Homeಚಳವಳಿಅನುದಾನ ನಿರೀಕ್ಷೆಯಲ್ಲಿರುವ ಖಾಸಗಿ ಪದವಿ ಕಾಲೇಜು ಉಪನ್ಯಾಸಕರ ಗೋಳು ಕೇಳೋರು ಯಾರು?

ಅನುದಾನ ನಿರೀಕ್ಷೆಯಲ್ಲಿರುವ ಖಾಸಗಿ ಪದವಿ ಕಾಲೇಜು ಉಪನ್ಯಾಸಕರ ಗೋಳು ಕೇಳೋರು ಯಾರು?

ನಾವು ಅನುದಾನಕ್ಕೆ ಒಳಪಡುತ್ತೇವೆ, ಸರ್ಕಾರಿ ಸಂಬಳ ಪಡೆಯುತ್ತೇವೆ ಎಂದು ನಂಬಿ ಖಾಸಗಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿಗೆ ಲಕ್ಷಲಕ್ಷ ರೂ ನೀಡಿ ಕೆಲಸಕ್ಕೆ ಸೇರಿಕೊಂಡಿರುವವರ ಪರಿಸ್ಥಿತಿ ಇಕ್ಕಟ್ಟಿಗೆ ಸಿಲುಕಿದೆ.

- Advertisement -
- Advertisement -

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಗೌರವ ಧನ ನೀಡಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ಸಮಯದಲ್ಲಿ ಕಾಲೇಜುಗಳ ಅನುದಾನಕ್ಕಾಗಿ ಕಾಯುತ್ತಿರುವ ಖಾಸಗಿ ಪದವಿ ಕಾಲೇಜುಗಳಲ್ಲಿ ದುಡಿಯುತ್ತಿರುವ ನೂರಾರು ಉಪನ್ಯಾಸಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಂಸ್ಥೆಯಿಂದಲೂ ಸಂಬಳ ದೊರೆಯುತ್ತಿಲ್ಲ. ಸರ್ಕಾರದ ಸಹಾಯವು ಸಿಗುತ್ತಿಲ್ಲ. ಅತಿಥಿಯೂ ಅಲ್ಲದ, ಅರೆಕಾಲಿಕರೂ ಅಲ್ಲದ ಈ ಉಪನ್ಯಾಸಕರು ಜೀವನ ಸಾಗಿಸುವುದು ದುಸ್ತರವಾಗಿದೆ.

ರಾಜ್ಯದಲ್ಲಿ ಒಂದು ನೂರಕ್ಕೂ ಹೆಚ್ಚು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳ ಆಡಳಿತ ಮಂಡಳಿಗಳು ಸರ್ಕಾರದ ಗ್ರ್ಯಾಂಟ್ ಗೆ ಅರ್ಜಿ ಸಲ್ಲಿಸಿದ್ದು ಸರ್ಕಾರದ ಅನುದಾನಕ್ಕಾಗಿ ಕಾಯುತ್ತಿವೆ. ಈ ಪೈಕಿ 85 ಪದವಿ ಕಾಲೇಜುಗಳ ಆಡಳಿತ ಮಂಡಳಿಗಳು ಸರ್ಕಾರ ನಮಗೆ ಗ್ರ್ಯಾಂಟ್ ನೀಡಬೇಕೆಂದು ಹಲವು ವರ್ಷಗಳಿಂದ ಒತ್ತಡ ಹೇರುತ್ತಲೇ ಬರುತ್ತಿವೆ. ಆದರೆ ಸರ್ಕಾರ ಮಾತ್ರ ಗ್ರ್ಯಾಂಟ್ ನೀಡಲು ಹಿಂದೇಟು ಹಾಕುತ್ತಿದೆ. ಆದ್ದರಿಂದ ರಾಜ್ಯದ 85 ಪದವಿ ಕಾಲೇಜುಗಳ 680 ಉಪನ್ಯಾಸಕರ ಬದುಕು ಅತಂತ್ರವಾಗಿದೆ.

