Homeಕರ್ನಾಟಕದಿನಕ್ಕೆ 3-4 ಡ್ರೆಸ್‌ ಹಾಕಿ ಚೆನ್ನಾಗಿ ಕಾಣುವುದೇ ಮೋದಿ ಸಾಧನೆ: ಕುಮಾರಸ್ವಾಮಿ

ದಿನಕ್ಕೆ 3-4 ಡ್ರೆಸ್‌ ಹಾಕಿ ಚೆನ್ನಾಗಿ ಕಾಣುವುದೇ ಮೋದಿ ಸಾಧನೆ: ಕುಮಾರಸ್ವಾಮಿ

ಇಡೀ ದೇಶದಲ್ಲಿ ಸಾರ್ವಜನಿಕವಾಗಿ ಮುಖ್ಯಮಂತ್ರಿಯೊಬ್ಬ ಕಣ್ಣೀರು ಹಾಕಿದ್ದಾರೆ ಅಂದರೆ ಅದು ನಾನು ಮಾತ್ರ.

- Advertisement -
- Advertisement -

ದಿನಕ್ಕೆ ಮೂರು ನಾಲ್ಕು ಡ್ರೆಸ್‌ ಹಾಕಿಕೊಂಡು ಚೆನ್ನಾಗಿ ಕಾಣುವುದೇ ಮೋದಿ ಅವರ ಸಾಧನೆಯಾಗಿದೆ ಎಂದು ಪ್ರಧಾನಿ ಮೋದಿ ವಿರುದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಲಗ್ಗೆರೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ದೇವೇಗೌಡರ ಕುಟುಂಬವನ್ನು ದುಡ್ಡು ಕೊಟ್ಟು ಕೊಂಡುಕೊಳ್ಳಲು ಆಗುವುದಿಲ್ಲ. ಇಡೀ ದೇಶದಲ್ಲಿ ಸಾರ್ವಜನಿಕವಾಗಿ ಮುಖ್ಯಮಂತ್ರಿಯೊಬ್ಬ ಕಣ್ಣೀರು ಹಾಕಿದ್ದಾರೆ ಅಂದರೆ ಅದು ನಾನು ಮಾತ್ರ. ಅಂತಹ ವಾತಾವರಣದಲ್ಲಿ ನಾನಿದ್ದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೆಜೆ ಹಳ್ಳಿ-ಡಿಜೆ ಹಳ್ಳಿ ಅಶಾಂತಿಗೆ ಕಾಂಗ್ರೆಸ್ ನಾಯಕರೇ ಕಾರಣ: ಕುಮಾರಸ್ವಾಮಿ ಆರೋಪ

ಆರು ವರ್ಷದಲ್ಲಿ ಪ್ರಧಾನಿ ಮೋದಿ ಅವರಿಂದ ದೇಶ ಚೀನಾ ವಿರುದ್ಧ ಸ್ಪರ್ಧೆ ಮಾಡುವುದು ಇರಲಿ, ಬಾಂಗ್ಲಾದೇಶದ ಜೊತೆ ಸ್ಪರ್ಧೆ ಮಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ದಿನಕ್ಕೆ ಮೂರು ನಾಲ್ಕು ಡ್ರೆಸ್‌ ಹಾಕಿಕೊಂಡು ಚೆನ್ನಾಗಿ ಕಾಣುವುದೇ ಮೋದಿ ಅವರ ಸಾಧನೆಯಾಗಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ಇಲ್ಲಿ ಕೃಷ್ಣಮೂರ್ತಿ ಅಭ್ಯರ್ಥಿಯಲ್ಲ, ಕಾರ್ಯಕರ್ತರೇ ಅಭ್ಯರ್ಥಿಗಳು ಎಂದು ತಿಳಿದು ಜೆಡಿಎಸ್‌ ಸಮಾಧಿ ಮಾಡುತ್ತೇವೆ ಎಂದವರಿಗೆ ಉತ್ತರ ನೀಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾಂಗ್ರೆಸ್‌ಗೆ ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಸಿಟ್ಟಿದೆ, ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ನಾಯಕರ ಅಜೆಂಡಾ, ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ ಎಂದು ಅವರು ಹೇಳಿದರು.

ಬಿಜೆಪಿ ಹಾಗೂ ಬಿಜೆಪಿ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಸಾಫ್ಟ್‌ಕಾರ್ನರ್‌ ಹೊಂದಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಜನರ ಹಣ ಲೂಟಿ ಹೊಡೆಯೋರ ಬಗ್ಗೆ ನಾನು ಮಾತಾಡಲ್ಲ. 250 ಕೋಟಿ ರೂ. ಕಳ್ಳ ಬಿಲ್ ಮಾಡಿ ಹಣ ಗುಳುಂ ಮಾಡಿದ್ದಾರೆ. ಬೆವರು ಸುರಿಸಿ ದುಡಿದ ಹಣದಲ್ಲಿ ನಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ಕೊರೊನಾ ಸಮಯದಲ್ಲಿ ಜನಕ್ಕೆ ಸಹಾಯ ಮಾಡಿದ್ದಾರೆ. ಆದರೆ, ಜನರ ಪಾಪದ ಹಣದಲ್ಲಿ ಬಿಜೆಪಿ ಅಭ್ಯರ್ಥಿ ಫುಡ್‌ಕಿಟ್‌ ನೀಡಿದ್ದಾರೆ ಎಂದು ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದರು.

ನನ್ನ ಸರಕಾರವನ್ನು ಯಾರೂ 10 ಪರ್ಸೆಂಟ್‌ ಸರಕಾರ ಎಂದು ಯಾರೂ ಹೇಳಲಿಲ್ಲ. ನಾನು ಅಧಿಕಾರದಲ್ಲಿದ್ದಾಗ ಜನರಿಗೆ ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ್ದೇನೆ. ಪ್ರಧಾನಿ ಮೋದಿ ನಮ್ಮ ಮುಖ್ಯಮಂತ್ರಿ ಜೊತೆ ಮಾತನಾಡಲು ಸಮಯ ನೀಡುತ್ತಿಲ್ಲ. ಈ ರೀತಿ ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಅವಮಾನ ಮಾಡುತ್ತಿವೆ. ಕನ್ನಡಿಗರ ಸ್ವಾಭಿಮಾನ, ಗೌರವ ಉಳಿಸಲು ಈ ಚುನಾವಣೆ ಮೂಲಕ ರಾಷ್ಟ್ರೀಯ ಪಕ್ಷಗಳಿಗೆ ಉತ್ತರ ನೀಡಿ ಎಂದು ಕುಮಾರಸ್ವಾಮಿ ಕರೆನೀಡಿದರು.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...