Homeಅಂತರಾಷ್ಟ್ರೀಯಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಅಮೆರಿಕ ಚುನಾವಣೆ: ಅಭ್ಯರ್ಥಿಗಳ ಚರ್ಚೆಯಲ್ಲಿ ಇರಲಿದೆ ಮ್ಯೂಟ್ ಬಟನ್!

ಸುಮಾರು 60 ಲಕ್ಷ ಜನರು ಈವರೆಗೆ ಚುನಾವಣೆಗೆ ಮುಂಚಿತವಾಗಿ ಮತ ಚಲಾಯಿಸುವ ಅವಕಾಶವನ್ನು ಬಳಸಿಕೊಂಡು ತಮ್ಮ ಮತಪತ್ರಗಳನ್ನು ಚಲಾಯಿಸಿದ್ದಾರೆ. ಇದರಲ್ಲಿ ಜೋ ಬಿಡೆನ್ ಮುಂದಿದ್ದಾರೆ ಎನ್ನಲಾಗಿದೆ.

- Advertisement -
- Advertisement -

ಅಮೆರಿಕ ಚುನಾವಣೆ ಹಿನ್ನೆಲೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರತಿಸ್ಫರ್ಧಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡನ್ ನಡುವೆ ಗುರುವಾರ ಚರ್ಚೆ ನಡೆಯಲಿದೆ. ಆದರೆ ಈ ಬಾರಿಯ ಚರ್ಚೆಯಲ್ಲಿ ಪ್ರತಿ ಅಭ್ಯರ್ಥಿಯು ತಡೆರಹಿತವಾಗಿ ಮಾತನಾಡಲು ಸಹಾಯಕವಾಗುವಂತೆ ಅಡೆತಡೆಗಳನ್ನು ತಪ್ಪಿಸಲು ಮ್ಯೂಟ್ ಬಟನ್ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

ಅಧ್ಯಕ್ಷೀಯ ಆಯೋಗವು ಚರ್ಚೆ ವೇಳೆ ಮಾತಾಡುತ್ತಿರುವ ಅಭ್ಯರ್ಥಿ ಬಿಟ್ಟು ಇನ್ನೊಬ್ಬ ಅಭ್ಯರ್ಥಿಯ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುತ್ತದೆ. ಪ್ರತಿ 15 ನಿಮಿಷಗಳ ಚರ್ಚೆಯ ಆರಂಭದಲ್ಲಿ ಟೀಕೆಗಳನ್ನು ಮಾಡಲು ಎರಡು ನಿಮಿಷಗಳ ಅವಕಾಶ ನೀಡಲಾಗುತ್ತದೆ. ಮಾತು ಮುಗಿದ ನಂತರ ಇಬ್ಬರ ಮೈಕ್ರೊಫೋನ್‌ಗಳನ್ನು ಆನ್ ಮಾಡಿ ಚರ್ಚೆಗೆ ಅವಕಾಶ ನೀಡಲಾಗುತ್ತದೆ.

ಸುಮಾರು 60 ಲಕ್ಷ ಜನರು ಈವರೆಗೆ ಚುನಾವಣೆಗೆ ಮುಂಚಿತವಾಗಿ ಮತ ಚಲಾಯಿಸುವ ಅವಕಾಶವನ್ನು ಬಳಸಿಕೊಂಡು ತಮ್ಮ ಮತಪತ್ರಗಳನ್ನು ಚಲಾಯಿಸಿದ್ದಾರೆ. ಇದರಲ್ಲಿ ಜೋ ಬಿಡೆನ್ ಮುಂದಿದ್ದಾರೆ ಎಂಬ ಅಂಶವನ್ನು ಹಿಂದಿಕ್ಕಲು ಅಧ್ಯಕ್ಷ ಟ್ರಂಪ್ ಪ್ರಯತ್ನಿಸುತ್ತಿದ್ದಾರೆ. ನವೆಂಬರ್ 3 ರಂದು ಅಮೆರಿಕ ಚುನಾವಣೆ ನಡೆಯಲಿದೆ.

