Homeಮುಖಪುಟಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು: ಪಂಜಾಬ್‌ ಅಸೆಂಬ್ಲಿಯಲ್ಲಿ ಮೂರು ಹೊಸ ಮಸೂದೆಗಳ ಮಂಡನೆ!

ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು: ಪಂಜಾಬ್‌ ಅಸೆಂಬ್ಲಿಯಲ್ಲಿ ಮೂರು ಹೊಸ ಮಸೂದೆಗಳ ಮಂಡನೆ!

ಕೇಂದ್ರದ ಕೃಷಿ ಕಾನೂನುಗಳು ರೈತರು ಮತ್ತು ಭೂಹೀನ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

- Advertisement -
- Advertisement -

ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿದ ಮೂರು ಹೊಸ ಕೃಷಿ ಕಾನೂನುಗಳನ್ನು ತಿರಸ್ಕರಿಸುವ ನಿರ್ಣಯವನ್ನು ಮಂಡಿಸಿದೆ. ಕೇಂದ್ರದ ಕೃಷಿ ಕಾನೂನುಗಳು ರೈತರು ಮತ್ತು ಭೂಹೀನ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಅವರು ಹೇಳಿದ್ದಾರೆ.

“ಕೃಷಿ ಸುಗ್ರೀವಾಜ್ಞೆಗಳು ಮತ್ತು ವಿದ್ಯುತ್ ಕಾಯ್ದೆಯ ತಿದ್ದುಪಡಿಗಳ ವಿರುದ್ಧದ ನಿರ್ಣಯವು ಮುಗಿದಿದೆ. ಮೂರು ಕೃಷಿ ಶಾಸನಗಳು ಮತ್ತು ಪ್ರಸ್ತಾವಿತ ವಿದ್ಯುತ್ (ತಿದ್ದುಪಡಿ) ಮಸೂದೆ, ರೈತರು ಮತ್ತು ಭೂಹೀನ ಕಾರ್ಮಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ” ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಒದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ಕೇಂದ್ರದ ಕೃಷಿ ಕಾನೂನುಗಳನ್ನು ಪ್ರಶ್ನಿಸಿ ನಿರ್ಣಯವನ್ನು ಮಂಡಿಸಿದ ಮೊದಲ ರಾಜ್ಯ ಪಂಜಾಬ್ ಆಗಿದೆ. ನಿರ್ಣಯದ ಹೊರತಾಗಿ, ರೈತರ ಉತ್ಪಾದನಾ ಸೌಲಭ್ಯ ಕಾಯ್ದೆಗೆ ತಿದ್ದುಪಡಿ, ಅಗತ್ಯ ಸರಕುಗಳ ಕಾಯ್ದೆಗೆ ತಿದ್ದುಪಡಿ, ರೈತರ ಒಪ್ಪಂದಕ್ಕೆ ತಿದ್ದುಪಡಿ ಮತ್ತು ಕೃಷಿ ಸೇವೆಗಳ ಕಾಯ್ದೆ ಸೇರಿದಂತೆ ಒಟ್ಟು ಮೂರು ಹೊಸ ಮಸೂದೆಗಳನ್ನು ಮುಖ್ಯಮಂತ್ರಿ ಇಂದು ಅಸೆಂಬ್ಲಿಯಲ್ಲಿ ಮಂಡಿಸಿದ್ದಾರೆ.

ಈ ತಿದ್ದುಪಡಿಗಳಿಗೆ ಭಾರತದ ರಾಷ್ಟ್ರಪತಿಗಳ ಒಪ್ಪಿಗೆಯ ಅಗತ್ಯವಿರುತ್ತದೆ. ಇದಕ್ಕೂ ಮೊದಲು, ಆಗಸ್ಟ್ 28 ರಂದು, ವಿಧಾನಸಭೆಯಲ್ಲಿ ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ತಿರಸ್ಕರಿಸುವ ನಿರ್ಣಯವನ್ನು ಅಂಗೀಕರಿಸಿತ್ತು.

