Homeಕರ್ನಾಟಕದಿನಕ್ಕೆ 3-4 ಡ್ರೆಸ್‌ ಹಾಕಿ ಚೆನ್ನಾಗಿ ಕಾಣುವುದೇ ಮೋದಿ ಸಾಧನೆ: ಕುಮಾರಸ್ವಾಮಿ

ದಿನಕ್ಕೆ 3-4 ಡ್ರೆಸ್‌ ಹಾಕಿ ಚೆನ್ನಾಗಿ ಕಾಣುವುದೇ ಮೋದಿ ಸಾಧನೆ: ಕುಮಾರಸ್ವಾಮಿ

ಇಡೀ ದೇಶದಲ್ಲಿ ಸಾರ್ವಜನಿಕವಾಗಿ ಮುಖ್ಯಮಂತ್ರಿಯೊಬ್ಬ ಕಣ್ಣೀರು ಹಾಕಿದ್ದಾರೆ ಅಂದರೆ ಅದು ನಾನು ಮಾತ್ರ.

- Advertisement -
- Advertisement -

ದಿನಕ್ಕೆ ಮೂರು ನಾಲ್ಕು ಡ್ರೆಸ್‌ ಹಾಕಿಕೊಂಡು ಚೆನ್ನಾಗಿ ಕಾಣುವುದೇ ಮೋದಿ ಅವರ ಸಾಧನೆಯಾಗಿದೆ ಎಂದು ಪ್ರಧಾನಿ ಮೋದಿ ವಿರುದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಲಗ್ಗೆರೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ವಿ.ಕೃಷ್ಣಮೂರ್ತಿ ಪರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ, ದೇವೇಗೌಡರ ಕುಟುಂಬವನ್ನು ದುಡ್ಡು ಕೊಟ್ಟು ಕೊಂಡುಕೊಳ್ಳಲು ಆಗುವುದಿಲ್ಲ. ಇಡೀ ದೇಶದಲ್ಲಿ ಸಾರ್ವಜನಿಕವಾಗಿ ಮುಖ್ಯಮಂತ್ರಿಯೊಬ್ಬ ಕಣ್ಣೀರು ಹಾಕಿದ್ದಾರೆ ಅಂದರೆ ಅದು ನಾನು ಮಾತ್ರ. ಅಂತಹ ವಾತಾವರಣದಲ್ಲಿ ನಾನಿದ್ದೆ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕೆಜೆ ಹಳ್ಳಿ-ಡಿಜೆ ಹಳ್ಳಿ ಅಶಾಂತಿಗೆ ಕಾಂಗ್ರೆಸ್ ನಾಯಕರೇ ಕಾರಣ: ಕುಮಾರಸ್ವಾಮಿ ಆರೋಪ

ಆರು ವರ್ಷದಲ್ಲಿ ಪ್ರಧಾನಿ ಮೋದಿ ಅವರಿಂದ ದೇಶ ಚೀನಾ ವಿರುದ್ಧ ಸ್ಪರ್ಧೆ ಮಾಡುವುದು ಇರಲಿ, ಬಾಂಗ್ಲಾದೇಶದ ಜೊತೆ ಸ್ಪರ್ಧೆ ಮಾಡಬೇಕಾದ ಸನ್ನಿವೇಶ ಸೃಷ್ಟಿಯಾಗಿದೆ. ದಿನಕ್ಕೆ ಮೂರು ನಾಲ್ಕು ಡ್ರೆಸ್‌ ಹಾಕಿಕೊಂಡು ಚೆನ್ನಾಗಿ ಕಾಣುವುದೇ ಮೋದಿ ಅವರ ಸಾಧನೆಯಾಗಿದೆ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ, ಇಲ್ಲಿ ಕೃಷ್ಣಮೂರ್ತಿ ಅಭ್ಯರ್ಥಿಯಲ್ಲ, ಕಾರ್ಯಕರ್ತರೇ ಅಭ್ಯರ್ಥಿಗಳು ಎಂದು ತಿಳಿದು ಜೆಡಿಎಸ್‌ ಸಮಾಧಿ ಮಾಡುತ್ತೇವೆ ಎಂದವರಿಗೆ ಉತ್ತರ ನೀಡಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಕಾಂಗ್ರೆಸ್‌ಗೆ ಬಿಜೆಪಿಗಿಂತ ಜೆಡಿಎಸ್‌ ಮೇಲೆಯೇ ಅವರಿಗೆ ಹೆಚ್ಚು ಸಿಟ್ಟಿದೆ, ಜೆಡಿಎಸ್‌ ಮುಗಿಸಬೇಕು ಎಂಬುದೇ ಕಾಂಗ್ರೆಸ್‌ ನಾಯಕರ ಅಜೆಂಡಾ, ಅದು ಆಕ್ರೋಶವೋ, ಭಯವೋ ಗೊತ್ತಿಲ್ಲ ಎಂದು ಅವರು ಹೇಳಿದರು.

