Homeಕರ್ನಾಟಕಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

ಶಿರಾ: ಹಣದ ಹೊಳೆ! ನೆಲೆ ಕಾಣುವುದೇ ಕಮಲ, ಬಲಗೊಳ್ಳುವುದೇ ತೆನೆ, ಒಲವು ಗಳಿಸುವುದೇ ಹಸ್ತ?

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ.

- Advertisement -
- Advertisement -

ಕಡಲೆಗಿಡ ಕೀಳಲು ಕೂಲಿ ಆಳುಗಳು ಸಿಗುತ್ತಿಲ್ಲ. ಯಾರನ್ನು ಕೇಳಿದರೂ ಬರುವುದಿಲ್ಲ ಎಂದು ಹೇಳುವವರೇ ಹೆಚ್ಚು. ಕೈಯಲ್ಲಿ ಕಾಸು ನಾಟ್ಯವಾಡಬೇಕಾದರೆ ಯಾರಿಗೆ ಬೇಕು ಸಣ್ಣ ಮೊತ್ತದ ಕೂಲಿ. ಬರದ ನಾಡೆಂದು ಹೆಸರಾದ ಶಿರಾ ಕ್ಷೇತ್ರದಲ್ಲಿ ಈಗ ಚುನಾವಣೆಯ ಸಮಯ ಆಗಿರುವುದರಿಂದ ಹಣ ಮಾಡುವವರ ಚಿತ್ತ ಎಲ್ಲ ಪಕ್ಷಗಳತ್ತ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲಸ ಮಾಡದೆಯೇ ಕೈತುಂಬ ಹಣ ಸಿಗುವಾಗ ಕೂಲಿಯ ಹಣ ಬೇಕೇನು? ಬೆಳಗ್ಗೆಯಿಂದ ಸಂಜೆವರೆಗೆ ದುಡಿದರೂ ಸಿಗುವ ಕೂಲಿ ಅಷ್ಟಕ್ಕೇ ಇದೆ. ಓಡಾಡಿಕೊಂಡು ಜೈಕಾರ ಹಾಕುತ್ತ ಕೈತುಂಬ ಗರಿಗರಿ ನೋಟುಗಳನ್ನು ಎಣಿಸಬಹುದೆಂಬ ಅವಕಾಶವನ್ನು ಕಸುಬುದಾರರು ಕಲಿತುಕೊಂಡಿದ್ದಾರೆ.

ಶಿರಾ ಕ್ಷೇತ್ರದ ಮತದಾನಕ್ಕೆ 12 ದಿನ ಬಾಕಿ ಇದೆ. ಮೂರು ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ಮಗ್ನವಾಗಿವೆ. ಗೆಲ್ಲಬೇಕೆಂಬ ಹಟಕ್ಕೆ ಬಿದ್ದಂತಿರುವ ಅಭ್ಯರ್ಥಿಗಳು ಹಣದ ಹೊಳೆಯನ್ನೇ ಹರಿಸುತ್ತಿದ್ದಾರೆ ಎನ್ನುತ್ತಾರೆ ಮತದಾರ. ಒಮ್ಮೆ ಬಿಸಿಲು, ಮತ್ತೊಮ್ಮೆ ಮೋಡಗಳ ರಾಶಿ. ಇದರಿಂದ ನೆರಳು, ಇನ್ನೊಂದು ಕಡೆ ಸೋನೆ ಮಳೆ, ಮಳೆ ಬೀಳುವಂತಹ ವಾತಾವರಣದಲ್ಲಿ ನಾಯಕರಷ್ಟೇ ಅಲ್ಲದೇ ಬೆಂಬಲಿಗರೂ ಬೆವರು ಹರಿಸುತ್ತಿದ್ದಾರೆ. ಇದಕ್ಕಾಗಿ ಕೈತುಂಬ ಹಣವು, ಮೂರು ಹೊತ್ತು ಊಟವೂ, ಜೊತೆಗಿಷ್ಟು ಎಣ್ಣೆಯ ನೈವೇದ್ಯವೂ ಆಗುತ್ತದೆ. ಇಷ್ಟಾದ ಮೇಲೆ ಯಾರ ಉಸಾಬರಿಯೂ ಬೇಡ. ಹಣ-ಹೆಂಡದ ಅಮಲಿನಲ್ಲಿ ತೇಲುವಂತಹ ಸನ್ನಿವೇಶಗಳು ಸೃಷ್ಟಿಯಾಗಿವೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಮೂಲ VS ವಲಸೆ ಬಿಜೆಪಿಗರ ನಡುವೆ ಬಿರುಕು! ಯಾರ ಕೈಹಿಡಿಯಲಿದ್ದಾನೆ ಮತದಾರ