ಮಸೂದೆಯ ಪ್ರತಿಗಾಗಿ ಎಎಪಿ ಹಟ

ವಿರೋಧ ಪಕ್ಷ ಎಎಪಿ ಮಸೂದೆಯ ಪ್ರತಿಗಳನ್ನು ನೀಡುವಂತೆ ಧರಣಿ ಮಾಡುತ್ತಿದೆ. ಸೋಮವಾರ ಮಧ್ಯಾಹ್ನ ಅಧಿವೇಶನವನ್ನು ಮುಂದೂಡಿದ ನಂತರವು ಎಎಪಿ ಶಾಸಕರು ತಮ್ಮ ಧರಣಿಯನ್ನು ಮುಂದುವರೆಸಿ, ಕೇಂದ್ರವು ಜಾರಿಗೆ ತಂದ ಶಾಸನವನ್ನು ಎದುರಿಸುವ ಮಸೂದೆಯ ಪ್ರತಿಗಳನ್ನು ಕೋರಿದ್ದರು.

ಪಂಜಾಬ್ ಹಣಕಾಸು ಮತ್ತು ಕಾರ್ಯಕಾರಿ ಸಂಸದೀಯ ವ್ಯವಹಾರಗಳ ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್, ಹೊಸ ಕೃಷಿ ಕಾನೂನುಗಳನ್ನು ಎದುರಿಸಲು ರಾಜ್ಯ ಸರ್ಕಾರ ಸಾಂವಿಧಾನಿಕ ತಜ್ಞರೊಂದಿಗೆ ಸಮಾಲೋಚಿಸುತ್ತಿದೆ ಮತ್ತು ಅಧಿವೇಶನದಲ್ಲಿ ಮಂಡಿಸಬೇಕಾದ ವಿವಿಧ ಮಸೂದೆಗಳ ಪ್ರತಿಗಳನ್ನು ಪ್ರತಿಪಕ್ಷಗಳಿಗೆ ಸಂಜೆಯ ಹೊತ್ತಿಗೆ ನೀಡಲಾಗುವುದು ಎಂದು ನಿನ್ನೆ ಹೇಳಿದ್ದರು.

ಪ್ರತಿಪಕ್ಷದ ನಾಯಕ ಮತ್ತು ಎಎಪಿ ಮುಖಂಡ ಹರ್ಪಾಲ್ ಸಿಂಗ್ ಚೀಮಾ, “ಸದನದಲ್ಲಿ ಮಂಡಿಸಲಾಗುವ ಮಸೂದೆಗಳ ಪ್ರತಿ ಸಿಗುವ ತನಕ ನಾವು ಇಲ್ಲಿ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ” ಎಂದು ನಿನ್ನೆ ತಡರಾತ್ರಿ ಹೇಳಿದ್ದಾರೆ.

“ಕೃಷಿ ಕಾನೂನುಗಳ ವಿರುದ್ಧದ ಶಾಸನವನ್ನು ಎಎಪಿ ಬೆಂಬಲಿಸುತ್ತದೆ ಆದರೆ ಸರ್ಕಾರವು ಅದರ ಪ್ರತಿಗಳನ್ನು ನಮಗೆ ನೀಡಬೇಕಾಗಿತ್ತು. ನಮಗೆ ಇತರ ಮಸೂದೆಗಳ ಪ್ರತಿಗಳೂ ಸಿಕ್ಕಿಲ್ಲ. ಇದು ಸಿಗದೆ ನಮ್ಮ ಶಾಸಕರು ಪ್ರಮುಖ ವಿಷಯಗಳ ಬಗ್ಗೆ ಹೇಗೆ ಚರ್ಚಿಸುತ್ತಾರೆ” ಎಂದು ಚೀಮಾ ಹೇಳಿದ್ದಾರೆ.

ಇದನ್ನೂ ಓದಿ: ’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...