಯ, ಚಿತ್ರಕಲೆ, ಸಿನಿಮಾ ಮುಂತಾದವು) ನಮ್ಮ ಮುಂದಿವೆ. ಆದರೆ, ಪ್ರಸ್ತುತದ ಝ್ವಲಂತ ಉದಾಹರಣೆಯೊಂದಿದೆ. ನವರಾತ್ರಿ ಉತ್ಸವ ಮತ್ತು ದುರ್ಗಾ ಮಾತೆಯ ಆರಾಧನೆಯನ್ನು ಕಲ್ಕತ್ತಾ ಭಾಗದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಉತ್ಸವದಲ್ಲಿ ದುರ್ಗಾ ಮಾತೆ ವಿಗ್ರಹವನ್ನು ಪ್ರತಿಷ್ಟಾಪನೆ ಮಾಡಿ ಪೂಜಿಸಲಾಗುತ್ತದೆ. ಈ ಬಾರಿ ಕಲಾವಿದರೊಬ್ಬರ ಕೈಚಳಕದಿಂದ ಪ್ರಸ್ತುತ ಕೊರೊನಾ ಕಾಲದಲ್ಲಿ ವಲಸೆ ಕಾರ್ಮಿಕರ ತಲ್ಲಣಗಳನ್ನು ತನ್ನ ಸೃಜನಶೀಲ ಚಿಂತನೆಯ ಮೂಲಕ ಮಾಗಿಸಿ, ದುರ್ಗಾ ಮಾತೆಯನ್ನು ವಲಸೆ ಕಾರ್ಮಿಕ ಮಹಿಳೆಯೊಬ್ಬಳಿಗೆ ಹೋಲಿಸುವಂತಹ ಪ್ರತಿಮೆಯೊಂದನ್ನು ನಿರ್ಮಿಸಿದ್ದಾರೆ.

ದುರ್ಗಾಮಾತೆಯನ್ನು ವಲಸೆಗಾರ ಮಹಿಳೆಗೆ ಹೋಲಿಸಿ ರಚಿಸಿರುವ ದುರ್ಗಾ ಮಾತೆ ಪ್ರತಿಮೆಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಖ್ಯಾತ ಚಿತ್ರಕಲಾವಿದ ಬಿಕಾಶ್ ಭಟ್ಟಾಚಾರ್ಯ ಅವರ ವರ್ಣಚಿತ್ರಗಳಿಂದ ಪ್ರೇರೇಪಿತವಾಗಿ ಇದನ್ನು ರಚಿಸಿದ್ದೇನೆ ಎಂದು ಬಂಗಾಳದ ಕಲಾವಿದ ಪಲ್ಲಬ್ ಭೌಮಿಕ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟ ಅನುಭವಿಸಿದ್ದರು. ಹಾಗಾಗಿ ಅವರನ್ನು ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ದುರ್ಗಾ ಮಾತೆಯನ್ನು ‘ವಲಸೆ ತಾಯಿ’ಯಾಗಿ ರಚಿಸಿರುವ ಈ ಪ್ರತಿಮೆಯನ್ನು ಮುಂಬರುವ ದುರ್ಗಾ ಪೂಜಾ ಉತ್ಸವದ ಸಂದರ್ಭದಲ್ಲಿ ಕೋಲ್ಕತ್ತಾದ ಬರಿಷಾ ಕ್ಲಬ್ ಪಂಡಲ್‌ನಲ್ಲಿ ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

