Homeಅಂತರಾಷ್ಟ್ರೀಯಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

ಜೋ ಬಿಡನ್ ಚೀನಾದ ಬಗ್ಗೆ ಮೃಧು ದೋರಣೆಯುಳ್ಳವರಾಗಿರುವ ಕಾರಣ ಅವರು ಭಾರತಕ್ಕೆ ಒಳ್ಳೆಯದಾಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರ Jr. ಟ್ರಂಪ್ ಆರೋಪಿಸಿದ್ದಾರೆ.

- Advertisement -
- Advertisement -

ಅಮೇರಿಕಾ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಜೋ ಬಿಡನ್ ಚೀನಾದ ಬಗ್ಗೆ ಮೃಧು ದೋರಣೆಯುಳ್ಳವರಾಗಿರುವ ಕಾರಣ ಅವರು ಗೆದ್ದರೆ, ಭಾರತಕ್ಕೆ ಒಳ್ಳೆಯದಾಗುವುದಿಲ್ಲ ಎಂದು, ಜೋ ಬಿಡೆನ್ ವಿರುದ್ಧದ ಆರೋಪಗಳ ಕುರಿತ ಪುಸ್ತಕದ ಯಶಸ್ಸಿನ ಬಗ್ಗೆ ಮಾತನಾಡುವಾಗ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರ Jr. ಟ್ರಂಪ್ ಈ ಮಾತನ್ನು ಹೇಳಿದ್ದಾರೆ.

ಡೊನಾಲ್ಡ್‌ ಟ್ರಂಪ್ ಮಗ ತಮ್ಮ ತಂದೆಯ ಪರವಾಗಿ ಮರು ಚುನಾವಣಾ ಪ್ರಚಾರಕ್ಕೆ ಮುಂದಾಗಿದ್ದಾರೆ. ಅಮೇರಿಕಾದಲ್ಲಿ ಅಧ್ಯಕ್ಷೀಯ ಚುನಾವಣೆ ನವೆಂಬರ್ 3 ರಂದು ನಡೆಯಲಿದೆ.

“ನಾವು ಚೀನಾದ ಬೆದರಿಕೆಯನ್ನು ಅರ್ಥಮಾಡಿಕೊಳ್ಳಬೇಕು. ಬಹುಶಃ ಇದು ಭಾರತೀಯ-ಅಮೆರಿಕನ್ನರಿಗೆ ಚೆನ್ನಾಗಿ ತಿಳಿದಿರಬಹುದು” ಎಂದು ನ್ಯೂಯಾರ್ಕ್‌ನ ಲಾಂಗ್ ಐಲ್ಯಾಂಡ್‌ನ ಕಾರ್ಯಕ್ರಮದಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದರು ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಚರ್ಚೆಯಲ್ಲಿ ಭಾಗವಹಿಸಲು ನಿರಾಕರಿಸಿದ ಟ್ರಂಪ್

ಅವರು ತಮ್ಮ ಲಿಬರಲ್ ಪ್ರಿವಿಲೇಜ್ ಎಂಬ ಪುಸ್ತಕದಲ್ಲಿ, ಜೋ ಬಿಡೆನ್ ಕುಟುಂಬದ ವಿರುದ್ಧ, ವಿಶೇಷವಾಗಿ ಅವರ ಮಗ ಹಂಟರ್ ಬಿಡೆನ್ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ದಾಖಲಿಸಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಡೊನಾಲ್ಡ್‌ ಟ್ರಂಪ್ ಅತ್ಯುತ್ತಮವಾದ ಸಂಬಂಧ ಹೊಂದಿದ್ದಾರೆ. ಅಮೇರಿಕಾದಲ್ಲಿ ನಡೆಯುವ ಟ್ರಂಪ್ ರ್ಯಾಲಿಗಳನ್ನೇ ದೊಡ್ಡದು ಎಂದುಕೊಂಡಿದ್ದೆ. ಆದರೆ ಭಾರತದಲ್ಲಿ ಅದಕ್ಕಿಂತಲೂ ದೊಡ್ಡ ರ್ಯಾಲಿ ನಡೆದಿತ್ತು. ಸೋಶಿಯಲಿಸಂ ಮತ್ತು ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ ಮತ್ತು ಅಮೇರಿಕಾ ಜೊತೆಯಾಗಿರಬೇಕೆಂಬುದು ಎರಡೂ ದೇಶದ ನಾಯಕರ ಅಭಿಲಾಷೆಯಾಗಿದೆ ಎಂದು ಜೂನಿಯರ್ ಟ್ರಂಪ್ ಹೇಳಿದ್ದಾರೆ.


ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...