Homeಸಿನಿಮಾಕ್ರೀಡೆಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಜಾರ್ಖಂಡ್: ಬಡತನದಿಂದ ಮದ್ಯ ಮಾರುವ ಸ್ಥಿತಿಗೆ ಬಂದ ನ್ಯಾಷನಲ್ ಕರಾಟೆ ಚಾಂಪಿಯನ್!

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ರಾಂಚಿ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ. 

- Advertisement -
- Advertisement -

ದೇಶದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಕ್ರೀಡೆ ಎಂದರೇ ಕ್ರಿಕೆಟ್ ಎನ್ನುವಂತಾಗಿದೆ. ಬೇರೆ ಕ್ರೀಡೆಗಳಿಗೆ, ಕ್ರೀಡಾಪಟುಗಳಿಗೆ ಸಿಗುತ್ತಿರುವ ಮಾನ್ಯತೆ ಕೂಡ ಅಷ್ಟಕ್ಕಷ್ಟೇ. ಇದಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಜಾರ್ಖಾಂಡ್‌ನ ಈ ಕರಾಟೆ ಚಾಂಪಿಯನ್ ಬಡತನದಿಂದಾಗಿ ಮದ್ಯ ಮಾರಬೇಕಾದ ಪರಿಸ್ಥಿತಿ ತಲುಪಿದ್ದಾರೆ.

34ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಸೇರಿದಂತೆ, ಜಾರ್ಖಂಡ್ ರಾಜ್ಯಕ್ಕಾಗಿ ಡಜನ್‌ಗಟ್ಟಲೇ ಪದಕಗಳನ್ನು ಬಾಚಿಕೊಂಡಿದ್ದ ರಾಷ್ಟ್ರೀಯ ಕರಾಟೆ ಚಾಂಪಿಯನ್ ವಿಮಲಾ ಮುಂಡಾ, ಜೀವನೋಪಾಯಕ್ಕಾಗಿ ‘ಹಾಂಡಿಯಾ’ (ಅಕ್ಕಿಯಿಂದ ತಯಾರಿಸುವ ಮದ್ಯ) ಮಾರಾಟ ಮಾಡುವ ಸ್ಥಿತಿಗೆ ಬಂದಿದ್ದಾರೆ.

“ಕೆಟ್ಟ ಆರ್ಥಿಕ ಪರಿಸ್ಥಿತಿಗಳಿಂದಾಗಿ, ನನ್ನ ಕುಟುಂಬದ ತೀವ್ರ ಬಡತನಕ್ಕೆ ದೂಡಿದೆ. ಕುಟುಂಬದ ಜೀವನೋಪಾಯಕ್ಕಾಗಿ ಜೊತೆಗೆ ನನ್ನ ಕರಾಟೆ ಅಭ್ಯಾಸವನ್ನು ಮುಂದುವರೆಸಲು ಲಾಕ್‌ಡೌನ್ ಸಮಯದಲ್ಲಿ ಈ ವ್ಯವಹಾರವನ್ನು ಪ್ರಾರಂಭಿಸಬೇಕಾಯಿತು” ಎಂದು 26 ವರ್ಷದ ಕ್ರೀಡಾಪಟು ಹೇಳಿದ್ದಾರೆ.

ಇದನ್ನೂ ಓದಿ: ”ಬೇಟಿ ಬಚಾವೋ ಈಗ ಅಪರಾಧಿ ಬಚಾವೋ ಆಗಿದೆ”: ರಾಹುಲ್, ಪ್ರಿಯಾಂಕಾ ಕಿಡಿ

“ಈ ಆಟದಲ್ಲಿ, ಕ್ರೀಡಾಪಟುಗಳೇ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಮತ್ತು ಪ್ರತಿ ಪಂದ್ಯಾವಳಿಗಾಗಿ ಪ್ರಯಾಣ ವೆಚ್ಚ ತಾವೇ ಭರಿಸಬೇಕಾಗುತ್ತದೆ, ಇದಕ್ಕೆ ಸಾಕಷ್ಟು ಹಣ ಬೇಕಾಗುತ್ತದೆ” ಎಂದು ಅವರು ಹೇಳಿದ್ದಾರೆ.

5ನೇ ತರಗತಿಯಿಂದಲೇ ಕರಾಟೆ ಕಲಿಯಲು ಪ್ರಾರಂಭಿಸಿ, ರಾಜ್ಯಕ್ಕಾಗಿ ಹಲವಾರು ಪದಕಗಳನ್ನು ತಂದಿರುವ ಈ  ಜಾರ್ಖಂಡ್ ಯುವತಿ, ತನ್ನ ಬಳಿ ಹಲವಾರು ಪದಕಗಳು ಇವೆ. ಆದರೆ ಅವುಗಳನ್ನು ಸುರಕ್ಷಿತವಾಗಿಡಲು ಮನೆಯಲ್ಲಿ ಸರಿಯಾದ ಸ್ಥಳವಿಲ್ಲ ಹಾಗಾಗಿ ಅವುಗಳಲ್ಲಿ ಹೆಚ್ಚಿನವು ಮುರಿದುಹೋಗಿವೆ. ಕೆಲವೊಂದು ಬಣ್ಣ ಕಳೆದುಕೊಳ್ಳುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಮಲಾ ಮುಂಡಾ ಅವರ ತಾಯಿ  ದಿನಕೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆದರೆ ವೃದ್ಧಾಪ್ಯ ಮತ್ತು ಅನಾರೋಗ್ಯದ ಸಮಸ್ಯೆಯಿಂದಾಗಿ ಕೆಲಸಕ್ಕೆ ಹೋಗುವುದನ್ನು ನಿಲ್ಲಿಸಿದರು.

