Homeಅಂತರಾಷ್ಟ್ರೀಯಲಡಾಖ್‌ನಲ್ಲಿ ಸೆರೆಹಿಡಿದ ಚೀನಾ ಸೈನಿಕನ ಬಿಡುಗಡೆ ಸದ್ಯಕ್ಕಿಲ್ಲ: ವರದಿಯ ಮೂಲ

ಲಡಾಖ್‌ನಲ್ಲಿ ಸೆರೆಹಿಡಿದ ಚೀನಾ ಸೈನಿಕನ ಬಿಡುಗಡೆ ಸದ್ಯಕ್ಕಿಲ್ಲ: ವರದಿಯ ಮೂಲ

ಕಾರ್ಪೋರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲಾಗಿರುವ ಈತನನ್ನು ಚುಮರ್-ಡೆಮ್ಚೋಕ್ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು.

- Advertisement -
- Advertisement -

ಪೂರ್ವ ಲಡಾಖ್‌ನಲ್ಲಿ ಸೋಮವಾರ ಭಾರತೀಯ ಸೇನೆಗೆ ಸಿಕ್ಕಿಬಿದ್ದ ಚೀನಾದ ಸೈನಿಕನನ್ನು ಮುಂದಿನ ಕೆಲವು ದಿನಗಳವರೆಗೆ ಬಿಡುಗಡೆ ಮಾಡಲಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ. ಕಾರ್ಪೋರಲ್ ವಾಂಗ್ ಯಾ ಲಾಂಗ್ ಎಂದು ಗುರುತಿಸಲಾಗಿರುವ ಈತನನ್ನು ಚುಮರ್-ಡೆಮ್ಚೋಕ್ ಪ್ರದೇಶದಲ್ಲಿ ಸೆರೆಹಿಡಿಯಲಾಗಿತ್ತು.

ಈ ಸೈನಿಕನನ್ನು ಚೀನಾ ಪೀಪಲ್ಸ್ ಲಿಬರೇಶನ್ ಆರ್ಮಿ(ಪಿಎಲ್‌ಎ)ಗೆ ಹಸ್ತಾಂತರಿಸುವ ಮೊದಲು ಚೀನಾ ತಜ್ಞರು ಪ್ರಶ್ನಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ವಾಸ್ತವಿಕ ಗಡಿ ನಿಯಂತ್ರಣ ರೇಖೆ (ಎಲ್‌ಎಸಿ) ಬಳಿ ಈ ಸೈನಿಕ ದಾರಿ ತಪ್ಪಿದ್ದನು. ಈತನಿಗೆ ಆಮ್ಲಜನಕ, ಆಹಾರ ಮತ್ತು ಬೆಚ್ಚಗಿನ ಬಟ್ಟೆಗಳು ಸೇರಿದಂತೆ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ. ಸರಿಯಾದ ಕಾರ್ಯವಿಧಾನವನ್ನು ಅನುಸರಿಸಿ ಪ್ರೋಟೋಕಾಲ್ ಪ್ರಕಾರ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಸೈನಿಕನನ್ನು ಚೀನೀ ಸೈನ್ಯಕ್ಕೆ ಹಿಂತಿರುಗಿಸಲಾಗುತ್ತದೆ” ಎಂದು ಭಾರತೀಯ ಸೇನೆಯ ಪ್ರಕಟಣೆ ತಿಳಿಸಿತ್ತು.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

“ನಾಪತ್ತೆಯಾದ ಸೈನಿಕ ಎಲ್ಲಿದ್ದಾನೆ ಎಂಬ ಬಗ್ಗೆ ಚೀನಾದ ಸೈನ್ಯದಿಂದ ಮನವಿ ಬಂದಿದ್ದು, ಔಪಚಾರಿಕ ಕಾರ್ಯಗಳು ಪೂರ್ಣಗೊಂಡ ನಂತರ ಅವರನ್ನು ಚುಶುಲ್-ಮೊಲ್ಡೊ ಮೀಟಿಂಗ್ ಪಾಯಿಂಟ್‌ನಲ್ಲಿ ಚೀನಾದ ಅಧಿಕಾರಿಗಳಿಗೆ ಹಿಂತಿರುಗಿಸಲಾಗುವುದು” ಎಂದು ಸೇನೆಯು ತಿಳಿಸಿತ್ತು.

ಸಿಕ್ಕಿಬಿದ್ದ ಸೈನಿಕ, ನಾಗರಿಕ ಮತ್ತು ಮಿಲಿಟರಿ ದಾಖಲೆಗಳನ್ನು ಹೊತ್ತೊಯ್ಯುತ್ತಿದ್ದನೆಂದು ಕೆಲವು ವರದಿಗಳು ಬಂದಿವೆ ಎಂದು ಎನ್‌ಡಿಟಿವಿ ವರದಿ ಮಾಡಿತ್ತು.