The painting that inspired the ‘migrant’ Durga idol

ಬಿಕಾಶ್ ಭಟ್ಟಾಚಾರ್ಯ ಚಿತ್ರಿಸಿರುವ, ದುರ್ಗಾ ಮಾತೆಯ ಭಂಗಿಯಂತೆಯೇ ನಿಂತಿರುವ ‘ವಲಸೆಗಾರ ಮಹಿಳೆ’ಯೊಬ್ಬಳ ವರ್ಣಚಿತ್ರದಿಂದ ತಾನು ಪ್ರೇರಿತನಾಗಿದ್ದೆ ಎಂದ ಪಲ್ಲಬ್ ಭೌಮಿಕ್, “ಪ್ರತಿಮೆಯನ್ನು ರಚಿಸಲು ತನಗೆ ಒಂದು ಉಲ್ಲೇಖ ಬೇಕು. ಅದು ಈ ಚಿತ್ರದಿಂದ ನನಗೆ ಸಿಕ್ಕಿದೆ. ಈ ಪ್ರತಿಮೆ ಪೂರ್ಣಗೊಳ್ಳಲು 2 ತಿಂಗಳು ಸಮಯ ತೆಗೆದುಕೊಂಡಿದೆ” ಎಂದು ಹೇಳಿದರು. ಪಲ್ಲಬ್ ಭೌಮಿಕ್ ಪ್ರತಿಮೆ ನಿರ್ಮಾಣದ ಮುಖ್ಯ ಕಲಾವಿದರಾಗಿ ಕೆಲಸ ಮಾಡಿದ್ದು, 4-5 ಕಲಾವಿದರ ತಂಡವು ಇದಕ್ಕೆ ನೆರವು ನೀಡಿತು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಬಿಕಾಶ್ ಭಟ್ಟಾಚಾರ್ಯ ಬಂಗಾಳದ ಪ್ರಸಿದ್ಧ ವರ್ಣಚಿತ್ರಕಾರ. ಅವರ ವರ್ಣಚಿತ್ರಗಳು ಮಧ್ಯಮ ವರ್ಗದ ಬಂಗಾಳಿಗಳ ಜೀವನವನ್ನು ಪ್ರತಿಬಿಂಬಿಸುತ್ತವೆ.

ಈ ಪ್ರತಿಮೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಪಲ್ಲಬ್ ಭೌಮಿಕ್ ಇದನ್ನು ದೇವರ ಆಶೀರ್ವಾದ, ತಮ್ಮ ಕೆಲಸಕ್ಕೆ ಶೇಕಡಾ 100 ರಷ್ಟು ತೊಡಗಿಸಿಕೊಂಡಿದ್ದರ ಫಲ ಇದು ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ಈ ಪ್ರತಿಮೆಯನ್ನು ಟ್ವಿಟರ್‌ ಮೂಮೆಂಟ್ಸ್‌ ಇಂಡಿಯಾ, ತನ್ನ ಖಾತೆಯಲ್ಲಿ ಹಂಚಿಕೊಂಡಿದೆ.

ಹಲವಾರು ಗಣ್ಯರು ಮತ್ತು ಪ್ರಖ್ಯಾತ ವ್ಯಕ್ತಿಗಳು ಪ್ರತಿಮೆಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ…

ನಟಿ ಊರ್ಮಿಳಾ ಮಾತೋಂಡ್ಕರ್ ಟ್ವೀಟ್ ಮಾಡಿ, “ಜನರು ನಿಮಗೆ ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ. ಪದಗಳು ಮತ್ತು ಆಲೋಚನೆಗಳು ಜಗತ್ತನ್ನು ಬದಲಾಯಿಸಬಹುದು. ಬಂಗಾಳ ಕಲಾವಿದ ಪಲ್ಲಾಬ್ ಭೌಮಿಕ್ ಅವರು ರಚಿಸಿರುವ #ಮಾ ದುರ್ಗಾ ಪ್ರತಿಮೆ ಅತ್ಯಂತ ಅದ್ಭುತ ಚಿತ್ರಣ. ಮಾ ದುರ್ಗಾ ವಲಸೆಗಾರಳಾಗಿ ತನ್ನ ಮಕ್ಕಳೊಂದಿಗೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಇತಿಹಾಸಕಾರ-ಪತ್ರಕರ್ತ ಹಿಂಡೋಲ್ ಸೇನ್‌ಗುಪ್ತಾ ಟ್ವೀಟ್ ಮಾಡಿ, “ಬಂಗಾಳದ ದುರ್ಗಾ ಪ್ರತಿಮೆಗಳು ಅಥವಾ ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಇವುಗಳನ್ನು ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆಯೂ ನಿರ್ಮಿಸುತ್ತಾರೆ. ಈ ಬಾರಿ ಮಾ ದುರ್ಗಾ ವಲಸಿಗರ ರೂಪದಲ್ಲಿ ಕಾಣಿಸಿಕೊಂಡಿದ್ದಾಳೆ” ಎಂದು ಬರೆದುಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಪ್ರತಿಮೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದು, ಇದು ವೈರಲ್ ಆಗುತ್ತಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...