Homeಕರ್ನಾಟಕಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ.

- Advertisement -
- Advertisement -

ಕಡಲೆಗಿಡ ಕೀಳಲು ಕೂಲಿ ಆಳುಗಳು ಸಿಗುತ್ತಿಲ್ಲ. ಯಾರನ್ನು ಕೇಳಿದರೂ ಬರುವುದಿಲ್ಲ ಎಂದು ಹೇಳುವವರೇ ಹೆಚ್ಚು. ಕೈಯಲ್ಲಿ ಕಾಸು ನಾಟ್ಯವಾಡಬೇಕಾದರೆ ಯಾರಿಗೆ ಬೇಕು ಸಣ್ಣ ಮೊತ್ತದ ಕೂಲಿ. ಬರದ ನಾಡೆಂದು ಹೆಸರಾದ ಶಿರಾ ಕ್ಷೇತ್ರದಲ್ಲಿ ಈಗ ಚುನಾವಣೆಯ ಸಮಯ ಆಗಿರುವುದರಿಂದ ಹಣ ಮಾಡುವವರ ಚಿತ್ತ ಎಲ್ಲ ಪಕ್ಷಗಳತ್ತ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡದೆಯೇ ಕೈತುಂಬ ಹಣ ಸಿಗುವಾಗ ಕೂಲಿಯ ಹಣ ಬೇಕೇನು? ಬೆಳಗ್ಗೆಯಿಂದ ಸಂಜೆವರೆಗೆ ದುಡಿದರೂ ಸಿಗುವ ಕೂಲಿ ಅಷ್ಟಕ್ಕೇ ಇದೆ. ಓಡಾಡಿಕೊಂಡು ಜೈಕಾರ ಹಾಕುತ್ತ ಕೈತುಂಬ ಗರಿಗರಿ ನೋಟುಗಳನ್ನು ಎಣಿಸಬಹುದೆಂಬ ಅವಕಾಶವನ್ನು ಕಸುಬುದಾರರು ಕಲಿತುಕೊಂಡಿದ್ದಾರೆ.

ಶಿರಾ ಕ್ಷೇತ್ರದ ಮತದಾನಕ್ಕೆ 12 ದಿನ ಬಾಕಿ ಇದೆ. ಮೂರು ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ಮಗ್ನವಾಗಿವೆ. ಗೆಲ್ಲಬೇಕೆಂಬ ಹಟಕ್ಕೆ ಬಿದ್ದಂತಿರುವ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎನ್ನುತ್ತಾರೆ ಮತದಾರ. ಒಮ್ಮೆ ಬಿಸಿಲು, ಮತ್ತೊಮ್ಮೆ ಮೋಡಗಳ ರಾಶಿ. ಇದರಿಂದ ನೆರಳು, ಇನ್ನೊಂದು ಕಡೆ ಸೋನೆ ಮಳೆ, ಮಳೆ ಬೀಳುವಂತಹ ವಾತಾವರಣದಲ್ಲಿ ನಾಯಕರಷ್ಟೇ ಅಲ್ಲದೇ ಬೆಂಬಲಿಗರೂ ಬೆವರು ಹರಿಸುತ್ತಿದ್ದಾರೆ. ಇದಕ್ಕಾಗಿ ಕೈತುಂಬ ಹಣವು, ಮೂರು ಹೊತ್ತು ಊಟವೂ, ಜೊತೆಗಿಷ್ಟು ಎಣ್ಣೆಯ ನೈವೇದ್ಯವೂ ಆಗುತ್ತದೆ. ಇಷ್ಟಾದ ಮೇಲೆ ಯಾರ ಉಸಾಬರಿಯೂ ಬೇಡ. ಹಣ-ಹೆಂಡದ ಅಮಲಿನಲ್ಲಿ ತೇಲುವಂತಹ ಸನ್ನಿವೇಶಗಳು ಸೃಷ್ಟಿಯಾಗಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಹೌದು, ಹಣದ ಹರಿವು ಜೋರಾಗಿದೆ. ಸಾಮರ್ಥ್ಯಕ್ಕೆ ತಕ್ಕ ಹಾಗೆ ಹಣ ಖರ್ಚು ಮಾಡುತ್ತಿದ್ದಾರೆ. ಒಂದು ಪಕ್ಷ ಮತದಾರರಿಗೆ 1000 ರೂ. ನೀಡಿದರೆ, ಮತ್ತೊಂದು ಪಕ್ಷ 500 ರೂ. ಕೊಡುತ್ತಿದೆ. ಮೂರನೇ ಪಕ್ಷ 300 ರೂ. ನೀಡುತ್ತಿದೆ. ದುಡ್ಡು ಹೆಚ್ಚು ಕೊಡುವವರ ಪರವಾಗಿ ಹೆಚ್ಚು ಮಂದಿ ಕಾರ್ಯಕರ್ತರು ಕಂಡು ಬರುತ್ತಾರೆ. ಹಣ ಪಡೆದುಕೊಂಡರೂ ಓಟು ಯಾರಿಗೆ ಎಂಬುದನ್ನು ನಿಶ್ಚಯ ಮಾಡಿಕೊಂಡಿದ್ದಾರೆ. ಆದರೆ ಹಣ ಮಾಡುವುದಷ್ಟೇ ಪ್ರಚಾರಕರ ಉದ್ದೇಶ ಎನ್ನುತ್ತವೆ ಹಣ ಹಂಚುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದ ಮೂಲಗಳು.

