Homeಕರ್ನಾಟಕಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ

- Advertisement -
- Advertisement -

ಶಾಸಕ ಬಿ.ಸತ್ಯನಾರಾಯಣ್ ಅವರ ನಿಧನದಿಂದ ತೆರವಾಗಿರುವ ಶಿರಾ ಕ್ಷೇತ್ರದ ಉಪಚುನಾವಣೆ ನವೆಂಬರ್ 3 ರಂದು ನಡೆಯಲಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪ್ರಚಾರ ಕಾರ್ಯವೂ ಬಿರುಸು ಪಡೆದುಕೊಂಡಿದೆ. ಇದರ ನಡುವೆ ಬಿಜೆಪಿಯ ಒಳಗೆ ಬಣಗಳು ಸೃಷ್ಟಿಯಾಗಿದ್ದು, ಮೂಲ ಮತ್ತು ವಲಸೆ ಬಿಜೆಪಿಗರ ನಡುವೆ ಫೈಟ್ ಆರಂಭವಾಗಿದೆ.

ಕಾಂಗ್ರೆಸ್‌ನ ಟಿ.ಬಿ.ಜಯಚಂದ್ರ, ಪ್ರತಿಯೊಂದು ಗ್ರಾಮಸ್ಥರನ್ನು ಭೇಟಿ ಮಾರುವ ಕೆಲಸದಲ್ಲಿ ನಿರತರಾಗಿದ್ದಾರೆ. ಕೊನೆಗಳಿಗೆಯಲ್ಲಿ ಬಿ.ಫಾರಂ ಪಡೆದು ನಾಮಪತ್ರ ಸಲ್ಲಿಸಿರುವ ಬಿಜೆಪಿ ಅಥ್ಯರ್ಥಿ ಡಾ.ರಾಜೇಶ್ ಗೌಡ ಈಗಷ್ಟೇ ಪ್ರಚಾರ ನಡೆಸುತ್ತಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಇವರಿಗೆ ಸಾಥ್ ನೀಡಿದ್ದಾರೆ. ರಾಜಕೀಯ ಪಟ್ಟುಗಳೇ ಗೊತ್ತಿಲ್ಲದ ಬಿ.ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ ಪಕ್ಷದ ಸಾಂಪ್ರದಾಯಿಕ ಬೆಂಬಲಿಗರು ಮತ್ತು ವರಿಷ್ಠರನ್ನು ನಚ್ಚಿಕೊಂಡು ಕೆಲಸ ಮಾಡುತ್ತಿದ್ದಾರೆ.

