Homeಕರ್ನಾಟಕಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಕಾನೂನುಬಾಹಿರ ಅಪರಾಧಗಳನ್ನು ಒಪ್ಪಿಕೊಂಡ ಕುಮಾರಸ್ವಾಮಿ! ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಚುನಾವಣಾ ಸಭೆಯಲ್ಲಿ "ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ" ಎಂದು ಕುಮಾರಸ್ವಾಮಿ ಹೇಳಿದ್ದರು.

- Advertisement -
- Advertisement -

ಶಿಕ್ಷಕರ ಕ್ಷೇತ್ರದ ಚುನಾವಣಾ ಸಭೆಯಲ್ಲಿ “ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ, ನೂರಾರು ಮಂದಿಗೆ ಕೆಪಿಎಸ್‌ಸಿ ಉದ್ಯೋಗ ಕೊಡಿಸಿದ್ದೆ, ಬಿಡಿಎ ಸೈಟ್ ಕೊಡಿಸಿದ್ದೆ” ಎಂದು ಹೇಳಿದ್ದ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧದ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಅವರ ಈ ಹೇಳಿಕೆಗೆ ‘ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ!’, ‘ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ? ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ..’, ‘ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ? ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಕುಮಾರಸ್ವಾಮಿ ಹೇಳಿದ್ದೇನು?

ರಾಮನಗರದ ಕೇತಗಾನಹಳ್ಳಿ ತೋಟದ ಮನೆಯಲ್ಲಿ ನಡೆದ ಶಿಕ್ಷಕರ ಪ್ರಚಾರ ಸಭೆಯಲ್ಲಿ “ಈಗ ನನ್ನ ವಿರುದ್ಧ ತುಚ್ಛವಾಗಿ ಮಾತನಾಡುತ್ತಿರುವ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಂಬದ 10-12 ಜನಕ್ಕೆ ಕ್ಲಾಸ್ ವನ್ ಕೆಲಸ ಕೊಡಿಸಿದ್ದೆ. 1999-2000 ರಲ್ಲಿ ನನ್ನ ಅಧಿಕಾರಾವಧಿಯಲ್ಲಿ ಕೃಷ್ಣರವರು ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದಾಗ ಪುಟ್ಟಣ ನನ್ನಿಂದ ನೂರಾರು ಮಂದಿಗೆ ಉದ್ಯೋಗ ಕೊಡಿಸಿಕೊಂಡಿದ್ದಾರೆ. ಅಲ್ಲದೇ ನಾನು ಕೊಡಿಸಿದ್ದ ಬಿಡಿಎ ಸೈಟಿನಲ್ಲಿ 70-80 ಕೋಟಿ ಮೌಲ್ಯದ ಶಿಕ್ಷಣ ಸಂಸ್ಥೆ ಕಟ್ಟಿಕೊಂಡಿದ್ದಾನೆ ಎಂದು ಬಲ್ಲವರು ಹೇಳುತ್ತಾರೆ” ಎಂದು ಕುಮಾರಸ್ವಾಮಿ ಮಾತನಾಡಿದ್ದನ್ನು ಪ್ರಜಾವಾಣಿ ವರದಿ ಮಾಡಿತ್ತು.

ಕೆಪಿಎಸ್‌ಸಿಯಲ್ಲಿ ಅಕ್ರಮಗಳು ನಡೆದಿವೆ, ಅರ್ಹರಿಗೆ ಉದ್ಯೋಗ ಸಿಗುತ್ತಿಲ್ಲ, ಭಾರೀ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ನುರಾರು ಆರೋಪಗಳು, ಹಗರಣಗಳು, ತನಿಖೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಕುಮಾರಸ್ವಾಮಿಯವರ ಈ ಮಾತುಗಳು ವಿವಾದಕ್ಕೆ ಕಾರಣವಾಗಿವೆ. ತಾವು ಮಾಡಿದ ಅಧಿಕಾರ ದುರುಪಯೋಗದ, ಕಾನೂನು ಬಾಹಿರ ಚಟುವಟಿಕೆಗಳನ್ನು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದಾರೆ ಎಂದು ಹಲವರು ದೂರಿದ್ದಾರೆ.

ಹೆಚ್‌ಡಿಕೆ ವಿರುದ್ಧ ದೂರು ದಾಖಲಾಗಬೇಕು – ರವಿಕೃಷ್ಣಾರೆಡ್ಡಿ

ಈ ಕುರಿತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಧ್ಯಕ್ಷ ರವಿಕೃಷ್ಣಾರೆಡ್ಡಿಯವರು ಕುಮಾರಸ್ವಾಮಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡ ಕುಮಾರಸ್ವಾಮಿ ಎಂದು ಟೀಕಿಸಿದ್ದಾರೆ.

