Homeಕರ್ನಾಟಕಸ್ನೇಹಕ್ಕಾಗಿ ಪಕ್ಷನಿಷ್ಠೆ, ತತ್ವನಿಷ್ಠೆ ಬಿಡುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಸ್ನೇಹಕ್ಕಾಗಿ ಪಕ್ಷನಿಷ್ಠೆ, ತತ್ವನಿಷ್ಠೆ ಬಿಡುವುದಿಲ್ಲ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಸ್ನೇಹ ಬೇರೆ, ರಾಜಕೀಯ ಬೇರೆ. ಸಂಸದ ಮೂಡ್ಲಗಿರಿಯಪ್ಪ ಕಾಂಗ್ರೆಸ್ ಪಕ್ಷದಲ್ಲಿದ್ದರು. ಹಾಗಾಗಿ ಅವರ ಮಗ ರಾಜೇಶ್ ಗೌಡ ನನಗೆ ಸ್ನೇಹಿತರು. ಹಾಗೆಂದ ಮಾತ್ರಕ್ಕೆ ಪಕ್ಷನಿಷ್ಠೆ ಮತ್ತು ತತ್ವನಿಷ್ಠೆ ಬಿಡಲು ಆಗುವುದಿಲ್ಲ.

- Advertisement -
- Advertisement -

ಸ್ನೇಹಕ್ಕಾಗಿ ಪಕ್ಷನಿಷ್ಠೆ, ತತ್ವನಿಷ್ಠೆ ಬಿಡುವುದಿಲ್ಲ. ಶಿರಾದ ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡರು ಕಾಂಗ್ರೆಸ್‌ನಿಂದ ಟಿಕೆಟ್ ಕೇಳಿದರು. ಟಿಕೆಟ್ ದೊರೆಯುವುದಿಲ್ಲ ಎಂದು ಗೊತ್ತಾದ ಮೇಲೆ ಬಿಜೆಪಿ ಸೇರಿ ಆತುರ ತೋರಿದ್ದಾರೆ  ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಶಿರಾ ಉಪಚುನಾವಣೆಯ ಪ್ರಚಾರದಲ್ಲಿ ಪಾಲ್ಗೊಂಡ ಅವರು, ತಾಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದು. ಕ್ಷೇತ್ರದ ಮತದಾರರ ಒಲವು ಜಯಚಂದ್ರರತ್ತ ಇದೆ ಎಂದು ತಿಳಿಸಿದರು.

ಹಲವು ಜನ ಯತೀಂದ್ರ ಮತ್ತು ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಸ್ನೇಹಿತರು. ಹಾಗಾಗಿ ಯತೀಂದ್ರರವರು ಚುನಾವಣೆಯಲ್ಲಿ ಅವರಿಗೆ ಸಹಾಯ ಮಾಡುತ್ತಾರೆ ಎಂದು ಮಾತನಾಡುತ್ತಿದ್ದಾರೆ. ಆದರೆ ಅದೆಲ್ಲಾ ಸುಳ್ಳು. ಸ್ನೇಹ ಬೇರೆ, ರಾಜಕೀಯ ಬೇರೆ. ರಾಜೇಶ್ ಗೌಡ ನನಗೆ ಸ್ನೇಹಿತರು. ಸಂಸದ ಮೂಡ್ಲಗಿರಿಯಪ್ಪ ಕಾಂಗ್ರೆಸ್ ಪಕ್ಷದಲ್ಲಿದ್ದರು. ಹಾಗಾಗಿಯೇ ಸ್ನೇಹವೂ ಬೆಳೆಯಿತು. ಹಾಗೆಂದ ಮಾತ್ರಕ್ಕೆ ಪಕ್ಷನಿಷ್ಠೆ ಮತ್ತು ತತ್ವನಿಷ್ಠೆ ಬಿಡಲು ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?


ರಾಜೇಶ್ ಗೌಡ ಶಿರಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದರು. ಮೊದಲು ಪಕ್ಷಕ್ಕೆ ಸೇರ್ಪಡೆಯಾಗಿ. ಕೆಲಸ ಮಾಡಿ ಆನಂತರ ಟಿಕೆಟ್ ವಿಚಾರ ಮಾತನಾಡೋಣ ಎಂದು ಹೇಳಿದೆವು. ನಂತರ ಜೆಡಿಎಸ್ ನಿಂದ ಟಿಕೆಟ್ ಕೇಳಿದರು. ಅಲ್ಲಿಯೂ ಅವರಿಗೆ ಟಿಕೆಟ್ ಸಿಗುವ ಭರವಸೆ ದೊರೆಯಲಿಲ್ಲ. ಹಾಗಾಗಿ ಬಿಜೆಪಿ ಸೇರಿದ್ದಾರೆ ಎಂದರು.

ಶಿರಾ ಕ್ಷೇತ್ರದಲ್ಲಿ ಹಿರಿಯರಾದ ಟಿ.ಬಿ.ಜಯಚಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ. ಇದು ಪಕ್ಷದ ನಿರ್ಧಾರ. ನಮ್ಮ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂದು ಜಯಚಂದ್ರ ಅವರ ಪರ ಪ್ರಚಾರ ನಡೆಸಿ ಹೋಗಿದ್ದಾರೆ. ಪಕ್ಷದ ತಳಮಟ್ಟದ ಕಾರ್ಯಕರ್ತರು ಆರಂಭದಿಂದಲೂ ಅಹರ್ನಿಶಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಟಿ.ಬಿ.ಜಯಚಂದ್ರ ಅವರ ಗೆಲುವು ಶತಃಸಿದ್ಧ ಎಂದರು.

ಕ್ಷೇತ್ರದಲ್ಲಿ ಸುತ್ತಾಡಿದ ಮೇಲೆ ಮತದಾರರಿಂದ ಮಾಹಿತಿ ಸಂಗ್ರಹಿಸಿದ್ದೇನೆ. ಟಿ.ಬಿ.ಜಯಚಂದ್ರ ಪರ ಹೆಚ್ಚಿನ ಒಲವು ವ್ಯಕ್ತವಾಗಿದೆ. ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ಇದು ಶ್ಲಾಘನೀಯ ಸಂಗತಿ.  ಟಿ.ಬಿ.ಜಯಚಂದ್ರ ಅವರು ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಆದ್ದರಿಂದ ಅವರ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.


ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...