ಚೀನಾದ ಅಧಿಕಾರಿಯೊಬ್ಬರು ಕಳೆದ ರಾತ್ರಿ ನೀಡಿದ ಹೇಳಿಕೆಯಲ್ಲಿ, ಸೈನಿಕನು “ಸ್ಥಳೀಯ ದನಗಾಹಿಗಳಿಗೆ ಸಹಾಯ ಮಾಡುವಾಗ ಕಳೆದುಹೋಗಿದ್ದಾನೆ” ಎಂದು ಹೇಳಿದ್ದಾರೆ.

ಗಾಲ್ವಾನ್ ಕಣಿವೆಯ ಲಡಾಖ್‌ನಲ್ಲಿ ಚೀನಿಯರೊಂದಿಗಿನ ಘರ್ಷಣೆಯಲ್ಲಿ ಕರ್ತವ್ಯದಲ್ಲಿದ್ದ 20 ಭಾರತೀಯ ಸೈನಿಕರು ಜೂನ್‌ನಲ್ಲಿ ಸಾವನ್ನಪ್ಪಿದ್ದರು. ಆಗ ಉಭಯ ದೇಶಗಳಲ್ಲಿ ಉದ್ವಿಗ್ನತೆ ಉತ್ತುಂಗಕ್ಕೇರಿತ್ತು. ಕಳೆದ ತಿಂಗಳು, ಪ್ಯಾಂಗೊಂಗ್ ತ್ಸೊದಲ್ಲಿ ಎರಡೂ ಪಡೆ ಮುಖಾಮುಖಿಯಾಗುತ್ತಿದ್ದಂತೆ ಒಂದಕ್ಕಿಂತ ಹೆಚ್ಚು ಬಾರಿ ಗಾಳಿಯಲ್ಲಿ ಗುಂಡು ಹಾರಿಸಲಾಗಿತ್ತು.

ಇದನ್ನೂ ಓದಿ: ಚೀನಾ ಮತ್ತು ನಮ್ಮ ನಡುವೆ ನಡೆಯುತ್ತಿರುವ ಚರ್ಚೆ ಗೌಪ್ಯವಾದದ್ದು: ಭಾರತದ ವಿದೇಶಾಂಗ ಸಚಿವ!

ಇತ್ತೀಚೆಗೆ ಭಾರತ-ಚೀನಾ ನಡುವಿನ ಸಂಬಂಧ ಚಿಂತಾಜನಕವಾಗಿದ್ದು, ಯಾವ ಸಂಧರ್ಭದಲ್ಲಿ ಏನುಬೇಕಾದರೂ ನಡೆಯಬಹುದು ಎಂಬ ಭೀತಿಯುಂಟಾಗಿದೆ. ಎರಡೂ ದೇಶಗಳೂ ಗಡಿಯಲ್ಲಿ ಸೇನೆಯನ್ನು ಜಮಾವಣೆ ಮಾಡಿವೆ.

ಈ ಪ್ರಕ್ಷುಬ್ದ ವಾತಾವರಣಕ್ಕೆ ಕೇಂದ್ರ ಸರ್ಕಾರವೇ ಕಾರಣ ಎಂದು ವಿರೋಧ ಪಕ್ಷಗಳು ಟೀಕಿಸುತ್ತಿದ್ದು, ಚೀನಾ ವಿರುದ್ಧ ಕೇಂದ್ರ ಸರ್ಕಾರದ ಪ್ರತಿಯೊಬ್ಬರೂ ಒಂದೊಂದು ಮಾಹಿತಿ ನೀಡುತ್ತಿದ್ದಾರೆ. ಒಬ್ಬರು ಯಾವುದೇ ತೊಂದರೆಯಿಲ್ಲ ಎಂದರೆ, ಮತ್ತೊಬ್ಬರು ತೊಂದರೆಯಿದೆ ಎನ್ನುತ್ತಾರೆ. ಇನ್ನೊಬ್ಬರು ಭೂಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂದರೆ, ಮತ್ತೊಬ್ಬರು ಆಕ್ರಮಿಸಿಕೊಂಡಿದೆ ಎನ್ನುತ್ತಾರೆ. ಒಬ್ಬರು ಗೌಪ್ಯ ಮಾತುಕತೆ ನಡೆಸುತ್ತಿದ್ದೇವೆ ಎನ್ನುತ್ತಾರೆ, ಮತ್ತೊಬ್ಬರು ಚೀನಾದೊಟ್ಟಿಗೆ ಯುದ್ಧ ಮಾಡಲು ಸಿದ್ಧ ಎನ್ನುತ್ತಾರೆ.

ಒಟ್ಟಾರೆಯಾಗಿ, ಕೇಂದ್ರ ಸರ್ಕಾರ ಪ್ರಜೆಗಳಿಂದ ಸತ್ಯವನ್ನು ಮುಚ್ಚಿಡುತ್ತಿದೆ ಎಂದು ಹಲವರು ಆರೋಪಿಸಿದ್ದು, ನರೇಂದ್ರ ಮೋದಿಯವರು ಚೀನಾ ಹೆಸರನ್ನು ಹೇಳಲು ಭಯಪಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...