Homeಮುಖಪುಟಮಹಾರಾಷ್ಟ್ರ ರಾಜ್ಯಪಾಲರ ಪತ್ರ ವಿವಾದ; ಸ್ವಾಭಿಮಾನಿಗಳು ಹುದ್ದೆಯಲ್ಲಿ ಮುಂದುವರಿಯುವುದಿಲ್ಲ: ಶರದ್ ಪವಾರ್!

ಮಹಾರಾಷ್ಟ್ರ ರಾಜ್ಯಪಾಲರ ಪತ್ರ ವಿವಾದ; ಸ್ವಾಭಿಮಾನಿಗಳು ಹುದ್ದೆಯಲ್ಲಿ ಮುಂದುವರಿಯುವುದಿಲ್ಲ: ಶರದ್ ಪವಾರ್!

ಕೆಲವು ಪದಗಳ ಬಳಕೆಯನ್ನು ನಿಯಂತ್ರಿಸಬೇಕಿತ್ತು ಎಂದು ರಾಜ್ಯಪಾಲರು ಬರೆದ ಪತ್ರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ

- Advertisement -
- Advertisement -

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಮೇಲೆ ಇಂದು ನೇರ ದಾಳಿ ನಡೆಸಿದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಶರದ್ ಪವಾರ್, “ಸ್ವಾಭಿಮಾನ ಹೊಂದಿರುವ ಯಾರಾದರೂ ಈ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ” ಎಂದು ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಡುವೆ ಇತ್ತೀಚೆಗೆ ಉಂಟಾದ ಪತ್ರ-ಯುದ್ಧದ ಪ್ರಶ್ನೆಗೆ ಉತ್ತರಿಸಿದ ಪವಾರ್, “ಸ್ವಾಭಿಮಾನ ಹೊಂದಿರುವ ಯಾರಾದರೂ ಈ ಹುದ್ದೆಯಲ್ಲಿ ಮುಂದುವರಿಯುವುದಿಲ್ಲ. ಅವರನ್ನು ತೆಗೆದುಹಾಕುವ ಯಾವುದೇ ಬೇಡಿಕೆಗಳನ್ನು ಸಲ್ಲಿಸಲು ನಾವು ಯಾರು” ಎಂದು ಹೇಳಿದ್ದಾರೆ.

“ಕೆಲವು ಪದಗಳ ಬಳಕೆಯನ್ನು ನಿಯಂತ್ರಿಸಬೇಕಿತ್ತು ಎಂದು ರಾಜ್ಯಪಾಲರು ಬರೆದ ಪತ್ರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಅವರು ಉಲ್ಲೇಖಿಸಿದರು.

“ಅಮಿತ್ ಶಾ ಅವರ ಹೇಳಿಕೆಯ ನಂತರ, ಸ್ವಾಭಿಮಾನ ಹೊಂದಿರುವ ಯಾರಾದರೂ (ರಾಜ್ಯಪಾಲರ) ಹುದ್ದೆಯಲ್ಲಿ ಮುಂದುವರಿಯಬೇಕೇ” ಎಂದು ಶರದ್ ಪವಾರ್ ಹೇಳಿದರು.

ಇದನ್ನೂ ಓದಿ: ನಾವು ಜಾತ್ಯಾತೀತರು, ಜಾತ್ಯಾತೀತರಾಗೇ ಇರುತ್ತೇವೆ- ತನಿಷ್ಕ್ ಜಾಹೀರಾತು ನಿರ್ದೇಶಕಿ

ಆದರೆ, ಶರದ್ ಪವಾರ್ ಕಳೆದ ವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯಪಾಲರ ಬಗ್ಗೆ ದೂರು ನೀಡಿ ಪತ್ರವೊಂದನ್ನು ಬರೆದಿದ್ದರು. ಇದಾದ ನಂತರ ಅಮಿತ್ ಶಾ ರಾಜ್ಯಪಾಲರ ಭಾಷೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಶಿವಸೇನೆ ಮುಖ್ಯ ವಕ್ತಾರ ಮತ್ತು ಸಂಸದ ಸಂಜಯ್ ರಾವತ್, ಅಮಿತ್ ಶಾ ಅವರ ಹೇಳಿಕೆಗಳನ್ನು ಶ್ಲಾಘಿಸಿದ್ದಾರೆ.

ರಾಜ್ಯದ ಪೂಜಾ ಸ್ಥಳಗಳನ್ನು ಪುನಃ ತೆರೆಯುವ ವಿಷಯದ ಬಗ್ಗೆ ಕೊಶಾರಿ ಅಕ್ಟೋಬರ್ 12 ರಂದು ಠಾಕ್ರೆ ಅವರಿಗೆ ಪತ್ರ ಬರೆದಿದ್ದು, ಠಾಕ್ರೆಯ ಹಿಂದುತ್ವ ರುಜುವಾತುಗಳನ್ನು ಪ್ರಶ್ನಿಸಿ, ಸಿಎಂ ಇದ್ದಕ್ಕಿದ್ದಂತೆ ಜಾತ್ಯತೀತವಾಗಿದ್ದಾರೆಯೇ ಎಂದು ಪ್ರಶ್ನಿಸಿದ್ದರು.

ತನಗೆ ಯಾರಿಂದಲೂ ‘ಹಿಂದುತ್ವದ’ ಪ್ರಮಾಣಪತ್ರದ ಅಗತ್ಯವಿಲ್ಲ ಎಂದು ಹೇಳುವ ಮೂಲಕ ಠಾಕ್ರೆ ತಿರುಗೇಟು ನೀಡಿದ್ದರು. ಆದರೆ ಕೊರೊನಾ ಸಾಂಕ್ರಾಮಿಕದ ಸಮಸ್ಯೆಯನ್ನು ಗಣನೆಗೆ ತೆಗೆದುಕೊಂಡು ಪೂಜಾ ಸ್ಥಳಗಳನ್ನು ಪುನಃ ತೆರೆಯುವ ವಿಷಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದ್ದರು. ಕೊರೊನಾ ಸೋಂಕಿತರ ಪ್ರಮಾಣದಲ್ಲಿ ದೇಶದಲ್ಲಿಯೇ ಮಹಾರಾಷ್ಟ್ರ ಪ್ರಥಮ ಸ್ಥಾನದಲ್ಲಿದೆ.


ಇದನ್ನೂ ಓದಿ: ’ನೀವು ಜಾತ್ಯಾತೀತರಾದಿರಾ?’; ಮಹಾ ಮುಖ್ಯಮಂತ್ರಿಗೆ ರಾಜ್ಯಪಾಲರ ಪ್ರಶ್ನೆ- ಶರದ್ ಪವಾರ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...