Homeಮುಖಪುಟವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ಬಂಗಾಳದ ದುರ್ಗಾ ಪ್ರತಿಮೆಗಳು/ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಈ ಪ್ರತಿಮೆಗಳನ್ನು, ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳನ್ನೂ ಧ್ವನಿಸುವಂತೆ ನಿರ್ಮಿಸುತ್ತಾರೆ.

- Advertisement -
- Advertisement -

ಕಲೆಯೆನ್ನುವುದು ಆಯಾ ಸಮಾಜದ ತಳವರ್ಗದ ಸಮಸ್ಯೆಗಳನ್ನ ಪ್ರತಿನಿಧಿಸದಿದ್ದರೆ, ಖಂಡಿತವಾಗಿಯೂ ಅದು ವ್ಯರ್ಥ ಎಂದು ಖ್ಯಾತ ವಿಮರ್ಶಕ, ಚಿಂತಕ ಮತ್ತು ಕಲಾವಿದ ಸ್ತಾನಿಸ್ಲಾವ್‌ಸ್ಕಿ ಹೇಳಿದ್ದಾರೆ. ಇದಕ್ಕೆ ನುರಾರು ಉದಾಹರಣೆಗಳು (ಸಂಗೀತ, ನಾಟಕ, ಸಾಹಿತ್ಯ, ಚಿತ್ರಕಲೆ, ಸಿನಿಮಾ ಮುಂತಾದವು) ನಮ್ಮ ಮುಂದಿವೆ. ಆದರೆ, ಪ್ರಸ್ತುತದ ಝ್ವಲಂತ ಉದಾಹರಣೆಯೊಂದಿದೆ. ನವರಾತ್ರಿ ಉತ್ಸವ ಮತ್ತು ದುರ್ಗಾ ಮಾತೆಯ ಆರಾಧನೆಯನ್ನು ಕಲ್ಕತ್ತಾ ಭಾಗದಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಉತ್ಸವದಲ್ಲಿ ದುರ್ಗಾ ಮಾತೆ ವಿಗ್ರಹವನ್ನು ಪ್ರತಿಷ್ಟಾಪನೆ ಮಾಡಿ ಪೂಜಿಸಲಾಗುತ್ತದೆ. ಈ ಬಾರಿ ಕಲಾವಿದರೊಬ್ಬರ ಕೈಚಳಕದಿಂದ ಪ್ರಸ್ತುತ ಕೊರೊನಾ ಕಾಲದಲ್ಲಿ ವಲಸೆ ಕಾರ್ಮಿಕರ ತಲ್ಲಣಗಳನ್ನು ತನ್ನ ಸೃಜನಶೀಲ ಚಿಂತನೆಯ ಮೂಲಕ ಮಾಗಿಸಿ, ದುರ್ಗಾ ಮಾತೆಯನ್ನು ವಲಸೆ ಕಾರ್ಮಿಕ ಮಹಿಳೆಯೊಬ್ಬಳಿಗೆ ಹೋಲಿಸುವಂತಹ ಪ್ರತಿಮೆಯೊಂದನ್ನು ನಿರ್ಮಿಸಿದ್ದಾರೆ.

ದುರ್ಗಾಮಾತೆಯನ್ನು ವಲಸೆಗಾರ ಮಹಿಳೆಗೆ ಹೋಲಿಸಿ ರಚಿಸಿರುವ ದುರ್ಗಾ ಮಾತೆ ಪ್ರತಿಮೆಯು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಇದನ್ನು ಖ್ಯಾತ ಚಿತ್ರಕಲಾವಿದ ಬಿಕಾಶ್ ಭಟ್ಟಾಚಾರ್ಯ ಅವರ ವರ್ಣಚಿತ್ರಗಳಿಂದ ಪ್ರೇರೇಪಿತವಾಗಿ ಇದನ್ನು ರಚಿಸಿದ್ದೇನೆ ಎಂದು ಬಂಗಾಳದ ಕಲಾವಿದ ಪಲ್ಲಬ್ ಭೌಮಿಕ್ ಹೇಳಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟ ಅನುಭವಿಸಿದ್ದರು. ಹಾಗಾಗಿ ಅವರನ್ನು ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ದುರ್ಗಾ ಮಾತೆಯನ್ನು ‘ವಲಸೆ ತಾಯಿ’ಯಾಗಿ ರಚಿಸಿರುವ ಈ ಪ್ರತಿಮೆಯನ್ನು ಮುಂಬರುವ ದುರ್ಗಾ ಪೂಜಾ ಉತ್ಸವದ ಸಂದರ್ಭದಲ್ಲಿ ಕೋಲ್ಕತ್ತಾದ ಬರಿಷಾ ಕ್ಲಬ್ ಪಂಡಲ್‌ನಲ್ಲಿ ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

