Homeಮುಖಪುಟ”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ": ರಾಹುಲ್, ಪ್ರಿಯಾಂಕಾ ಕಿಡಿ

”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ”: ರಾಹುಲ್, ಪ್ರಿಯಾಂಕಾ ಕಿಡಿ

ಹತ್ರಾಸ್ ಘಟನೆ ನಂತರ ಉತ್ತರಪ್ರದೇಶ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿದೆ. ಆದರೂ ಉತ್ತರ ಪ್ರದೇಶದಲ್ಲಿ ಮಹಿಳಾ ದೌರ್ಜನ್ಯ. ಅತ್ಯಾಚಾರ ಪ್ರಕರಣಗಳು, ದಲಿತರ ಮೇಲಿನ ಹಲ್ಲೆಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ.

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳು ಹೆಚ್ಚುತ್ತಿವೆ ಎಂಬ ಬಗ್ಗೆ ಧ್ವನಿ ಎತ್ತಿರುವ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯ ಬೇಟಿ ಬಚಾವೋ ಮಿಷನ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಮಹಿಳೆಯರನ್ನು ರಕ್ಷಿಸುವ ಬದಲು, ಉತ್ತರ ಪ್ರದೇಶ ಬಿಜೆಪಿ ನೇತೃತ್ವದ ಸರ್ಕಾರವು “ಅಪರಾಧಿಗಳನ್ನು ಉಳಿಸಲು” ಪ್ರಯತ್ನಿಸುತ್ತಿದೆ ಎಂದು ಮಾಧ್ಯಮದ ವರದಿಯನ್ನು ಟ್ಯಾಗ್ ಮಾಡಿ ಸರ್ಕಾರದ ಬೇಟಿ ಬಚಾವೋ ಮಿಷನ್‌ ಅನ್ನು ಅಪರಾಧಿ ಬಚಾವೋಗೆ ಹೋಲಿಸಿದ್ದಾರೆ. ವರದಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಿಜೆಪಿ ಶಾಸಕ, ಅವರ ಪುತ್ರ ಮತ್ತು ಬೆಂಬಲಿಗರು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿದ ಪ್ರಕರಣದ ಉಲ್ಲೇಖವಿದೆ.

ಘಟನೆ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಬೇಟಿ ಬಚಾವೋ (ಹೆಣ್ಣುಮಕ್ಕಳನ್ನು ಉಳಿಸಿ) ಎಂದು ಆರಂಭವಾದ ಅಭಿಯಾನ ಈಗ ಅದು ಅಪರಾಧಿ ಬಚಾವೋ (ಅಪರಾಧಿಗಳನ್ನು ಉಳಿಸಿ) ಎಂಬ ರೀತಿಯಲ್ಲಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಕುರಿತು ಪ್ರಧಾನಿ ಒಂದೂ ಮಾತಾಡಲಿಲ್ಲ ಏಕೆ? : ರಾಹುಲ್ ಗಾಂಧಿ ಪ್ರಶ್ನೆ

 

ಮಾಧ್ಯಮ ವರದಿಯ ಪ್ರಕಾರ, ಬಿಜೆಪಿ ಶಾಸಕರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಬಲವಂತವಾಗಿ ಪೊಲೀಸ್ ಠಾಣೆಗೆ ಪ್ರವೇಶಿಸಿ, ಮಹಿಳೆಗೆ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿ ಕರೆದೊಯ್ದಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಈ ಕುರಿತು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

“ಇದು ಯಾವ ಮಿಷನ್” ಅಡಿಯಲ್ಲಿ ನಡೆಯುತ್ತಿದೆ ಎಂದು ಹೇಳುತ್ತೀರಾ ಯುಪಿ ಸಿಎಂ?” ಬೇಟಿ ಬಚಾವೊ (ಹೆಣ್ಣುಮಕ್ಕಳನ್ನು ಉಳಿಸಿ)” ಅಥವಾ “ಅಪರಾಧಿ ಬಚಾವೊ(ಅಪರಾಧಿಗಳನ್ನು ಉಳಿಸಿ)?” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಹತ್ರಾಸ್ ಜಿಲ್ಲೆಯ 19 ವರ್ಷದ ದಲಿತ ಯುವತಿ ಮೇಲೆ ಮೇಲ್ಜಾತಿಯ ನಾಲ್ವರು ಪುರುಷರು ಅತ್ಯಾಚಾರ ಎಸಗಿ ಹಲ್ಲೆ ಮಾಡಿದ್ದರು. ತೀವ್ರವಾದ ಚಿತ್ರಹಿಂಸೆ, ಹಲ್ಲೆಯಿಂದಾಗಿ ಆಕೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಳಿಕ, ಕಾಂಗ್ರೆಸ್ ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಹತ್ರಾಸ್ ಘಟನೆ ಬಳಿಕ ಉತ್ತರ ಪ್ರದೇಶ ಸರ್ಕಾರ ದೇಶದಾದ್ಯಂತ ಹಲವು ಪ್ರತಿಭಟನೆಗಳು, ಪ್ರತಿರೋಧಗಳನ್ನು ಎದುರಿಸಬೇಕಾಯಿತು. ಆದರೂ ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು, ಮಹಿಳಾ ದೌರ್ಜನ್ಯ, ದಲಿತರ ಮೇಲಿನ ಹಲ್ಲೆಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ. ಆದಿತ್ಯನಾಥ್ ಸರ್ಕಾರ ಇವುಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ಕುರಿತು ಆದೇಶಗಳನ್ನು ಮಾತ್ರ ನೀಡುತ್ತಿದೆ. ಆದರೆ ಅದರಿಂದ ಯಾವುದೇ ಪರಿಣಾಮ ಉಂಟಾಗಿಲ್ಲ. ಹಾಗಾಗಿ ಸರ್ಕಾರ ಇಂತಹ ಘಟನೆಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...