Homeಕರ್ನಾಟಕಜೆಡಿಎಸ್‌ ಮುಗಿಸುವುದೇ ಕಾಂಗ್ರೆಸ್‌ ನಾಯಕರ ಉದ್ದೇಶ: ಎಚ್‌.ಡಿ ಕುಮಾರಸ್ವಾಮಿ

ಜೆಡಿಎಸ್‌ ಮುಗಿಸುವುದೇ ಕಾಂಗ್ರೆಸ್‌ ನಾಯಕರ ಉದ್ದೇಶ: ಎಚ್‌.ಡಿ ಕುಮಾರಸ್ವಾಮಿ

ಸಿದ್ದರಾಮಯ್ಯ ಅವರು ಜೆಡಿಎಸ್‌ ಎಲ್ಲಿದೆ ಎಂದು ಪ್ರಶ್ನಿಸುತ್ತಾರೆ. ಜೆಡಿಎಸ್ ಎಲ್ಲಿದೆ ಎಂದು ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತೋರಿಸಿದ್ದೇವೆ- ಟಿ.ಎ.ಶರವಣ್

- Advertisement -
- Advertisement -

ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ಲೀಡರ್‌ಗಳ ಅಜೆಂಡಾ ಆಗಿದೆ. ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ. ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಸಿಟ್ಟಿದೆ ಎಂದು ಕಾಂಗ್ರೆಸ್‌ ನಾಯಕರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ರಾಜರಾಜೇಶ್ವರಿ ನಗರ ಉಪಚುನಾವಣೆ ಹಿನ್ನೆಲೆಯಲ್ಲಿ ಲಗ್ಗೆರೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ಹಾಗೂ ಬಿಜೆಪಿ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಸಾಫ್ಟ್‌ಕಾರ್ನರ್‌ ಹೊಂದಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ, ಅದೆಲ್ಲಾ ಸುಳ್ಳು ಜನರ ಹಣ ಲೂಟಿ ಹೊಡೆಯೋರನ್ನು ಟೀಕಿಸದೇ ಬಿಡುವುದಿಲ್ಲ” ಎಂದಿದ್ದಾರೆ.

250 ಕೋಟಿ ರೂ. ಕಳ್ಳ ಬಿಲ್ ಮಾಡಿ ಹಣ ಗುಳುಂ ಮಾಡಿದ್ದಾರೆ. ಬೆವರು ಸುರಿಸಿ ದುಡಿದ ಹಣದಲ್ಲಿ ನಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ಕೊರೊನಾ ಸಮಯದಲ್ಲಿ ಜನಕ್ಕೆ ಸಹಾಯ ಮಾಡಿದ್ದಾರೆ. ಆದರೆ, ಜನರ ಪಾಪದ ಹಣದಲ್ಲಿ ಬಿಜೆಪಿ ಅಭ್ಯರ್ಥಿ ಫುಡ್‌ಕಿಟ್‌ ನೀಡಿದ್ದಾರೆ ಎಂದು ಮುನಿರತ್ನ ವಿರುದ್ಧ ಸಹ ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ನಮ್ಮ ಮುಖ್ಯಮಂತ್ರಿ ಜೊತೆ ಮಾತನಾಡಲು ಸಮಯ ನೀಡುತ್ತಿಲ್ಲ. ಈ ರೀತಿ ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಅವಮಾನ ಮಾಡುತ್ತಿವೆ. ಕನ್ನಡಿಗರ ಸ್ವಾಭಿಮಾನ, ಗೌರವ ಉಳಿಸಲು ಈ ಚುನಾವಣೆ ಮೂಲಕ ರಾಷ್ಟ್ರೀಯ ಪಕ್ಷಗಳಿಗೆ ಉತ್ತರ ನೀಡಿ ಎಂದು ಮತದಾರದಲ್ಲಿ ಮನವಿ ಮಾಡಿದರು.