The painting that inspired the ‘migrant’ Durga idol

ಬಿಕಾಶ್ ಭಟ್ಟಾಚಾರ್ಯ ಚಿತ್ರಿಸಿರುವ, ದುರ್ಗಾ ಮಾತೆಯ ಭಂಗಿಯಂತೆಯೇ ನಿಂತಿರುವ ‘ವಲಸೆಗಾರ ಮಹಿಳೆ’ಯೊಬ್ಬಳ ವರ್ಣಚಿತ್ರದಿಂದ ತಾನು ಪ್ರೇರಿತನಾಗಿದ್ದೆ ಎಂದ ಪಲ್ಲಬ್ ಭೌಮಿಕ್, “ಪ್ರತಿಮೆಯನ್ನು ರಚಿಸಲು ತನಗೆ ಒಂದು ಉಲ್ಲೇಖ ಬೇಕು. ಅದು ಈ ಚಿತ್ರದಿಂದ ನನಗೆ ಸಿಕ್ಕಿದೆ. ಈ ಪ್ರತಿಮೆ ಪೂರ್ಣಗೊಳ್ಳಲು 2 ತಿಂಗಳು ಸಮಯ ತೆಗೆದುಕೊಂಡಿದೆ” ಎಂದು ಹೇಳಿದರು. ಪಲ್ಲಬ್ ಭೌಮಿಕ್ ಪ್ರತಿಮೆ ನಿರ್ಮಾಣದ ಮುಖ್ಯ ಕಲಾವಿದರಾಗಿ ಕೆಲಸ ಮಾಡಿದ್ದು, 4-5 ಕಲಾವಿದರ ತಂಡವು ಇದಕ್ಕೆ ನೆರವು ನೀಡಿತು.

ಇದನ್ನೂ ಓದಿ: #MigrantLivesStillMatter: ವಲಸೆ ಕಾರ್ಮಿಕರ ಗೋಳು ಕೇಳಿ – ಟ್ವಿಟ್ಟರ್ ಅಭಿಯಾನ

ಬಿಕಾಶ್ ಭಟ್ಟಾಚಾರ್ಯ ಬಂಗಾಳದ ಪ್ರಸಿದ್ಧ ವರ್ಣಚಿತ್ರಕಾರ. ಅವರ ವರ್ಣಚಿತ್ರಗಳು ಮಧ್ಯಮ ವರ್ಗದ ಬಂಗಾಳಿಗಳ ಜೀವನವನ್ನು ಪ್ರತಿಬಿಂಬಿಸುತ್ತವೆ.

ಈ ಪ್ರತಿಮೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದು, ಪಲ್ಲಬ್ ಭೌಮಿಕ್ ಇದನ್ನು ದೇವರ ಆಶೀರ್ವಾದ, ತಮ್ಮ ಕೆಲಸಕ್ಕೆ ಶೇಕಡಾ 100 ರಷ್ಟು ತೊಡಗಿಸಿಕೊಂಡಿದ್ದರ ಫಲ ಇದು ಎಂದು ಬಣ್ಣಿಸಿದ್ದಾರೆ.

ಇದನ್ನೂ ಓದಿ: 97 ವಲಸೆ ಕಾರ್ಮಿಕರ ಸಾವು: ಮಾಹಿತಿ ಇಲ್ಲ ಎಂದು ಹೇಳಿ, ಈಗ ಮಾಹಿತಿ ನೀಡಿದ ಕೇಂದ್ರ ಸರ್ಕಾರ!!!

