Homeಮುಖಪುಟಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು: ಪಂಜಾಬ್‌ ಅಸೆಂಬ್ಲಿಯಲ್ಲಿ ಮೂರು ಹೊಸ ಮಸೂದೆಗಳ ಮಂಡನೆ!

ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು: ಪಂಜಾಬ್‌ ಅಸೆಂಬ್ಲಿಯಲ್ಲಿ ಮೂರು ಹೊಸ ಮಸೂದೆಗಳ ಮಂಡನೆ!

ಕೇಂದ್ರದ ಕೃಷಿ ಕಾನೂನುಗಳು ರೈತರು ಮತ್ತು ಭೂಹೀನ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

- Advertisement -
- Advertisement -

ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿದ ಮೂರು ಹೊಸ ಕೃಷಿ ಕಾನೂನುಗಳನ್ನು ತಿರಸ್ಕರಿಸುವ ನಿರ್ಣಯವನ್ನು ಮಂಡಿಸಿದೆ. ಕೇಂದ್ರದ ಕೃಷಿ ಕಾನೂನುಗಳು ರೈತರು ಮತ್ತು ಭೂಹೀನ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಅವರು ಹೇಳಿದ್ದಾರೆ.

“ಕೃಷಿ ಸುಗ್ರೀವಾಜ್ಞೆಗಳು ಮತ್ತು ವಿದ್ಯುತ್ ಕಾಯ್ದೆಯ ತಿದ್ದುಪಡಿಗಳ ವಿರುದ್ಧದ ನಿರ್ಣಯವು ಮುಗಿದಿದೆ. ಮೂರು ಕೃಷಿ ಶಾಸನಗಳು ಮತ್ತು ಪ್ರಸ್ತಾವಿತ ವಿದ್ಯುತ್ (ತಿದ್ದುಪಡಿ) ಮಸೂದೆ, ರೈತರು ಮತ್ತು ಭೂಹೀನ ಕಾರ್ಮಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ” ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಒದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ಕೇಂದ್ರದ ಕೃಷಿ ಕಾನೂನುಗಳನ್ನು ಪ್ರಶ್ನಿಸಿ ನಿರ್ಣಯವನ್ನು ಮಂಡಿಸಿದ ಮೊದಲ ರಾಜ್ಯ ಪಂಜಾಬ್ ಆಗಿದೆ. ನಿರ್ಣಯದ ಹೊರತಾಗಿ, ರೈತರ ಉತ್ಪಾದನಾ ಸೌಲಭ್ಯ ಕಾಯ್ದೆಗೆ ತಿದ್ದುಪಡಿ, ಅಗತ್ಯ ಸರಕುಗಳ ಕಾಯ್ದೆಗೆ ತಿದ್ದುಪಡಿ, ರೈತರ ಒಪ್ಪಂದಕ್ಕೆ ತಿದ್ದುಪಡಿ ಮತ್ತು ಕೃಷಿ ಸೇವೆಗಳ ಕಾಯ್ದೆ ಸೇರಿದಂತೆ ಒಟ್ಟು ಮೂರು ಹೊಸ ಮಸೂದೆಗಳನ್ನು ಮುಖ್ಯಮಂತ್ರಿ ಇಂದು ಅಸೆಂಬ್ಲಿಯಲ್ಲಿ ಮಂಡಿಸಿದ್ದಾರೆ.

ಈ ತಿದ್ದುಪಡಿಗಳಿಗೆ ಭಾರತದ ರಾಷ್ಟ್ರಪತಿಗಳ ಒಪ್ಪಿಗೆಯ ಅಗತ್ಯವಿರುತ್ತದೆ. ಇದಕ್ಕೂ ಮೊದಲು, ಆಗಸ್ಟ್ 28 ರಂದು, ವಿಧಾನಸಭೆಯಲ್ಲಿ ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ತಿರಸ್ಕರಿಸುವ ನಿರ್ಣಯವನ್ನು ಅಂಗೀಕರಿಸಿತ್ತು.