ಪ್ರತಿಯೊಂದು ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕನಿಷ್ಠ 8 ಮಂದಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ ಒಟ್ಟಾರೆ ರಾಜ್ಯದಲ್ಲಿ 680ಕ್ಕೂ ಹೆಚ್ಚು ಮಂದಿ ಉಪನ್ಯಾಸಕರು ಕಳೆದ 20-25 ವರ್ಷಗಳಿಂದಲೂ ಕಡಿಮೆ ವೇತನ ಪಡೆದುಕೊಂಡು ದುಡಿಯುತ್ತಿದ್ದಾರೆ. ಇವರಲ್ಲಿ ಕೆಲವರಿಗೆ ಸರ್ಕಾರ ನಿಗದಿಪಡಿಸಿದ ವಯಸ್ಸು ಮೀರಿದೆ. ಖಾಸಗಿ ಪದವಿ ಕಾಲೇಜು ಸರ್ಕಾರದ ಅನುದಾನಕ್ಕೆ ಒಳಪಡುತ್ತದೆ. ನಾವು ಸರ್ಕಾರದಿಂದ ವೇತನ ಪಡೆಯುತ್ತೇವೆ ಕುಟುಂಬಕ್ಕೆ ಭದ್ರತೆ ದೊರೆಯುತ್ತದೆ, ನಾವು ಅನುದಾನಕ್ಕೆ ಒಳಪಡುತ್ತೇವೆ ಎಂದು ನಂಬಿ ಖಾಸಗಿ ಪ್ರಥಮ ದರ್ಜೆ ಕಾಲೇಜು ಆಡಳಿತ ಮಂಡಳಿಗೆ ಲಕ್ಷಲಕ್ಷ ರೂ ನೀಡಿ ಕೆಲಸಕ್ಕೆ ಸೇರಿಕೊಂಡಿದ್ದಾರೆ. ಆದರೆ ಅತ್ತ ಹಣವೂ ಹಿಂಪಡೆಯಲು ಆಗುತ್ತಿಲ್ಲ. ಇತ್ತ ಸರ್ಕಾರದ ಅನುದಾನಕ್ಕೆ ಒಳಪಟ್ಟು ವೇತನವನ್ನೂ ಪಡೆಯಲು ಆಗುತ್ತಿಲ್ಲ ಎಂಬ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರು ಕೋವಿಡ್ ಅವಧಿಯ ಗೌರವಧನ ಬಿಡುಗಡೆಗೆ ಆಗ್ರಹಿಸಿ ನಡೆಸಿದ ಹೋರಾಟಕ್ಕೆ ಐದು ತಿಂಗಳ ಗೌರವಧನ ಸಿಗುವ ಸಣ್ಣ ಭರವಸೆ ಸಿಕ್ಕಿದೆ. ಅತಿಥಿ ಉಪನ್ಯಾಸಕರು ಸಂಘಟನೆಗೊಂಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಮಾತುಕತೆ ನಡೆಸುವ ಶಕ್ತಿ ಹೊಂದಿದ್ದಾರೆ. ಅತಿಥಿ ಉಪನ್ಯಾಸಕರಿಲ್ಲದೆ ಪಾಠ ಪ್ರವಚನ ನಡೆಯುವುದಿಲ್ಲ ಎಂಬ ಅನಿವಾರ್ಯತೆ ಸೃಷ್ಟಿ ಆಗುತ್ತದೆ. ಆದರೆ ಸರ್ಕಾರದ ಅನುದಾನದ ನಿರೀಕ್ಷೆಯಲ್ಲಿರುವ ಆಡಳಿತ ಮಂಡಳಿಗಳ ನಡೆಸುತ್ತಿರುವ ಕಾಲೇಜುಗಳಲ್ಲಿ ದುಡಿಯುತ್ತಿರುವ ಉಪನ್ಯಾಸಕರು ಇಂತಹ ಯಾವುದೇ ಒಗ್ಗಟ್ಟು ಪ್ರದರ್ಶಿಸುವ ಅವಕಾಶ ಇಲ್ಲ. ಪ್ರತಿಭಟನೆ ನಡೆಸಿದರೆ ಎಲ್ಲಿ ಇರುವ ಕೆಲಸವೂ ಹೋಗುತ್ತದೆ. ಕೊಟ್ಟ ಹಣವೂ ಬರುವುದಿಲ್ಲ ಎಂಬ ತ್ರಿಶಂಕು ಸ್ಥಿತಿ ಅವರನ್ನು ಕಾಡತೊಡಗಿದೆ.