ಈ ಪ್ರತಿಮೆಯನ್ನು ಟ್ವಿಟರ್‌ ಮೂಮೆಂಟ್ಸ್‌ ಇಂಡಿಯಾ, ತನ್ನ ಖಾತೆಯಲ್ಲಿ ಹಂಚಿಕೊಂಡಿದೆ.

ಹಲವಾರು ಗಣ್ಯರು ಮತ್ತು ಪ್ರಖ್ಯಾತ ವ್ಯಕ್ತಿಗಳು ಪ್ರತಿಮೆಯನ್ನು ಹೊಗಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನ ಸಂಕಟ: 100 ಕ್ಕೂ ಹೆಚ್ಚು ವಲಸೆ ಕಾರ್ಮಿಕರ ಸಾವು RTIನಿಂದ ಬಹಿರಂಗ – ಮಾಹಿತಿಯೇ ಇಲ್ಲ ಎಂದ…

ನಟಿ ಊರ್ಮಿಳಾ ಮಾತೋಂಡ್ಕರ್ ಟ್ವೀಟ್ ಮಾಡಿ, “ಜನರು ನಿಮಗೆ ಏನು ಹೇಳುತ್ತಾರೆ ಎಂಬುದು ಮುಖ್ಯವಲ್ಲ. ಪದಗಳು ಮತ್ತು ಆಲೋಚನೆಗಳು ಜಗತ್ತನ್ನು ಬದಲಾಯಿಸಬಹುದು. ಬಂಗಾಳ ಕಲಾವಿದ ಪಲ್ಲಾಬ್ ಭೌಮಿಕ್ ಅವರು ರಚಿಸಿರುವ #ಮಾ ದುರ್ಗಾ ಪ್ರತಿಮೆ ಅತ್ಯಂತ ಅದ್ಭುತ ಚಿತ್ರಣ. ಮಾ ದುರ್ಗಾ ವಲಸೆಗಾರಳಾಗಿ ತನ್ನ ಮಕ್ಕಳೊಂದಿಗೆ” ಎಂದು ಬರೆದುಕೊಂಡಿದ್ದಾರೆ.

 

ಇದನ್ನೂ ಓದಿ: ಕೊರೊನಾ ಲಾಕ್‌ಡೌನ್; ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಸುಳ್ಳುಸುದ್ಧಿಗಳೇ ಕಾರಣ: ಕೇಂದ್ರ ಸರ್ಕಾರ

ಇತಿಹಾಸಕಾರ-ಪತ್ರಕರ್ತ ಹಿಂಡೋಲ್ ಸೇನ್‌ಗುಪ್ತಾ ಟ್ವೀಟ್ ಮಾಡಿ, “ಬಂಗಾಳದ ದುರ್ಗಾ ಪ್ರತಿಮೆಗಳು ಅಥವಾ ವಿಗ್ರಹಗಳ ಬಗ್ಗೆ ಅತ್ಯಂತ ಆಕರ್ಷಕ ಮತ್ತು ಧೈರ್ಯ ತುಂಬುವ ವಿಷಯವೆಂದರೆ, ಇವುಗಳನ್ನು ಪ್ರತಿವರ್ಷ ಭವ್ಯವಾದ ದೈವಿಕತೆಯೊಂದಕ್ಕೆ ಮಾತ್ರವಲ್ಲದೆ ಪ್ರಸ್ತುತ ತಲ್ಲಣಗಳಿಗೆ ಸಂಬಂಧಿಸಿದಂತೆಯೂ ನಿರ್ಮಿಸುತ್ತಾರೆ. ಈ ಬಾರಿ ಮಾ ದುರ್ಗಾ ವಲಸಿಗರ ರೂಪದಲ್ಲಿ ಕಾಣಿಸಿಕೊಂಡಿದ್ದಾಳೆ” ಎಂದು ಬರೆದುಕೊಂಡಿದ್ದಾರೆ.

ಹೀಗೆ ಸಾವಿರಾರು ಜನರು ಈ ಪ್ರತಿಮೆಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದು, ಇದು ವೈರಲ್ ಆಗುತ್ತಿದೆ.


ಇದನ್ನೂ ಓದಿ: ಕೊರೊನಾ ಲಾಕ್‌ಡೌನ್: 6 ರಾಜ್ಯಗಳ 67 ಲಕ್ಷ ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...