“ತಾವು ಅಧಿಕಾರದಲ್ಲಿದ್ದಾಗ ಅದನ್ನು ಎಷ್ಟೇ ದುರುಪಯೋಗ ಮಾಡಿಕೊಂಡಿದ್ದರೂ, ಅಕ್ರಮಗಳನ್ನು ಮಾಡಿದ್ದರೂ, ಸಾರ್ವಜನಿಕವಾಗಿ ಮಾತನಾಡುವಾಗ ಏನನ್ನು ಹೇಳಬಹುದು ಎನ್ನುವ ಯಾವುದೇ ಪರಿಜ್ಞಾನ ಇಲ್ಲದ ಮತ್ತು ತಮ್ಮ ಕುಕೃತ್ಯಗಳನ್ನು ನಾಚಿಕೆ ಇಲ್ಲದೆ ಘಂಟಾಘೋಷವಾಗಿ ಸಾರುವ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಇವರು ಸ್ವತಃ ಹೇಳಿಕೊಂಡಂತಹ ಘನಕಾರ್ಯದಿಂದಾಗಿ ತಮಗೆ ನ್ಯಾಯಯುತವಾಗಿ ದಕ್ಕಬೇಕಾಗಿದ್ದ ಸರ್ಕಾರಿ ನೌಕರಿಯನ್ನು ಕಳೆದುಕೊಂಡು ಅನ್ಯಾಯಕ್ಕೊಳಗಾದ ಅರ್ಹ ಅಭ್ಯರ್ಥಿಗಳು ನಮ್ಮ ರಾಜ್ಯದಲ್ಲಿ ಸಾವಿರಾರು ಜನ ಇದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಪಿಎಸ್‌ಸಿ’ಯ ಅತಿ ಭ್ರಷ್ಟ ಅಧ್ಯಕ್ಷ ಹೆಚ್.ಎನ್. ಕೃಷ್ಣ ಜೈಲಿನಿಂದ ಬಿಡುಗಡೆಯಾಗುವಾಗ ಅವರನ್ನು ಅಲ್ಲಿಂದ ಕಾರಿನಲ್ಲಿ ತಮ್ಮ ಪಕ್ಕದಲ್ಲಿಯೇ ಕೂರಿಸಿಕೊಂಡು ಕರೆತಂದವರು ಕುಮಾರಸ್ವಾಮಿಯವರು. ಮೋಸಕ್ಕೊಳಗಾದ ಬಡವ ಮತ್ತು ದುರ್ಬಲರ ಶಾಪ ಕಠೋರವಾಗಿರುತ್ತದೆ. ನಮ್ಮ ನ್ಯಾಯಾಂಗಕ್ಕೆ ಮತ್ತು ಸರ್ಕಾರಕ್ಕೆ ಕನಿಷ್ಠ ಮಟ್ಟದ ಜವಾಬ್ದಾರಿ ಇದ್ದರೆ ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. ಆದರೆ JCB ಪಕ್ಷಗಳ ನೀಚ ಮತ್ತು ಸಮಯಸಾಧಕ ಹೊಂದಾಣಿಕೆ ರಾಜಕಾರಣದಿಂದಾಗಿ ಮತ್ತು ಅವುಗಳನ್ನು ಬೆಂಬಲಿಸುವ ಜನರಿಂದಾಗಿ ಇದು ಸದ್ಯದಲ್ಲಿ ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ತಮ್ಮ ಕಾನೂನುಬಾಹಿರ ಅಪರಾಧಿ ಕೃತ್ಯಗಳನ್ನು ಸ್ವತಃ ಸಾರ್ವಜನಿಕವಾಗಿ ಒಪ್ಪಿಕೊಂಡಿರುವ ಕುಮಾರಸ್ವಾಮಿಯವರ ಮೇಲೆ ಈ ಕೂಡಲೇ ಸ್ವಯಂಪ್ರೇರಿತ ಮೊಕದ್ದಮೆಗಳು ದಾಖಲಾಗಬೇಕು. ತನಿಖೆಯಾಗಬೇಕು. ವಿಚಾರಣೆಯಾಗಬೇಕು. ಶಿಕ್ಷೆಯಾಗಬೇಕು. – ರವಿಕೃಷ್ಣಾರೆಡ್ಡಿ

