Homeಮುಖಪುಟಡಿಡಿಎಲ್‌ಜೆಗೆ 25ರ ಸಂಭ್ರಮ: ಹೆಸರು ಬದಲಾಯಿಸಿಕೊಂಡ ಕಾಜೋಲ್, ಶಾರುಖ್!

ಡಿಡಿಎಲ್‌ಜೆಗೆ 25ರ ಸಂಭ್ರಮ: ಹೆಸರು ಬದಲಾಯಿಸಿಕೊಂಡ ಕಾಜೋಲ್, ಶಾರುಖ್!

ನಟಿ ಕಾಜೋಲ್ ಮತ್ತು ನಟ ಶಾರುಖ್ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಹೆಸರನ್ನು ಡಿಡಿಎಲ್‌ಜೆ ಚಿತ್ರದ ಪಾತ್ರಗಳ ಹೆಸರಾದ ರಾಜ್ ಮತ್ತು ಸಿಮ್ರಾನ್ ಎಂದು ಬದಲಿಸಿಕೊಂಡಿದ್ದಾರೆ.

- Advertisement -
- Advertisement -

25 ವರ್ಷಗಳ ಹಿಂದೆ ಇದೆ ದಿನ ಬಾಲಿವುಡ್‌ನಲ್ಲಿ’ದಿಲ್ವಾಲೆ ದುಲ್ಹಾನಿಯಾ ಲೆ ಜಯೆಂಗೆ’ (DDLJ) ಚಿತ್ರ ಬಿಡುಗಡೆಯಾಗಿತ್ತು. ಅಂದು ಈ ಚಿತ್ರ ಈ ಮಟ್ಟಿಗೆ ಯಶಸ್ಸು, ದಾಖಲೆಗಳನ್ನು ಸಾಧಿಸುತ್ತದೆ ಎಂಬ ಕಲ್ಪನೆಯನ್ನು ಯಾರು ಇಟ್ಟುಕೊಂಡಿರಲಿಲ್ಲ.

ಬಾಲಿವುಡ್‌ನ ಎಲ್ಲಾ ದಾಖಲೆಗಳನ್ನು ಚೂರು ಮಾಡಿದ ಚಿತ್ರ ಇದು. ನಟ ಶಾರುಖ್ ಖಾನ್‌ಗೆ ರೊಮ್ಯಾಂಟಿಕ್ ಹೀರೋ ಪಟ್ಟ ಕೊಟ್ಟ ಚಿತ್ರ. ನಟಿ ಕಾಜೋಲ್ ಸಿನಿ ಜೀವನದ ಮೈಲುಗಲ್ಲು. ಚಿತ್ರ ನಿರ್ಮಿಸಿದ, ಚಿತ್ರದಲ್ಲಿ ನಟಿಸಿದ ಪ್ರತಿರೊಬ್ಬರ ಬದುಕನ್ನು ಬದಲಿಸಿದ ಚಿತ್ರ ಎಂದರೆ ಅತಿಶಯೋಕ್ತಿಯಲ್ಲ.

‘ದಿಲ್ವಾಲೆ ದುಲ್ಹಾನಿಯಾ ಲೆ ಜಯಂಗೆ’ ಚಿತ್ರವನ್ನು ಆದಿತ್ಯ ಚೋಪ್ರಾ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಅಂಬರಿಷ್ ಪುರಿ, ಅನುಪಮ್ ಖೇರ್, ಫರಿದಾ ಜಲಾಲ್ ಮುಂತಾದವರು ನಟಿಸಿದ್ದಾರೆ. ಇದು ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರಗಳಲ್ಲಿ ಒಂದಾಗಿದೆ. ಈ ಚಿತ್ರ ಮುಂಬೈನ ಥಿಯೇಟರ್‌ ಒಂದರಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಪ್ರದರ್ಶನಗೊಂಡಿದೆ.

