Homeಮುಖಪುಟಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ - ನಿತೀಶ್‌ ಕುಮಾರ್‌ಗೆ ತಲೆನೋವು!

ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

"ಚಿರಾಗ್ ಪಾಸ್ವಾನ್ ಅವರೊಂದಿಗೆ ನಿತೀಶ್ ಕುಮಾರ್ ವರ್ತಿಸಿರುವ ರೀತಿ ಸರಿಯಲ್ಲ. ಚಿರಾಗ್ ಪಾಸ್ವಾನ್ ಅವರಿಗೆ ಹಿಂದೆಂದಿಗಿಂತಲೂ ಈ ಸಮಯದಲ್ಲಿ ಅವರ ತಂದೆಯ ಅಗತ್ಯವಿದೆ. ನಿತೀಶ್ ಕುಮಾರ್ ಅವರು ಚಿರಾಗ್‌ ಪಾಸ್ವಾನ್‌ಗೆ ಅನ್ಯಾಯ ಮಾಡಿದ್ದಾರೆ"- ತೇಜಸ್ವಿ ಯಾದವ್

- Advertisement -
- Advertisement -

ಬಿಹಾರ ಚುನಾವಣೆಗಳು ಹತ್ತಿರವಾಗುತ್ತಿದ್ದಂತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರ ವಿರೋಧಿಗಳ ಸಂಖ್ಯೆಯು ಹೆಚ್ಚಾಗುತ್ತಿದೆ. ನಿತೀಶ್ ಕುಮಾರ್ ನಾಯಕತ್ವ ವಿರೋಧಿಸಿ ಚಿರಾಗ್ ಪಾಸ್ವಾನ್ ಎನ್‌ಡಿಎ ಮೈತ್ರಿ ಮುರಿದಿದ್ದಾರೆ. ಈಗ ಚಿರಾಗ್ ಪಾಸ್ವಾನ್ ಪರ ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಬ್ಯಾಟ್ ಬೀಸಿದ್ದಾರೆ.

ಲೋಕ ಜನಶಕ್ತಿ ಪಕ್ಷದ ನಾಯಕ ಚಿರಾಗ್ ಪಾಸ್ವಾನ್ ಆಡಳಿತರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದಿಂದ (ಎನ್‌ಡಿಎ) ಹೊರಬಂದು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ. ತಾವು ಚುನಾವಣೆಯಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಹೋರಾಡುತ್ತಿದ್ದರೂ ಕೂಡ ಬಿಜೆಪಿಗೆ ಮಿತ್ರರಾಗಿಯೇ ಇರಬೇಕೆಂದು ಬಯಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಎಲ್‌ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ ಅನ್ಯಾಯವೆಸಗಿದ್ದಾರೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಆರೋಪಿಸಿದ್ದಾರೆ. ಇದು ನಿತೀಶ್ ಕುಮಾರ್ ಅವರಲ್ಲಿ ಆತಂಕ ಉಂಟು ಮಾಡಿದೆ.

ಇದನ್ನೂ ಓದಿ: ಬಿಜೆಪಿ ’ಸಮ್ಮಿಶ್ರ ಧರ್ಮ’ ನೀತಿ ಅನುಸರಿಸುತ್ತಿದೆ: ಚಿರಾಗ್ ಪಾಸ್ವಾನ್

“ಚಿರಾಗ್ ಪಾಸ್ವಾನ್ ಅವರೊಂದಿಗೆ ನಿತೀಶ್ ಕುಮಾರ್ ವರ್ತಿಸಿರುವ ರೀತಿ ಸರಿಯಲ್ಲ. ಚಿರಾಗ್ ಪಾಸ್ವಾನ್ ಅವರಿಗೆ ಹಿಂದೆಂದಿಗಿಂತಲೂ ಈ ಸಮಯದಲ್ಲಿ ಅವರ ತಂದೆಯ ಅಗತ್ಯವಿದೆ. ಆದರೆ ರಾಮ್ ವಿಲಾಸ್ ಪಾಸ್ವಾನ್ ನಮ್ಮ ನಡುವೆ ಇಲ್ಲ. ಈ ಬಗ್ಗೆ ನಾವು ದುಃಖಿತರಾಗಿದ್ದೇವೆ. ನಿತೀಶ್ ಕುಮಾರ್ ಅವರು ಚಿರಾಗ್‌ ಪಾಸ್ವಾನ್‌ಗೆ ಅನ್ಯಾಯ ಮಾಡಿದ್ದಾರೆ” ಎಂಬ ತೇಜಸ್ವಿ ಯಾದವ್ ಅವರ ಹೇಳಿಕೆ ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