“2011 ರಲ್ಲಿ ಜಾರ್ಖಂಡ್‌ನಲ್ಲಿ ಆಯೋಜಿಸಿದ್ದ 34 ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ನಾನು ಬೆಳ್ಳಿ ಪದಕ ಗೆದ್ದಿದ್ದೇನೆ. 2014 ರಲ್ಲಿ ಅಕ್ಷಯ್ ಕುಮಾರ್ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ನಾನು ಎರಡು ಚಿನ್ನದ ಪದಕಗಳನ್ನು ಕೂಡ ಪಡೆದಿದ್ದೇನೆ” ಎಂದು ವಿಮಲಾ ಮುಂಡಾ ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ರಾಜ್ಯ ಸರ್ಕಾರದಿಂದ ಸ್ವಲ್ಪ ವಿದ್ಯಾರ್ಥಿವೇತನ ಅಥವಾ ಉದ್ಯೋಗ ಸಿಗುವ ಮುಂಡಾ ಅವರ ನಿರೀಕ್ಷೆ ಹುಸಿಯಾಗಿದೆ. ಬೇರೆ ದಾರಿಯಿಲ್ಲದ ಕಾರಣ, ಆಕೆ ತನ್ನ ತಾಯಿಯೊಂದಿಗೆ ಮದ್ಯ ಮಾರಾಟ ಮಾಡಲು ಪ್ರಾರಂಭಿಸಿದ್ದಾರೆ.

ಪದಕಗಳು ಮತ್ತು ಪ್ರಮಾಣಪತ್ರಗಳ ರಾಶಿಯನ್ನು ಕಂಡಾಗ ಮೊದಲು ತಮ್ಮ ಸಾಧನೆಗಳ ಬಗ್ಗೆ ಹೆಮ್ಮೆ ಪಡುತ್ತಿದ್ದ ಈಕೆ ಈಗ ಸಮಯ ಮತ್ತು ಕಠಿಣ ವಾಸ್ತವತೆ ತನ್ನನ್ನು ಬದಲಾಯಿಸಿದೆ ಎನ್ನುತ್ತಾರೆ.

ಮುಂಡಾ ಅವರು ರಾಜ್ಯ ಸರ್ಕಾರದಿಂದ ಯಾವುದೇ ಹಣಕಾಸಿನ ಸಹಾಯವನ್ನು ಬಯಸುವುದಿಲ್ಲ. ಆದರೆ 2019 ರಲ್ಲಿ ರಾಜ್ಯಕ್ಕೆ ಪದಕಗಳನ್ನು ಗೆದ್ದ 264 ಕ್ರೀಡಾಪಟುಗಳಲ್ಲಿ 33 ಜನರನ್ನು ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿಗೆ ಆಯ್ಕೆ ಮಾಡಲಾಗಿದೆ . ಅದರ ನೇಮಕಾತಿ ಪ್ರಕ್ರಿಯೆಯನ್ನು ಸರ್ಕಾರ ತ್ವರಿತಗೊಳಿಸಬೇಕು ಎಂದು ಬಯಸುತ್ತಾರೆ.

“ಹಿಂದಿನ ಸರ್ಕಾರವು ಪದಕಗಳನ್ನು ಪಡೆದ ಕ್ರೀಡಾಪಟುಗಳ ನೇರ ನೇಮಕಾತಿಯನ್ನು ಘೋಷಿಸಿದ ನಂತರ ನಾವು ಭರವಸೆ ಹೊಂದಿದ್ದೇವು. ಆದರೆ ಇಂದಿನ ಸರ್ಕಾರವು ಈ ವಿಷಯದಲ್ಲಿ ಕ್ರಮಗಳನ್ನು ತೆಗೆದುಕೊಳ್ಳದ ಕಾರಣ ಆ ಭರವಸೆಯು ದಿನ ಕಳೆದಂತೆ ಕಡಿಮೆಯಾಯಿತು” ಎಂದರು.

ಕ್ರೀಡಾಪಟು ಬಗ್ಗೆ ಸ್ಥಳೀಯ ಪತ್ರಕರ್ತರ ಟ್ವೀಟ್ ಗಮನಿಸಿದ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ವಿಮಲಾ ಮುಂಡಾಗೆ ಸಹಾಯ ಮಾಡಲು ಆದೇಶಿಸಿದ್ದಾರೆ.

ರಾಂಚಿ ಜಿಲ್ಲಾಧಿಕಾರಿಗಳಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸೊರೆನ್, ಇದನ್ನು ತಕ್ಷಣ ಗಮನಿಸಿ, ಕ್ರೀಡಾ ಕಾರ್ಯದರ್ಶಿಯೊಂದಿಗೆ ಮಾತಾನಾಡಿ ಸಹೋದರಿ ವಿಮಲಾಗೆ ಸಹಾಯ ಮಾಡಿ ಎಂದಿದ್ದಾರೆ. ಜೊತೆಗೆ ಮುಂಬರುವ ಕ್ರೀಡಾ ನೀತಿಯ ಅನುಷ್ಠಾನದ ನಂತರ ಆಟಗಾರರ ಭವಿಷ್ಯವು ಸುಧಾರಿಸುತ್ತದೆ ಎಂದು ನಾನು ಜನರಿಗೆ ಹೇಳಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...