ಹೌದು, ಹಣದ ಹರಿವು ಜೋರಾಗಿದೆ. ಸಾಮರ್ಥ್ಯಕ್ಕೆ ತಕ್ಕ ಹಾಗೆ ಹಣ ಖರ್ಚು ಮಾಡುತ್ತಿದ್ದಾರೆ. ಒಂದು ಪಕ್ಷ ಮತದಾರರಿಗೆ 1000 ರೂ. ನೀಡಿದರೆ, ಮತ್ತೊಂದು ಪಕ್ಷ 500 ರೂ. ಕೊಡುತ್ತಿದೆ. ಮೂರನೇ ಪಕ್ಷ 300 ರೂ. ನೀಡುತ್ತಿದೆ. ದುಡ್ಡು ಹೆಚ್ಚು ಕೊಡುವವರ ಪರವಾಗಿ ಹೆಚ್ಚು ಮಂದಿ ಕಾರ್ಯಕರ್ತರು ಕಂಡು ಬರುತ್ತಾರೆ. ಹಣ ಪಡೆದುಕೊಂಡರೂ ಓಟು ಯಾರಿಗೆ ಎಂಬುದನ್ನು ನಿಶ್ಚಯ ಮಾಡಿಕೊಂಡಿದ್ದಾರೆ. ಆದರೆ ಹಣ ಮಾಡುವುದಷ್ಟೇ ಪ್ರಚಾರಕರ ಉದ್ದೇಶ ಎನ್ನುತ್ತವೆ ಹಣ ಹಂಚುತ್ತಿರುವುದನ್ನು ಪ್ರತ್ಯಕ್ಷವಾಗಿ ನೋಡಿದ ಮೂಲಗಳು.

ದೇವಾಲಯಗಳಿಗೆ ಹಣ ಹಂಚಿದ್ದು ಇತಿಹಾಸದ ಪುಟಗಳನ್ನು ಸೇರಿದೆ. ಈಗ ನೇರ ಮತದಾರರ ಕೈಗೆ ಹಣ ತಲುಪುತ್ತಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ಮತ್ತು ಚುನಾವಣೆಯ ಉಸ್ತುವಾರಿ ವಹಿಸಿಕೊಂಡವರು ಬೆಂಬಲಿಗರಿಗೆ ಮತ್ತು ಪ್ರಚಾರ ಕೈಗೊಳ್ಳುವ ಮತದಾರ ತಂಡಗಳಿಗೆ ಹಣ ಹಂಚಿಕೆ ಮಾಡುತ್ತಿದ್ದಾರೆ ಎಂಬ ಕುರಿತು ಕ್ಷೇತ್ರದಲ್ಲಿ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ದುಡ್ಡು ಮಾಡಲು ಹೋದವರು ಮೂರು ಪಕ್ಷಗಳಿಂದಲೂ ಹಣ ತೆಗೆದುಕೊಳ್ಳುತ್ತಾರೆ. ಆದರೆ ತಮ್ಮ ಮತ ಯಾರಿಗೆ ಎಂಬುದನ್ನು ಗೌಪ್ಯವಾಗಿಯೇ ಇಟ್ಟಿದ್ದಾರೆ.