ಚಿರಾಗ್ ಪಾಸ್ವಾನ್, ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ, ಅವರ ತಂದೆ, ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಮರಣದ ನಂತರ ನಿತೀಶ್ ಕುಮಾರ್ ಅವರ ವರ್ತನೆಯಿಂದ ತೀವ್ರ ನೋವುಂಟಾಗಿರುವುದಾಗಿ ತಿಳಿಸಿದ್ದರು.

ದುಖಃದ ಸಮಯದಲ್ಲೂ ಕೂಡ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮಗಾಗಲಿ, ತಮ್ಮ ತಾಯಿಗಾಗಲಿ ಸಮಾಧಾನದ ಮಾತು ಕೂಡ ಆಡಲಿಲ್ಲ ಎಂದು ದೂಷಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ತೇಜಸ್ವಿ ಯಾದವ್ ಹೇಳಿಕೆ ಹೊರಬಿದ್ದಿದೆ.

ಇದನ್ನೂ ಓದಿ: ಬಿಹಾರ: ಟ್ರಂಪ್ ಬಂದು ವಿಶೇಷ ಸ್ಥಾನಮಾನ ನೀಡುತ್ತಾರಾ?- ನಿತೀಶ್‌ಗೆ ತೇಜಸ್ವಿ ಯಾದವ್ ಪ್ರಶ್ನೆ!

ಬಿಹಾರ ಚುನಾವಣೆಯಲ್ಲಿ ಚಿರಾಗ್ ನೇತೃತ್ವದ ಎಲ್‌ಜೆಪಿ, 243 ಸದಸ್ಯರ ವಿಧಾನಸಭೆಗೆ 143 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಅಕ್ಟೋಬರ್ 21ರಿಂದ ಚಿರಾಗ್ ಪ್ರಚಾರ ಆರಂಭಿಸಲಿದ್ದಾರೆ. ಅಕ್ಟೋಬರ್ 28, ನವೆಂಬರ್ 3 ಮತ್ತು 7 ರಂದು ಮತದಾನ ನಡೆಯಲಿದ್ದು, ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.

ಬಿಜೆಪಿಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಬಗ್ಗೆ ಕೋಪ ಇದ್ದರೂ ಸಹ ಮಿತ್ರರಾಗಿ “ಸಮ್ಮಿಶ್ರ ಧರ್ಮ” ವನ್ನು ಅನುಸರಿಸುತ್ತಿದೆ ಎಂದು ಚಿರಾಗ್ ಪಾಸ್ವಾನ್ ನಿನ್ನೆ ಹೇಳಿದ್ದರು.

ಆದರೆ ಕಳೆದ ಕೆಲವು ದಿನಗಳಲ್ಲಿ ಚಿರಾಗ್ ಹಿರಿಯ ನಾಯಕರ ಸಾಮೀಪ್ಯವನ್ನು ತಿಳಿಸುವ ಮೂಲಕ ಗೊಂದಲವನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಎನ್‌ಡಿಎ ಮೈತ್ರಿಕೂಟವು ಜಯಗಳಿಸಿದರೆ ನಿತೀಶ್ ಕುಮಾರ್ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂದು ಪುನರುಚ್ಚರಿಸಿದೆ.


ಇದನ್ನೂ ಓದಿ: ಬಿಹಾರ: ಕಾಂಗ್ರೆಸ್ ಸೇರಿದ ಶರದ್ ಯಾದವ್ ಪುತ್ರಿ ಸುಭಾಷಿಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...