ಇದನ್ನೂ ಓದಿ: ಅಮೆರಿಕಾ ಚುನಾವಣೆ: ಚರ್ಚೆಯಲ್ಲಿ ಭಾಗವಹಿಸಲು ನಿರಾಕರಿಸಿದ ಟ್ರಂಪ್

ಕಳೆದ ಸೆಪ್ಟೆಂಬರ್ 29 ರಂದು ನಡೆದ ಚರ್ಚೆಯ ಸಂದರ್ಭದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಜೋ ಬಿಡೆನ್‌ ಮಾತಿಗೆ ಅಡ್ಡಿಪಡಿಸಿದ್ದರು. ಬಿಡೆನ್ ಅವರಿಗೆ ಅವಮಾನವಾಗುವಂತೆ ವರ್ತಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಮ್ಯೂಟ್ ಬಟನ್ ವ್ಯವಸ್ಥೆ ಮಾಡಲಾಗಿದೆ.

ಟ್ರಂಪ್‌ಗೆ ಕೊರೊನಾ ಸೋಂಕು ಕಾಣಿಸಿಕೊಂಡ ನಂತರ ಆನ್‌ಲೈನ್ ಚರ್ಚೆ ಏರ್ಪಡಿಸಲಾಗಿತ್ತು. ಆದರೆ “ಕಂಪ್ಯೂಟರ್ ಹಿಂದೆ ಕುಳಿತು ಮಾಡುವ ಚರ್ಚೆಯಲ್ಲಿ ಕೂತು ನನ್ನ ಸಮಯವನ್ನು ವ್ಯರ್ಥ ಮಾಡಲು ಹೋಗುವುದಿಲ್ಲ” ಎಂದು ಹೇಳಿ, ಕಳೆದ ಗುರುವಾರ ನಿಗದಿಪಡಿಸಿದ ಎರಡನೇ ಚರ್ಚೆಯಿಂದ ಹಿಂದೆ ಸರಿದಿದ್ದರು. ಅಲ್ಲದೆ ಅಂದೇ ತಾವು ಚರ್ಚೆಯಲ್ಲಿ ಭಾಗವಹಿಸಿದರೆ ತಮ್ಮ ಮೈಕ್ರೊಫೋನ್ ಅನ್ನು ಮ್ಯೂಟ್ ಮಾಡುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.

ಇನ್ನು ಈ ಗುರುವಾರ ಚರ್ಚೆಗೆ ನಿಗದಿಪಡಿಸಲಾದ ವಿಷಯಗಳ ಬಗ್ಗೆ ಟ್ರಂಪ್ ಗುಂಪು ಅಸಮಾಧಾನ ವ್ಯಕ್ತಪಡಿಸಿದೆ. ಚರ್ಚೆ ವಿದೇಶಿ ನೀತಿಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದೆ. ಜೊತೆಗೆ ಅಧ್ಯಕ್ಷೀಯ ಆಯೋಗದ ಗುಂಪು ಬಿಡೆನ್ ಕಡೆಗೆ ವಾಲುತ್ತಿದೆ ಎಂದು ದೂರಿದ್ದಾರೆ.

ಇದನ್ನೂ ಓದಿ: ಜನಾಂಗೀಯ ದಾಳಿಯನ್ನು ಹಿಮ್ಮೆಟ್ಟಿಸುವ ಹೋರಾಟಕ್ಕೆ ಸಿದ್ದಳಾಗಿದ್ದೇನೆ: ಕಮಲಾ ಹ್ಯಾರಿಸ್

