Homeಮುಖಪುಟಮಧ್ಯಪ್ರದೇಶ: ಕಮಲನಾಥ್ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಆಕ್ರೋಶ

ಮಧ್ಯಪ್ರದೇಶ: ಕಮಲನಾಥ್ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಆಕ್ರೋಶ

ಇಮಾರ್ತಿ ದೇವಿ ಮತ್ತು ಇತರ 21 ಶಾಸಕರು ಕಾಂಗ್ರೆಸ್ ಮತ್ತು ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿ ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಇದರಿಂದ ಕಮಲನಾಥ್ ನೇತೃತ್ವದ ಸರ್ಕಾರ ಪತನವಾಗಿತ್ತು.

- Advertisement -
- Advertisement -

ಉತ್ತರಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಅತ್ಯಾಚಾರ, ಕೊಲೆ ಪ್ರಕರಣದ ನಂತರ ಕಾಂಗ್ರೆಸ್ ಮಹಿಳಾ ದೌರ್ಜನ್ಯದ ವಿರುದ್ಧ ಧ್ವನಿ ಎತ್ತುತ್ತಿದೆ. ಉತ್ತರಪ್ರದೇಶದಲ್ಲಿ ವರದಿಯಾಗುತ್ತಿರುವ ಪ್ರಕರಣಗಳ ಕುರಿತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಅವರದ್ದೇ ಪಕ್ಷದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಬಿಜೆಪಿಯ ಮಹಿಳಾ ಅಭ್ಯರ್ಥಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದ, ತಮ್ಮದೇ ಮಂತ್ರಿಮಂಡಲದ ಮಾಜಿ ಸಹೋದ್ಯೋಗಿ, ಹಾಲಿ ಬಿಜೆಪಿ ಅಭ್ಯರ್ಥಿಯಾಗಿರುವ ಇಮಾರ್ತಿ ದೇವಿ ಕುರಿತು ಕಮಲನಾಥ್‌ ಅವರು ಬಹಿರಂಗ ಸಭೆಯಲ್ಲೆ ‘ಐಟಂ’ ಎಂಬ ಪದ ಬಳಸಿ ವ್ಯಂಗ್ಯವಾಡಿದ್ದು, ಬಿಜೆಪಿಯಲ್ಲಿ ಆಕ್ರೋಶ ಭುಗಿಲ್ಲೆದ್ದಿದೆ.

ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್​​ ಅಭ್ಯರ್ಥಿ ಸುರೇಶ್​​ ರಾಜೆ ಪರವಾಗಿ ದಬ್ರಾ ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ಸುರೇಶ್ ರಾಜ್ ಪ್ರತಿಸ್ಫರ್ಧಿ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿಯನ್ನು ಐಟಂ ಎಂದು ಗೇಲಿ ಮಾಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಎಡಿಟೆಡ್‌ ವಿಡಿಯೋ ಹಂಚಿದ ಮಧ್ಯಪ್ರದೇಶ ಕಾಂಗ್ರೆಸ್‌!

ಚುನಾವಣಾ ಸಮಾವೇಶದಲ್ಲಿ ನೇರವಾಗಿ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿಯವರ ಹೆಸರು ಬಳಸದೆ, ನಮ್ಮ ಅಭ್ಯರ್ಥಿ ಅವರಂತಲ್ಲ.. ಅವರ ಹೆಸರು ಏನೋ ಇದೆಯಲ್ಲ ಎಂದು ನೆರೆದಿದ್ದ ಕಾರ್ಯಕರ್ತರನ್ನು ಪ್ರಶ್ನಿಸುತ್ತಾರೆ.. ಅತ್ತಲಿಂದ ಕಾರ್ಯಕರ್ತರು ಇಮಾರ್ತಿ ದೇವಿಯೆಂದು ಒಕ್ಕೊರಲಿನಿಂದ ಕೂಗುತ್ತಾರೆ. ಬಳಿಕ ಮಾತನಾಡುವ ಕಮಲ್​​ನಾಥ್​​ ನೀವೆಲ್ಲರೂ ಅವರನ್ನು ನನಗಿಂತ ಚೆನ್ನಾಗಿ ಬಲ್ಲಿರಿ. ಎಂಥ ಐಟಂ ಎನ್ನುವ ಮೂಲಕ ಮಹಿಳೆಯೊಬ್ಬರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ.

ಕಮಲನಾಥ್ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಪ್ರತಿಭಟನೆ, ಸತ್ಯಾಗ್ರಹ ನಡೆಸಿದ್ದಾರೆ

ಇಮಾರ್ತಿ ದೇವಿ ವಿರುದ್ಧ ಮಾಜಿ ಸಿಎಂ ಕಮಲ್ ನಾಥ್ ಅವರ “ಐಟಂ” ಹೇಳಿಕೆಯನ್ನು ವಿರೋಧಿಸಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಬಿಜೆಪಿ ಸಂಸದ ಜ್ಯೋತಿರಾದಿತ್ಯ ಸಿಂಧಿಯಾ, ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಇತರ ಪಕ್ಷದ ಮುಖಂಡರು,ಮಹಿಳಾ ಸದಸ್ಯರು ಎರಡು ಗಂಟೆಗಳ ಮೌನ ಪ್ರತಿಭಟನೆ ನಡೆಸಿದರು.

ವಿವಾದಾತ್ಮಕ ಹೇಳಿಕೆ ಕುರಿತು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ‘ಮಹಿಳೆಯರು ಮತ್ತು ದಲಿತರನ್ನು ಕಮಲನಾಥ್‌ ಅಪಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಕಮಲನಾಥ್ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದ ಜೋತಿರಾಧಿತ್ಯ ಸಿಂಧಿಯಾಗೆ ನಿಷ್ಠೆಯಿಂದಿದ್ದ ಇಮಾರ್ತಿ ದೇವಿ ಮತ್ತು ಇತರ 21 ಶಾಸಕರು ಕಾಂಗ್ರೆಸ್ ಮತ್ತು ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿ ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಈ 21 ಕ್ಷೇತ್ರಗಳೂ ಸೇರಿ ರಾಜ್ಯದ 28 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 3 ರಂದು ಉಪಚುನಾವಣೆ ನಡೆಯಲಿದ್ದು, ಮತ ಎಣಿಕೆ ನವೆಂಬರ್ 10 ರಂದು ನಡೆಯಲಿದೆ.


ಇದನ್ನೂ ಓದಿ: ಮೊಹರಂ ಮೆರವಣಿಗೆ: NSA ಪ್ರಕರಣಗಳನ್ನು ಕೈಬಿಟ್ಟ ಮಧ್ಯಪ್ರದೇಶ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...