ಮಸೂದೆಯ ಪ್ರತಿಗಾಗಿ ಎಎಪಿ ಹಟ

ವಿರೋಧ ಪಕ್ಷ ಎಎಪಿ ಮಸೂದೆಯ ಪ್ರತಿಗಳನ್ನು ನೀಡುವಂತೆ ಧರಣಿ ಮಾಡುತ್ತಿದೆ. ಸೋಮವಾರ ಮಧ್ಯಾಹ್ನ ಅಧಿವೇಶನವನ್ನು ಮುಂದೂಡಿದ ನಂತರವು ಎಎಪಿ ಶಾಸಕರು ತಮ್ಮ ಧರಣಿಯನ್ನು ಮುಂದುವರೆಸಿ, ಕೇಂದ್ರವು ಜಾರಿಗೆ ತಂದ ಶಾಸನವನ್ನು ಎದುರಿಸುವ ಮಸೂದೆಯ ಪ್ರತಿಗಳನ್ನು ಕೋರಿದ್ದರು.

ಪಂಜಾಬ್ ಹಣಕಾಸು ಮತ್ತು ಕಾರ್ಯಕಾರಿ ಸಂಸದೀಯ ವ್ಯವಹಾರಗಳ ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್, ಹೊಸ ಕೃಷಿ ಕಾನೂನುಗಳನ್ನು ಎದುರಿಸಲು ರಾಜ್ಯ ಸರ್ಕಾರ ಸಾಂವಿಧಾನಿಕ ತಜ್ಞರೊಂದಿಗೆ ಸಮಾಲೋಚಿಸುತ್ತಿದೆ ಮತ್ತು ಅಧಿವೇಶನದಲ್ಲಿ ಮಂಡಿಸಬೇಕಾದ ವಿವಿಧ ಮಸೂದೆಗಳ ಪ್ರತಿಗಳನ್ನು ಪ್ರತಿಪಕ್ಷಗಳಿಗೆ ಸಂಜೆಯ ಹೊತ್ತಿಗೆ ನೀಡಲಾಗುವುದು ಎಂದು ನಿನ್ನೆ ಹೇಳಿದ್ದರು.

ಪ್ರತಿಪಕ್ಷದ ನಾಯಕ ಮತ್ತು ಎಎಪಿ ಮುಖಂಡ ಹರ್ಪಾಲ್ ಸಿಂಗ್ ಚೀಮಾ, “ಸದನದಲ್ಲಿ ಮಂಡಿಸಲಾಗುವ ಮಸೂದೆಗಳ ಪ್ರತಿ ಸಿಗುವ ತನಕ ನಾವು ಇಲ್ಲಿ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ” ಎಂದು ನಿನ್ನೆ ತಡರಾತ್ರಿ ಹೇಳಿದ್ದಾರೆ.

“ಕೃಷಿ ಕಾನೂನುಗಳ ವಿರುದ್ಧದ ಶಾಸನವನ್ನು ಎಎಪಿ ಬೆಂಬಲಿಸುತ್ತದೆ ಆದರೆ ಸರ್ಕಾರವು ಅದರ ಪ್ರತಿಗಳನ್ನು ನಮಗೆ ನೀಡಬೇಕಾಗಿತ್ತು. ನಮಗೆ ಇತರ ಮಸೂದೆಗಳ ಪ್ರತಿಗಳೂ ಸಿಕ್ಕಿಲ್ಲ. ಇದು ಸಿಗದೆ ನಮ್ಮ ಶಾಸಕರು ಪ್ರಮುಖ ವಿಷಯಗಳ ಬಗ್ಗೆ ಹೇಗೆ ಚರ್ಚಿಸುತ್ತಾರೆ” ಎಂದು ಚೀಮಾ ಹೇಳಿದ್ದಾರೆ.

ಇದನ್ನೂ ಓದಿ: ’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...