Homeಮುಖಪುಟಜಿಡಿಪಿ ಕುಸಿತ, ಕೋವಿಡ್ ಸಾವುಗಳಲ್ಲಿ ಅಧಿಕ: ಏಷ್ಯಾ ದೇಶಗಳಲ್ಲಿಯೇ ಭಾರತದ ಸಾಧನೆ ತೀರಾ ಕಳಪೆ!

ಜಿಡಿಪಿ ಕುಸಿತ, ಕೋವಿಡ್ ಸಾವುಗಳಲ್ಲಿ ಅಧಿಕ: ಏಷ್ಯಾ ದೇಶಗಳಲ್ಲಿಯೇ ಭಾರತದ ಸಾಧನೆ ತೀರಾ ಕಳಪೆ!

ಜಿಡಿಪಿ -10.3% ನೊಂದಿಗೆ ಏಷ್ಯಾ ರಾಷ್ಟ್ರಗಳಲ್ಲಿ ಭಾರತ 11 ನೇ ಸ್ಥಾನದಲ್ಲಿದ್ದರೆ, ಪ್ರತಿ ಹತ್ತು ಲಕ್ಷಕ್ಕೆ 83 ಕೊರೊನಾ ಸಾವುಗಳನ್ನು ದಾಖಲಿಸುವ ಮೂಲಕ ಮೊದಲ ಸ್ಥಾನದಲ್ಲಿದೆ.

- Advertisement -
- Advertisement -

2020ರ GDP ಬೆಳವಣಿಗೆಯಲ್ಲಿ ಏಷ್ಯಾ ರಾಷ್ಟ್ರಗಳಲ್ಲಿಯೇ ಭಾರತದ ಸಾಧನೆ ತೀರಾ ಕಳೆಪೆ ಎಂದು ಐಎಂಎಫ್ ಅಂದಾಜಿಸಿದೆ. -10.3% ನೊಂದಿಗೆ ಏಷ್ಯಾ ರಾಷ್ಟ್ರಗಳಲ್ಲಿ ಭಾರತ 11 ನೇ ಸ್ಥಾನದಲ್ಲಿದ್ದರೆ ಬಾಂಗ್ಲಾದೇಶ 3.9%, ಚೀನಾ 1.8%, ಮತ್ತು ವಿಯೆಟ್ನಾಂ 1.6% ಮೂಲಕ ಕ್ರಮವಾಗಿ ಮೊದಲ ಮೂರು ಸ್ಥಾನದಲ್ಲಿವೆ.

ಇದೇ ಸಂದರ್ಭದಲ್ಲಿ ಕೋವಿಡ್ ಸಾವುಗಳ ವಿಷಯದಲ್ಲಿ ಏಷ್ಯಾ ಖಂಡದಲ್ಲಿಯೇ ಭಾರತ ಅಗ್ರಸ್ಥಾನ ಪಡೆದಿದೆ. ಪ್ರತಿ 10 ಲಕ್ಷ ಜನರಿಗೆ ಭಾರತದಲ್ಲಿ 83 ಮಂದಿ ಕೋವಿಡ್‌ನಿಂದಾಗಿ ಮರಣ ಹೊಂದಿದ್ದಾರೆ. ಕೋವಿಡ್ ಸಾವುಗಳ ವಿಷಯದಲ್ಲಿ ವಿಯೆಟ್ನಾಂ ಪ್ರತಿ 10 ಲಕ್ಷ ಜನರಿಗೆ 0.4, ಶ್ರೀಲಂಕ 0.6 ಮತ್ತು ಥೈಲೈಂಡ್ 0.8 ರಷ್ಟು ಕಡಿಮೆ ಕೊರೊನಾ ಸಾವು ವರದಿ ಮಾಡುವ ಮೂಲಕ  ಮೆಚ್ಚುಗೆಗೆ ಪಾತ್ರವಾಗಿವೆ.