ಅನುದಾನದ ನಿರೀಕ್ಷೆಯಲ್ಲಿರುವ ಉಪನ್ಯಾಸಕರು ಯಾರ ಜೊತೆಯೂ ಬಾಯಿ ಬಿಡುವಂತಿಲ್ಲ. ಮ್ಯಾನೇಜ್‌ಮೆಂಟ್ ಅವರನ್ನು ಕೇಳಿದರೆ ನಿಮ್ಮ ಸೇವೆ ಅಗತ್ಯವಿಲ್ಲ. ಬೇರೆಯವರು ಬಂದು ಕೆಲಸ ಮಾಡುತ್ತಾರೆ’ ಎಂದು ಹೇಳುತ್ತಿರುವುದರಿಂದ ಸಂಕಟವನ್ನು ನುಂಗಿಕೊಂಡೇ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಪರಿಸ್ಥಿತಿ ಇದೆ. ನಮಗೆ ಸರ್ಕಾರವೂ ಹಣ ಕೊಡುವುದಿಲ್ಲ. ಆಡಳಿತ ಮಂಡಳಿಯೂ ಹಣ ನೀಡುವುದಿಲ್ಲ. ನಮ್ಮ ಕುಟುಂಬ ನಿರ್ವಹಣೆ ಹೇಗೆ? ಬಸ್ ಚಾರ್ಜ್ ಕೊಡಲೂ ದುಡ್ಡು ಇರುವುದಿಲ್ಲ. ಸಾಲ ಮಾಡಿ ಮತ್ತಷ್ಟು ಮೇಲೆ ಎಳೆದುಕೊಳ್ಳುವಂತೆ ಆಗಿದೆ. ಮನೆ ಬಾಡಿಗೆ, ಕರೆಂಟ್ ಬಿಲ್, ಮಕ್ಕಳ ಬಟ್ಟೆ, ವಿದ್ಯಾಭ್ಯಾಸ ಯಾವುದನ್ನೂ ಸರಿಯಾಗಿ ನಿಭಾಯಿಸಲು ಆಗುತ್ತಿಲ್ಲ ಎಂದು ಉಪನ್ಯಾಸಕ ಮಲ್ಲಯ್ಯ ನೋವು ತೋಡಿಕೊಂಡರು.

ನಾನುಗೌರಿ.ಕಾಂ ಜೊತೆ ಮಾತನಾಡಿದ ಉಪನ್ಯಾಸಕ ಸುರೇಶ್, ನಾನು ಕಳೆದ 25 ವರ್ಷಗಳಿಂದ ಖಾಸಗಿ ಪದವಿ ಕಾಲೇಜೊಂದರಲ್ಲಿ ಪಾಠ ಮಾಡಿಕೊಂಡು ಬಂದಿದ್ದೇನೆ. ಕೆಲಸ ಪರ್ಮಿನೆಂಟ್ ಆಗುತ್ತದೆ ಎಂಬ ಕಾರಣಕ್ಕೆ 5 ಲಕ್ಷ ರೂಪಾಯಿ ಆಡಳಿತ ಮಂಡಳಿಗೆ ಕೊಟ್ಟಿದ್ದೇನೆ. ನನಗೆ 5 ಸಾವಿರ ಗೌರವಧನ ನೀಡುತ್ತಿದ್ದರು. ಕೊರೊನಾ ಬಂದ ಮೇಲೆ ನಾವು ಅಕ್ಷರಶಃ ಬೀದಿಗೆ ಬಿದ್ದಿದ್ದೇವೆ. ಬಿಟ್ಟಿ ದುಡಿಯೋಕೆ ಯಾಕ್ ಹೋಗ್ತೀಯ ಅಂತ ಹೆಂಡತಿ ಜೊತೆ ನಿತ್ಯವೂ ಜಗಳ. ಬದುಕು ಕಟ್ಟಿಕೊಳ್ಳಲು ಕಷ್ಟವಾಗಿದೆ. ಮಕ್ಕಳನ್ನು ಓದಿಸಲಾಗುತ್ತಿಲ್ಲ. ನನ್ನ ವಯಸ್ಸು ಮೀರಿ ಹೋಯಿತು. ನಾನು ಇನ್ನೆಲ್ಲಿಗೂ ಹೋಗಿ ಪಾಠ ಮಾಡಲು ಅವಕಾಶವಿಲ್ಲ. ನಾನು ಇರುವಲ್ಲೇ ಇರಬೇಕಾಗಿದೆ. ನಾನಿರುವ ಸಂಸ್ಥೆಯಲ್ಲು ಕಳೆದ ಏಳೆಂಟು ತಿಂಗಳಿಂದ ವೇತನ ನೀಡುತ್ತಿಲ್ಲ ಎಂದು ಕಂಬನಿ ಮಿಡಿದರು.