ದೇವಾಲಯಗಳಿಗೆ ಹಣ ಹಂಚಿದ್ದು ಇತಿಹಾಸದ ಪುಟಗಳನ್ನು ಸೇರಿದೆ. ಈಗ ನೇರ ಮತದಾರರ ಕೈಗೆ ಹಣ ತಲುಪುತ್ತಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ಮತ್ತು ಚುನಾವಣೆಯ ಉಸ್ತುವಾರಿ ವಹಿಸಿಕೊಂಡವರು ಬೆಂಬಲಿಗರಿಗೆ ಮತ್ತು ಪ್ರಚಾರ ಕೈಗೊಳ್ಳುವ ಮತದಾರ ತಂಡಗಳಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಕುರಿತು ಕ್ಷೇತ್ರದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ದುಡ್ಡು ಮಾಡಲು ಹೋದವರು ಮೂರು ಪಕ್ಷಗಳಿಂದಲೂ ಹಣ ತೆಗೆದುಕೊಳ್ಳುತ್ತಾರೆ. ಆದರೆ ತಮ್ಮ ಮತ ಯಾರಿಗೆ ಎಂಬುದನ್ನು ಗೌಪ್ಯವಾಗಿಯೇ ಇಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ಕಮಲ ಕೈಯಲ್ಲಿ ಹಿಡಿದವರೂ ಇದ್ದಾರೆ. ಕೈಯಲ್ಲಿ ಕಮಲವೂ ರಾರಾಜಿಸುತ್ತಿದೆ. ತೆನೆಯಲ್ಲಿ ಕಮಲ, ತೆನೆಯನ್ನು ಕೈಯಲ್ಲಿ ಹಿಡಿದವರೂ ಕಂಡುಬರುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವವರು ಬೇರೆ ಪಕ್ಷದಲ್ಲಿಯೂ ಇರುತ್ತಾರೆ. ಹಾಗಾಗಿ ಯಾರು ಯಾವ ಪಕ್ಷಕ್ಕೆ ಮತ ಹಾಕುತ್ತಾರೆನ್ನುವುದು ನಿಗೂಢವಾಗಿಯೇ ಉಳಿದಿದೆ. ಆದರೆ ಮೂರು ಪಕ್ಷಗಳಿಂದಲೂ ಹಣ ಪಡೆಯುವವರು ಮಾತ್ರ ಗೆಲುವಾಗಿಯೇ ಓಡಾಡುತ್ತಾರೆ. ಇದರಿಂದ ಕಡಲೆಗಿಡಗಳನ್ನು ಕೀಳುವ ಕೆಲಸಕ್ಕೆ ಕೂಲಿ ಆಳುಗಳು ಸಿಗುತ್ತಿಲ್ಲ ಎನ್ನುತ್ತಾರೆ ರೈತರು.

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ. ನೆಲೆ ಇಲ್ಲದ, ಬಲವಿಲ್ಲದ, ಒಲವಿಲ್ಲದ ಕುರಿತು ಚರ್ಚೆ ನಡೆಯುತ್ತಿದ್ದರೂ ನೆಲೆ-ಬಲ-ಒಲವುಗಳಲ್ಲಿ ಒಂದನ್ನು ಆಯ್ಕೆ ಮಾಡುವುದು ಮತದಾರರಿಗೆ ಅನಿವಾರ್ಯವಾಗಿದೆ. ನೆಲೆ ಇಲ್ಲದವರು 1000, ಒಲವಿಲ್ಲದವರು 300 ಮತ್ತು ಬಲವಿಲ್ಲದವರು 500 ರೂಗಳು ಮಾತ್ರ ಮತದಾರರ ಜೇಬುಗಳನ್ನು ಸೇರುತ್ತಿವೆ.


ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...