ಇದೆಲ್ಲವೂ ಒಂದು ಕಡೆಯಾದರೆ, ಬಿಜೆಪಿಯಲ್ಲಿ ಅಸಮಾಧಾನ ಕಡಿಮೆಯಾದಂತೆ ಕಂಡುಬರುತ್ತಿಲ್ಲ. ಸ್ಥಳೀಯರು ಮತ್ತು ಕ್ಷೇತ್ರದಲ್ಲಿ ಬಿಜೆಪಿಯನ್ನು ತಳಹಂತದಲ್ಲಿ ಕಟ್ಟಿಬೆಳೆಸಿದ ಮೂಲ ಬಿಜೆಪಿ ಮುಖಂಡರನ್ನು ಕಡೆಗಣಿಸಿರುವುದು ಅಸಮಾಧಾನ ತೀವ್ರಗೊಳ್ಳಲು ಕಾರಣವಾಗಿದೆ. ಕೊನೆ ಕ್ಷಣದಲ್ಲಿ ಪಕ್ಷದ ಟಿಕೆಟ್ ಗ್ಯಾರೆಂಟಿ ಮಾಡಿಕೊಂಡು ಪಕ್ಷಕ್ಕೆ ಬಂದ ಮಾಜಿ ಸಂಸದ ಮುಡ್ಲಗಿರಿಯಪ್ಪ ಅವರ ಪುತ್ರ ರಾಜೇಶ್ ಗೌಡ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿರುವುದು ಮೂಲ ಕಾರ್ಯಕರ್ತರ ಬೇಸರಕ್ಕೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಯೊಂದು ನಡೆಯನ್ನು, ಕೆಲಸವನ್ನು ಕಣ್ಣುಮುಚ್ಚಿ ಬೆಂಬಲಿಸುತ್ತಿದ್ದ ಯುವಪಡೆ, ರಾಜೇಶ್ ಗೌಡ ಅವರಿಗೆ ಟಿಕೆಟ್ ನೀಡಿರುವುದನ್ನು ಬಹಿರಂಗವಾಗಿಯೇ ಟೀಕಿಸುತ್ತಿದೆ. ಬಿಜೆಪಿಯ ಪ್ರತಿಯೊಂದು ಕೆಲಸವನ್ನೂ ‘ಸರಿ’ ಎಂದು ಸಮರ್ಥನೆಗೆ ಇಳಿಯುತ್ತಿದ್ದ ಈ ಯುವಪಡೆ, ಅದೇ ಜಾಲತಾಣದಲ್ಲಿ ಅಭ್ಯರ್ಥಿಯ ಸಾಮರ್ಥ್ಯವನ್ನು ಹೀಗಳೆಯುತ್ತಿದೆ. ಟೀಕೆಯನ್ನು ವ್ಯಕ್ತಪಡಿಸುತ್ತಿದೆ. ಗೆಲುವು ಇನ್ನಾರಿಗೋ ಎಂಬಂತೆ ‘ಕೈ’ ತೋರಿಸುತ್ತಿದೆ. ಪಕ್ಷ ಸಮರ್ಥ ಅಭ್ಯರ್ಥಿಗೆ ಟಿಕೆಟ್ ನೀಡಿಲ್ಲ ಎಂದು ಅಸಮಾಧಾನಗೊಂಡಿದೆ. ಹಣದಿಂದ ಗೆಲುವು ಪಡೆಯುವ ಕನಸು ಈಡೇರುವುದಿಲ್ಲ ಎನ್ನುತ್ತಿದೆ ಆ ಯುವಪಡೆ.

ಶಿರಾ ಕ್ಷೇತ್ರದಲ್ಲಿ ಪಕ್ಷವನ್ನು ಬೇರುಮಟ್ಟದಲ್ಲಿ ಕಟ್ಟಲು ಕಾರಣರಾದ ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರನ್ನು ಕಡೆಗಣಿಸಿ ಬೇರೆಯವರಿಗೆ ಟಿಕೆಟ್ ನೀಡಿರುವುದು ಮೂಲ ಬಿಜೆಪಿಗರನ್ನು ಕೆರಳುವಂತೆ ಮಾಡಿದೆ. ಬಿ.ಕೆ.ಮಂಜುನಾಥ್ ಮತ್ತು ಎಸ್.ಆರ್.ಗೌಡ ಅವರಿಗೆ ಮನದಲ್ಲಿ ನೋವು ಮನೆ ಮಾಡಿದ್ದರೂ ಅದನ್ನು ಹೊರಗೆ ತೋರ್ಪಡಿಸುವ ಹಾಗಿಲ್ಲ. ಹಾಗಾಗಿಯೇ ಜಿಲ್ಲಾ ಬಿಜೆಪಿ ಮುಖಂಡರು ಮತ್ತು ರಾಜ್ಯದ ವರಿಷ್ಟರ ತೀರ್ಮಾನಕ್ಕೆ ತಲೆಬಾಗಿ ಮೌನಕ್ಕೆ ಜಾರಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಜೆಡಿಎಸ್ ತೊರೆದು ’ಕೈ’ ಹಿಡಿದ ಸ್ಥಳೀಯ ಮುಖಂಡರು