ಭಾರತದ GDP ಕುಸಿತಕ್ಕೆ ನರೇಂದ್ರ ಮೋದಿ ಸರ್ಕಾರದ ಅಸಮರ್ಪಕ ಆರ್ಥಿಕ ನೀತಿಗಳ ಕಾರಣ ಎಂದು ಹಲವು ಅರ್ಥಶಾಸ್ತ್ರಜ್ಞರು ಆರೋಪಿಸಿದ್ದಾರೆ. ಹಲವು ಗಾರ್ಮೆಂಟ್ ಉದ್ದಿಮೆಗಳು ಭಾರತ ಮತ್ತು ಚೀನಾ ತೊರೆದು ಬಾಂಗ್ಲಾದೇಶಕ್ಕೆ ಹೋಗುತ್ತಿವೆ ಹಾಗಾಗಿ ಅದು ವೇಗವಾಗಿ ಬೆಳೆಯುತ್ತಿದೆ. ಅದೇ ರೀತಿಯಲ್ಲಿ ಜಪಾನ್ ಕಂಪನಿಗಳು ಥೈಲೈಂಡ್‌ನಲ್ಲಿ ಹೂಡಿಕೆ ಮಾಡುತ್ತಿವೆ. ಉತ್ಪಾದನಾ ಕ್ಷೇತ್ರದಲ್ಲಿ ವಿಯೆಟ್ನಾಂ ದಾಪುಗಾಲಿಡುತ್ತಿದೆ. ಹಾಗಾಗಿ ಅವುಗಳು ಆರ್ಥಿಕ ಪ್ರಗತಿ ಹೊಂದಿವೆ ಎನ್ನಲಾಗುತ್ತಿದೆ.

“ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶಪಡಿಸುವುದು ಮತ್ತು ಹೆಚ್ಚು ಜನರಿಗೆ ಬೇಗನೆ ಸೋಂಕು ಹರುಡುವುದು ಹೇಗೆ ಎಂದು ನರೇಂದ್ರ ಮೋದಿ ತೋರಿಸಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಇತ್ತೀಚೆಗೆ ತಲಾವಾರು GDP ಯಲ್ಲಿಯೂ ಸಹ ಬಾಂಗ್ಲಾದೇಶವನ್ನು ಭಾರತವನ್ನು ಹಿಂದಿಕ್ಕಲಿದೆ ಎಂದು ಐಎಂಎಫ್ ತಿಳಿಸಿತ್ತು. 2020ರ ಜಾಗತಿಕ ಹಸಿವಿನ ಸೂಚ್ಯಂಕದಲ್ಲಿ 107 ದೇಶಗಳಲ್ಲಿ ಭಾರತವು 94 ನೇ ಸ್ಥಾಣ ಪಡೆದು ಕಳಪೆ ಪ್ರದರ್ಶನ ನೀಡಿತ್ತು.

ಈ ಎಲ್ಲಾ ಸೂಚನೆಗಳು ಭಾರತವು ತೀವ್ರ ಆರ್ಥಿಕ ಕುಸಿತ ಮತ್ತು ಅಪಾಯಕಾರಿ ಸ್ಥಿತಿಗೆ ತಲುಪುತ್ತಿದೆ. ಭಾರತದ ಆರ್ಥಿಕ ನೀತಿಗಳು ಬೃಹತ್ ಪ್ರಮಾಣದ ಉದ್ಯೋಗ ನಷ್ಟಕ್ಕೆ ಕಾರಣವಾಗಿರುವುದನ್ನು ಈಗಾಗಲೇ ನೋಡಿದ್ದೇವೆ. ಕೊರಾನಾ ಸಾಂಕ್ರಾಮಿಕ ಗಾಯದ ಮೇಲೆ ಬರೆ ಎಳೆದಿದೆ. ಆದರೆ ಇದನ್ನು ಆಳುವ ಸರ್ಕಾರ ಒಪ್ಪಿಕೊಳ್ಳದಿರುವುದರಿಂದ ಪರಿಹಾರದ ಮಾರ್ಗಗಳು ಕಾಣುತ್ತಿಲ್ಲ. ಭವಿಷ್ಯದಲ್ಲಿ ಭಾರತವು ಬೃಹತ್ ಸಂಕಷ್ಟ ಎದುರಿಸುವುದಂತೂ ಖಚಿತ.


ಇದನ್ನೂ ಓದಿ: ಐತಿಹಾಸಿಕ ಜಿಡಿಪಿ ಕುಸಿತಕ್ಕೆ ಕೊರೊನಾ ಮಾತ್ರ ಕಾರಣವೆ? ಕರ್ನಾಟಕದ ತಜ್ಞರು ಏನಂತಾರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...