Homeಕರ್ನಾಟಕಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ

- Advertisement -
- Advertisement -

ಶಾಸಕ ಬಿ.ಸತ್ಯನಾರಾಯಣ್ ಅವರ ನಿಧನದಿಂದ ತೆರವಾಗಿರುವ ಶಿರಾ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಚಾರ ಕಾರ್ಯವೂ ಬಿರುಸು ಪಡೆದುಕೊಂಡಿದೆ. ಇದರ ನಡುವೆ ಬಿಜೆಪಿಯ ಒಳಗೆ ಬಣಗಳು ಸೃಷ್ಟಿಯಾಗಿದ್ದು, ಮೂಲ ಮತ್ತು ವಲಸೆ ಬಿಜೆಪಿಗರ ನಡುವೆ ಫೈಟ್ ಆರಂಭವಾಗಿದೆ.

ಕಾಂಗ್ರೆಸ್‌ನ ಟಿ.ಬಿ.ಜಯಚಂದ್ರ, ಪ್ರತಿಯೊಂದು ಗ್ರಾಮಸ್ಥರನ್ನು ಭೇಟಿ ಮಾರುವ ಕೆಲಸದಲ್ಲಿ ನಿರತರಾಗಿದ್ದಾರೆ. ಕೊನೆಗಳಿಗೆಯಲ್ಲಿ ಬಿ.ಫಾರಂ ಪಡೆದು ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಥ್ಯರ್ಥಿ ಡಾ.ರಾಜೇಶ್ ಗೌಡ ಈಗಷ್ಟೇ ಪ್ರಚಾರ ನಡೆಸುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇವರಿಗೆ ಸಾಥ್ ನೀಡಿದ್ದಾರೆ. ರಾಜಕೀಯ ಪಟ್ಟುಗಳೇ ಗೊತ್ತಿಲ್ಲದ ಬಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರು ಮತ್ತು ವರಿಷ್ಠರನ್ನು ನಚ್ಚಿಕೊಂಡು ಕೆಲಸ ಮಾಡುತ್ತಿದ್ದಾರೆ.

ಇದೆಲ್ಲವೂ ಒಂದು ಕಡೆಯಾದರೆ, ಬಿಜೆಪಿಯಲ್ಲಿ ಅಸಮಾಧಾನ ಕಡಿಮೆಯಾದಂತೆ ಕಂಡುಬರುತ್ತಿಲ್ಲ. ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ. ಕೊನೆ ಕ್ಷಣದಲ್ಲಿ ಪಕ್ಷದ ಟಿಕೆಟ್ ಗ್ಯಾರೆಂಟಿ ಮಾಡಿಕೊಂಡು ಪಕ್ಷಕ್ಕೆ ಬಂದ ಮಾಜಿ ಸಂಸದ ಮುಡ್ಲಗಿರಿಯಪ್ಪ ಅವರ ಪುತ್ರ ರಾಜೇಶ್ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿರುವುದು ಮೂಲ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಯೊಂದು ನಡೆಯನ್ನು, ಕೆಲಸವನ್ನು ಕಣ್ಣುಮುಚ್ಚಿ ಬೆಂಬಲಿಸುತ್ತಿದ್ದ ಯುವಪಡೆ, ರಾಜೇಶ್ ಗೌಡ ಅವರಿಗೆ ಟಿಕೆಟ್ ನೀಡಿರುವುದನ್ನು ಬಹಿರಂಗವಾಗಿಯೇ ಟೀಕಿಸುತ್ತಿದೆ. ಬಿಜೆಪಿಯ ಪ್ರತಿಯೊಂದು ಕೆಲಸವನ್ನೂ ‘ಸರಿ’ ಎಂದು ಸಮರ್ಥನೆಗೆ ಇಳಿಯುತ್ತಿದ್ದ ಈ ಯುವಪಡೆ, ಅದೇ ಜಾಲತಾಣದಲ್ಲಿ ಅಭ್ಯರ್ಥಿಯ ಸಾಮರ್ಥ್ಯವನ್ನು ಹೀಗಳೆಯುತ್ತಿದೆ. ಟೀಕೆಯನ್ನು ವ್ಯಕ್ತಪಡಿಸುತ್ತಿದೆ. ಗೆಲುವು ಇನ್ನಾರಿಗೋ ಎಂಬಂತೆ ‘ಕೈ’ ತೋರಿಸುತ್ತಿದೆ. ಪಕ್ಷ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ ಎಂದು ಅಸಮಾಧಾನಗೊಂಡಿದೆ. ಹಣದಿಂದ ಗೆಲುವು ಪಡೆಯುವ ಕನಸು ಈಡೇರುವುದಿಲ್ಲ ಎನ್ನುತ್ತಿದೆ ಆ ಯುವಪಡೆ.

