Homeಮುಖಪುಟಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಗುಜರಾತ್: ಹತ್ತಿ ಬೀಜೋತ್ಪಾದನಾ ಕೇಂದ್ರಗಳಲ್ಲಿ ಬಾಲಕಾರ್ಮಿಕರೇ ಹೆಚ್ಚು!

ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಮಾಡುವವರು, ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ.

- Advertisement -
- Advertisement -

ಗುಜರಾತ್‌ನ ಬುಡಕಟ್ಟು ಪ್ರದೇಶಗಳಲ್ಲಿನ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ಮುಂದುವರಿಸಿದ್ದಾರೆ ಎಂದು ಸೆಂಟರ್‌ ಫಾರ್ ಲೇಬರ್‌ ರಿಸರ್ಚ್‌ ಆ್ಯಂಡ್ ಆ್ಯಕ್ಷನ್ ಎಂಬ ಎನ್‌ಜಿಒ ವರದಿ ಬಿಡುಗಡೆ ಮಾಡಿದೆ.

ಅಹಮದಾಬಾದ್‌ ಮೂಲದ ಈ ಎನ್‌ಜಿಒ ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ಜೊತೆ ಸೇರಿ ಬನಸ್‌ಕಂಠ ಜಿಲ್ಲೆಯ ದಂತಾ ತಾಲೂಕಿನಲ್ಲಿನ ಹೊಲಗಳ ಸಮೀಕ್ಷೆಯನ್ನು ಕೈಗೊಂಡಿದೆ.

ಈ ವರ್ಷದ ಸೆಪ್ಟೆಂಬರ್‌ನಲ್ಲಿ ಬನಸ್‌ಕಂಠ ಜಿಲ್ಲೆಯ ದಂತಾ ಮತ್ತು ದೇವಧರ್ ತಾಲ್ಲೂಕುಗಳು ಮತ್ತು ನೆರೆಯ ರಾಜ್ಯವಾದ ರಾಜಸ್ಥಾನದ ಕೊಟಡಾದಲ್ಲಿ 17 ಬೀಜೋತ್ಪಾದನೆಗೆ ಸಂಬಂಧಿಸಿದ ಕೇಂದ್ರಗಳಿಗೆ ಭೇಟಿ ನೀಡಿದ್ದೇವೆ ಎಂದು ಎನ್‌ಜಿಒದ ಸುಧೀರ್ ಕಟಿಯಾರ್ ತಿಳಿಸಿದ್ದಾರೆ.

“ಹತ್ತಿ ಬೀಜಗಳ ಮಾರಾಟ ಮತ್ತು ಮಾರಾಟದಲ್ಲಿ ತೊಡಗಿರುವ ದೊಡ್ಡ ಕಾರ್ಪೊರೇಟ್ ಕಂಪನಿಗಳಿಗೆ ಹತ್ತಿ ಬೀಜಗಳನ್ನು ಉತ್ಪಾದಿಸುವ ಹೊಲಗಳಲ್ಲಿ, ಪರಾಗಸ್ಪರ್ಶ ಮಾಡಲು ಈ ಮಕ್ಕಳನ್ನು ನೇಮಿಸಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ನರೇಗಾ: ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ?

‘ಬೀಜೋತ್ಪಾದನೆಗಾಗಿ ಹತ್ತಿ ಕೃಷಿ ಕೈಗೊಂಡವರು ತಮ್ಮ ಹೊಲಗಳಲ್ಲಿ ದುಡಿಯುವ ಕಾರ್ಮಿಕರಿಗೆ ಬಹಳ ಕಡಿಮೆ ಕೂಲಿ ನೀಡುತ್ತಾರೆ. ಈ ಹೊಲಗಳಲ್ಲಿ ಕೆಲಸ ಮಾಡುವ ಮಕ್ಕಳಿಗೆ ದಿನಕ್ಕೆ 150 ರೂಪಾಯಿ ಕೂಲಿ ನೀಡಲಾಗುತ್ತದೆ. ಇಷ್ಟು ಕೂಲಿಗೆ ಕೆಲಸ ಮಾಡಲು ದೊಡ್ಡವರು ಒಪ್ಪುವುದಿಲ್ಲ’ ಎಂದು ಆದಿವಾಸಿ ಸರ್ವಾಂಗಿ ವಿಕಾಸ್ ಸಂಘದ ದೀಪಕ್ ದಾಬಿ ಹೇಳಿದ್ದಾರೆ.

’ಗುಜರಾತ್‌ನಲ್ಲಿ ಹತ್ತಿ ಬೀಜೋತ್ಪಾದನೆ ಕೇಂದ್ರಗಳಲ್ಲಿ ಬಾಲ ಕಾರ್ಮಿಕರು ತೊಡಗಿಸಿಕೊಂಡಿರುವ ವಿಷಯ 2007 -08ರಲ್ಲಿ ಬೆಳಕಿಗೆ ಬಂದಿತ್ತು. ಅಂದಿನಿಂದ ಇದು ಮುಂದುವರೆದಿದೆ. ಮಕ್ಕಳ ವಲಸೆ ಮತ್ತು ಕಳ್ಳಸಾಗಣೆ ತೀವ್ರವಾಗಿ ಕಡಿಮೆಯಾಗಿದೆ. ಆದರೆ ಬೀಜ ಉತ್ಪಾದನೆಯು ಉತ್ತರ ಗುಜರಾತ್ ಮತ್ತು ದಕ್ಷಿಣ ರಾಜಸ್ಥಾನದ ಬುಡಕಟ್ಟು ಜಮೀನುಗಳಿಗೆ ಸ್ಥಳಾಂತರಗೊಂಡಿದೆ’ ಎಂದು ಕಟಿಯಾರ್ ತಿಳಿಸುತ್ತಾರೆ.

ಎನ್‌ಜಿಒ ಪ್ರಕಟಿಸಿರುವ ವರದಿಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಉಪ ಕಾರ್ಮಿಕ ಆಯುಕ್ತ ಎಂ.ಸಿ.ಕರಿಯಾ, ’ಗುಜರಾತ್‌ನಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ಮೊಟಕುಗೊಳಿಸಲು ಗುಜರಾತ್ ಮತ್ತು ರಾಜಸ್ಥಾನ ಸರ್ಕಾರಗಳು ಈ ಹಿಂದೆ ಸಾಕಷ್ಟು ಕೆಲಸಗಳನ್ನು ಮಾಡಿವೆ. ಕೊರೊನಾ ಲಾಕ್‌ಡೌನ್ ತೆಗೆದು ಹಾಕಿದ ನಂತರ ಆಗಸ್ಟ್‌ನಿಂದ ನಾವು ಮತ್ತೆ ಪ್ರತಿ ಜಿಲ್ಲೆಯಲ್ಲೂ ದಾಳಿ ನಡೆಸುತ್ತಿದ್ದೇವೆ. ವಸ್ತುಸ್ಥಿತಿ ಅಧ್ಯಯನಕ್ಕಾಗಿ ಇಲಾಖೆಯ ಸಿಬ್ಬಂದಿ ಒಳಗೊಂಡ ತಂಡಗಳನ್ನು ಕಳುಹಿಸಲಾಗಿದೆ. ತಂಡಗಳು ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದಿದ್ದಾರೆ.


ಇದನ್ನೂ ಓದಿ: ಜಿಗ್ನೇಶ್ ಮೇವಾನಿ ಸಂಘಟನೆಯ ನೇತೃತ್ವದಲ್ಲಿ ಬಾಲಕಿಯರಿಗೆ ಸ್ವರಕ್ಷಣಾ ತರಬೇತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...