ಸರ್ಕಾರದ ಅನುದಾನ ದೊರೆಯುವ ನಿರೀಕ್ಷೆಯಲ್ಲಿದ್ದವರಿಗೆ ಇದೀಗ ಭ್ರಮನಿರಸನಗೊಳ್ಳುವಂತೆ ಮಾಡಿದೆ. ಸಮಾಜದಲ್ಲಿ ಗುರುಗಳಿಗೆ ಗೌರವ ಸ್ಥಾನ ಇದೆಯಾದರೂ ಘನತೆಯ ಬದುಕು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳಿಂದ ಸಾವಿರಾರು ರೂಪಾಯಿ ಡೊನೇಷನ್ ಪಡೆಯುವ ಈ ಕಾಲೇಜುಗಳು ಉಪನ್ಯಾಸಕರಿಗೆ ವೇತನ ನೀಡಲು, ಕಾಲೇಜು ನಿರ್ವಹಣೆ ಮಾಡಲು ಪರದಾಡುತ್ತಿವೆ. ಬಹುತೇಕ ಖಾಸಗಿ ಪ್ರಥಮ ದರ್ಜೆ ಕಾಲೇಜುಗಳು ಸರ್ಕಾರದ ಅನುದಾನ ಬೇಡ ಎನ್ನುತ್ತಿವೆ. ಅಂತಹ ಕಾಲೇಜುಗಳಲ್ಲಿ ಕೆಲಸ ಮಾಡುವ ಉಪನ್ಯಾಸಕರಿಗೆ ವೇತನ ನೀಡಲಾಗುತ್ತಿದೆ. ನಾವು ಮಾತ್ರ ಯಾರಿಗೂ ಬೇಡವಾದ ಕೂಸುಗಳಾಗಿದ್ದೇವೆ ಎಂಬುದು ಅನುದಾನ ನಿರೀಕ್ಷೆಯಲ್ಲಿರುವ ಪ್ರಥಮ ದರ್ಜೆ ಕಾಲೇಜುಗಳ ಉಪನ್ಯಾಸಕರ ಅಳಲು.

ಸರ್ಕಾರ ಕೂಡಲೇ ಈ ಉಪನ್ಯಾಸಕರ ನೆರವಿಗೂ ಬರಬೇಕು. ನಮಗೆ ಅತಿಥಿ ಉಪನ್ಯಾಸಕರಿಗೆ ನೀಡುವಂತೆ ಗೌರವ ಧನವನ್ನು ನೀಡಬೇಕೆಂದು ಉಪನ್ಯಾಸಕರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

  • ಕೆ.ಈ.ಸಿದ್ದಯ್ಯ

ಇದನ್ನೂ ಓದಿ: ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. it is drastic problem of our society as well as govt nobady will take care of it u raise this quation its appriciable .how many’s life went off by thease principle policy of many govt …ok take dicision to not vote anybody up to life long

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...