“ಅಧ್ಯಕ್ಷೀಯ ಆಯೋಗದ ಬಿಡೆನ್ ಪರ ವರ್ತನೆಗಳು ಇಡೀ ಚರ್ಚೆಯನ್ನು ವೈಫಲ್ಯವನ್ನಾಗಿ ಮಾಡಿವೆ” ಎಂದು ಟ್ರಂಪ್‌ ಪರ ಪ್ರಚಾರ ಅಭಿಯಾನದ ವ್ಯವಸ್ಥಾಪಕ ಬಿಲ್ ಸ್ಟೀಪಿಯನ್ ಎರಡು ಪುಟಗಳ ಪತ್ರದಲ್ಲಿ ದೂರಿದ್ದಾರೆ. ಆದರೆ, ಚರ್ಚಾ ವಿಷಯಗಳನ್ನು ಆಯ್ಕೆ ಮಾಡುವ ಅವಕಾಶ ನೀಡಲು ಎರಡೂ ಕಡೆಯವರು ಈ ಹಿಂದೆ ಒಪ್ಪಿಕೊಂಡಿದ್ದಾರೆ ಎಂದು ಬಿಡೆನ್‌ ಪರ ಅಭಿಯಾನ ನಡೆಸುವವರು ತಿಳಿಸಿದ್ದಾರೆ.

ಅಧ್ಯಕ್ಷ ಟ್ರಂಪ್, ಕೊರೊನಾವೈರಸ್ ಸಾಂಕ್ರಾಮಿಕ ರೋಗದ ನಿರ್ವಹಣೆ, ನಿಯಂತ್ರಣದ ಬಗ್ಗೆ ಚರ್ಚಿಸುವುದನ್ನು ತಪ್ಪಿಸಲು ಬಯಸಿದ್ದಾರೆ. ಆದರೆ ಚುನಾವಣಾ ಸಮೀಕ್ಷೆಗಳು, ಕೊರೊನಾ ವಿಚಾರ ಮತದಾರರಿಗೆ ಪ್ರಮುಖ ವಿಷಯವಾಗಿದೆ ಎಂದು ತೋರಿಸಿವೆ ಎಂದಿದ್ದಾರೆ.

ಚುನಾವಣಾ ಪ್ರಚಾರದ ತಮ್ಮ ಅಭಿಯಾನದುದ್ದಕೂ ಟ್ರಂಪ್ ಜೋ ಬಿಡೆನ್ ಅವರ ಮೇಲೆ ವೈಯಕ್ತಿಕವಾಗಿ ದಾಳಿ ಮಾಡುತ್ತಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯದಲ್ಲಿ ನಡೆದಿರುವ ಚುನಾವಣೋತ್ತರ ಸಮೀಕ್ಷೆಗಳು ಬಿಡೆನ್ ಪರವಾಗಿರುವುದು ಟ್ರಂಪ್ ಅವರ ಈ ವರ್ತನೆಗೆ ಕಾರಣವಾಗಿವೆ ಎನ್ನಲಾಗಿದೆ.

ಜೋ ಬಿಡನ್ ಅಮೆರಿಕಾದಲ್ಲಿ ಕಮ್ಯುನಿಸಮ್ ಮತ್ತು ಪ್ರವಾಹೋಪಾದಿಯಲ್ಲಿ ಕ್ರಿಮಿನಲ್ ವಲಸಿಗರನ್ನು ತುಂಬಲಿದ್ದಾರೆ ಎಂದು ಟ್ರಂಪ್ ಆರೋಪಿಸಿದ್ದಾರೆ. ಚುನಾವಣಾ ರ್‍ಯಾಲಿಗಳಲ್ಲಿ ತಾವು ಸೋತರೆ ದೇಶ ಬಿಟ್ಟು ಹೋಗುವ ಮಾತುಗಳನ್ನಾಡಿ ಜನರನ್ನು ಭಾವನಾತ್ಮಕವಾಗಿ ಹಿಡಿದಿಡಲು ಪ್ರಯತ್ನಿಸುತ್ತಿದ್ದಾರೆ.


ಇದನ್ನೂ ಓದಿ: ನಾನು ಚುನಾವಣೆಯಲ್ಲಿ ಸೋತರೆ ದೇಶ ಬಿಡಬಹುದು: ಡೊನಾಲ್ಡ್ ಟ್ರಂಪ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...