ಅಂದರೆ ನೀವು ಎಷ್ಟು ಅರ್ಹರಿಗೆ ಅನ್ಯಾಯ ಮಾಡಿದೀರ?ಈಗ ನಿಮಗೆ ಮೋಸವಾದಾಗ ಎಚ್ಚರಗೊಂಡಿರುವಿರಿ

Posted by Annapurna Venkatananjappa on Monday, October 19, 2020

ಫ್ಯೂಡಲ್‌ಗಿರಿಯ ಮದವೋ? ಶೂದ್ರ ದಡ್ಡತನವೋ? – ಕೆ.ಪಿ ನಟರಾಜ್

ಉಪನ್ಯಾಸಕರು ಮತ್ತು ಚಿಂತಕರಾದ ನಟರಾಜ್ ಕಲ್ಕೆರೆಯವರು “ಅಲ್ರೀ ಕುಮಾರಸ್ವಾಮಿಯವರೆ, ಅವರು ಕೇಳಿಕೊಂಡುಬಂದರು , ನಾನು ಕೊಡಿಸಿದೆ ಅಂತ ನಿರ್ಭಯವಾಗಿ ಮಾತಾಡ್ತೀರಲ್ಲ, ಸರ್ಕಾರಿ ಹುದ್ದೆಗಳು ನಿಮ್ಮ ಸ್ವಯಾರ್ಜಿತ, ಇಲ್ಲ ಪಿತ್ರಾರ್ಜಿತ ಆಸ್ತಿಅಂತ ತಿಳಿದಿದ್ದೀರ? ಎಂದು ಪ್ರಶ್ನಿಸಿದ್ದಾರೆ.

ಇದು ಕೆಪಿಎಸ್ಸಿಯಂತಹ ಸಾಂವಿಧಾನಿಕ ಸಂಸ್ಥೆಗಳ ಆಯ್ಕೆಯ ಅಧಿಕಾರದ ಮೇಲೆ ನೀವು ಮಾಡಿದ ಅಕ್ಷಮ್ಯ ಸವಾರಿಯಲ್ಲವೆ? ಜಾತಿ‌ ಮತ್ತು ಹಣದ ಬೆಂಬಲವಿಲ್ಲದ ಅರ್ಹ ಅಭ್ಯರ್ಥಿಗಳ ಬಾಳಿಗೆ ಬೆಂಕಿ ಇಕ್ಕಿದಂತೆ ಅಲ್ಲವೆ?
ಮತ್ತು ಇದನ್ನು ಸಾರ್ವಜನಿಕವಾಗಿ ನಿರ್ಭಯದಿಂದ ಹೇಳಿಕೊಳ್ಳುವುದು ಪ್ರಜಾಪ್ರಭುತ್ವ ವಿರೋಧಿ ಫ್ಯೂಡಲ್‌ಗಿರಿ ದಾರ್ಷ್ಟ್ಯವಲ್ಲವ ಇದು? ಕೆಪಿಎಸ್ಸಿಯನ್ನು ಅಪವಿತ್ರಗೊಳಿಸಿದ್ದ ಕಾರಣ ನಿಮ್ಮ ಈ ಕೃತ್ಯ ಶಿಕ್ಷಾರ್ಹ ಅಪರಾಧ ಅಲ್ಲವೆ ಎಂಬ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಇದನ್ನು ಸಾರ್ವಜನಿಕವಾಗಿ ಹೇಳಿಕೊಳ್ಳುವ ಇದನ್ನು ಫ್ಯೂಡಲ್‌ಗಿರಿಯ ಮದ ಎನ್ನಬೇಕೋ, ಇಲ್ಲ ಶೂದ್ರ ದಡ್ಡತನ ಅನ್ನಬೇಕೋ. ನಿಮ್ಮಂತಹ ಜಾತಿ -ಮದಾಂಧ ಶೂದ್ರರಿಂದಾಗಿಯೇ ಬಿಜೆಪಿ ಎಂಬ ಎಲ್ಲವನ್ನೂ ಮೀರಿದ ಕೇಡು ಬಂದು ನಮ್ಮ ದೇಶದ ತಲೆಹಿಡಿಯಿತು ಕಣ್ರಿ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಕುಮಾರಸ್ವಾಮಿಯಂಥ ಪೆದ್ದ ಯಾರೂ ಇಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಮನಗರ ಕಂಪಣವನ್ನು ತನ್ನ ಕುಟುಂಬದ ಹತೋಟಿಗೆ ಪಡೆಯು ಇಂತ ಕೆಲಸ ಮಾಡಿದ್ದಾರೆ.

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...