ಇದನ್ನೂ ಓದಿ: ಶಿರಾ ಉಪಚುನಾವಣೆ: ಪ್ರತಿಷ್ಠೆಯ ಜಿದ್ದಾಜಿದ್ದಿನಲ್ಲಿ ಯಾವ ಪಕ್ಷ ಮುಂದು?

ಕಮಲ ಕೈಯಲ್ಲಿ ಹಿಡಿದವರೂ ಇದ್ದಾರೆ. ಕೈಯಲ್ಲಿ ಕಮಲವೂ ರಾರಾಜಿಸುತ್ತಿದೆ. ತೆನೆಯಲ್ಲಿ ಕಮಲ, ತೆನೆಯನ್ನು ಕೈಯಲ್ಲಿ ಹಿಡಿದವರೂ ಕಂಡುಬರುತ್ತಿದ್ದಾರೆ. ಇಲ್ಲಿ ಕೆಲಸ ಮಾಡುವವರು ಬೇರೆ ಪಕ್ಷದಲ್ಲಿಯೂ ಇರುತ್ತಾರೆ. ಹಾಗಾಗಿ ಯಾರು ಯಾವ ಪಕ್ಷಕ್ಕೆ ಮತ ಹಾಕುತ್ತಾರೆನ್ನುವುದು ನಿಗೂಢವಾಗಿಯೇ ಉಳಿದಿದೆ. ಆದರೆ ಮೂರು ಪಕ್ಷಗಳಿಂದಲೂ ಹಣ ಪಡೆಯುವವರು ಮಾತ್ರ ಗೆಲುವಾಗಿಯೇ ಓಡಾಡುತ್ತಾರೆ. ಇದರಿಂದ ಕಡಲೆಗಿಡಗಳನ್ನು ಕೀಳುವ ಕೆಲಸಕ್ಕೆ ಕೂಲಿ ಆಳುಗಳು ಸಿಗುತ್ತಿಲ್ಲ ಎನ್ನುತ್ತಾರೆ ರೈತರು.

1000 ರೂ. ಹೊಡೆಯುವವರು ಕೆಸರಲ್ಲಿ ಹೂತರೆ, 500 ರೂ ಕೊಡುವವರು ಕೈಚೆಲ್ಲಿದರೆ, 300 ರೂ ನೀಡುವವರು ಹೊರೆ ಇಳಿಸಿದರೆ ಎಂಬಂತೆ ರಹಸ್ಯ ಭಾಷೆಯಲ್ಲಿ ಮಾತನಾಡುತ್ತಾರೆ ಮತದಾರ. ನೆಲೆ ಇಲ್ಲದ, ಬಲವಿಲ್ಲದ, ಒಲವಿಲ್ಲದ ಕುರಿತು ಚರ್ಚೆ ನಡೆಯುತ್ತಿದ್ದರೂ ನೆಲೆ-ಬಲ-ಒಲವುಗಳಲ್ಲಿ ಒಂದನ್ನು ಆಯ್ಕೆ ಮಾಡುವುದು ಮತದಾರರಿಗೆ ಅನಿವಾರ್ಯವಾಗಿದೆ. ನೆಲೆ ಇಲ್ಲದವರು 1000, ಒಲವಿಲ್ಲದವರು 300 ಮತ್ತು ಬಲವಿಲ್ಲದವರು 500 ರೂಗಳು ಮಾತ್ರ ಮತದಾರರ ಜೇಬುಗಳನ್ನು ಸೇರುತ್ತಿವೆ.


ಇದನ್ನೂ ಓದಿ: ಶಿರಾ ಉಪಚುನಾವಣೆ : ಹೊಸ ನಾಣ್ಯ ನಡೆಯೋಲ್ಲ ಅಂತಾರೆ ಜನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...