ಆರು ವರ್ಷದಲ್ಲಿ ಪ್ರಧಾನಿ ಮೋದಿ ಅವರಿಂದ ದೇಶ ಚೀನಾ ವಿರುದ್ಧ ಸ್ಪರ್ಧೆ ಮಾಡುವುದು ಇರಲಿ, ಬಾಂಗ್ಲಾದೇಶದ ಜೊತೆ ಸ್ಪರ್ಧೆ ಮಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ದಿನಕ್ಕೆ ಮೂರು ನಾಲ್ಕು ಡ್ರೆಸ್‌ ಹಾಕಿಕೊಂಡು ಚೆನ್ನಾಗಿ ಕಾಣುವುದೇ ಮೋದಿ ಅವರ ಸಾಧನೆಯಾಗಿದೆ ಎಂದು ವ್ಯಂಗ್ಯವಾಡಿದರು.

ಇಲ್ಲಿ ಕೃಷ್ಣಮೂರ್ತಿ ಅಭ್ಯರ್ಥಿಯಲ್ಲ, ಕಾರ್ಯಕರ್ತರೇ ಅಭ್ಯರ್ಥಿಗಳು. ಅವರನ್ನು ಗೆಲ್ಲಿಸುವ ಮೂಲಕ ಜೆಡಿಎಸ್‌ ಸಮಾಧಿ ಮಾಡುತ್ತೇವೆ ಎಂದವರಿಗೆ ಉತ್ತರ ನೀಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಮಾಜಿ ಪರಿಷತ್‌ ಸದಸ್ಯ ಟಿ.ಎ.ಶರವಣ್‌ ಮಾತನಾಡಿ, ಬಿಜೆಪಿ ಅಭ್ಯರ್ಥಿ ಮುನಿರತ್ನ ಅಲ್ಲ, ‘ಮನಿ’ರತ್ನ ಆಗಿದ್ದಾರೆ. ಸಿದ್ದರಾಮಯ್ಯ ಅವರು ಜೆಡಿಎಸ್‌ ಎಲ್ಲಿದೆ ಎಂದು ಪ್ರಶ್ನಿಸುತ್ತಾರೆ. ಜೆಡಿಎಸ್ ಎಲ್ಲಿದೆ ಎಂದು ಈಗಾಗಲೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತೋರಿಸಿದ್ದೇವೆ. ಎಷ್ಟು ಬಾರಿ ನಿಮಗೆ ಜೆಡಿಎಸ್ ಎಲ್ಲಿದೆ ಎಂದು ತೋರಿಸಬೇಕು ಎಂದು ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.

ಜೆಡಿಎಸ್‌ ಅಭ್ಯರ್ಥಿ ಕೃಷ್ಣಮೂರ್ತಿ ಮಾತನಾಡಿ, ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಮುನಿರತ್ನ‌ ಅವರು ಬಿಜೆಪಿಗೆ ಹೋಗಿದ್ದಾರೆ. ಹನುಮಂತರಾಯಪ್ಪನವರಿಗೆ ಜೆಡಿಎಸ್ ಎದುರು ನಿಲ್ಲಲು ಧೈರ್ಯ ಇಲ್ಲ. ನಮ್ಮ ಪಕ್ಷದ ನಾಯಕರನ್ನು ಸೆಳೆಯುವ ಕೆಲಸವನ್ನು ಕಾಂಗ್ರೆಸ್‌ನವರು ಮಾಡುತ್ತಿದ್ದಾರೆ. ಎರಡು ರಾಷ್ಟ್ರೀಯ ಪಕ್ಷಗಳು ನಿಮ್ಮ ಮತಗಳನ್ನ ಗಿರವಿ ಅಂಗಡಿಯಲ್ಲಿ ಅಡ ಇಡುವ ಕೆಲಸ ಮಾಡುತ್ತಿವೆ ಎಂದು ದೂರಿದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...