ಶಿರಾ ಕ್ಷೇತ್ರದಲ್ಲಿ ಪಕ್ಷವನ್ನು ಬೇರುಮಟ್ಟದಲ್ಲಿ ಕಟ್ಟಲು ಕಾರಣರಾದ ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರನ್ನು ಕಡೆಗಣಿಸಿ ಬೇರೆಯವರಿಗೆ ಟಿಕೆಟ್ ನೀಡಿರುವುದು ಮೂಲ ಬಿಜೆಪಿಗರನ್ನು ಕೆರಳುವಂತೆ ಮಾಡಿದೆ. ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರಿಗೆ ಮನದಲ್ಲಿ ನೋವು ಮನೆ ಮಾಡಿದ್ದರೂ ಅದನ್ನು ಹೊರಗೆ ತೋರ್ಪಡಿಸುವ ಹಾಗಿಲ್ಲ. ಹಾಗಾಗಿಯೇ ಜಿಲ್ಲಾ ಬಿಜೆಪಿ ಮುಖಂಡರು ಮತ್ತು ರಾಜ್ಯದ ವರಿಷ್ಟರ ತೀರ್ಮಾನಕ್ಕೆ ತಲೆಬಾಗಿ ಮೌನಕ್ಕೆ ಜಾರಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

ರಾಜೇಶ್ ಗೌಡ ದೊಡ್ಡ ಕುಳವೇ! ಅದರಲ್ಲಿ ಅನುಮಾನವಿಲ್ಲ. ಆದರೆ ಅವರ ಗೆಲುವು ತುಂಬ ಕಷ್ಟ ಎನ್ನುತ್ತಾರೆ ಕಟ್ಟಾ ಬಿಜೆಪಿಗರು. ತುಮಕೂರು ಜಿಲ್ಲೆಯಲ್ಲಿ ಮೂಲ ಮತ್ತು ವಲಸಿಗ ಬಿಜೆಪಿಗರ ನಡುವೆ ಬಹಿರಂಗ ಭಿನ್ನಮತ ಅಂತ್ಯವಾದಂತೆ ಕಂಡುಬಂದರೂ ಆಂತರ್ಯದಲ್ಲಿ ಶೀತಲಸಮರ ಮುಂದುವರಿದಿದೆ. ಶಿರಾ ಕ್ಷೇತ್ರದಲ್ಲಿ ಎಸ್.ಆರ್.ಗೌಡ ಮತ್ತು ಬಿ.ಕೆ.ಮಂಜುನಾಥ್ ಬಣಗಳಿದ್ದುದು ಎಲ್ಲರಿಗೂ ತಿಳಿದ ವಿಷಯವೇ ಆಗಿತ್ತು. ಈಗ ರಾಜೇಶ್ ಗೌಡರ ಮೂರನೇ ಬಣವೂ ಹುಟ್ಟಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜೇಶ್ ಗೌಡ ಬಿಜೆಪಿ ಪಕ್ಷಕ್ಕೆ ಏನುಕೊಡುಗೆ ಕೊಟ್ಟಿದ್ದಾರೆ ಎಂಬ ಪ್ರಶ್ನೆ ಸ್ಥಳೀಯ ಬಿಜೆಪಿಗರದ್ದು. ಈ ಪ್ರಶ್ನೆಯನ್ನು ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿಯೇ ಕೇಳುತ್ತಿದ್ದಾರೆ. ಆದರೆ ಬಿಜೆಪಿಯ ಯಾವುದೇ ಮುಖಂಡರೂ ಸಾಮಾನ್ಯ ಬಿಜೆಪಿ ಕಾರ್ಯಕರ್ತರ ಈ ‘ಮೂಲ’ ಪ್ರಶ್ನೆಗೆ ಉತ್ತರಿಸುವಂತಹ ಗೋಜಿಗೆ ಹೋಗಿಲ್ಲ. ಅಭಿವೃದ್ಧಿಯ ವಿಷಯಗಳು ಬಿಟ್ಟು ಯಾವುದ್ಯಾವುದೋ ವಿಷಯಗಳನ್ನು ಜನರ ಮನದಲ್ಲಿ ತುಂಬುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇದು ವರ್ಕೌಟ್ ಆಗುತ್ತಾ ಎಂಬುದನ್ನು ಶಿರಾ ಮತದಾರನೇ ಬಲ್ಲ.

ಉಪಚುನಾವಣೆಯಲ್ಲಿ ಮೂಲ ಬಿಜೆಪಿ ಕಾರ್ಯಕರ್ತರು ತಟಸ್ಥರಾಗುವ ಸಾಧ್ಯತೆಗಳೇ ಹೆಚ್ಚಾಗಿವೆ. ಬಣದ ಪ್ರಾಬಲ್ಯವೂ ಇಲ್ಲಿ ಕೆಲಸ ಮಾಡಲಿದೆ. ಹೊನ್ನಾಳಿ ಹೊಡೆತ ಕೊಡಲು ಯುವಪಡೆ ಕಾಯುತ್ತಿದೆ ಎಂದು ಪರಿವಾರದ ಮುಖಂಡರೊಬ್ಬರು ತಿಳಿಸಿದ್ದಾರೆ. ಹಾಗಾಗಿ ಶಿರಾ ಕ್ಷೇತ್ರದಲ್ಲಿ ಮೂಲ V/S ವಲಸಿಗ ಬಿಜೆಪಿ ನಡುವೆ ಫೈಟ್ ನಡೆಯುತ್ತಿದೆ. ಕೊಡಲಿಗೆ ಕಾವು “ಮೂಲ”ವಾಗುವುದೇ? ಎಂಬುದು ಫಲಿತಾಂಶದಿಂದ ಹೊರಬೀಳಲಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...