Homeಮುಖಪುಟ”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ": ರಾಹುಲ್, ಪ್ರಿಯಾಂಕಾ ಕಿಡಿ

”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ”: ರಾಹುಲ್, ಪ್ರಿಯಾಂಕಾ ಕಿಡಿ

ಹತ್ರಾಸ್ ಘಟನೆ ನಂತರ ಉತ್ತರಪ್ರದೇಶ ಸರ್ಕಾರ ತೀವ್ರ ಟೀಕೆಗೆ ಗುರಿಯಾಗಿದೆ. ಆದರೂ ಉತ್ತರ ಪ್ರದೇಶದಲ್ಲಿ ಮಹಿಳಾ ದೌರ್ಜನ್ಯ. ಅತ್ಯಾಚಾರ ಪ್ರಕರಣಗಳು, ದಲಿತರ ಮೇಲಿನ ಹಲ್ಲೆಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ.

- Advertisement -
- Advertisement -

ಉತ್ತರ ಪ್ರದೇಶ ರಾಜ್ಯದಲ್ಲಿ ಮಹಿಳೆಯರ ವಿರುದ್ಧ ಅಪರಾಧಗಳು ಹೆಚ್ಚುತ್ತಿವೆ ಎಂಬ ಬಗ್ಗೆ ಧ್ವನಿ ಎತ್ತಿರುವ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯ ಬೇಟಿ ಬಚಾವೋ ಮಿಷನ್ ಬಗ್ಗೆ ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಮಹಿಳೆಯರನ್ನು ರಕ್ಷಿಸುವ ಬದಲು, ಉತ್ತರ ಪ್ರದೇಶ ಬಿಜೆಪಿ ನೇತೃತ್ವದ ಸರ್ಕಾರವು “ಅಪರಾಧಿಗಳನ್ನು ಉಳಿಸಲು” ಪ್ರಯತ್ನಿಸುತ್ತಿದೆ ಎಂದು ಮಾಧ್ಯಮದ ವರದಿಯನ್ನು ಟ್ಯಾಗ್ ಮಾಡಿ ಸರ್ಕಾರದ ಬೇಟಿ ಬಚಾವೋ ಮಿಷನ್‌ ಅನ್ನು ಅಪರಾಧಿ ಬಚಾವೋಗೆ ಹೋಲಿಸಿದ್ದಾರೆ. ವರದಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಿಜೆಪಿ ಶಾಸಕ, ಅವರ ಪುತ್ರ ಮತ್ತು ಬೆಂಬಲಿಗರು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿದ ಪ್ರಕರಣದ ಉಲ್ಲೇಖವಿದೆ.

ಘಟನೆ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಬೇಟಿ ಬಚಾವೋ (ಹೆಣ್ಣುಮಕ್ಕಳನ್ನು ಉಳಿಸಿ) ಎಂದು ಆರಂಭವಾದ ಅಭಿಯಾನ ಈಗ ಅದು ಅಪರಾಧಿ ಬಚಾವೋ (ಅಪರಾಧಿಗಳನ್ನು ಉಳಿಸಿ) ಎಂಬ ರೀತಿಯಲ್ಲಿ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್ ಕುರಿತು ಪ್ರಧಾನಿ ಒಂದೂ ಮಾತಾಡಲಿಲ್ಲ ಏಕೆ? : ರಾಹುಲ್ ಗಾಂಧಿ ಪ್ರಶ್ನೆ

 

ಮಾಧ್ಯಮ ವರದಿಯ ಪ್ರಕಾರ, ಬಿಜೆಪಿ ಶಾಸಕರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಬಲವಂತವಾಗಿ ಪೊಲೀಸ್ ಠಾಣೆಗೆ ಪ್ರವೇಶಿಸಿ, ಮಹಿಳೆಗೆ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿ ಕರೆದೊಯ್ದಿದ್ದಾರೆ.

ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಈ ಕುರಿತು ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

“ಇದು ಯಾವ ಮಿಷನ್” ಅಡಿಯಲ್ಲಿ ನಡೆಯುತ್ತಿದೆ ಎಂದು ಹೇಳುತ್ತೀರಾ ಯುಪಿ ಸಿಎಂ?” ಬೇಟಿ ಬಚಾವೊ (ಹೆಣ್ಣುಮಕ್ಕಳನ್ನು ಉಳಿಸಿ)” ಅಥವಾ “ಅಪರಾಧಿ ಬಚಾವೊ(ಅಪರಾಧಿಗಳನ್ನು ಉಳಿಸಿ)?” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ.

ಹತ್ರಾಸ್ ಜಿಲ್ಲೆಯ 19 ವರ್ಷದ ದಲಿತ ಯುವತಿ ಮೇಲೆ ಮೇಲ್ಜಾತಿಯ ನಾಲ್ವರು ಪುರುಷರು ಅತ್ಯಾಚಾರ ಎಸಗಿ ಹಲ್ಲೆ ಮಾಡಿದ್ದರು. ತೀವ್ರವಾದ ಚಿತ್ರಹಿಂಸೆ, ಹಲ್ಲೆಯಿಂದಾಗಿ ಆಕೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಳಿಕ, ಕಾಂಗ್ರೆಸ್ ಉತ್ತರ ಪ್ರದೇಶ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.

ಹತ್ರಾಸ್ ಘಟನೆ ಬಳಿಕ ಉತ್ತರ ಪ್ರದೇಶ ಸರ್ಕಾರ ದೇಶದಾದ್ಯಂತ ಹಲವು ಪ್ರತಿಭಟನೆಗಳು, ಪ್ರತಿರೋಧಗಳನ್ನು ಎದುರಿಸಬೇಕಾಯಿತು. ಆದರೂ ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು, ಮಹಿಳಾ ದೌರ್ಜನ್ಯ, ದಲಿತರ ಮೇಲಿನ ಹಲ್ಲೆಗಳು ನಿರಂತರವಾಗಿ ವರದಿಯಾಗುತ್ತಲೇ ಇವೆ. ಆದಿತ್ಯನಾಥ್ ಸರ್ಕಾರ ಇವುಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ಕುರಿತು ಆದೇಶಗಳನ್ನು ಮಾತ್ರ ನೀಡುತ್ತಿದೆ. ಆದರೆ ಅದರಿಂದ ಯಾವುದೇ ಪರಿಣಾಮ ಉಂಟಾಗಿಲ್ಲ. ಹಾಗಾಗಿ ಸರ್ಕಾರ ಇಂತಹ ಘಟನೆಗಳ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸಾಮಾಜಿಕ ಕಾರ್ಯಕರ್ತರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಹತ್ರಾಸ್‌ ಭೇಟಿಯ ಫೋಟೋದಲ್ಲಿ ಪ್ರಿಯಾಂಕಾ ಗಾಂಧಿ ಅಪ್ಪಿಕೊಂಡಿದ್ದ ಮಹಿಳೆ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...