Homeಮುಖಪುಟ”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ": ರಾಹುಲ್, ಪ್ರಿಯಾಂಕಾ ಕಿಡಿ

”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ”: ರಾಹುಲ್, ಪ್ರಿಯಾಂಕಾ ಕಿಡಿ

ಹತ್ರಾಸ್ ಘಟನೆ ನಂತರ ಉತ್ತರಪ್ರದೇಶ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿದೆ. ಆದರೂ ಉತ್ತರ ಪ್ರದೇಶದಲ್ಲಿ ಮಹಿಳಾ ದೌರ್ಜನ್ಯ. ಅತ್ಯಾಚಾರ ಪ್ರಕರಣಗಳು, ದಲಿತರ ಮೇಲಿನ ಹಲ್ಲೆಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ.

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳು ಹೆಚ್ಚುತ್ತಿವೆ ಎಂಬ ಬಗ್ಗೆ ಧ್ವನಿ ಎತ್ತಿರುವ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯ ಬೇಟಿ ಬಚಾವೋ ಮಿಷನ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಮಹಿಳೆಯರನ್ನು ರಕ್ಷಿಸುವ ಬದಲು, ಉತ್ತರ ಪ್ರದೇಶ ಬಿಜೆಪಿ ನೇತೃತ್ವದ ಸರ್ಕಾರವು “ಅಪರಾಧಿಗಳನ್ನು ಉಳಿಸಲು” ಪ್ರಯತ್ನಿಸುತ್ತಿದೆ ಎಂದು ಮಾಧ್ಯಮದ ವರದಿಯನ್ನು ಟ್ಯಾಗ್ ಮಾಡಿ ಸರ್ಕಾರದ ಬೇಟಿ ಬಚಾವೋ ಮಿಷನ್‌ ಅನ್ನು ಅಪರಾಧಿ ಬಚಾವೋಗೆ ಹೋಲಿಸಿದ್ದಾರೆ. ವರದಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಿಜೆಪಿ ಶಾಸಕ, ಅವರ ಪುತ್ರ ಮತ್ತು ಬೆಂಬಲಿಗರು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿದ ಪ್ರಕರಣದ ಉಲ್ಲೇಖವಿದೆ.

ಘಟನೆ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಬೇಟಿ ಬಚಾವೋ (ಹೆಣ್ಣುಮಕ್ಕಳನ್ನು ಉಳಿಸಿ) ಎಂದು ಆರಂಭವಾದ ಅಭಿಯಾನ ಈಗ ಅದು ಅಪರಾಧಿ ಬಚಾವೋ (ಅಪರಾಧಿಗಳನ್ನು ಉಳಿಸಿ) ಎಂಬ ರೀತಿಯಲ್ಲಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಕುರಿತು ಪ್ರಧಾನಿ ಒಂದೂ ಮಾತಾಡಲಿಲ್ಲ ಏಕೆ? : ರಾಹುಲ್ ಗಾಂಧಿ ಪ್ರಶ್ನೆ

 

ಮಾಧ್ಯಮ ವರದಿಯ ಪ್ರಕಾರ, ಬಿಜೆಪಿ ಶಾಸಕರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಬಲವಂತವಾಗಿ ಪೊಲೀಸ್ ಠಾಣೆಗೆ ಪ್ರವೇಶಿಸಿ, ಮಹಿಳೆಗೆ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿ ಕರೆದೊಯ್ದಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಈ ಕುರಿತು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

“ಇದು ಯಾವ ಮಿಷನ್” ಅಡಿಯಲ್ಲಿ ನಡೆಯುತ್ತಿದೆ ಎಂದು ಹೇಳುತ್ತೀರಾ ಯುಪಿ ಸಿಎಂ?” ಬೇಟಿ ಬಚಾವೊ (ಹೆಣ್ಣುಮಕ್ಕಳನ್ನು ಉಳಿಸಿ)” ಅಥವಾ “ಅಪರಾಧಿ ಬಚಾವೊ(ಅಪರಾಧಿಗಳನ್ನು ಉಳಿಸಿ)?” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಹತ್ರಾಸ್ ಜಿಲ್ಲೆಯ 19 ವರ್ಷದ ದಲಿತ ಯುವತಿ ಮೇಲೆ ಮೇಲ್ಜಾತಿಯ ನಾಲ್ವರು ಪುರುಷರು ಅತ್ಯಾಚಾರ ಎಸಗಿ ಹಲ್ಲೆ ಮಾಡಿದ್ದರು. ತೀವ್ರವಾದ ಚಿತ್ರಹಿಂಸೆ, ಹಲ್ಲೆಯಿಂದಾಗಿ ಆಕೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಳಿಕ, ಕಾಂಗ್ರೆಸ್ ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಹತ್ರಾಸ್ ಘಟನೆ ಬಳಿಕ ಉತ್ತರ ಪ್ರದೇಶ ಸರ್ಕಾರ ದೇಶದಾದ್ಯಂತ ಹಲವು ಪ್ರತಿಭಟನೆಗಳು, ಪ್ರತಿರೋಧಗಳನ್ನು ಎದುರಿಸಬೇಕಾಯಿತು. ಆದರೂ ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು, ಮಹಿಳಾ ದೌರ್ಜನ್ಯ, ದಲಿತರ ಮೇಲಿನ ಹಲ್ಲೆಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ. ಆದಿತ್ಯನಾಥ್ ಸರ್ಕಾರ ಇವುಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ಕುರಿತು ಆದೇಶಗಳನ್ನು ಮಾತ್ರ ನೀಡುತ್ತಿದೆ. ಆದರೆ ಅದರಿಂದ ಯಾವುದೇ ಪರಿಣಾಮ ಉಂಟಾಗಿಲ್ಲ. ಹಾಗಾಗಿ ಸರ್ಕಾರ ಇಂತಹ ಘಟನೆಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...