ಚಿತ್ರಕ್ಕೆ 25ರ ಸಂಭ್ರಮದ ಹಿನ್ನೆಲೆ ನಟಿ ಕಾಜೋಲ್ ಮತ್ತು ನಟ ಶಾರುಖ್ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಹೆಸರನ್ನು ಡಿಡಿಎಲ್‌ಜೆ ಚಿತ್ರದ ಪಾತ್ರಗಳ ಹೆಸರಾದ ರಾಜ್ ಮತ್ತು ಸಿಮ್ರಾನ್ ಎಂದು ಬದಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

 

PC: screenshot@twitter

ಈ ಚಿತ್ರವು ರಾಜ್ (ಶಾರುಖ್) ಮತ್ತು ಸಿಮ್ರಾನ್ (ಕಾಜೋಲ್) ಎಂಬ ಪ್ರೇಮಿಗಳ ಪ್ರೀತಿಯ ಸುತ್ತ ಗಿರಕಿ ಹೊಡೆಯುತ್ತದೆ. ಇದು ಸಾರ್ವಕಾಲಿಕ ಹಿಂದಿ ಚಲನಚಿತ್ರವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೆ  10 ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತ್ತು.

PC: screenshot@twitter

ಡಿಡಿಎಲ್‌ಜೆ ಚಿತ್ರದ ಅಪ್ರತಿಮ ಜೋಡಿ ಶಾರುಖ್ ಖಾನ್ ಮತ್ತು ಕಾಜೋಲ್ ಅವರ ಕಂಚಿನ ಪ್ರತಿಮೆ ಲಂಡನ್ನಿನ  ಲೀಸೆಸ್ಟರ್ ಸ್ಕ್ವೇರ್ ನ  ‘ಸೀನ್ಸ್ ಇನ್ ದಿ ಸ್ಕ್ವೇರ್’ ನಲ್ಲಿ ಅನಾವರಣಗೊಳ್ಳಲಿದೆ. ಈ ಪ್ರತಿಮೆಯು ಲೀಸೆಸ್ಟರ್ ಚೌಕದಲ್ಲಿ ಚಿತ್ರೀಕರಿಸಿದ ದೃಶ್ಯದ ಒಂದು ಭಾಗವನ್ನು ಪ್ರತಿನಿಧಿಸುತ್ತದೆ.

“ಈ ಚಿತ್ರ ಬರುವ ಮುನ್ನ ರೋಮ್ಯಾಂಟಿಕ್ ರೀತಿಯ ಪಾತ್ರವನ್ನು ನಿರ್ವಹಿಸಲು ನನ್ನಿಂದ ಸಾಧ್ಯವೇ ಇಲ್ಲ ಎಂದೇ ನಾನು ಭಾವಿಸಿದ್ದೆ” ಎಂದು ಚಿತ್ರದ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಕಿಂಗ್ ಆಫ್ ರೋಮ್ಯಾನ್ಸ್’ ಶಾರುಖ್ ಖಾನ್ ಹೇಳಿದ್ದಾರೆ.

ಇಂದಿಗೂ ಈ ಚಿತ್ರಕ್ಕೆ ಅತ್ಯಧಿಕ ಅಭಿಮಾನಿ ಬಳಗವಿದೆ. 25 ವರ್ಷಗಳನ್ನು ಪೂರೈಸಿದರೂ ಕೂಡ ಈ ಚಿತ್ರದ ಜನಪ್ರಿಯತೆ ಎಂದಿಗೂ ಕಡಿಮೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ #DilwaleDulhaniaLeJayenge # DDLJ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿವೆ.


ಇದನ್ನೂ ಓದಿ: ಆಟೋರಾಜ’ನ ನೆನಪಲ್ಲಿ… ಶಂಕರ್ ‌ನಾಗ್‌ ನಮ್ಮನ್ನಗಲಿ ಇಂದಿಗೆ 30 ವರ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...