ಬಿಜೆಪಿ ಹಾಗೂ ಬಿಜೆಪಿ ಅಭ್ಯರ್ಥಿ ಬಗ್ಗೆ ಕುಮಾರಸ್ವಾಮಿ ಸಾಫ್ಟ್‌ಕಾರ್ನರ್‌ ಹೊಂದಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಜನರ ಹಣ ಲೂಟಿ ಹೊಡೆಯೋರ ಬಗ್ಗೆ ನಾನು ಮಾತಾಡಲ್ಲ. 250 ಕೋಟಿ ರೂ. ಕಳ್ಳ ಬಿಲ್ ಮಾಡಿ ಹಣ ಗುಳುಂ ಮಾಡಿದ್ದಾರೆ. ಬೆವರು ಸುರಿಸಿ ದುಡಿದ ಹಣದಲ್ಲಿ ನಮ್ಮ ಅಭ್ಯರ್ಥಿ ಕೃಷ್ಣಮೂರ್ತಿ ಕೊರೊನಾ ಸಮಯದಲ್ಲಿ ಜನಕ್ಕೆ ಸಹಾಯ ಮಾಡಿದ್ದಾರೆ. ಆದರೆ, ಜನರ ಪಾಪದ ಹಣದಲ್ಲಿ ಬಿಜೆಪಿ ಅಭ್ಯರ್ಥಿ ಫುಡ್‌ಕಿಟ್‌ ನೀಡಿದ್ದಾರೆ ಎಂದು ಮುನಿರತ್ನ ವಿರುದ್ಧ ವಾಗ್ದಾಳಿ ನಡೆಸಿದರು.

ನನ್ನ ಸರಕಾರವನ್ನು ಯಾರೂ 10 ಪರ್ಸೆಂಟ್‌ ಸರಕಾರ ಎಂದು ಯಾರೂ ಹೇಳಲಿಲ್ಲ. ನಾನು ಅಧಿಕಾರದಲ್ಲಿದ್ದಾಗ ಜನರಿಗೆ ಶಾಶ್ವತ ಕಾರ್ಯಕ್ರಮಗಳನ್ನು ನೀಡಿದ್ದೇನೆ. ಪ್ರಧಾನಿ ಮೋದಿ ನಮ್ಮ ಮುಖ್ಯಮಂತ್ರಿ ಜೊತೆ ಮಾತನಾಡಲು ಸಮಯ ನೀಡುತ್ತಿಲ್ಲ. ಈ ರೀತಿ ರಾಷ್ಟ್ರೀಯ ಪಕ್ಷಗಳು ರಾಜ್ಯಕ್ಕೆ ಅವಮಾನ ಮಾಡುತ್ತಿವೆ. ಕನ್ನಡಿಗರ ಸ್ವಾಭಿಮಾನ, ಗೌರವ ಉಳಿಸಲು ಈ ಚುನಾವಣೆ ಮೂಲಕ ರಾಷ್ಟ್ರೀಯ ಪಕ್ಷಗಳಿಗೆ ಉತ್ತರ ನೀಡಿ ಎಂದು ಕುಮಾರಸ್ವಾಮಿ ಕರೆನೀಡಿದರು.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಮನುಷ್ಯತ್ವ ಇದೆಯಾ?; ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...