Homeಮುಖಪುಟಕಮಲನಾಥ್ ವಿವಾದಾತ್ಮಕ ಹೇಳಿಕೆ ಟೀಕಿಸಿದ ರಾಹುಲ್ ಗಾಂಧಿ

ಕಮಲನಾಥ್ ವಿವಾದಾತ್ಮಕ ಹೇಳಿಕೆ ಟೀಕಿಸಿದ ರಾಹುಲ್ ಗಾಂಧಿ

ಕಮಲನಾಥ್ ಜಿ ನನ್ನ ಪಕ್ಷದವರು. ಆದರೆ, ಅವರು ಬಳಸಿದ ಭಾಷೆ ವೈಯಕ್ತಿಕವಾಗಿ ನನಗೆ ಹಿಡಿಸಲಿಲ್ಲ. ಅವರು ಯಾರೇ ಆಗಿರಬಹುದು, ಆದರೆ, ಇಂಥ ಭಾಷೆ ಬಳಕೆಯನ್ನು ನಾನು ಬೆಂಬಲಿಸುವುದಿಲ್ಲ. ಇದು ದುರದೃಷ್ಟಕರ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಇಮಾರ್ತಿ ದೇವಿ ಅವರ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಕಮಲನಾಥ್ ಅವರ ವಿವಾದಾತ್ಮಕ ಹೇಳಿಕೆಯನ್ನು ಪಕ್ಷದ ಮುಖಂಡ ರಾಹುಲ್ ಗಾಂಧಿ ಬಹಿರಂಗವಾಗಿ ಟೀಕಿಸಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಹಿರಿಯ ನಾಯಕರನ್ನು ಟೀಕಿಸಿದ ಪಕ್ಷದ ಮೊದಲ ನಾಯಕರಾಗಿದ್ದಾರೆ.

ಹಿರಿಯ ನಾಯಕ ಕಮಲನಾಥ್​, ಬಿಜೆಪಿ ಸಚಿವೆ ಇಮಾರ್ತಿ ದೇವಿಯವರನ್ನ ‘ಐಟಂ’ ಎಂದು ಕರೆದು ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಈ ಹೇಳಿಕೆಯು ಉಪಚುನಾವಣೆಗೆ ಮುನ್ನ ದೊಡ್ಡ ವಿವಾದವನ್ನು ಹುಟ್ಟುಹಾಕಿದೆ, ರಾಜ್ಯದ ಆಡಳಿತಾರೂಢ ಬಿಜೆಪಿ ಮತ್ತು ಆ ಮಹಿಳಾ ಅಭ್ಯರ್ಥಿಯು ಕಮಲನಾಥ್‌ರನ್ನು ಉಚ್ಚಾಟಿಸುವಂತೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಮನವಿ ಮಾಡಿದ್ದಾರೆ.

ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ “ಕಮಲನಾಥ್ ಜಿ ನನ್ನ ಪಕ್ಷದವರು. ಆದರೆ, ಅವರು ಬಳಸಿದ ಭಾಷೆ ವೈಯಕ್ತಿಕವಾಗಿ ನನಗೆ ಹಿಡಿಸಲಿಲ್ಲ. ಅವರು ಯಾರೇ ಆಗಿರಬಹುದು, ಆದರೆ, ಇಂಥ ಭಾಷೆ ಬಳಕೆಯನ್ನು ನಾನು ಬೆಂಬಲಿಸುವುದಿಲ್ಲ. ಇದು ದುರದೃಷ್ಟಕರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ಕಮಲನಾಥ್ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಆಕ್ರೋಶ

ಇನ್ನು ಪ್ರಕರಣ ಕುರಿತು ಪ್ರಶ್ನೆಗಳನ್ನು ಕೇಳುತ್ತಿದ್ದ ಸುದ್ದಿಗಾರರಿಗೆ ’ನನಗೆ ಪ್ರಶ್ನೆ ಮಾಡುವಂತೆ ನೀವು ಪ್ರಧಾನಿಯವರಿಗೆ ಯಾಕೆ ಪ್ರಶ್ನಿಸುವುದಿಲ್ಲ. ಹತ್ರಾಸ್ ಪ್ರಕರಣದ ಕುರಿತು ಅವರೇಕೆ ಒಂದು ಮಾತು ಆಡಿಲ್ಲ ಎಂದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರು ಕಮಲ್‌ನಾಥ್‌ ಕುರಿತ ರಾಹುಲ್‌ ಗಾಂಧಿಯವರ ಟೀಕೆಯನ್ನು ಸ್ವಾಗತಿಸಿದ್ದಾರೆ. “ಬಿಜೆಪಿ ಮುಖಂಡರು ಬಾಯಿಗೆ ಬಂದ ಹಾಗೆ ಮಾತನಾಡುತ್ತಾರೆ. ಆದರೆ ಆ ಕುರಿತು ಬಿಜೆಪಿಯ ಮೋದಿಯವರಾಗಲಿ, ಹಿರಿಯ ಮುಖಂಡರಾಗಲಿ ಮಾತನಾಡುವುದಿಲ್ಲ. ಇದೇ ಅವರಿಗೂ ನಮಗೂ ಇರುವ ವ್ಯತ್ಯಾಸ” ಎಂದಿದ್ದಾರೆ.

ಈ ಹಿಂದೆ ಕೂಡ “ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ. ಸ್ವತಂತ್ರ ಸಂಸ್ಥೆಗಳನ್ನು ನೀಡಿ. ಮರುಕ್ಷಣ ಈ ಕೇಂದ್ರ ಸರ್ಕಾರ ಆಡಳಿತದಲ್ಲಿರುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದರು.

ಮಧ್ಯಪ್ರದೇಶ ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್​​ ಅಭ್ಯರ್ಥಿ ಸುರೇಶ್​​ ರಾಜೆ ಪರವಾಗಿ ಮಾಜಿ ಮುಖ್ಯಮಂತ್ರಿ ಕಮಲನಾಥ್​​ ದಾಬ್ರಾ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿದ್ದರು. ಭಾಷಣದಲ್ಲಿ ಸುರೇಶ್ ರಾಜೆ​​ ಅವರ ಪ್ರತಿಸ್ಪರ್ಧಿ ಹಾಗೂ ಬಿಜೆಪಿ ನಾಯಕಿ ಇಮಾರ್ತಿ ದೇವಿ ಅವರನ್ನು ಐಟಂ​ ಎಂದು ಕರೆದಿದ್ದರು.

ಕಮಲನಾಥ್ ಸರ್ಕಾರವನ್ನು ಬೀಳಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದ ಜೋತಿರಾಧಿತ್ಯ ಸಿಂಧಿಯಾಗೆ ನಿಷ್ಠೆಯಿಂದಿದ್ದ ಇಮಾರ್ತಿ ದೇವಿ ಮತ್ತು ಇತರ 21 ಶಾಸಕರು ಕಾಂಗ್ರೆಸ್ ಮತ್ತು ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿ ಈ ವರ್ಷದ ಮಾರ್ಚ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.


ಇದನ್ನೂ ಓದಿ: ಒಂದು ಸ್ವತಂತ್ರ ಮಾಧ್ಯಮವನ್ನು ನನಗೆ ಕೊಡಿ, ಮರುಕ್ಷಣ ಈ ಸರ್ಕಾರ ಅಧಿಕಾರದಲ್ಲಿರುವುದಿಲ್ಲ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...