Homeಮುಖಪುಟಪ್ರವಾಹ: ತೆಲಂಗಾಣ ರಾಜ್ಯಕ್ಕೆ 15 ಕೋಟಿ ರೂ ದೇಣಿಗೆ ನೀಡಲು ಮುಂದಾದ ದೆಹಲಿ ಸರ್ಕಾರ!

ಪ್ರವಾಹ: ತೆಲಂಗಾಣ ರಾಜ್ಯಕ್ಕೆ 15 ಕೋಟಿ ರೂ ದೇಣಿಗೆ ನೀಡಲು ಮುಂದಾದ ದೆಹಲಿ ಸರ್ಕಾರ!

ಹೈದರಾಬಾದ್‌ನಲ್ಲಿ ಪ್ರವಾಹ ಉಂಟಾಗಿದೆ. ಈ ಬಿಕ್ಕಟ್ಟಿನ ಸಮಯದಲ್ಲಿ ದೆಹಲಿಯ ಜನರು ಹೈದರಾಬಾದ್‌ನ ನಮ್ಮ ಸಹೋದರ ಸಹೋದರಿಯರೊಂದಿಗೆ ನಿಲ್ಲಲಿದ್ದಾರೆ - ಕೇಜ್ರಿವಾಲ್

- Advertisement -
- Advertisement -

ಕಳೆದೊಂದು ವಾರದಿಂದ ಅಪ್ಪಳಿಸುತ್ತಿರುವ ಭಾರಿ ಪ್ರವಾಹಕ್ಕೆ ಹೈದರಾಬಾದ್ ತತ್ತರಿಸಿದೆ. ನೂರಾರು ಮನೆಗಳು, ವಾಹನಗಳು ಕೊಚ್ಚಿಹೋಗಿವೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ದೆಹಲಿ ಸರ್ಕಾರವು ಸಹಾಯ ಹಸ್ತ ಚಾಚಿದ್ದು, 15 ಕೋಟಿ ದೇಣಿಗೆ ನೀಡಲು ಮುಂದಾಗಿದೆ.

ಈ ಕುರಿತು ಇಂದು ಬೆಳಿಗ್ಗೆ ಟ್ವೀಟ್‌ ಮಾಡಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ “ಹೈದರಾಬಾದ್‌ನಲ್ಲಿ ಪ್ರವಾಹ ಉಂಟಾಗಿದೆ. ಈ ಬಿಕ್ಕಟ್ಟಿನ ಸಮಯದಲ್ಲಿ ದೆಹಲಿಯ ಜನರು ಹೈದರಾಬಾದ್‌ನ ನಮ್ಮ ಸಹೋದರ ಸಹೋದರಿಯರೊಂದಿಗೆ ನಿಲ್ಲಲಿದ್ದಾರೆ. ಪರಿಹಾರ ಕಾರ್ಯಗಳಿಗಾಗಿ ದೆಹಲಿ ಸರ್ಕಾರವು ತೆಲಂಗಾಣ ಸರ್ಕಾರಕ್ಕೆ 15 ಕೋಟಿ ರೂ ದೇಣಿಗೆ ನೀಡಲಿದೆ” ಎಂದು ಘೋಷಿಸಿದ್ದಾರೆ.

ಕೇಜ್ರಿವಾಲ್‌ರವರ ಈ ನಡೆಗೆ ಟ್ವಿಟ್ಟರ್‌ನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೋವಿಡ್ ಸಾಂಕ್ರಾಮಿಕದಿಂದ ದೆಹಲಿಯೇ ಸಂಕಷ್ಟದಲ್ಲಿರುವಾಗ ಇನ್ನೊಂದು ರಾಜ್ಯಕ್ಕೆ ಹಣ ನೀಡಬೇಕೇ ಎಂದು ಕೆಲವರು ಪ್ರಶ್ನಿಸಿದರೆ, ಸಂಕಷ್ಟದ ಸಮಯದಲ್ಲಿ ಇತರರ ನೆರವಿಗೆ ಧಾವಿಸಿರುವುದಕ್ಕೆ ಹಲವರು ಪ್ರಶಂಸಿದ್ದಾರೆ.


ಇದನ್ನೂ ಓದಿ: ಅ.21 ರವರೆಗೂ ಮಹಾಮಳೆ: ಹೈದರಾಬಾದ್‌ನಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ!


ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಪ್ರವಾಹ ಪೀಡಿತ ರಾಜ್ಯಗಳಿಗೆ ಒಂದು ಪೈಸೆಯೂ ಹಣ ಬಿಡುಗಡೆ ಮಾಡಿಲ್ಲ. ಕೋವಿಡ್ ನಿರ್ವಹಣೆಗೂ ಹಣ ನೀಡುತ್ತಿಲ್ಲ ಎಂದು ಹಲವರು ದೂರಿದ್ದಾರೆ.

ಪ್ರಧಾನಿ ಮೋದಿಯವರು ಅಕ್ಟೋಬರ್ 14 ರಂದು ಟ್ವೀಟ್‌ ಮಾಡಿ “ಪ್ರವಾಹದಿಂದ ತತ್ತರಿಸಿರುವ ತೆಲಂಗಾಣ ರಾಜ್ಯಕ್ಕೆ ಕೇಂದ್ರ ಸರ್ಕಾರವು ಸಾಧ್ಯವಿರುವ ಎಲ್ಲ ರೀತಿಯಲ್ಲಿ ನೆರವು ನೀಡುತ್ತದೆ ಎಂದು ಭರವಸೆ ನೀಡುತ್ತೇನೆ” ಎಂದು ಟ್ವೀಟ್‌ ಮಾಡಿದ್ದರು.


ಇದನ್ನೂ ಓದಿ: ಪ್ರವಾಹ: ಪ್ರಧಾನಿ ಮಾಡಿದ ಕನ್ನಡದ ಒಂದು ಟ್ವೀಟ್ ನೆರೆ ಪರಿಹಾರವಾಗಬಲ್ಲುದೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...