ರಾಜೇಶ್ ಗೌಡ ದೊಡ್ಡ ಕುಳವೇ! ಅದರಲ್ಲಿ ಅನುಮಾನವಿಲ್ಲ. ಆದರೆ ಅವರ ಗೆಲುವು ತುಂಬ ಕಷ್ಟ ಎನ್ನುತ್ತಾರೆ ಕಟ್ಟಾ ಬಿಜೆಪಿಗರು. ತುಮಕೂರು ಜಿಲ್ಲೆಯಲ್ಲಿ ಮೂಲ ಮತ್ತು ವಲಸಿಗ ಬಿಜೆಪಿಗರ ನಡುವೆ ಬಹಿರಂಗ ಭಿನ್ನಮತ ಅಂತ್ಯವಾದಂತೆ ಕಂಡುಬಂದರೂ ಆಂತರ್ಯದಲ್ಲಿ ಶೀತಲಸಮರ ಮುಂದುವರಿದಿದೆ. ಶಿರಾ ಕ್ಷೇತ್ರದಲ್ಲಿ ಎಸ್.ಆರ್.ಗೌಡ ಮತ್ತು ಬಿ.ಕೆ.ಮಂಜುನಾಥ್ ಬಣಗಳಿದ್ದುದು ಎಲ್ಲರಿಗೂ ತಿಳಿದ ವಿಷಯವೇ ಆಗಿತ್ತು. ಈಗ ರಾಜೇಶ್ ಗೌಡರ ಮೂರನೇ ಬಣವೂ ಹುಟ್ಟಿಕೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ರಾಜೇಶ್ ಗೌಡ ಬಿಜೆಪಿ ಪಕ್ಷಕ್ಕೆ ಏನುಕೊಡುಗೆ ಕೊಟ್ಟಿದ್ದಾರೆ ಎಂಬ ಪ್ರಶ್ನೆ ಸ್ಥಳೀಯ ಬಿಜೆಪಿಗರದ್ದು. ಈ ಪ್ರಶ್ನೆಯನ್ನು ಬಿಜೆಪಿ ಕಾರ್ಯಕರ್ತರು ಬಹಿರಂಗವಾಗಿಯೇ ಕೇಳುತ್ತಿದ್ದಾರೆ. ಆದರೆ ಬಿಜೆಪಿಯ ಯಾವುದೇ ಮುಖಂಡರೂ ಸಾಮಾನ್ಯ ಬಿಜೆಪಿ ಕಾರ್ಯಕರ್ತರ ಈ ‘ಮೂಲ’ ಪ್ರಶ್ನೆಗೆ ಉತ್ತರಿಸುವಂತಹ ಗೋಜಿಗೆ ಹೋಗಿಲ್ಲ. ಅಭಿವೃದ್ಧಿಯ ವಿಷಯಗಳು ಬಿಟ್ಟು ಯಾವುದ್ಯಾವುದೋ ವಿಷಯಗಳನ್ನು ಜನರ ಮನದಲ್ಲಿ ತುಂಬುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇದು ವರ್ಕೌಟ್ ಆಗುತ್ತಾ ಎಂಬುದನ್ನು ಶಿರಾ ಮತದಾರನೇ ಬಲ್ಲ.

ಉಪಚುನಾವಣೆಯಲ್ಲಿ ಮೂಲ ಬಿಜೆಪಿ ಕಾರ್ಯಕರ್ತರು ತಟಸ್ಥರಾಗುವ ಸಾಧ್ಯತೆಗಳೇ ಹೆಚ್ಚಾಗಿವೆ. ಬಣದ ಪ್ರಾಬಲ್ಯವೂ ಇಲ್ಲಿ ಕೆಲಸ ಮಾಡಲಿದೆ. ಹೊನ್ನಾಳಿ ಹೊಡೆತ ಕೊಡಲು ಯುವಪಡೆ ಕಾಯುತ್ತಿದೆ ಎಂದು ಪರಿವಾರದ ಮುಖಂಡರೊಬ್ಬರು ತಿಳಿಸಿದ್ದಾರೆ. ಹಾಗಾಗಿ ಶಿರಾ ಕ್ಷೇತ್ರದಲ್ಲಿ ಮೂಲ V/S ವಲಸಿಗ ಬಿಜೆಪಿ ನಡುವೆ ಫೈಟ್ ನಡೆಯುತ್ತಿದೆ. ಕೊಡಲಿಗೆ ಕಾವು “ಮೂಲ”ವಾಗುವುದೇ? ಎಂಬುದು ಫಲಿತಾಂಶದಿಂದ ಹೊರಬೀಳಲಿದೆ.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...